Homeಮುಖಪುಟಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

- Advertisement -
- Advertisement -

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ (ಮಾ.21) ಸುರೇಂದ್ರನ್ ನಾಮಪತ್ರ ಸಲ್ಲಿಸುವಾಗ ಬಯಲಾಗಿದೆ ಎಂದು ವರದಿಗಳು ಹೇಳಿವೆ.

ಸುರೇಂದ್ರನ್ ವಿರುದ್ಧದ 242 ಪ್ರಕರಣಗಳಲ್ಲಿ ಹೆಚ್ಚಿನವು ವಿವಿಧ ಪ್ರತಿಭಟನೆಗಳು ಮತ್ತು ಆಂದೋಲನಗಳ ನೇತೃತ್ವ ವಹಿಸಿದ್ದಕ್ಕಾಗಿ ಅಥವಾ ಭಾಗವಾಗಿದ್ದಕ್ಕಾಗಿ ದಾಖಲಾಗಿವೆ ಎಂಬುವುದು ಅವರ ನಾಮಪತ್ರದ ಜೊತೆಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ ಎಂದು theprint.in ವರದಿ ಮಾಡಿದೆ.

ತಮ್ಮ ಅಫಿಡವಿಟ್‌ನಲ್ಲಿ, ಸುರೇಂದ್ರನ್ ಅವರು 28 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ಸ್ಥಿರ ಮತ್ತು ಚರ ಆಸ್ತಿಗಳನ್ನು ಮತ್ತು ಒಂಬತ್ತು ಲಕ್ಷ ರೂಪಾಯಿಗೂ ಹೆಚ್ಚು ಸಾಲಗಳನ್ನು ಘೋಷಿಸಿಕೊಂಡಿದ್ದಾರೆ.

2014ರಲ್ಲಿ ತಿರುವನಂತಪುರದಲ್ಲಿ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿದ್ದಕ್ಕಾಗಿ ಸುರೇಂದ್ರನ್ ಅವರ ಪಕ್ಷದ ಸಹೋದ್ಯೋಗಿ ಮತ್ತು ಕೇಂದ್ರದ ರಾಜ್ಯ ಖಾತೆ ಸಚಿವ ಜಾರ್ಜ್ ಕುರಿಯನ್ ವಿರುದ್ಧ ಕೇವಲ ಒಂದು ಕ್ರಿಮಿನಲ್ ಪ್ರಕರಣ ಬಾಕಿ ಇದೆ ಎಂದು ವರದಿ ತಿಳಿಸಿದೆ.

ಕುರಿಯನ್ ತಮ್ಮ ಅಫಿಡವಿಟ್‌ನಲ್ಲಿ 1.74 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸ್ಥಿರ ಮತ್ತು ಚರ ಆಸ್ತಿ ಹಾಗೂ ಎರಡು ಲಕ್ಷ ರೂ.ಗಳ ಸಾಲವನ್ನು ಘೋಷಿಸಿಕೊಂಡಿದ್ದಾರೆ.

ಕಝಕೂಟಂ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮಾಜಿ ಕೇಂದ್ರ ಸಚಿವ ವಿ. ಮುರಳೀಧರನ್, ವಿವಿಧ ಪ್ರತಿಭಟನೆಗಳು ಮತ್ತು ಆಂದೋಲನಗಳಲ್ಲಿ ಭಾಗವಹಿಸಿದ್ದಕ್ಕಾಗಿ ಎಂಟು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ಅವರು 20 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಚರಾಸ್ತಿ ಹೊಂದಿದ್ದಾರೆಂದು ಘೋಷಿಸಿಕೊಂಡಿದ್ದಾರೆ ಮತ್ತು ಅವರ ಅಫಿಡವಿಟ್ ಪ್ರಕಾರ ಅವರ ಬಳಿ ಯಾವುದೇ ಸ್ಥಿರ ಆಸ್ತಿ ಇಲ್ಲ ಎಂದು ಹೇಳಿಕೊಂಡಿದ್ದಾರೆ.

ಪಾಲಕ್ಕಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ನಾಯಕಿ ಶೋಭಾ ಸುರೇಂದ್ರನ್ ಅವರ ವಿರುದ್ಧ 35 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಅವುಗಳಲ್ಲಿ ಹೆಚ್ಚಿನವು ವಿವಿಧ ಪ್ರತಿಭಟನೆಗಳು ಮತ್ತು ಆಂದೋಲನಗಳ ನೇತೃತ್ವ ವಹಿಸಿದ್ದಕ್ಕಾಗಿ ಮತ್ತು ಭಾಗವಾಗಿದ್ದಕ್ಕಾಗಿ ದಾಖಲಾಗಿರುವುದಾಗಿದೆ.

ಶೋಭಾ ಅವರು ತಮ್ಮ ಅಫಿಡವಿಟ್‌ನಲ್ಲಿ 1.94 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸ್ಥಿರ ಮತ್ತು ಚರ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ.

ವಟ್ಟಿಯೂರ್ಕಾವು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಕೌನ್ಸಿಲರ್ ಮತ್ತು ಮಾಜಿ ಡಿಜಿಪಿ ಆರ್. ಶ್ರೀಲೇಖಾ ಅವರು ತಮ್ಮ ಅಫಿಡವಿಟ್‌ನಲ್ಲಿ ಐದು ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸ್ಥಿರ ಮತ್ತು ಚರ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ.

ಶ್ರೀಲೇಖಾ ಅವರ ಅಫಿಡವಿಟ್ ಪ್ರಕಾರ, ಪೋಕ್ಸೊ ಪ್ರಕರಣದ ಬಲಿಪಶುವಿನ ಗುರುತನ್ನು ಬಹಿರಂಗಪಡಿಸಿದ ಆರೋಪದ ಮೇಲೆ ಈ ವರ್ಷ ಅವರ ವಿರುದ್ಧ ಒಂದು ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಅವರು ಈ ಆರೋಪವನ್ನು ನಿರಾಕರಿಸಿದ್ದಾರೆ ಮತ್ತು ಎಫ್‌ಐಆರ್ ರದ್ದುಗೊಳಿಸುವಂತೆ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...