Homeಮುಖಪುಟತರಕಾರಿಗಳಿಗೆ ಬೆಂಬಲ ಬೆಲೆ ಘೋಷಿಸಿದ ದೇಶದ ಮೊದಲ ರಾಜ್ಯ ಕೇರಳ!

ತರಕಾರಿಗಳಿಗೆ ಬೆಂಬಲ ಬೆಲೆ ಘೋಷಿಸಿದ ದೇಶದ ಮೊದಲ ರಾಜ್ಯ ಕೇರಳ!

16 ಬಗೆಯ ತರಕಾರಿಗಳಿಗೆ ಬೆಂಬಲ ಬೆಲೆಯನ್ನು ಘೋಷಿಸಲಾಗಿದ್ದು, ಈ ಯೋಜನೆ ನವೆಂಬರ್ 1 ರಿಂದ ಜಾರಿಗೆ ಬರಲಿದೆ.

- Advertisement -
- Advertisement -

ತರಕಾರಿಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕೇರಳ ಪಾತ್ರವಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಹೇಳಿದ್ದಾರೆ. ಕೇರಳ ಸರ್ಕಾರ 16 ಬಗೆಯ ತರಕಾರಿಗಳಿಗೆ ಬೆಂಬಲ ಬೆಲೆಯನ್ನು ಘೋಷಿಸಿದ್ದು, ಈ ಯೋಜನೆ ನವೆಂಬರ್ 1 ರಿಂದ ಜಾರಿಗೆ ಬರಲಿದೆ.

ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಮುಖ್ಯಮಂತ್ರಿ, “ರಾಜ್ಯದಲ್ಲಿ ಉತ್ಪಾದನೆಯಾಗುವ ತರಕಾರಿಗಳಿಗೆ ಬೆಂಬಲ ಬೆಲೆಯನ್ನು ನಿಗದಿಪಡಿಸುತ್ತಿರುವುದು ಇದೇ ಮೊದಲು ಮತ್ತು ಕೇರಳ ಬೆಂಬಲ ಬೆಲೆ ಘೋಷಿಸಿದ ಮೊದಲ ರಾಜ್ಯವಾಗಿದೆ. ಇದು ರೈತರಿಗೆ ಪರಿಹಾರ ಮತ್ತು ಬೆಂಬಲವನ್ನು ನೀಡಲಿದೆ” ಎಂದರು.

“ದೇಶಾದ್ಯಂತದ ರೈತರು ಸಂಕಷ್ಟದಲ್ಲಿದ್ದಾರೆ ಎಂದು ತಿಳಿದಿದೆ. ಆದರೆ ಕಳೆದ ನಾಲ್ಕೂವರೆ ವರ್ಷಗಳಿಂದ ನಾವು ರೈತರಿಗೆ ಬೆಂಬಲ ನೀಡಿದ್ದೇವೆ ಮತ್ತು ಸರ್ಕಾರವು ಪ್ರಾಥಮಿಕವಾಗಿ ರಾಜ್ಯದ ಕೃಷಿ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ” ಎಂದಿದ್ದಾರೆ.

