Homeಮುಖಪುಟತರಕಾರಿಗಳಿಗೆ ಬೆಂಬಲ ಬೆಲೆ ಘೋಷಿಸಿದ ದೇಶದ ಮೊದಲ ರಾಜ್ಯ ಕೇರಳ!

ತರಕಾರಿಗಳಿಗೆ ಬೆಂಬಲ ಬೆಲೆ ಘೋಷಿಸಿದ ದೇಶದ ಮೊದಲ ರಾಜ್ಯ ಕೇರಳ!

16 ಬಗೆಯ ತರಕಾರಿಗಳಿಗೆ ಬೆಂಬಲ ಬೆಲೆಯನ್ನು ಘೋಷಿಸಲಾಗಿದ್ದು, ಈ ಯೋಜನೆ ನವೆಂಬರ್ 1 ರಿಂದ ಜಾರಿಗೆ ಬರಲಿದೆ.

- Advertisement -
- Advertisement -

ತರಕಾರಿಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕೇರಳ ಪಾತ್ರವಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಹೇಳಿದ್ದಾರೆ. ಕೇರಳ ಸರ್ಕಾರ 16 ಬಗೆಯ ತರಕಾರಿಗಳಿಗೆ ಬೆಂಬಲ ಬೆಲೆಯನ್ನು ಘೋಷಿಸಿದ್ದು, ಈ ಯೋಜನೆ ನವೆಂಬರ್ 1 ರಿಂದ ಜಾರಿಗೆ ಬರಲಿದೆ.

ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಮುಖ್ಯಮಂತ್ರಿ, “ರಾಜ್ಯದಲ್ಲಿ ಉತ್ಪಾದನೆಯಾಗುವ ತರಕಾರಿಗಳಿಗೆ ಬೆಂಬಲ ಬೆಲೆಯನ್ನು ನಿಗದಿಪಡಿಸುತ್ತಿರುವುದು ಇದೇ ಮೊದಲು ಮತ್ತು ಕೇರಳ ಬೆಂಬಲ ಬೆಲೆ ಘೋಷಿಸಿದ ಮೊದಲ ರಾಜ್ಯವಾಗಿದೆ. ಇದು ರೈತರಿಗೆ ಪರಿಹಾರ ಮತ್ತು ಬೆಂಬಲವನ್ನು ನೀಡಲಿದೆ” ಎಂದರು.

“ದೇಶಾದ್ಯಂತದ ರೈತರು ಸಂಕಷ್ಟದಲ್ಲಿದ್ದಾರೆ ಎಂದು ತಿಳಿದಿದೆ. ಆದರೆ ಕಳೆದ ನಾಲ್ಕೂವರೆ ವರ್ಷಗಳಿಂದ ನಾವು ರೈತರಿಗೆ ಬೆಂಬಲ ನೀಡಿದ್ದೇವೆ ಮತ್ತು ಸರ್ಕಾರವು ಪ್ರಾಥಮಿಕವಾಗಿ ರಾಜ್ಯದ ಕೃಷಿ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ” ಎಂದಿದ್ದಾರೆ.

