Homeಮುಖಪುಟಎಸ್‌ಐಆರ್ ವಿರುದ್ಧ ಸರ್ವಾನುಮತದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಎಸ್‌ಐಆರ್ ವಿರುದ್ಧ ಸರ್ವಾನುಮತದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

- Advertisement -
- Advertisement -

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೈಗೊಳ್ಳುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ಕ್ರಮದ ವಿರುದ್ಧ ಕೇರಳ ವಿಧಾನಸಭೆ ಸೋಮವಾರ (ಸೆ.29) ಸರ್ವಾನುಮತದ ನಿರ್ಣಯ ಅಂಗೀಕರಿಸಿದೆ. ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಪಾರದರ್ಶಕ ರೀತಿಯಲ್ಲಿ ನಡೆಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಎಸ್‌ಐಆರ್ ವಿರುದ್ಧ ಈಗಾಗಲೇ ಬಲವಾದ ಆಕ್ಷೇಪ ವ್ಯಕ್ತಪಡಿಸಿರುವ ವಿರೋಧ ಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸದನದಲ್ಲಿ ಮಂಡಿಸಿದ ನಿರ್ಣಯವನ್ನು ಬೆಂಬಲಿಸಿತು.

ನಿರ್ಣಯ ಮಂಡನೆ ವೇಳೆ, ಎಸ್‌ಐಆರ್ ಜಾರಿಗೆ ತರಲು ಚುನಾವಣಾ ಆಯೋಗ ತೆಗೆದುಕೊಂಡ ‘ಆತುರದ ಕ್ರಮ’ದ ಬಗ್ಗೆ ಮತ್ತು ಆ ಕ್ರಮದ ಹಿಂದೆ ದುರುದ್ದೇಶವಿದೆ ಎಂದು ಶಂಕಿಸಲಾಗಿರುವ ಬಗ್ಗೆ ಇರುವ ಕಳವಳಗಳನ್ನು ಸಿಎಂ ಸದನಕ್ಕೆ ತಿಳಿಸಿದರು.

ಚುನಾವಣಾ ಆಯೋಗವು ಎಸ್‌ಐಆರ್ ನಡೆಸಲು ಮುಂದಾಗಿರುವುದು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‍‌ಸಿ) ಜಾರಿಗೆ ತರುವ ‘ಹಿಂಬಾಗಿಲಿನ’ ಪ್ರಯತ್ನವಾಗಿದೆ ಎಂಬ ವ್ಯಾಪಕ ಕಳವಳಗಳ ಬಗ್ಗೆ ಅವರು ಗಮನಸೆಳೆದರು.

ಬಿಹಾರದಲ್ಲಿ ಇತ್ತೀಚೆಗೆ ನಡೆದ ಎಸ್‌ಐಆರ್ ಪ್ರಕ್ರಿಯೆಯು ಅಂತಹ ಕಳವಳಗಳನ್ನು ದೃಢಪಡಿಸುತ್ತದೆ ಎಂದು ಹೇಳಿದೆ ಪಿಣರಾಯಿ ವಿಜಯನ್, ಇದು ‘ಹೊರಗಿಡುವ ರಾಜಕೀಯ’ ವನ್ನು ಪ್ರತಿಬಿಂಬಿಸುತ್ತದೆ ಎಂದರು.

ಬಿಹಾರದಲ್ಲಿ ಜಾರಿಗೆ ತರಲಾದ ಎಸ್‌ಐಆರ್ ಮತದಾರರ ಪಟ್ಟಿಯಿಂದ ಜನರನ್ನು ‘ತರ್ಕಬದ್ಧವಲ್ಲದ ಹೊರಗಿಡುವಿಕೆ’ಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ ವಿಜಯನ್, ಅದೇ ಮಾದರಿಯನ್ನು ದೇಶದಾದ್ಯಂತ ಅನುಸರಿಸಲಾಗುತ್ತಿದೆಯೇ ಎಂಬ ಅನುಮಾನ ಇದೆ ಎಂದು ಹೇಳಿದರು.

ಬಿಹಾರ ಎಸ್‌ಐಆರ್ ಪ್ರಕ್ರಿಯೆಯ ಸಾಂವಿಧಾನಿಕ ಸಿಂಧುತ್ವವು ಸುಪ್ರೀಂ ಕೋರ್ಟ್‌ನ ಪರಿಗಣನೆಯಲ್ಲಿರುವಾಗ, ಚುನಾವಣೆ ನಡೆಯಲಿರುವ ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಅನ್ನು ಜಾರಿಗೆ ತರಲು ಮಾಡಲಾಗುತ್ತಿರುವ ಪ್ರಯತ್ನಗಳನ್ನು ಸಿಎಂ ನಿರ್ಣಯದಲ್ಲಿ ಪ್ರಶ್ನಿಸಿದರು.

ದೀರ್ಘಾವಧಿಯ ಸಿದ್ಧತೆ ಮತ್ತು ಸಮಾಲೋಚನೆಯ ಅಗತ್ಯವಿರುವ ಎಸ್‌ಐಆರ್ ಅನ್ನು ಚುನಾವಣಾ ಆಯೋಗವು ತರಾತುರಿಯಲ್ಲಿ ಜಾರಿಗೆ ತರಲು ಪ್ರಯತ್ನಿಸುತ್ತಿರುವುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ಪ್ರಯತ್ನ ಎಂಬ ಭಯವಿದೆ ಎಂದು ಅವರು ಹೇಳಿದರು.

ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಶೀಘ್ರದಲ್ಲೇ ನಡೆಯಲಿವೆ. ಅದರ ನಂತರ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಈ ಪರಿಸ್ಥಿತಿಯಲ್ಲಿ, ಎಸ್‌ಐಆರ್ ಅನ್ನು ತರಾತುರಿಯಲ್ಲಿ ನಡೆಸುವುದು ದುರುದ್ದೇಶಪೂರಿತವಾಗಿದೆ ಎಂದ ಸಿಎಂ, ಇದು ಇದು ಚುನಾವಣಾ ಆಯೋಗದ ಮೇಲೆ ಅನುಮಾನದ ನೆರಳು ಮೂಡಿಸುತ್ತಿದೆ ಎಂದು ತಿಳಿಸಿದರು. 

ಇದಕ್ಕೂ ಮುನ್ನ, 2002ರಲ್ಲಿ ಕೇರಳದಲ್ಲಿ ಮತದಾರರ ಪಟ್ಟಿಯ ಸಂಪೂರ್ಣ ಪರಿಷ್ಕರಣೆಯನ್ನು ನಡೆಸಲಾಗಿತ್ತು. ಪ್ರಸ್ತುತ ಪರಿಷ್ಕರಣೆಯನ್ನು 2002ರ ಆಧಾರದ ಮೇಲೆ ನಡೆಸುವುದು ‘ಅವೈಜ್ಞಾನಿಕ’ ಎಂದು ಅವರು ಹೇಳಿದರು.
1987ರ ನಂತರ ಜನಿಸಿದವರು ತಮ್ಮ ತಂದೆ ಅಥವಾ ತಾಯಿಯ ಪೌರತ್ವ ಪ್ರಮಾಣಪತ್ರವನ್ನು ನೀಡಿದರೆ ಮಾತ್ರ ಮತ ಚಲಾಯಿಸಬಹುದು ಎಂಬ ಎಸ್‌ಐಆರ್ ನ ಅವಶ್ಯಕತೆಯು ದೇಶದ ವಯಸ್ಕರ ಹಕ್ಕುಸ್ವಾಮ್ಯವನ್ನು ದುರ್ಬಲಗೊಳಿಸುವ ನಿರ್ಧಾರವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
2003ರ ನಂತರ ಜನಿಸಿದವರು ತಮ್ಮ ತಂದೆ ಮತ್ತು ತಾಯಿಯ ಪೌರತ್ವ ದಾಖಲೆಗಳನ್ನು ಸಲ್ಲಿಸಿದರೆ ಮಾತ್ರ ಮತ ಚಲಾಯಿಸಬಹುದು ಎಂದು ಷರತ್ತು ವಿಧಿಸಲಾಗಿದೆ ಎಂದು ಅವರು ತಿಳಿಸಿದರು.
ತಜ್ಞರ ಅಧ್ಯಯನಗಳು, ಎಸ್‌ಐಆರ್‌ನ ಅಂತಹ ನಿಬಂಧನೆಗಳಿಂದಾಗಿ ಸಮಾಜದ ಅಂಚಿನಲ್ಲಿರುವ ವರ್ಗಗಳ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗುತ್ತಿದೆ ಎಂದು ತೋರಿಸಿದೆ ಎಂದರು.
ಮತದಾರರ ಪಟ್ಟಿಯಿಂದ ಹೊರಗಿಡಲ್ಪಟ್ಟವರಲ್ಲಿ ಹೆಚ್ಚಿನವರು ಅಲ್ಪಸಂಖ್ಯಾತ ಸಮುದಾಯಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ಮಹಿಳೆಯರು ಮತ್ತು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸೇರಿದವರು ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದರು.

ಧರ್ಮದ ಆಧಾರದ ಮೇಲೆ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುವವರು ಎಸ್‌ಐಆರ್ ಅನ್ನು ಬಳಸುವ ಸಾಧ್ಯತೆಯ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಇದು ಪ್ರಜಾಪ್ರಭುತ್ವಕ್ಕೆ ಸವಾಲಾಗಿದೆ ಎಂದು ಹೇಳಿದರು.

ಚುನಾವಣಾ ಆಯೋಗವು ಜನರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಇಂತಹ ಪದ್ಧತಿಗಳಿಂದ ದೂರವಿರಬೇಕೆಂದು ವಿಧಾನಸಭೆಯು ಸರ್ವಾನುಮತದಿಂದ ಒತ್ತಾಯಿಸುತ್ತದೆ. ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಪಾರದರ್ಶಕ ರೀತಿಯಲ್ಲಿ ನಡೆಸಬೇಕೆಂದು ಕೂಡ ಆಗ್ರಹಿಸುತ್ತದೆ ಎಂದು ಸಿಎಂ ಹೇಳಿದರು.

ಕೆಲವು ಸದಸ್ಯರು ಸೂಚಿಸಿದ ತಿದ್ದುಪಡಿಗಳ ನಂತರ, ಸ್ಪೀಕರ್ ಎ.ಎನ್ ಶಂಸೀರ್ ಅವರು ಸದನವು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ ಎಂದು ಘೋಷಿಸಿದರು.

ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...