Homeಮುಖಪುಟತರಕಾರಿಗಳಿಗೆ ಬೆಂಬಲ ಬೆಲೆ ಘೋಷಿಸಿದ ದೇಶದ ಮೊದಲ ರಾಜ್ಯ ಕೇರಳ!

ತರಕಾರಿಗಳಿಗೆ ಬೆಂಬಲ ಬೆಲೆ ಘೋಷಿಸಿದ ದೇಶದ ಮೊದಲ ರಾಜ್ಯ ಕೇರಳ!

16 ಬಗೆಯ ತರಕಾರಿಗಳಿಗೆ ಬೆಂಬಲ ಬೆಲೆಯನ್ನು ಘೋಷಿಸಲಾಗಿದ್ದು, ಈ ಯೋಜನೆ ನವೆಂಬರ್ 1 ರಿಂದ ಜಾರಿಗೆ ಬರಲಿದೆ.

- Advertisement -
- Advertisement -

ತರಕಾರಿಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕೇರಳ ಪಾತ್ರವಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಹೇಳಿದ್ದಾರೆ. ಕೇರಳ ಸರ್ಕಾರ 16 ಬಗೆಯ ತರಕಾರಿಗಳಿಗೆ ಬೆಂಬಲ ಬೆಲೆಯನ್ನು ಘೋಷಿಸಿದ್ದು, ಈ ಯೋಜನೆ ನವೆಂಬರ್ 1 ರಿಂದ ಜಾರಿಗೆ ಬರಲಿದೆ.

ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಮುಖ್ಯಮಂತ್ರಿ, “ರಾಜ್ಯದಲ್ಲಿ ಉತ್ಪಾದನೆಯಾಗುವ ತರಕಾರಿಗಳಿಗೆ ಬೆಂಬಲ ಬೆಲೆಯನ್ನು ನಿಗದಿಪಡಿಸುತ್ತಿರುವುದು ಇದೇ ಮೊದಲು ಮತ್ತು ಕೇರಳ ಬೆಂಬಲ ಬೆಲೆ ಘೋಷಿಸಿದ ಮೊದಲ ರಾಜ್ಯವಾಗಿದೆ. ಇದು ರೈತರಿಗೆ ಪರಿಹಾರ ಮತ್ತು ಬೆಂಬಲವನ್ನು ನೀಡಲಿದೆ” ಎಂದರು.

“ದೇಶಾದ್ಯಂತದ ರೈತರು ಸಂಕಷ್ಟದಲ್ಲಿದ್ದಾರೆ ಎಂದು ತಿಳಿದಿದೆ. ಆದರೆ ಕಳೆದ ನಾಲ್ಕೂವರೆ ವರ್ಷಗಳಿಂದ ನಾವು ರೈತರಿಗೆ ಬೆಂಬಲ ನೀಡಿದ್ದೇವೆ ಮತ್ತು ಸರ್ಕಾರವು ಪ್ರಾಥಮಿಕವಾಗಿ ರಾಜ್ಯದ ಕೃಷಿ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ” ಎಂದಿದ್ದಾರೆ.

