Homeಮುಖಪುಟಕೇರಳ: ಹೊಸದಾಗಿ ನಿರ್ಮಾಣಗೊಳ್ಳಲಿರುವ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಬಸ್‌ ನಿಲ್ದಾಣ

ಕೇರಳ: ಹೊಸದಾಗಿ ನಿರ್ಮಾಣಗೊಳ್ಳಲಿರುವ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಬಸ್‌ ನಿಲ್ದಾಣ

- Advertisement -
- Advertisement -

ಕಾಲೇಜು ಹುಡುಗ-ಹುಡುಗಿಯರು ಒಟ್ಟಿಗೆ ಕುಳಿತುಕೊಳ್ಳುತ್ತಾರೆ ಎಂಬ ಕಾರಣಕ್ಕೆ ಮೂಲಭೂತವಾದಿಗಳು ಬಸ್‌ನಿಲ್ದಾಣದ ಬೆಂಚ್‌ ಅನ್ನು ಮುರಿದು ಅದರಲ್ಲಿ ಒಬ್ಬರಷ್ಟೆ ಕುಳಿತುಕೊಳ್ಳುವಂತೆ ತಯಾರುಗೊಳಿಸಿದ್ದ ಬಸ್‌ ನಿಲ್ದಾಣವನ್ನು ತಿರುವನಂದಪುರಂ ಕಾರ್ಪೋರೇಷನ್‌ ಅಧಿಕಾರಿಗಳು ಹೊಸದಾಗಿ ನಿರ್ಮಾಣ ಮಾಡಲು ಬೇಕಾಗಿ ತೆಗೆದು ಹಾಕಿದ್ದಾರೆ. ಬೆಂಚನ್ನು ಮುರಿದು ಒಬ್ಬರಿಗೆ ಕೂರುವಂತೆ ತಯಾರಿಗೊಳಿಸಿದ್ದ ಮೂಲಭೂತವಾದಿಗಳ ನಡೆಯನ್ನು ವಿರೋಧಿಸಿದ್ದ ಕಾಲೇಜು ವಿದ್ಯಾರ್ಥಿಗಳು, ‘ಒಬ್ಬರ ಮಡಿಲಲ್ಲಿ ಮತ್ತೊಬ್ಬರು ಕೂತು’ ಪ್ರತಿಭಟಿಸಿದ್ದು ದೇಶದ ಗಮನಸೆಳೆದಿತ್ತು.

ತಿರುವನಂತಪುರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ (ಸಿಇಟಿ) ಬಳಿಯ ಶ್ರೀಕಾರ್ಯಂನ ಅದೇ ಸ್ಥಳದಲ್ಲಿ ಲಿಂಗ ತಟಸ್ಥ ಬಸ್ ನಿಲ್ದಾಣವನ್ನು ನಿರ್ಮಿಸುವುದಾಗಿ ನಗರದ ಮೇಯರ್ ಆರ್ಯ ಎಸ್. ರಾಜೇಂದ್ರನ್ ಭರವಸೆ ನೀಡಿದ ಎರಡು ತಿಂಗಳ ನಂತರ ಕಾರ್ಪೋರೇಷನ್‌ ಅಧಿಕಾರಿಗಳು ಅದನ್ನು ತೆಗೆದುಹಾಕಿದ್ದಾರೆ. ಇದೀಗ ಅಲ್ಲಿ ಹೊಸ ಬಸ್‌ ನಿಲ್ದಾಣ ನಿರ್ಮಾಣಗೊಳ್ಳಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿದ್ಯಾರ್ಥಿಗಳು ಒಬ್ಬರ ಮಡಿಲಲ್ಲಿ ಮತ್ತೊಬ್ಬರು ಕುಳಿತು ಪ್ರತಿಭಟನೆ ನಡೆಸುತ್ತಿರುವ ಫೋಟೋಗಳು ವೈರಲ್ ಆದ ನಂತರ ಜುಲೈನಲ್ಲಿ ಮೇಯರ್‌‌ ಆರ್ಯ ರಾಜೇಂದ್ರನ್ ಅವರು ಪ್ರದೇಶಕ್ಕೆ ಭೇಟಿ ನೀಡಿದ್ದರು. ಮೂಲಭೂತವಾದಿಗಳ ಕ್ರಮವನ್ನು ವಿರೋಧಿಸಿದ್ದ ಅವರು “ಬೆಂಚ್ ಅನ್ನು ಮೂರು ಭಾಗಗಳಾಗಿ ಕತ್ತರಿಸುವ ವಿಧಾನವು ಅನುಚಿತ ಮಾತ್ರವಲ್ಲದೆ ಕೇರಳದಂತಹ ಪ್ರಗತಿಪರ ಸಮಾಜಕ್ಕೆ ಯೋಗ್ಯವಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

