Homeಮುಖಪುಟಕೇರಳ: ಹೊಸದಾಗಿ ನಿರ್ಮಾಣಗೊಳ್ಳಲಿರುವ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಬಸ್‌ ನಿಲ್ದಾಣ

ಕೇರಳ: ಹೊಸದಾಗಿ ನಿರ್ಮಾಣಗೊಳ್ಳಲಿರುವ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಬಸ್‌ ನಿಲ್ದಾಣ

- Advertisement -
- Advertisement -

ಕಾಲೇಜು ಹುಡುಗ-ಹುಡುಗಿಯರು ಒಟ್ಟಿಗೆ ಕುಳಿತುಕೊಳ್ಳುತ್ತಾರೆ ಎಂಬ ಕಾರಣಕ್ಕೆ ಮೂಲಭೂತವಾದಿಗಳು ಬಸ್‌ನಿಲ್ದಾಣದ ಬೆಂಚ್‌ ಅನ್ನು ಮುರಿದು ಅದರಲ್ಲಿ ಒಬ್ಬರಷ್ಟೆ ಕುಳಿತುಕೊಳ್ಳುವಂತೆ ತಯಾರುಗೊಳಿಸಿದ್ದ ಬಸ್‌ ನಿಲ್ದಾಣವನ್ನು ತಿರುವನಂದಪುರಂ ಕಾರ್ಪೋರೇಷನ್‌ ಅಧಿಕಾರಿಗಳು ಹೊಸದಾಗಿ ನಿರ್ಮಾಣ ಮಾಡಲು ಬೇಕಾಗಿ ತೆಗೆದು ಹಾಕಿದ್ದಾರೆ. ಬೆಂಚನ್ನು ಮುರಿದು ಒಬ್ಬರಿಗೆ ಕೂರುವಂತೆ ತಯಾರಿಗೊಳಿಸಿದ್ದ ಮೂಲಭೂತವಾದಿಗಳ ನಡೆಯನ್ನು ವಿರೋಧಿಸಿದ್ದ ಕಾಲೇಜು ವಿದ್ಯಾರ್ಥಿಗಳು, ‘ಒಬ್ಬರ ಮಡಿಲಲ್ಲಿ ಮತ್ತೊಬ್ಬರು ಕೂತು’ ಪ್ರತಿಭಟಿಸಿದ್ದು ದೇಶದ ಗಮನಸೆಳೆದಿತ್ತು.

ತಿರುವನಂತಪುರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ (ಸಿಇಟಿ) ಬಳಿಯ ಶ್ರೀಕಾರ್ಯಂನ ಅದೇ ಸ್ಥಳದಲ್ಲಿ ಲಿಂಗ ತಟಸ್ಥ ಬಸ್ ನಿಲ್ದಾಣವನ್ನು ನಿರ್ಮಿಸುವುದಾಗಿ ನಗರದ ಮೇಯರ್ ಆರ್ಯ ಎಸ್. ರಾಜೇಂದ್ರನ್ ಭರವಸೆ ನೀಡಿದ ಎರಡು ತಿಂಗಳ ನಂತರ ಕಾರ್ಪೋರೇಷನ್‌ ಅಧಿಕಾರಿಗಳು ಅದನ್ನು ತೆಗೆದುಹಾಕಿದ್ದಾರೆ. ಇದೀಗ ಅಲ್ಲಿ ಹೊಸ ಬಸ್‌ ನಿಲ್ದಾಣ ನಿರ್ಮಾಣಗೊಳ್ಳಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿದ್ಯಾರ್ಥಿಗಳು ಒಬ್ಬರ ಮಡಿಲಲ್ಲಿ ಮತ್ತೊಬ್ಬರು ಕುಳಿತು ಪ್ರತಿಭಟನೆ ನಡೆಸುತ್ತಿರುವ ಫೋಟೋಗಳು ವೈರಲ್ ಆದ ನಂತರ ಜುಲೈನಲ್ಲಿ ಮೇಯರ್‌‌ ಆರ್ಯ ರಾಜೇಂದ್ರನ್ ಅವರು ಪ್ರದೇಶಕ್ಕೆ ಭೇಟಿ ನೀಡಿದ್ದರು. ಮೂಲಭೂತವಾದಿಗಳ ಕ್ರಮವನ್ನು ವಿರೋಧಿಸಿದ್ದ ಅವರು “ಬೆಂಚ್ ಅನ್ನು ಮೂರು ಭಾಗಗಳಾಗಿ ಕತ್ತರಿಸುವ ವಿಧಾನವು ಅನುಚಿತ ಮಾತ್ರವಲ್ಲದೆ ಕೇರಳದಂತಹ ಪ್ರಗತಿಪರ ಸಮಾಜಕ್ಕೆ ಯೋಗ್ಯವಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

