Homeಮುಖಪುಟಕೇರಳ ಅತ್ಯುತ್ತಮ ಆಡಳಿತ ರಾಜ್ಯ: ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ!

ಕೇರಳ ಅತ್ಯುತ್ತಮ ಆಡಳಿತ ರಾಜ್ಯ: ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ!

ದಕ್ಷಿಣದ ನಾಲ್ಕು ರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಕರ್ನಾಟಕ ಆಡಳಿತದ ದೃಷ್ಟಿಯಿಂದ ದೊಡ್ಡ ರಾಜ್ಯಗಳ ವಿಭಾಗದಲ್ಲಿ ಮೊದಲ ನಾಲ್ಕು ಸ್ಥಾನಗಳಲ್ಲಿವೆ.

- Advertisement -
- Advertisement -

ಬೆಂಗಳೂರಿನ ಸಾರ್ವಜನಿಕ ವ್ಯವಹಾರಗಳ ಕೇಂದ್ರವು ಇಂದು ಬಿಡುಗಡೆ ಮಾಡಿದ ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕ -2020 ರ ಪ್ರಕಾರ ಕೇರಳ ದೇಶದ ಅತ್ಯುತ್ತಮ ಆಡಳಿತ ರಾಜ್ಯವೆಂದು ಆಯ್ಕೆಯಾಗಿದೆ. ದೊಡ್ಡ ರಾಜ್ಯಗಳ ವಿಭಾಗದಲ್ಲಿ ಉತ್ತರ ಪ್ರದೇಶವು ಕಳಪೆ ಸಾಧನೆ ಮಾಡಿದ್ದು ಕೊನೆಯ ಸ್ಥಾನ ಪಡೆದಿದೆ.

ಇಂದು ಬಿಡುಗಡೆಯಾದ ತನ್ನ ವಾರ್ಷಿಕ ವರದಿಯಲ್ಲಿ, ಮಾಜಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಕೆ ಕಸ್ತುರಿರಂಗನ್ ನೇತೃತ್ವದ ಬೆಂಗಳೂರು ಮೂಲದ ಎನ್‌ಜಿಓ, ‘ಸುಸ್ಥಿರ ಅಭಿವೃದ್ಧಿಯ ಸಂದರ್ಭದಲ್ಲಿ ಸಂಯೋಜಿತ ಸೂಚ್ಯಂಕದ ಆಧಾರದ ಮೇಲೆ ರಾಜ್ಯಗಳ ಆಡಳಿತ ಸಾಧನೆಯನ್ನು ಗುರುತಿಸಲಾಗಿದೆ’ ಎಂದು ಹೇಳಿದೆ.

ದಕ್ಷಿಣದ ನಾಲ್ಕು ರಾಜ್ಯಗಳಾದ ಕೇರಳ (1.388 ಪಿಎಐ ಇಂಡೆಕ್ಸ್ ಪಾಯಿಂಟ್), ತಮಿಳುನಾಡು (0.912), ಆಂಧ್ರಪ್ರದೇಶ (0.531) ಮತ್ತು ಕರ್ನಾಟಕ (0.468) ಆಡಳಿತದ ದೃಷ್ಟಿಯಿಂದ ದೊಡ್ಡ ರಾಜ್ಯಗಳ ವಿಭಾಗದಲ್ಲಿ ಮೊದಲ ನಾಲ್ಕು ಸ್ಥಾನಗಳಲ್ಲಿವೆ ಎಂದು ಅದು ಹೇಳಿದೆ.

ದೊಡ್ಡ ರಾಜ್ಯಗಳ ವಿಭಾಗದಲ್ಲಿ ನಕಾರಾತ್ಮಕ ಅಂಕಗಳನ್ನು ಗಳಿಸಿದ ಉತ್ತರ ಪ್ರದೇಶ -1.461, ಒಡಿಶಾ -1.201 ಮತ್ತು ಬಿಹಾರ -1.158 ಕಳಪೆ ಸಾಧನೆಗೈದಿವೆ ಎನ್ನಲಾಗಿದೆ.

ಸಣ್ಣ ರಾಜ್ಯಗಳ ವಿಭಾಗದಲ್ಲಿ ಗೋವಾ 1.745 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದರೆ, ಮೇಘಾಲಯ (0.797) ಮತ್ತು ಹಿಮಾಚಲ ಪ್ರದೇಶ (0.725) ನಂತರದ ಸ್ಥಾನದಲ್ಲಿವೆ. ಪಿಎಸಿ ವರದಿಯ ಪ್ರಕಾರ ಮಣಿಪುರ (-0.363), ದೆಹಲಿ (-0.289) ಮತ್ತು ಉತ್ತರಾಖಂಡ್ (-0.277) ಋಣಾತ್ಮಕ ಅಂಕಗಳನ್ನು ಗಳಿಸಿದ ಸಣ್ಣ ರಾಜ್ಯಗಳಾಗಿವೆ.

ಪಿಎಸಿ ಪ್ರಕಾರ, ಈಕ್ವಿಟಿ, ಬೆಳವಣಿಗೆ ಮತ್ತು ಸುಸ್ಥಿರತೆಯ ಮೂರು ಸ್ತಂಭಗಳಿಂದ ವ್ಯಾಖ್ಯಾನಿಸಲಾದ ಸುಸ್ಥಿರ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಆಡಳಿತದ ಕಾರ್ಯಕ್ಷಮತೆಯನ್ನು ವಿಶ್ಲೇಷಿಸಲಾಗುತ್ತದೆ.

ಈ ಸಂದರ್ಭದಲ್ಲಿ ಮಾತನಾಡಿದ ಕಸ್ತುರಿರಂಗನ್, “ಪಿಎಐ 2020 ತೋರಿಸುವ ಪುರಾವೆಗಳು ಮತ್ತು ಅದು ಒದಗಿಸುವ ಒಳನೋಟಗಳು ಭಾರತದಲ್ಲಿ ನಡೆಯುತ್ತಿರುವ ಆರ್ಥಿಕ ಮತ್ತು ಸಾಮಾಜಿಕ ಸ್ಥಿತ್ಯಂತರವನ್ನು ಅರ್ಥಮಾಡಿಕೊಳ್ಳಲು ನಮ್ಮನ್ನು ಒತ್ತಾಯಿಸಬೇಕು” ಎಂದಿದ್ದಾರೆ.

(ಈ ಸುದ್ದಿಯು ಮೊದಲು ಎನ್‌ಡಿಟಿವಿಯಲ್ಲಿ ಪ್ರಕಟಗೊಂಡಿದೆ)


ಇದನ್ನೂ ಓದಿ: ಪ್ರತಿ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂ ಇರುವ ಏಕೈಕ ರಾಜ್ಯ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...