Homeಮುಖಪುಟಸಕ್ರಿಯ ರಾಜಕಾರಣ ತೊರೆದ ಕೇರಳ ಬಿಜೆಪಿಯ ಸಿಎಂ ಅಭ್ಯರ್ಥಿ ಇ. ಶ್ರೀಧರನ್‌!

ಸಕ್ರಿಯ ರಾಜಕಾರಣ ತೊರೆದ ಕೇರಳ ಬಿಜೆಪಿಯ ಸಿಎಂ ಅಭ್ಯರ್ಥಿ ಇ. ಶ್ರೀಧರನ್‌!

- Advertisement -
- Advertisement -

ಬಿಜೆಪಿ ಸೇರಿದ ಒಂದೇ ವರ್ಷದೊಳಗೆ ‘ಮೆಟ್ರೋಮ್ಯಾನ್’ ಖ್ಯಾತಿಯ ಇ. ಶ್ರೀಧರನ್ ಅವರು ಸಕ್ರಿಯ ರಾಜಕೀಯವನ್ನು ತೊರೆದಿದ್ದಾರೆ. ಡಿಸೆಂಬರ್ 16 ರ ಗುರುವಾರದಂದು ಕೇರಳದ ಮಲಪ್ಪುರಂನಲ್ಲಿ ಅವರು ತಮ್ಮ ನಿಲುವನ್ನು ಘೋಷಿಸಿದ್ದಾರೆ. ಏಪ್ರಿಲ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿನ ಸೋಲಿನಿಂದ ತಾನು ಪಾಠ ಕಲಿತಿದ್ದಾಗಿ ಅವರು ಹೇಳಿದ್ದಾರೆ.

“ನಾನು ಎಂದಿಗೂ ರಾಜಕಾರಣಿಯಾಗಿರಲಿಲ್ಲ. ರಾಜಕೀಯದಲ್ಲಿ ಸಕ್ರಿಯವಾಗಿಲ್ಲ ಎಂದರೆ ನಾನು ರಾಜಕೀಯವನ್ನು ಬಿಟ್ಟುಬಿಡುತ್ತೇನೆ ಎಂದು ಅರ್ಥವಲ್ಲ” ಎಂದು ಅವರು ಸಕ್ರಿಯ ರಾಜಕೀಯದಿಂದ ನಿರ್ಗಮಿಸುವಾಗ ಹೇಳಿದ್ದಾರೆ.

ಇದನ್ನೂ ಓದಿ:ಕೇರಳದಲ್ಲಿ ಬಿಜೆಪಿ ಕಿಂಗ್‌ಮೇಕರ್‌ ಆಗಲಿದೆ – ರಾಜ್ಯ ಬಿಜೆಪಿ ನಾಯಕ ಇ. ಶ್ರೀಧರನ್‌

ಇ. ಶ್ರೀಧರನ್ ಅವರು ರಾಜಕೀಯ ಪ್ರವೇಶಿಸುವಾಗ, ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದರು ಮತ್ತು ಕೇರಳ ರಾಜಕೀಯದಲ್ಲಿ ಮಹತ್ತರದ ಪಾತ್ರವನ್ನು ವಹಿಸಲು ಆಸಕ್ತಿಯನ್ನು ವ್ಯಕ್ತಪಡಿಸಿದ್ದರು.

“ನಾನು ಸೋತಾಗ ನಿರಾಸೆಯಾಯಿತು. ಆದರೆ ಪರವಾಗಿಲ್ಲ. ಈಗ ಆ ಕಾಲಮಿತಿ ಕಳೆದಿದೆ. ನಾನು ಆಯ್ಕೆಯಾಗಿದ್ದರೆ ನಾನು ಎಂಎಲ್‌ಎ ಆಗುತ್ತಿದ್ದೆ. ಆದರೆ ಒಬ್ಬನೇ ಶಾಸಕನಾಗಿ ಏನೂ ಮಾಡಲಾಗುತ್ತಿರಲಿಲ್ಲ” ಎಂದು ಅವರು ಹೇಳಿದ್ದಾರೆ.

“ನನಗೆ ಈಗ 90 ವರ್ಷ. ನನ್ನನ್ನು ರಾಜಕೀಯಕ್ಕೆ ಮತ್ತಷ್ಟು ತಳ್ಳುವುದು ಅಪಾಯಕಾರಿ. ನನಗೆ ಈಗ ರಾಜಕೀಯದ ಕನಸು ಇಲ್ಲ. ಸೇವೆ ಮಾಡಲು ನನಗೆ ರಾಜಕೀಯ ಅಗತ್ಯವಿಲ್ಲ. ನಾನು ಈಗಾಗಲೇ ಮೂರು ಟ್ರಸ್ಟ್‌ಗಳ ಮೂಲಕ ಅದನ್ನು ಮಾಡುತ್ತಿದ್ದೇನೆ” ಎಂದು ಶ್ರೀಧರನ್ ತಿಳಿಸಿದ್ದಾರೆ.

ಕಳೆದ ಚುನಾವಣೆಯಲ್ಲಿ ಇ. ಶ್ರೀಧರನ್ ಅವರು ಪಾಲಕ್ಕಾಡ್ ಕ್ಷೇತ್ರದಲ್ಲಿ ಹಾಲಿ ಶಾಸಕ ಶಾಫಿ ಪರಂಬಿಲ್ ವಿರುದ್ಧ 3,859 ಮತಗಳಿಂದ ಸೋತಿದ್ದಾರೆ. ಕೇರಳದಲ್ಲಿ ಕನಿಷ್ಠ 35 ಸ್ಥಾನಗಳಲ್ಲಿ ಗೆಲುವಿನ ಆಸೆಯಿಂದ ಏಪ್ರಿಲ್ 2 ರ ವಿಧಾನಸಭಾ ಚುನಾವಣೆಯಲ್ಲಿ ಸೆಣಸಿದ್ದ ಬಿಜೆಪಿ ಮತ್ತು ಮೈತ್ರಿ ಪಕ್ಷಗಳು ಈ ಹಿಂದೆ ಇದ್ದ ಏಕೈಕ ಕ್ಷೇತ್ರವನ್ನೂ ಕಳೆದುಕೊಂಡಿತ್ತು. ‘ಮೆಟ್ರೋಮ್ಯಾನ್’ ಶ್ರೀಧರನ್ ಮತ್ತು ಪಕ್ಷದ ರಾಜ್ಯ ಮುಖ್ಯಸ್ಥ ಕೆ. ಸುರೇಂದ್ರನ್ ಸೇರಿದಂತೆ ಅದರ ಎಲ್ಲಾ ಪ್ರಮುಖ ಸ್ಪರ್ಧಿಗಳು ಸೋತಿದ್ದರು.

ಇದನ್ನೂ ಓದಿ: ಕೇರಳ ಬಿಜೆಪಿ ರೈಲಿನಲ್ಲಿ ಮೆಟ್ರೋಮ್ಯಾನ್: ಪ್ಯಾಸೆಂಜರ್‌ಗಳಿಲ್ಲ, ರೆಡ್ ಸಿಗ್ನಲ್‌ಗಳೇ ಎಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...