“ಎಂಎಸ್‌ಪಿ ತರಕಾರಿ ಉತ್ಪಾದನಾ ವೆಚ್ಚಕ್ಕಿಂತ ಶೇಕಡಾ 20 ರಷ್ಟು ಹೆಚ್ಚಾಗಿರುತ್ತದೆ. ರೈತರಿಂದ ಉತ್ಪನ್ನಗಳನ್ನು ಎಂಎಸ್‌ಪಿಯಲ್ಲಿ ಸಂಗ್ರಹಿಸಲಾಗುತ್ತದೆ. ಉತ್ಪನ್ನಗಳನ್ನು ಗುಣಮಟ್ಟಕ್ಕೆ ಅನುಗುಣವಾಗಿ ಶ್ರೇಣೀಕರಿಸಲಾಗುತ್ತದೆ ಮತ್ತು ಗುಣಮಟ್ಟವನ್ನು ಆಧರಿಸಿ ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗುತ್ತದೆ. ಮೊದಲ ಹಂತದಲ್ಲಿ 16 ಬಗೆಯ ತರಕಾರಿಗಳನ್ನು ಒಳಗೊಳ್ಳಲಾಗುತ್ತಿದೆ. ಜೊತೆಗೆ ಎಂಎಸ್‌ಪಿಯನ್ನು ನಿಯಮಿತವಾಗಿ ಪರಿಷ್ಕರಿಸುವ ಅವಕಾಶವಿದೆ ”ಎಂದು ಅಧಿಕೃತ ಹೇಳಿಕೆಯೊಂದರಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ತರಕಾರಿಗಳ ಖರೀದಿ ಮತ್ತು ವಿತರಣೆಯನ್ನು ಸಮನ್ವಯಗೊಳಿಸುವುದರಿಂದ ಈ ಯೋಜನೆಯಲ್ಲಿ ಸ್ಥಳೀಯ  ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

“ಈ ಯೋಜನೆಯು ಪ್ರತಿ ಋತುವಿಗೆ ಗರಿಷ್ಠ 15 ಎಕರೆ ತರಕಾರಿ ಕೃಷಿಯನ್ನು ಹೊಂದಿರುವ ರೈತನಿಗೆ ಪ್ರಯೋಜನವನ್ನು ನೀಡುತ್ತದೆ. ಬೆಂಬಲ ಬೆಲೆಯ ಲಾಭ ಪಡೆಯಲು ಅವರು ಬೆಳೆ ವಿಮೆ ಮಾಡಿದ ನಂತರ ಅವರು ಕೃಷಿ ಇಲಾಖೆಯ ನೋಂದಣಿ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು. ನೋಂದಣಿ ನವೆಂಬರ್ 1 ರಿಂದ ಪ್ರಾರಂಭವಾಗಲಿದೆ” ಎಂದಿದ್ದಾರೆ.

’ಈ ಯೋಜನೆಯು ಬೆಂಬಲ ಬೆಲೆಯೊಂದಿಗೆ ಕೋಲ್ಡ್ ಸ್ಟೋರೇಜ್ ಸೌಲಭ್ಯಗಳು ಮತ್ತು ಉತ್ಪನ್ನಗಳನ್ನು ಸಾಗಿಸಲು ಶೈತ್ಯೀಕರಿಸಿದ ವಾಹನಗಳಂತಹ ಸಂಪೂರ್ಣ ಪೂರೈಕೆ ಸರಪಳಿ ಪ್ರಕ್ರಿಯೆಯನ್ನು ಸ್ಥಾಪಿಸಲು ಯೋಜಿಸಿದೆ ”ಎಂದು ವಿಜಯನ್ ಹೇಳಿದರು.

ಕಳೆದ ನಾಲ್ಕೂವರೆ ವರ್ಷಗಳಲ್ಲಿ ರಾಜ್ಯದಲ್ಲಿ ತರಕಾರಿ ಉತ್ಪಾದನೆಯು ದ್ವಿಗುಣಗೊಂಡಿದೆ. ಅಂದರೆ 7 ಲಕ್ಷ ಮೆಟ್ರಿಕ್ ಟನ್ ನಿಂದ 14.72 ಲಕ್ಷ ಮೆಟ್ರಿಕ್ ಟನ್ ತರಕಾರಿ ಉತ್ಪಾದನೆಯಾಗಿದೆ. “ಈ ವರ್ಷ ಹೆಚ್ಚುವರಿಯಾಗಿ 1 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯನ್ನು ಹೆಚ್ಚಿಸುವ ಗುರಿ ಹೊಂದಿದೆ” ಎಂದು ಕೇರಳ ಮುಖ್ಯಮಂತ್ರಿ ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರತಿ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂ ಇರುವ ಏಕೈಕ ರಾಜ್ಯ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...