“ರಾಜ್ಯದಲ್ಲಿ ಹುಡುಗಿಯರು ಮತ್ತು ಹುಡುಗರು ಒಟ್ಟಿಗೆ ಕುಳಿತುಕೊಳ್ಳಲು ಯಾವುದೇ ನಿಷೇಧವಿಲ್ಲ. ಅನೈತಿಕ ಪೊಲೀಸ್‌ಗಿರಿಯನ್ನು ಇನ್ನೂ ನಂಬುವವರು ಪ್ರಾಚೀನ ಕಾಲದಲ್ಲಿ ವಾಸಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಆಡಳಿತಾರೂಢ ಸಿಪಿಐ(ಎಂ)ನ ಯುವ ಘಟಕ ಡಿವೈಎಫ್‌ಐ ಕೂಡ ಬಸ್ ನಿಲ್ದಾಣದಲ್ಲಿ ಬೆಂಚ್ ಒಡೆಯುವುದನ್ನು ಒಪ್ಪಲಾಗದು ಎಂದು ಹೇಳಿತ್ತು.

ಅಂದು ನಡೆದಿದ್ದೇನು?

ಸಿಇಟಿ ಕಾಲೇಜಿನ ಹೊರಗಿನ ಬಸ್‌ ನಿಲ್ದಾಣವು ವಿದ್ಯಾರ್ಥಿಗಳಿಗೆ ತಮ್ಮ ಸ್ನೇಹಿತರನ್ನು ಮಾತನಾಡಿಸಲು, ಹರಟೆ ಹೊಡೆಯಲು ಪ್ರಸಕ್ತ ಸ್ಥಳವಾಗಿತ್ತು. ಕಾಲೇಜು ಮುಗಿದ ನಂತರ ಅಲ್ಲಿ ಕುಳಿತು ಹುಡುಗ ಹುಡುಗಿಯರು ಸೇರಿ ತಮಾಷೆ ಮಾಡುತ್ತಿದ್ದುದು ಎಂದಿನ ದಿನಚರಿ. ಆದರೆ ಇದು ಅಲ್ಲಿನ ಸ್ಥಳೀಯ ಸಂಪ್ರದಾಯವಾದಿಗಳಿಗೆ ಸಹಿಸಿಕೊಳ್ಳಲು ಅಸಾಧ್ಯವಾಗಿತ್ತು. ಅವರ ಪ್ರಕಾರ ಹುಡುಗ ಹುಡುಗಿಯರು ಮಾತನಾಡಬಾರದು, ಸ್ನೇಹ ಪ್ರೀತಿ ಮಾಡಬಾರದು.

ಅದಕ್ಕಾಗಿ ಸ್ಥಳೀಯರು ಜುಲೈ 19ರ ಮಂಗಳವಾರ ರಾತ್ರೋರಾತ್ರಿ ಬಸ್‌ ಸ್ಟ್ಯಾಂಡಿನಲ್ಲಿ ಕುಳಿತುಕೊಳ್ಳುವ ಕುರ್ಚಿಗಳನನ್ನು ತೆಗೆದು ಕೇವಲ ಒಬ್ಬೊಬ್ಬರು ಮಾತ್ರ ಕುಳಿತುಕೊಳ್ಳುವಂತೆ ಮೂರು ಕುರ್ಚಿಗಳನ್ನು ಹಾಕಲಾಗಿತ್ತು. ಎರಡು ಕುರ್ಚಿ ಜೊತೆಗಿದ್ದರೆ ಹುಡುಗ-ಹುಡುಗಿ ಕುಳಿತು ಮಾತನಾಡುತ್ತಾರೆ ಎಂಬುದು ಅವರ ಈ ಕೃತ್ಯಕ್ಕೆ ಕಾರಣವಾಗಿತ್ತು.

ಮರುದಿನ ಇದನ್ನು ಗಮನಿಸಿದ್ದ ವಿದ್ಯಾರ್ಥಿಗಳು ಪ್ರತಿಭಟಿಸಲು ನಿರ್ಧರಿಸಿ, ಒಂದೇ ಸೀಟಿನಲ್ಲಿ ಹುಡುಗ ಹುಡುಗಿಯರು ತೊಡೆಮೇಲೆ ಕುಳಿತು ಫೋಟೊ ತೆಗೆದು ತಮ್ಮ ಸ್ನೇಹಿತರ ಗುಂಪುಗಳಲ್ಲಿ ಹಂಚಿಕೊಂಡರು. ಅವರ ಈ ದಿಟ್ಟ ಮತ್ತು ವಿನೂತನ ಪ್ರತಿಭಟನೆಯ ಈ ಚಿತ್ರಗಳು ನಂತರ ಎಲ್ಲೆಂದರಲ್ಲಿ ವೈರಲ್ ಆದವು. ಉಳಿದ ವಿದ್ಯಾರ್ಥಿಗಳು ಈ ಫೋಟೊ ತೆಗೆಸಿಕೊಳ್ಳುವ ಪ್ರತಿಭಟನೆಗೆ ಕೈಜೋಡಿಸಿ ತಾವು ಜೊತೆಗೆ ಕುಳಿತು ಪೋಟೊ ತೆಗೆಸಿಕೊಂಡಿದ್ದರು.

