Homeಮುಖಪುಟಕೇರಳ: ಹೊಸದಾಗಿ ನಿರ್ಮಾಣಗೊಳ್ಳಲಿರುವ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಬಸ್‌ ನಿಲ್ದಾಣ

ಕೇರಳ: ಹೊಸದಾಗಿ ನಿರ್ಮಾಣಗೊಳ್ಳಲಿರುವ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಬಸ್‌ ನಿಲ್ದಾಣ

- Advertisement -
- Advertisement -

ಕಾಲೇಜು ಹುಡುಗ-ಹುಡುಗಿಯರು ಒಟ್ಟಿಗೆ ಕುಳಿತುಕೊಳ್ಳುತ್ತಾರೆ ಎಂಬ ಕಾರಣಕ್ಕೆ ಮೂಲಭೂತವಾದಿಗಳು ಬಸ್‌ನಿಲ್ದಾಣದ ಬೆಂಚ್‌ ಅನ್ನು ಮುರಿದು ಅದರಲ್ಲಿ ಒಬ್ಬರಷ್ಟೆ ಕುಳಿತುಕೊಳ್ಳುವಂತೆ ತಯಾರುಗೊಳಿಸಿದ್ದ ಬಸ್‌ ನಿಲ್ದಾಣವನ್ನು ತಿರುವನಂದಪುರಂ ಕಾರ್ಪೋರೇಷನ್‌ ಅಧಿಕಾರಿಗಳು ಹೊಸದಾಗಿ ನಿರ್ಮಾಣ ಮಾಡಲು ಬೇಕಾಗಿ ತೆಗೆದು ಹಾಕಿದ್ದಾರೆ. ಬೆಂಚನ್ನು ಮುರಿದು ಒಬ್ಬರಿಗೆ ಕೂರುವಂತೆ ತಯಾರಿಗೊಳಿಸಿದ್ದ ಮೂಲಭೂತವಾದಿಗಳ ನಡೆಯನ್ನು ವಿರೋಧಿಸಿದ್ದ ಕಾಲೇಜು ವಿದ್ಯಾರ್ಥಿಗಳು, ‘ಒಬ್ಬರ ಮಡಿಲಲ್ಲಿ ಮತ್ತೊಬ್ಬರು ಕೂತು’ ಪ್ರತಿಭಟಿಸಿದ್ದು ದೇಶದ ಗಮನಸೆಳೆದಿತ್ತು.

ತಿರುವನಂತಪುರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ (ಸಿಇಟಿ) ಬಳಿಯ ಶ್ರೀಕಾರ್ಯಂನ ಅದೇ ಸ್ಥಳದಲ್ಲಿ ಲಿಂಗ ತಟಸ್ಥ ಬಸ್ ನಿಲ್ದಾಣವನ್ನು ನಿರ್ಮಿಸುವುದಾಗಿ ನಗರದ ಮೇಯರ್ ಆರ್ಯ ಎಸ್. ರಾಜೇಂದ್ರನ್ ಭರವಸೆ ನೀಡಿದ ಎರಡು ತಿಂಗಳ ನಂತರ ಕಾರ್ಪೋರೇಷನ್‌ ಅಧಿಕಾರಿಗಳು ಅದನ್ನು ತೆಗೆದುಹಾಕಿದ್ದಾರೆ. ಇದೀಗ ಅಲ್ಲಿ ಹೊಸ ಬಸ್‌ ನಿಲ್ದಾಣ ನಿರ್ಮಾಣಗೊಳ್ಳಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿದ್ಯಾರ್ಥಿಗಳು ಒಬ್ಬರ ಮಡಿಲಲ್ಲಿ ಮತ್ತೊಬ್ಬರು ಕುಳಿತು ಪ್ರತಿಭಟನೆ ನಡೆಸುತ್ತಿರುವ ಫೋಟೋಗಳು ವೈರಲ್ ಆದ ನಂತರ ಜುಲೈನಲ್ಲಿ ಮೇಯರ್‌‌ ಆರ್ಯ ರಾಜೇಂದ್ರನ್ ಅವರು ಪ್ರದೇಶಕ್ಕೆ ಭೇಟಿ ನೀಡಿದ್ದರು. ಮೂಲಭೂತವಾದಿಗಳ ಕ್ರಮವನ್ನು ವಿರೋಧಿಸಿದ್ದ ಅವರು “ಬೆಂಚ್ ಅನ್ನು ಮೂರು ಭಾಗಗಳಾಗಿ ಕತ್ತರಿಸುವ ವಿಧಾನವು ಅನುಚಿತ ಮಾತ್ರವಲ್ಲದೆ ಕೇರಳದಂತಹ ಪ್ರಗತಿಪರ ಸಮಾಜಕ್ಕೆ ಯೋಗ್ಯವಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

