Homeಮುಖಪುಟವಯನಾಡಿಗೆ ನೆರವು ವಿಳಂಬ | ಕೇಂದ್ರದ ವಿರುದ್ದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ವಯನಾಡಿಗೆ ನೆರವು ವಿಳಂಬ | ಕೇಂದ್ರದ ವಿರುದ್ದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

- Advertisement -
- Advertisement -

ಭೂಕುಸಿತ, ಜಲಪ್ರಳಯ ದುರಂತ ಸಂಭವಿಸಿರುವ ವಯನಾಡ್‌ಗೆ ನೆರವು ನೀಡಲು ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಕೇರಳ ವಿಧಾನಸಭೆ ಸೋಮವಾರ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ.

ಸಂಸದೀಯ ವ್ಯವಹಾರಗಳ ಸಚಿವ ಎಂ.ಬಿ ರಾಜೇಶ್ ಅವರು ಸೋಮವಾರ ಸದನದಲ್ಲಿ ಮಂಡಿಸಿದ ನಿರ್ಣಯದಲ್ಲಿ, ಜು.30ರಂದು ವಯನಾಡಿನ ಮೆಪ್ಪಾಡಿ ಪಂಚಾಯತ್‌ನ ಚೂರಲ್‌ಮಲಾ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಪ್ರದೇಶಗಳಲ್ಲಿ ಸಂಭವಿಸಿದ್ದ ಭೂಕುಸಿತಗಳಿಂದ ಉಂಟಾಗಿರುವ ವಿನಾಶಗಳನ್ನು ವಿವರಿಸುವ ಜ್ಞಾಪಕ ಪತ್ರವನ್ನು ಈಗಾಗಲೇ ಕೇಂದ್ರಕ್ಕೆ ಸಲ್ಲಿಸಲಾಗಿದೆ. ಈ ಸಂಬಂಧ ಇದುವರೆಗೂ ಯಾವುದೇ ತಕ್ಷಣದ ನೆರವು ದೊರಕಿಲ್ಲ ಮತ್ತು ಕೇಂದ್ರದಿಂದ ನೆರವು ಪಡೆಯುವಲ್ಲಿ ವಿಳಂಬವು ಭೂಕುಸಿತಗಳಲ್ಲಿ ಬದುಕುಳಿದವರ ಪುನರ್ವಸತಿಯ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತದೆ ಎಂದು ಹೇಳಲಾಗಿದೆ.

ಭೂಕುಸಿತದಿಂದ ಸಂತ್ರಸ್ತರಾದವರ ಬ್ಯಾಂಕ್ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲು ಮತ್ತು ತಕ್ಷಣವೇ ಆರ್ಥಿಕ ನೆರವು ನೀಡಲು ಕೇಂದ್ರ ಕ್ರಮಕೈಗೊಳ್ಳಬೇಕು ಎಂದು ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.

ವಯನಾಡ್‌ನಲ್ಲಿ ಸಂಭವಿಸಿರುವುದು ದೇಶದಲ್ಲಿ ವರದಿಯಾದ ಅತ್ಯಂತ ಭೀಕರ ಭೂಕುಸಿತ ದುರಂತಗಳಲ್ಲಿ ಒಂದಾಗಿದೆ ಎಂದಿರುವ ಸಚಿವರು, ಇದು ಜಿಲ್ಲೆಯ ಸಂಪೂರ್ಣ ಚಿತ್ರಣವನ್ನೇ ಬದಲಿಸಿದೆ ಎಂದು ಹೇಳಿದ್ದಾರೆ.

ಭೂಕುಸಿತ ಸಂಭವಿಸಿದ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತು ವೈಯಕ್ತಿಕ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೆರವು ಕೋರಿ ಮನವಿ ಸಲ್ಲಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.

ಇದನ್ನೂ ಓದಿ : ನಿಜ್ಜರ್ ಹತ್ಯೆಯ ವಿವಾದ ಉಲ್ಬಣ: ಕೆನಡಾದ ರಾಜತಾಂತ್ರಿಕರನ್ನು ಹೊರಹಾಕಿ, ತನ್ನ ಅಧಿಕಾರಿಯನ್ನು ಹಿಂತೆಗೆದುಕೊಂಡ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...