ಇದನ್ನೂ ಓದಿ: ಕೇರಳದಲ್ಲಿ ಬಂಡವಾಳಶಾಹಿಗಳೊಂದಿಗೆ ಕೈಜೋಡಿಸಿದ ಆಪ್; ಹುಸಿಯಾಗುತ್ತಿರುವ ಪರ್ಯಾಯ ರಾಜಕಾರಣದ ಭರವಸೆ

“ನಾವು ಪ್ರತಿನಿತ್ಯ ಅಲ್ಲಿ ಕುಳಿತರೆ, ಹುಡುಗ-ಹುಡುಗಿ ಮಾತನಾಡಿದರೆ ಸ್ಥಳೀಯರು ತೊಂದರೆ ಕೊಡುತ್ತಿದ್ದರು. ನಿಂದಿಸುತ್ತಿದ್ದರು. ಹಾಗಾಗಿ ಇಬ್ಬರು ಕೂರಬಾರದೆಂದು ಒಂದೊಂದು ಕುರ್ಚಿಯನ್ನು ತೆಗೆಸಿದ್ದರು. ಅದನ್ನು ವಿದ್ಯಾರ್ಥಿಗಳು ವಿರೋಧಿಸಿ ವಿನೂತನವಾಗಿ ಪ್ರತಿಭಟಿಸಿದ್ದಾರೆ” ಎಂದು ಸಿಇಟಿ ಕಾಲೇಜು ಸಂಘದ ಉಪಾಧ್ಯಕ್ಷ ಕೆ.ಪೆ ಫೆಬಿ ಅಂದು ಹೇಳಿದ್ದರು.

ಈ ಕುರಿತು ಮಾತನಾಡಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಆರ್ಯ,“ನಾವು ಪೋಸ್ಟ್ ಮಾಡಿದ ಚಿತ್ರ ವೈರಲ್ ಆಗುತ್ತದೆ ಎಂದು ನಾವು ಅಂದಾಜಿಸಿರಲಿಲ್ಲ. ಅದು ಅಷ್ಟೊಂದು ಹರಿದಾಡುತ್ತಿರುವುದು ನಮ್ಮ ಈ ಸರಳ ಪ್ರತಿಭಟನೆಗೆ ಜನಬೆಂಬಲವನ್ನು ತೋರಿಸುತ್ತದೆ. ಜೊತೆಗೆ ಇಲ್ಲಿನ ಸ್ಥಳೀಯರು ವಿದ್ಯಾರ್ಥಿಗಳ ಬಗ್ಗೆ ಯಾವ ಅಭಿಪ್ರಾಯ ಹೊಂದಿದ್ದಾರೆ ಮತ್ತು ನಮ್ಮನ್ನು ಹೇಗೆ ನಿಯಂತ್ರಿಸಲು ಬಯಸುತ್ತಾರೆ ಎಂಬುದನ್ನು ತಿಳಿಸುತ್ತದೆ. ಆದರೆ ನಮ್ಮ ಪ್ರತಿಭಟನೆಯ ನಂತರ ಇದುವರೆಗೂ ನಮಗೆ ಸಕರಾತ್ಮಕ ಪ್ರತಿಕ್ರಿಯೆಗಳು ಬಂದಿವೆ” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಕೇರಳ: ಮಹಿಳೆಯರ ಸುರಕ್ಷತೆಗಾಗಿ ಪಿಂಕ್ ಪ್ರೊಟೆಕ್ಷನ್ ಯೋಜನೆ ಆರಂಭ

ಈ ಹಿಂದೆ ಕೂಡಾ ಸಿಇಟಿ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್ ಸಮಯದ ಕುರಿತು ಪ್ರತಿಭಟನೆ ನಡೆಸಿದ್ದರು. ಸಂಜೆ 6.30ರ ಒಳಗೆ ವಿದ್ಯಾರ್ಥಿನಿಯರು ಹಾಸ್ಟೆಲ್ ಒಳಗೆ ಬರಬೇಕು ಎಂಬ ನಿಯಮ ಜಾರಿಗೆ ತಂದಾಗ ಭಾರಿ ಪ್ರತಿಭಟನೆ ನಡೆಸಿ ಅದನ್ನು 9.30ರ ಒಳಗೆ ಬರಬೇಕು ಎಂದು ತಿದ್ದುಪಡಿ ತರಲು ಕಾರಣರಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...