“ರಾಜ್ಯದಲ್ಲಿ ಹುಡುಗಿಯರು ಮತ್ತು ಹುಡುಗರು ಒಟ್ಟಿಗೆ ಕುಳಿತುಕೊಳ್ಳಲು ಯಾವುದೇ ನಿಷೇಧವಿಲ್ಲ. ಅನೈತಿಕ ಪೊಲೀಸ್‌ಗಿರಿಯನ್ನು ಇನ್ನೂ ನಂಬುವವರು ಪ್ರಾಚೀನ ಕಾಲದಲ್ಲಿ ವಾಸಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಆಡಳಿತಾರೂಢ ಸಿಪಿಐ(ಎಂ)ನ ಯುವ ಘಟಕ ಡಿವೈಎಫ್‌ಐ ಕೂಡ ಬಸ್ ನಿಲ್ದಾಣದಲ್ಲಿ ಬೆಂಚ್ ಒಡೆಯುವುದನ್ನು ಒಪ್ಪಲಾಗದು ಎಂದು ಹೇಳಿತ್ತು.

ಅಂದು ನಡೆದಿದ್ದೇನು?

ಸಿಇಟಿ ಕಾಲೇಜಿನ ಹೊರಗಿನ ಬಸ್‌ ನಿಲ್ದಾಣವು ವಿದ್ಯಾರ್ಥಿಗಳಿಗೆ ತಮ್ಮ ಸ್ನೇಹಿತರನ್ನು ಮಾತನಾಡಿಸಲು, ಹರಟೆ ಹೊಡೆಯಲು ಪ್ರಸಕ್ತ ಸ್ಥಳವಾಗಿತ್ತು. ಕಾಲೇಜು ಮುಗಿದ ನಂತರ ಅಲ್ಲಿ ಕುಳಿತು ಹುಡುಗ ಹುಡುಗಿಯರು ಸೇರಿ ತಮಾಷೆ ಮಾಡುತ್ತಿದ್ದುದು ಎಂದಿನ ದಿನಚರಿ. ಆದರೆ ಇದು ಅಲ್ಲಿನ ಸ್ಥಳೀಯ ಸಂಪ್ರದಾಯವಾದಿಗಳಿಗೆ ಸಹಿಸಿಕೊಳ್ಳಲು ಅಸಾಧ್ಯವಾಗಿತ್ತು. ಅವರ ಪ್ರಕಾರ ಹುಡುಗ ಹುಡುಗಿಯರು ಮಾತನಾಡಬಾರದು, ಸ್ನೇಹ ಪ್ರೀತಿ ಮಾಡಬಾರದು.

ಅದಕ್ಕಾಗಿ ಸ್ಥಳೀಯರು ಜುಲೈ 19ರ ಮಂಗಳವಾರ ರಾತ್ರೋರಾತ್ರಿ ಬಸ್‌ ಸ್ಟ್ಯಾಂಡಿನಲ್ಲಿ ಕುಳಿತುಕೊಳ್ಳುವ ಕುರ್ಚಿಗಳನನ್ನು ತೆಗೆದು ಕೇವಲ ಒಬ್ಬೊಬ್ಬರು ಮಾತ್ರ ಕುಳಿತುಕೊಳ್ಳುವಂತೆ ಮೂರು ಕುರ್ಚಿಗಳನ್ನು ಹಾಕಲಾಗಿತ್ತು. ಎರಡು ಕುರ್ಚಿ ಜೊತೆಗಿದ್ದರೆ ಹುಡುಗ-ಹುಡುಗಿ ಕುಳಿತು ಮಾತನಾಡುತ್ತಾರೆ ಎಂಬುದು ಅವರ ಈ ಕೃತ್ಯಕ್ಕೆ ಕಾರಣವಾಗಿತ್ತು.

ಮರುದಿನ ಇದನ್ನು ಗಮನಿಸಿದ್ದ ವಿದ್ಯಾರ್ಥಿಗಳು ಪ್ರತಿಭಟಿಸಲು ನಿರ್ಧರಿಸಿ, ಒಂದೇ ಸೀಟಿನಲ್ಲಿ ಹುಡುಗ ಹುಡುಗಿಯರು ತೊಡೆಮೇಲೆ ಕುಳಿತು ಫೋಟೊ ತೆಗೆದು ತಮ್ಮ ಸ್ನೇಹಿತರ ಗುಂಪುಗಳಲ್ಲಿ ಹಂಚಿಕೊಂಡರು. ಅವರ ಈ ದಿಟ್ಟ ಮತ್ತು ವಿನೂತನ ಪ್ರತಿಭಟನೆಯ ಈ ಚಿತ್ರಗಳು ನಂತರ ಎಲ್ಲೆಂದರಲ್ಲಿ ವೈರಲ್ ಆದವು. ಉಳಿದ ವಿದ್ಯಾರ್ಥಿಗಳು ಈ ಫೋಟೊ ತೆಗೆಸಿಕೊಳ್ಳುವ ಪ್ರತಿಭಟನೆಗೆ ಕೈಜೋಡಿಸಿ ತಾವು ಜೊತೆಗೆ ಕುಳಿತು ಪೋಟೊ ತೆಗೆಸಿಕೊಂಡಿದ್ದರು.