“ಎಂಎಸ್‌ಪಿ ತರಕಾರಿ ಉತ್ಪಾದನಾ ವೆಚ್ಚಕ್ಕಿಂತ ಶೇಕಡಾ 20 ರಷ್ಟು ಹೆಚ್ಚಾಗಿರುತ್ತದೆ. ರೈತರಿಂದ ಉತ್ಪನ್ನಗಳನ್ನು ಎಂಎಸ್‌ಪಿಯಲ್ಲಿ ಸಂಗ್ರಹಿಸಲಾಗುತ್ತದೆ. ಉತ್ಪನ್ನಗಳನ್ನು ಗುಣಮಟ್ಟಕ್ಕೆ ಅನುಗುಣವಾಗಿ ಶ್ರೇಣೀಕರಿಸಲಾಗುತ್ತದೆ ಮತ್ತು ಗುಣಮಟ್ಟವನ್ನು ಆಧರಿಸಿ ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗುತ್ತದೆ. ಮೊದಲ ಹಂತದಲ್ಲಿ 16 ಬಗೆಯ ತರಕಾರಿಗಳನ್ನು ಒಳಗೊಳ್ಳಲಾಗುತ್ತಿದೆ. ಜೊತೆಗೆ ಎಂಎಸ್‌ಪಿಯನ್ನು ನಿಯಮಿತವಾಗಿ ಪರಿಷ್ಕರಿಸುವ ಅವಕಾಶವಿದೆ ”ಎಂದು ಅಧಿಕೃತ ಹೇಳಿಕೆಯೊಂದರಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ತರಕಾರಿಗಳ ಖರೀದಿ ಮತ್ತು ವಿತರಣೆಯನ್ನು ಸಮನ್ವಯಗೊಳಿಸುವುದರಿಂದ ಈ ಯೋಜನೆಯಲ್ಲಿ ಸ್ಥಳೀಯ  ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

“ಈ ಯೋಜನೆಯು ಪ್ರತಿ ಋತುವಿಗೆ ಗರಿಷ್ಠ 15 ಎಕರೆ ತರಕಾರಿ ಕೃಷಿಯನ್ನು ಹೊಂದಿರುವ ರೈತನಿಗೆ ಪ್ರಯೋಜನವನ್ನು ನೀಡುತ್ತದೆ. ಬೆಂಬಲ ಬೆಲೆಯ ಲಾಭ ಪಡೆಯಲು ಅವರು ಬೆಳೆ ವಿಮೆ ಮಾಡಿದ ನಂತರ ಅವರು ಕೃಷಿ ಇಲಾಖೆಯ ನೋಂದಣಿ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು. ನೋಂದಣಿ ನವೆಂಬರ್ 1 ರಿಂದ ಪ್ರಾರಂಭವಾಗಲಿದೆ” ಎಂದಿದ್ದಾರೆ.

’ಈ ಯೋಜನೆಯು ಬೆಂಬಲ ಬೆಲೆಯೊಂದಿಗೆ ಕೋಲ್ಡ್ ಸ್ಟೋರೇಜ್ ಸೌಲಭ್ಯಗಳು ಮತ್ತು ಉತ್ಪನ್ನಗಳನ್ನು ಸಾಗಿಸಲು ಶೈತ್ಯೀಕರಿಸಿದ ವಾಹನಗಳಂತಹ ಸಂಪೂರ್ಣ ಪೂರೈಕೆ ಸರಪಳಿ ಪ್ರಕ್ರಿಯೆಯನ್ನು ಸ್ಥಾಪಿಸಲು ಯೋಜಿಸಿದೆ ”ಎಂದು ವಿಜಯನ್ ಹೇಳಿದರು.

ಕಳೆದ ನಾಲ್ಕೂವರೆ ವರ್ಷಗಳಲ್ಲಿ ರಾಜ್ಯದಲ್ಲಿ ತರಕಾರಿ ಉತ್ಪಾದನೆಯು ದ್ವಿಗುಣಗೊಂಡಿದೆ. ಅಂದರೆ 7 ಲಕ್ಷ ಮೆಟ್ರಿಕ್ ಟನ್ ನಿಂದ 14.72 ಲಕ್ಷ ಮೆಟ್ರಿಕ್ ಟನ್ ತರಕಾರಿ ಉತ್ಪಾದನೆಯಾಗಿದೆ. “ಈ ವರ್ಷ ಹೆಚ್ಚುವರಿಯಾಗಿ 1 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯನ್ನು ಹೆಚ್ಚಿಸುವ ಗುರಿ ಹೊಂದಿದೆ” ಎಂದು ಕೇರಳ ಮುಖ್ಯಮಂತ್ರಿ ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರತಿ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂ ಇರುವ ಏಕೈಕ ರಾಜ್ಯ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...