Homeಮುಖಪುಟತರಕಾರಿಗಳಿಗೆ ಬೆಂಬಲ ಬೆಲೆ ಘೋಷಿಸಿದ ದೇಶದ ಮೊದಲ ರಾಜ್ಯ ಕೇರಳ!

ತರಕಾರಿಗಳಿಗೆ ಬೆಂಬಲ ಬೆಲೆ ಘೋಷಿಸಿದ ದೇಶದ ಮೊದಲ ರಾಜ್ಯ ಕೇರಳ!

16 ಬಗೆಯ ತರಕಾರಿಗಳಿಗೆ ಬೆಂಬಲ ಬೆಲೆಯನ್ನು ಘೋಷಿಸಲಾಗಿದ್ದು, ಈ ಯೋಜನೆ ನವೆಂಬರ್ 1 ರಿಂದ ಜಾರಿಗೆ ಬರಲಿದೆ.

- Advertisement -
- Advertisement -

ತರಕಾರಿಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕೇರಳ ಪಾತ್ರವಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಹೇಳಿದ್ದಾರೆ. ಕೇರಳ ಸರ್ಕಾರ 16 ಬಗೆಯ ತರಕಾರಿಗಳಿಗೆ ಬೆಂಬಲ ಬೆಲೆಯನ್ನು ಘೋಷಿಸಿದ್ದು, ಈ ಯೋಜನೆ ನವೆಂಬರ್ 1 ರಿಂದ ಜಾರಿಗೆ ಬರಲಿದೆ.

ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಮುಖ್ಯಮಂತ್ರಿ, “ರಾಜ್ಯದಲ್ಲಿ ಉತ್ಪಾದನೆಯಾಗುವ ತರಕಾರಿಗಳಿಗೆ ಬೆಂಬಲ ಬೆಲೆಯನ್ನು ನಿಗದಿಪಡಿಸುತ್ತಿರುವುದು ಇದೇ ಮೊದಲು ಮತ್ತು ಕೇರಳ ಬೆಂಬಲ ಬೆಲೆ ಘೋಷಿಸಿದ ಮೊದಲ ರಾಜ್ಯವಾಗಿದೆ. ಇದು ರೈತರಿಗೆ ಪರಿಹಾರ ಮತ್ತು ಬೆಂಬಲವನ್ನು ನೀಡಲಿದೆ” ಎಂದರು.

“ದೇಶಾದ್ಯಂತದ ರೈತರು ಸಂಕಷ್ಟದಲ್ಲಿದ್ದಾರೆ ಎಂದು ತಿಳಿದಿದೆ. ಆದರೆ ಕಳೆದ ನಾಲ್ಕೂವರೆ ವರ್ಷಗಳಿಂದ ನಾವು ರೈತರಿಗೆ ಬೆಂಬಲ ನೀಡಿದ್ದೇವೆ ಮತ್ತು ಸರ್ಕಾರವು ಪ್ರಾಥಮಿಕವಾಗಿ ರಾಜ್ಯದ ಕೃಷಿ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ” ಎಂದಿದ್ದಾರೆ.