ಇದನ್ನೂ ಓದಿ: ಕೇರಳದಲ್ಲಿ ಬಂಡವಾಳಶಾಹಿಗಳೊಂದಿಗೆ ಕೈಜೋಡಿಸಿದ ಆಪ್; ಹುಸಿಯಾಗುತ್ತಿರುವ ಪರ್ಯಾಯ ರಾಜಕಾರಣದ ಭರವಸೆ

“ನಾವು ಪ್ರತಿನಿತ್ಯ ಅಲ್ಲಿ ಕುಳಿತರೆ, ಹುಡುಗ-ಹುಡುಗಿ ಮಾತನಾಡಿದರೆ ಸ್ಥಳೀಯರು ತೊಂದರೆ ಕೊಡುತ್ತಿದ್ದರು. ನಿಂದಿಸುತ್ತಿದ್ದರು. ಹಾಗಾಗಿ ಇಬ್ಬರು ಕೂರಬಾರದೆಂದು ಒಂದೊಂದು ಕುರ್ಚಿಯನ್ನು ತೆಗೆಸಿದ್ದರು. ಅದನ್ನು ವಿದ್ಯಾರ್ಥಿಗಳು ವಿರೋಧಿಸಿ ವಿನೂತನವಾಗಿ ಪ್ರತಿಭಟಿಸಿದ್ದಾರೆ” ಎಂದು ಸಿಇಟಿ ಕಾಲೇಜು ಸಂಘದ ಉಪಾಧ್ಯಕ್ಷ ಕೆ.ಪೆ ಫೆಬಿ ಅಂದು ಹೇಳಿದ್ದರು.

ಈ ಕುರಿತು ಮಾತನಾಡಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಆರ್ಯ,“ನಾವು ಪೋಸ್ಟ್ ಮಾಡಿದ ಚಿತ್ರ ವೈರಲ್ ಆಗುತ್ತದೆ ಎಂದು ನಾವು ಅಂದಾಜಿಸಿರಲಿಲ್ಲ. ಅದು ಅಷ್ಟೊಂದು ಹರಿದಾಡುತ್ತಿರುವುದು ನಮ್ಮ ಈ ಸರಳ ಪ್ರತಿಭಟನೆಗೆ ಜನಬೆಂಬಲವನ್ನು ತೋರಿಸುತ್ತದೆ. ಜೊತೆಗೆ ಇಲ್ಲಿನ ಸ್ಥಳೀಯರು ವಿದ್ಯಾರ್ಥಿಗಳ ಬಗ್ಗೆ ಯಾವ ಅಭಿಪ್ರಾಯ ಹೊಂದಿದ್ದಾರೆ ಮತ್ತು ನಮ್ಮನ್ನು ಹೇಗೆ ನಿಯಂತ್ರಿಸಲು ಬಯಸುತ್ತಾರೆ ಎಂಬುದನ್ನು ತಿಳಿಸುತ್ತದೆ. ಆದರೆ ನಮ್ಮ ಪ್ರತಿಭಟನೆಯ ನಂತರ ಇದುವರೆಗೂ ನಮಗೆ ಸಕರಾತ್ಮಕ ಪ್ರತಿಕ್ರಿಯೆಗಳು ಬಂದಿವೆ” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಕೇರಳ: ಮಹಿಳೆಯರ ಸುರಕ್ಷತೆಗಾಗಿ ಪಿಂಕ್ ಪ್ರೊಟೆಕ್ಷನ್ ಯೋಜನೆ ಆರಂಭ

ಈ ಹಿಂದೆ ಕೂಡಾ ಸಿಇಟಿ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್ ಸಮಯದ ಕುರಿತು ಪ್ರತಿಭಟನೆ ನಡೆಸಿದ್ದರು. ಸಂಜೆ 6.30ರ ಒಳಗೆ ವಿದ್ಯಾರ್ಥಿನಿಯರು ಹಾಸ್ಟೆಲ್ ಒಳಗೆ ಬರಬೇಕು ಎಂಬ ನಿಯಮ ಜಾರಿಗೆ ತಂದಾಗ ಭಾರಿ ಪ್ರತಿಭಟನೆ ನಡೆಸಿ ಅದನ್ನು 9.30ರ ಒಳಗೆ ಬರಬೇಕು ಎಂದು ತಿದ್ದುಪಡಿ ತರಲು ಕಾರಣರಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...