“ರಾಜ್ಯದಲ್ಲಿ ಹುಡುಗಿಯರು ಮತ್ತು ಹುಡುಗರು ಒಟ್ಟಿಗೆ ಕುಳಿತುಕೊಳ್ಳಲು ಯಾವುದೇ ನಿಷೇಧವಿಲ್ಲ. ಅನೈತಿಕ ಪೊಲೀಸ್‌ಗಿರಿಯನ್ನು ಇನ್ನೂ ನಂಬುವವರು ಪ್ರಾಚೀನ ಕಾಲದಲ್ಲಿ ವಾಸಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಆಡಳಿತಾರೂಢ ಸಿಪಿಐ(ಎಂ)ನ ಯುವ ಘಟಕ ಡಿವೈಎಫ್‌ಐ ಕೂಡ ಬಸ್ ನಿಲ್ದಾಣದಲ್ಲಿ ಬೆಂಚ್ ಒಡೆಯುವುದನ್ನು ಒಪ್ಪಲಾಗದು ಎಂದು ಹೇಳಿತ್ತು.

ಅಂದು ನಡೆದಿದ್ದೇನು?

ಸಿಇಟಿ ಕಾಲೇಜಿನ ಹೊರಗಿನ ಬಸ್‌ ನಿಲ್ದಾಣವು ವಿದ್ಯಾರ್ಥಿಗಳಿಗೆ ತಮ್ಮ ಸ್ನೇಹಿತರನ್ನು ಮಾತನಾಡಿಸಲು, ಹರಟೆ ಹೊಡೆಯಲು ಪ್ರಸಕ್ತ ಸ್ಥಳವಾಗಿತ್ತು. ಕಾಲೇಜು ಮುಗಿದ ನಂತರ ಅಲ್ಲಿ ಕುಳಿತು ಹುಡುಗ ಹುಡುಗಿಯರು ಸೇರಿ ತಮಾಷೆ ಮಾಡುತ್ತಿದ್ದುದು ಎಂದಿನ ದಿನಚರಿ. ಆದರೆ ಇದು ಅಲ್ಲಿನ ಸ್ಥಳೀಯ ಸಂಪ್ರದಾಯವಾದಿಗಳಿಗೆ ಸಹಿಸಿಕೊಳ್ಳಲು ಅಸಾಧ್ಯವಾಗಿತ್ತು. ಅವರ ಪ್ರಕಾರ ಹುಡುಗ ಹುಡುಗಿಯರು ಮಾತನಾಡಬಾರದು, ಸ್ನೇಹ ಪ್ರೀತಿ ಮಾಡಬಾರದು.

ಅದಕ್ಕಾಗಿ ಸ್ಥಳೀಯರು ಜುಲೈ 19ರ ಮಂಗಳವಾರ ರಾತ್ರೋರಾತ್ರಿ ಬಸ್‌ ಸ್ಟ್ಯಾಂಡಿನಲ್ಲಿ ಕುಳಿತುಕೊಳ್ಳುವ ಕುರ್ಚಿಗಳನನ್ನು ತೆಗೆದು ಕೇವಲ ಒಬ್ಬೊಬ್ಬರು ಮಾತ್ರ ಕುಳಿತುಕೊಳ್ಳುವಂತೆ ಮೂರು ಕುರ್ಚಿಗಳನ್ನು ಹಾಕಲಾಗಿತ್ತು. ಎರಡು ಕುರ್ಚಿ ಜೊತೆಗಿದ್ದರೆ ಹುಡುಗ-ಹುಡುಗಿ ಕುಳಿತು ಮಾತನಾಡುತ್ತಾರೆ ಎಂಬುದು ಅವರ ಈ ಕೃತ್ಯಕ್ಕೆ ಕಾರಣವಾಗಿತ್ತು.

ಮರುದಿನ ಇದನ್ನು ಗಮನಿಸಿದ್ದ ವಿದ್ಯಾರ್ಥಿಗಳು ಪ್ರತಿಭಟಿಸಲು ನಿರ್ಧರಿಸಿ, ಒಂದೇ ಸೀಟಿನಲ್ಲಿ ಹುಡುಗ ಹುಡುಗಿಯರು ತೊಡೆಮೇಲೆ ಕುಳಿತು ಫೋಟೊ ತೆಗೆದು ತಮ್ಮ ಸ್ನೇಹಿತರ ಗುಂಪುಗಳಲ್ಲಿ ಹಂಚಿಕೊಂಡರು. ಅವರ ಈ ದಿಟ್ಟ ಮತ್ತು ವಿನೂತನ ಪ್ರತಿಭಟನೆಯ ಈ ಚಿತ್ರಗಳು ನಂತರ ಎಲ್ಲೆಂದರಲ್ಲಿ ವೈರಲ್ ಆದವು. ಉಳಿದ ವಿದ್ಯಾರ್ಥಿಗಳು ಈ ಫೋಟೊ ತೆಗೆಸಿಕೊಳ್ಳುವ ಪ್ರತಿಭಟನೆಗೆ ಕೈಜೋಡಿಸಿ ತಾವು ಜೊತೆಗೆ ಕುಳಿತು ಪೋಟೊ ತೆಗೆಸಿಕೊಂಡಿದ್ದರು.

