Homeಮುಖಪುಟಆಳ ಸಮುದ್ರ ಗಣಿಗಾರಿಕೆ ಪ್ರಸ್ತಾವನೆ ವಿರೋಧಿಸಿ ಕೇರಳ ವಿಧಾನಸಭೆಯಿಂದ ನಿರ್ಣಯ ಅಂಗೀಕಾರ

ಆಳ ಸಮುದ್ರ ಗಣಿಗಾರಿಕೆ ಪ್ರಸ್ತಾವನೆ ವಿರೋಧಿಸಿ ಕೇರಳ ವಿಧಾನಸಭೆಯಿಂದ ನಿರ್ಣಯ ಅಂಗೀಕಾರ

- Advertisement -
- Advertisement -

ರಾಜ್ಯದ ಕರಾವಳಿಯಲ್ಲಿ ಆಳ ಸಮುದ್ರ ಖನಿಜ ಗಣಿಗಾರಿಕೆಗೆ ಅವಕಾಶ ನೀಡುವ ಕೇಂದ್ರ ಸರ್ಕಾರ ಕ್ರಮವನ್ನು ಹಿಂಪಡೆಯಬೇಕೆಂದು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಅಂಗೀಕರಿಸಿದೆ.

‘ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಆಡಳಿತ ಪಕ್ಷದ ‘ಏಜೆಂಟ್’ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಆರೋಪಿಸಿ ಸ್ಪೀಕರ್ ವೇದಿಕೆಯ ಮುಂದೆ ವಿರೋಧ ಪಕ್ಷದ ಯುಡಿಎಫ್ ಶಾಸಕರು ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ನಿರ್ಣಯ ಅಂಗೀಕರಿಸಲಾಯಿತು.

ಆಶಾ ಕಾರ್ಯಕರ್ತರ ಪ್ರತಿಭಟನೆಯನ್ನು ಚರ್ಚಿಸಲು ಸದನದ ಕಲಾಪವನ್ನು ಮುಂದೂಡಬೇಕೆಂಬ ಬೇಡಿಕೆಯನ್ನು ಅಂಗೀಕರಿಸದ ಕಾರಣ, ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್ ಅವರು ತಮ್ಮ ಭಾಷಣವನ್ನು ಪೂರ್ಣಗೊಳಿಸಲು ಅವಕಾಶ ನೀಡದಿದ್ದಕ್ಕಾಗಿ ಯುಡಿಎಫ್ ಶಾಸಕರು ಪ್ರತಿಭಟನೆ ನಡೆಸುತ್ತಿದ್ದರು.

ಈ ಪ್ರತಿಭಟನೆಯಿಂದಾಗಿ, ಆಳ ಸಮುದ್ರ ಗಣಿಗಾರಿಕೆ ನಿರ್ಣಯವನ್ನು ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು.

ರಾಜ್ಯದ ಕರಾವಳಿಯಲ್ಲಿ ಆಳ ಸಮುದ್ರ ಗಣಿಗಾರಿಕೆಯನ್ನು ಪ್ರಾರಂಭಿಸುವ ಕೇಂದ್ರದ ಕ್ರಮವನ್ನು ಯಾವುದೇ ಕಾರಣಕ್ಕೂ ಅನುಮತಿಸಲಾಗುವುದಿಲ್ಲ; ಈ ನಿಟ್ಟಿನಲ್ಲಿ ರಾಜ್ಯದ ಮೀನುಗಾರ ಸಮುದಾಯದ ಕಳವಳವನ್ನು ಈಗಾಗಲೇ ಕೇಂದ್ರ ಸರ್ಕಾರಕ್ಕೆ ತಿಳಿಸಲಾಗಿದೆ ಎಂದು ಕೇರಳ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ.

ಕಡಲಾಚೆಯ ಪ್ರದೇಶಗಳ ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ – 2002 ರ ಮಾನದಂಡಗಳು ಮತ್ತು ಕಳೆದ ವರ್ಷ ಅದಕ್ಕೆ ಮಾಡಲಾದ ತಿದ್ದುಪಡಿಗಳು ರಾಜ್ಯಗಳ ಹಿತಾಸಕ್ತಿಗೆ ಅನುಗುಣವಾಗಿಲ್ಲ ಎಂದು ಆಡಳಿತ ಪಕ್ಷ ಈ ಹಿಂದೆ ಸದನದಲ್ಲಿ ಹೇಳಿತ್ತು.

ಪ್ರಸ್ತಾವಿತ ಆಳ ಸಮುದ್ರ ಗಣಿಗಾರಿಕೆಯ ವಿರುದ್ಧದ ಆಂದೋಲನದಲ್ಲಿ ಸೇರಲು ಆಡಳಿತ ಪಕ್ಷವು ವಿರೋಧ ಪಕ್ಷವಾದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅನ್ನು ಒತ್ತಾಯಿಸಿತ್ತು. ಎಡ ಸರ್ಕಾರವು ಗಣಿಗಾರಿಕೆ ಉಪಕ್ರಮವನ್ನು ‘ಬೆಂಬಲಿಸುತ್ತಿದೆ’ ಎಂದು ಆರೋಪಿಸಿ ಯುಡಿಎಫ್ ಜಂಟಿ ಪ್ರತಿಭಟನೆಗೆ ಆಹ್ವಾನವನ್ನು ತಿರಸ್ಕರಿಸಿದೆ. ಕೇಂದ್ರದ ಕ್ರಮವನ್ನು ಪ್ರತ್ಯೇಕವಾಗಿ ಪ್ರತಿಭಟಿಸುವುದಾಗಿ ಯುಡಿಎಫ್‌ ಹೇಳಿದೆ.