“ಎಂಎಸ್‌ಪಿ ತರಕಾರಿ ಉತ್ಪಾದನಾ ವೆಚ್ಚಕ್ಕಿಂತ ಶೇಕಡಾ 20 ರಷ್ಟು ಹೆಚ್ಚಾಗಿರುತ್ತದೆ. ರೈತರಿಂದ ಉತ್ಪನ್ನಗಳನ್ನು ಎಂಎಸ್‌ಪಿಯಲ್ಲಿ ಸಂಗ್ರಹಿಸಲಾಗುತ್ತದೆ. ಉತ್ಪನ್ನಗಳನ್ನು ಗುಣಮಟ್ಟಕ್ಕೆ ಅನುಗುಣವಾಗಿ ಶ್ರೇಣೀಕರಿಸಲಾಗುತ್ತದೆ ಮತ್ತು ಗುಣಮಟ್ಟವನ್ನು ಆಧರಿಸಿ ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗುತ್ತದೆ. ಮೊದಲ ಹಂತದಲ್ಲಿ 16 ಬಗೆಯ ತರಕಾರಿಗಳನ್ನು ಒಳಗೊಳ್ಳಲಾಗುತ್ತಿದೆ. ಜೊತೆಗೆ ಎಂಎಸ್‌ಪಿಯನ್ನು ನಿಯಮಿತವಾಗಿ ಪರಿಷ್ಕರಿಸುವ ಅವಕಾಶವಿದೆ ”ಎಂದು ಅಧಿಕೃತ ಹೇಳಿಕೆಯೊಂದರಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ತರಕಾರಿಗಳ ಖರೀದಿ ಮತ್ತು ವಿತರಣೆಯನ್ನು ಸಮನ್ವಯಗೊಳಿಸುವುದರಿಂದ ಈ ಯೋಜನೆಯಲ್ಲಿ ಸ್ಥಳೀಯ  ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

“ಈ ಯೋಜನೆಯು ಪ್ರತಿ ಋತುವಿಗೆ ಗರಿಷ್ಠ 15 ಎಕರೆ ತರಕಾರಿ ಕೃಷಿಯನ್ನು ಹೊಂದಿರುವ ರೈತನಿಗೆ ಪ್ರಯೋಜನವನ್ನು ನೀಡುತ್ತದೆ. ಬೆಂಬಲ ಬೆಲೆಯ ಲಾಭ ಪಡೆಯಲು ಅವರು ಬೆಳೆ ವಿಮೆ ಮಾಡಿದ ನಂತರ ಅವರು ಕೃಷಿ ಇಲಾಖೆಯ ನೋಂದಣಿ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು. ನೋಂದಣಿ ನವೆಂಬರ್ 1 ರಿಂದ ಪ್ರಾರಂಭವಾಗಲಿದೆ” ಎಂದಿದ್ದಾರೆ.

’ಈ ಯೋಜನೆಯು ಬೆಂಬಲ ಬೆಲೆಯೊಂದಿಗೆ ಕೋಲ್ಡ್ ಸ್ಟೋರೇಜ್ ಸೌಲಭ್ಯಗಳು ಮತ್ತು ಉತ್ಪನ್ನಗಳನ್ನು ಸಾಗಿಸಲು ಶೈತ್ಯೀಕರಿಸಿದ ವಾಹನಗಳಂತಹ ಸಂಪೂರ್ಣ ಪೂರೈಕೆ ಸರಪಳಿ ಪ್ರಕ್ರಿಯೆಯನ್ನು ಸ್ಥಾಪಿಸಲು ಯೋಜಿಸಿದೆ ”ಎಂದು ವಿಜಯನ್ ಹೇಳಿದರು.

ಕಳೆದ ನಾಲ್ಕೂವರೆ ವರ್ಷಗಳಲ್ಲಿ ರಾಜ್ಯದಲ್ಲಿ ತರಕಾರಿ ಉತ್ಪಾದನೆಯು ದ್ವಿಗುಣಗೊಂಡಿದೆ. ಅಂದರೆ 7 ಲಕ್ಷ ಮೆಟ್ರಿಕ್ ಟನ್ ನಿಂದ 14.72 ಲಕ್ಷ ಮೆಟ್ರಿಕ್ ಟನ್ ತರಕಾರಿ ಉತ್ಪಾದನೆಯಾಗಿದೆ. “ಈ ವರ್ಷ ಹೆಚ್ಚುವರಿಯಾಗಿ 1 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯನ್ನು ಹೆಚ್ಚಿಸುವ ಗುರಿ ಹೊಂದಿದೆ” ಎಂದು ಕೇರಳ ಮುಖ್ಯಮಂತ್ರಿ ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರತಿ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂ ಇರುವ ಏಕೈಕ ರಾಜ್ಯ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...