ಇದನ್ನೂ ಓದಿ: ಕೇರಳದಲ್ಲಿ ಬಂಡವಾಳಶಾಹಿಗಳೊಂದಿಗೆ ಕೈಜೋಡಿಸಿದ ಆಪ್; ಹುಸಿಯಾಗುತ್ತಿರುವ ಪರ್ಯಾಯ ರಾಜಕಾರಣದ ಭರವಸೆ

“ನಾವು ಪ್ರತಿನಿತ್ಯ ಅಲ್ಲಿ ಕುಳಿತರೆ, ಹುಡುಗ-ಹುಡುಗಿ ಮಾತನಾಡಿದರೆ ಸ್ಥಳೀಯರು ತೊಂದರೆ ಕೊಡುತ್ತಿದ್ದರು. ನಿಂದಿಸುತ್ತಿದ್ದರು. ಹಾಗಾಗಿ ಇಬ್ಬರು ಕೂರಬಾರದೆಂದು ಒಂದೊಂದು ಕುರ್ಚಿಯನ್ನು ತೆಗೆಸಿದ್ದರು. ಅದನ್ನು ವಿದ್ಯಾರ್ಥಿಗಳು ವಿರೋಧಿಸಿ ವಿನೂತನವಾಗಿ ಪ್ರತಿಭಟಿಸಿದ್ದಾರೆ” ಎಂದು ಸಿಇಟಿ ಕಾಲೇಜು ಸಂಘದ ಉಪಾಧ್ಯಕ್ಷ ಕೆ.ಪೆ ಫೆಬಿ ಅಂದು ಹೇಳಿದ್ದರು.

ಈ ಕುರಿತು ಮಾತನಾಡಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಆರ್ಯ,“ನಾವು ಪೋಸ್ಟ್ ಮಾಡಿದ ಚಿತ್ರ ವೈರಲ್ ಆಗುತ್ತದೆ ಎಂದು ನಾವು ಅಂದಾಜಿಸಿರಲಿಲ್ಲ. ಅದು ಅಷ್ಟೊಂದು ಹರಿದಾಡುತ್ತಿರುವುದು ನಮ್ಮ ಈ ಸರಳ ಪ್ರತಿಭಟನೆಗೆ ಜನಬೆಂಬಲವನ್ನು ತೋರಿಸುತ್ತದೆ. ಜೊತೆಗೆ ಇಲ್ಲಿನ ಸ್ಥಳೀಯರು ವಿದ್ಯಾರ್ಥಿಗಳ ಬಗ್ಗೆ ಯಾವ ಅಭಿಪ್ರಾಯ ಹೊಂದಿದ್ದಾರೆ ಮತ್ತು ನಮ್ಮನ್ನು ಹೇಗೆ ನಿಯಂತ್ರಿಸಲು ಬಯಸುತ್ತಾರೆ ಎಂಬುದನ್ನು ತಿಳಿಸುತ್ತದೆ. ಆದರೆ ನಮ್ಮ ಪ್ರತಿಭಟನೆಯ ನಂತರ ಇದುವರೆಗೂ ನಮಗೆ ಸಕರಾತ್ಮಕ ಪ್ರತಿಕ್ರಿಯೆಗಳು ಬಂದಿವೆ” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಕೇರಳ: ಮಹಿಳೆಯರ ಸುರಕ್ಷತೆಗಾಗಿ ಪಿಂಕ್ ಪ್ರೊಟೆಕ್ಷನ್ ಯೋಜನೆ ಆರಂಭ

ಈ ಹಿಂದೆ ಕೂಡಾ ಸಿಇಟಿ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್ ಸಮಯದ ಕುರಿತು ಪ್ರತಿಭಟನೆ ನಡೆಸಿದ್ದರು. ಸಂಜೆ 6.30ರ ಒಳಗೆ ವಿದ್ಯಾರ್ಥಿನಿಯರು ಹಾಸ್ಟೆಲ್ ಒಳಗೆ ಬರಬೇಕು ಎಂಬ ನಿಯಮ ಜಾರಿಗೆ ತಂದಾಗ ಭಾರಿ ಪ್ರತಿಭಟನೆ ನಡೆಸಿ ಅದನ್ನು 9.30ರ ಒಳಗೆ ಬರಬೇಕು ಎಂದು ತಿದ್ದುಪಡಿ ತರಲು ಕಾರಣರಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...