ದೀರ್ಘಾವಧಿಯಲ್ಲಿ, ಆಳ ಸಮುದ್ರ ಗಣಿಗಾರಿಕೆಯು ಸಾಂಪ್ರದಾಯಿಕ ಸಮುದ್ರ ಮತ್ತು ಹಿನ್ನೀರಿನ ಮೀನುಗಳನ್ನು ಸಂಪೂರ್ಣವಾಗಿ ನಾಶಪಡಿಸುತ್ತದೆ, ಕರಾವಳಿ ಸವೆತ ಮತ್ತು ಉದ್ಯೋಗ ನಷ್ಟವನ್ನು ವೇಗಗೊಳಿಸಿ, ಮೀನುಗಾರರ ಹಡಗುಗಳಿಗೆ ಅಡ್ಡಿಯಾಗುತ್ತದೆ ಎಂದು ಸರ್ಕಾರ ಕಳೆದ ತಿಂಗಳು ವಿಧಾನಸಭೆಯಲ್ಲಿ ಹೇಳಿತ್ತು.

ಕೇರಳ ಕೈಗಾರಿಕಾ ಸಚಿವ ಪಿ ರಾಜೀವ್ ಇತ್ತೀಚೆಗೆ ಕೇರಳವು ಆಳ ಸಮುದ್ರ ಗಣಿಗಾರಿಕೆ ಪ್ರಸ್ತಾವನೆಯ ವಿರುದ್ಧ ಮೂರು ಸಂದರ್ಭಗಳಲ್ಲಿ ತನ್ನ ಪ್ರತಿಭಟನೆಯನ್ನು ಅಧಿಕೃತವಾಗಿ ದಾಖಲಿಸಿದೆ ಎಂದು ಹೇಳಿದರು.

ಕಳೆದ ತಿಂಗಳು, ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ, ಕೇರಳ ಮೀನುಗಾರಿಕಾ ಸಮನ್ವಯ ಸಮಿತಿಯ ಅಡಿಯಲ್ಲಿ ಮೀನುಗಾರಿಕಾ ಸಂಘಗಳು ರಾಜ್ಯದಲ್ಲಿ 24 ಗಂಟೆಗಳ ಹರತಾಳವನ್ನು ಆಯೋಜಿಸಿದ್ದವು. ಪ್ರತಿಭಟನೆಯ ಭಾಗವಾಗಿ ಮೀನುಗಾರರು ಮೀನುಗಾರಿಕೆ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಇದರಿಂದಾಗಿ ಕಾಸರಗೋಡಿನಿಂದ ತಿರುವನಂತಪುರಂವರೆಗಿನ ಕರಾವಳಿ ಪ್ರದೇಶದಾದ್ಯಂತ ಮೀನುಗಾರಿಕೆ ಬಂದರುಗಳು, ಮೀನು ಲ್ಯಾಂಡಿಂಗ್ ಕೇಂದ್ರಗಳು ಮತ್ತು ಮೀನು ಮಾರುಕಟ್ಟೆಗಳಲ್ಲಿ ವ್ಯಾಪಾರಕ್ಕೆ ಅಡ್ಡಿ ಉಂಟಾಯಿತು.

ಸಮಿತಿಯ ನಾಯಕರ ಪ್ರಕಾರ, ಕೊಲ್ಲಂ ದಕ್ಷಿಣ, ಕೊಲ್ಲಂ ಉತ್ತರ, ಆಲಪ್ಪುಳ, ಪೊನ್ನಾನಿ ಮತ್ತು ಚಾವಕ್ಕಾಡ್ ಎಂಬ ಐದು ವಲಯಗಳಲ್ಲಿ ಕಡಲಾಚೆಯ ಗಣಿಗಾರಿಕೆಗಾಗಿ ಮರಳು ಬ್ಲಾಕ್‌ಗಳನ್ನು ಹರಾಜು ಹಾಕಲು ಕೇಂದ್ರ ನಿರ್ಧರಿಸಿದೆ. ಪ್ರತಿಭಟನೆಯ ಭಾಗವಾಗಿ, ಸಮಿತಿಯು ಮಾರ್ಚ್ 12 ರಂದು ಸಂಸತ್ ಮೆರವಣಿಗೆ ನಡೆಸಲು ಯೋಜಿಸಿದೆ.

ಚಂಡೀಗಢ| ರೈತ ನಾಯಕರನ್ನು ಮಧ್ಯರಾತ್ರಿ ಬಂಧಿಸಿದ ಪಂಜಾಬ್ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...