“ಎಂಎಸ್‌ಪಿ ತರಕಾರಿ ಉತ್ಪಾದನಾ ವೆಚ್ಚಕ್ಕಿಂತ ಶೇಕಡಾ 20 ರಷ್ಟು ಹೆಚ್ಚಾಗಿರುತ್ತದೆ. ರೈತರಿಂದ ಉತ್ಪನ್ನಗಳನ್ನು ಎಂಎಸ್‌ಪಿಯಲ್ಲಿ ಸಂಗ್ರಹಿಸಲಾಗುತ್ತದೆ. ಉತ್ಪನ್ನಗಳನ್ನು ಗುಣಮಟ್ಟಕ್ಕೆ ಅನುಗುಣವಾಗಿ ಶ್ರೇಣೀಕರಿಸಲಾಗುತ್ತದೆ ಮತ್ತು ಗುಣಮಟ್ಟವನ್ನು ಆಧರಿಸಿ ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗುತ್ತದೆ. ಮೊದಲ ಹಂತದಲ್ಲಿ 16 ಬಗೆಯ ತರಕಾರಿಗಳನ್ನು ಒಳಗೊಳ್ಳಲಾಗುತ್ತಿದೆ. ಜೊತೆಗೆ ಎಂಎಸ್‌ಪಿಯನ್ನು ನಿಯಮಿತವಾಗಿ ಪರಿಷ್ಕರಿಸುವ ಅವಕಾಶವಿದೆ ”ಎಂದು ಅಧಿಕೃತ ಹೇಳಿಕೆಯೊಂದರಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ತರಕಾರಿಗಳ ಖರೀದಿ ಮತ್ತು ವಿತರಣೆಯನ್ನು ಸಮನ್ವಯಗೊಳಿಸುವುದರಿಂದ ಈ ಯೋಜನೆಯಲ್ಲಿ ಸ್ಥಳೀಯ  ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

“ಈ ಯೋಜನೆಯು ಪ್ರತಿ ಋತುವಿಗೆ ಗರಿಷ್ಠ 15 ಎಕರೆ ತರಕಾರಿ ಕೃಷಿಯನ್ನು ಹೊಂದಿರುವ ರೈತನಿಗೆ ಪ್ರಯೋಜನವನ್ನು ನೀಡುತ್ತದೆ. ಬೆಂಬಲ ಬೆಲೆಯ ಲಾಭ ಪಡೆಯಲು ಅವರು ಬೆಳೆ ವಿಮೆ ಮಾಡಿದ ನಂತರ ಅವರು ಕೃಷಿ ಇಲಾಖೆಯ ನೋಂದಣಿ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು. ನೋಂದಣಿ ನವೆಂಬರ್ 1 ರಿಂದ ಪ್ರಾರಂಭವಾಗಲಿದೆ” ಎಂದಿದ್ದಾರೆ.

’ಈ ಯೋಜನೆಯು ಬೆಂಬಲ ಬೆಲೆಯೊಂದಿಗೆ ಕೋಲ್ಡ್ ಸ್ಟೋರೇಜ್ ಸೌಲಭ್ಯಗಳು ಮತ್ತು ಉತ್ಪನ್ನಗಳನ್ನು ಸಾಗಿಸಲು ಶೈತ್ಯೀಕರಿಸಿದ ವಾಹನಗಳಂತಹ ಸಂಪೂರ್ಣ ಪೂರೈಕೆ ಸರಪಳಿ ಪ್ರಕ್ರಿಯೆಯನ್ನು ಸ್ಥಾಪಿಸಲು ಯೋಜಿಸಿದೆ ”ಎಂದು ವಿಜಯನ್ ಹೇಳಿದರು.

ಕಳೆದ ನಾಲ್ಕೂವರೆ ವರ್ಷಗಳಲ್ಲಿ ರಾಜ್ಯದಲ್ಲಿ ತರಕಾರಿ ಉತ್ಪಾದನೆಯು ದ್ವಿಗುಣಗೊಂಡಿದೆ. ಅಂದರೆ 7 ಲಕ್ಷ ಮೆಟ್ರಿಕ್ ಟನ್ ನಿಂದ 14.72 ಲಕ್ಷ ಮೆಟ್ರಿಕ್ ಟನ್ ತರಕಾರಿ ಉತ್ಪಾದನೆಯಾಗಿದೆ. “ಈ ವರ್ಷ ಹೆಚ್ಚುವರಿಯಾಗಿ 1 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯನ್ನು ಹೆಚ್ಚಿಸುವ ಗುರಿ ಹೊಂದಿದೆ” ಎಂದು ಕೇರಳ ಮುಖ್ಯಮಂತ್ರಿ ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರತಿ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂ ಇರುವ ಏಕೈಕ ರಾಜ್ಯ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...