Homeಮುಖಪುಟಸಕ್ರಿಯ ರಾಜಕಾರಣ ತೊರೆದ ಕೇರಳ ಬಿಜೆಪಿಯ ಸಿಎಂ ಅಭ್ಯರ್ಥಿ ಇ. ಶ್ರೀಧರನ್‌!

ಸಕ್ರಿಯ ರಾಜಕಾರಣ ತೊರೆದ ಕೇರಳ ಬಿಜೆಪಿಯ ಸಿಎಂ ಅಭ್ಯರ್ಥಿ ಇ. ಶ್ರೀಧರನ್‌!

- Advertisement -
- Advertisement -

ಬಿಜೆಪಿ ಸೇರಿದ ಒಂದೇ ವರ್ಷದೊಳಗೆ ‘ಮೆಟ್ರೋಮ್ಯಾನ್’ ಖ್ಯಾತಿಯ ಇ. ಶ್ರೀಧರನ್ ಅವರು ಸಕ್ರಿಯ ರಾಜಕೀಯವನ್ನು ತೊರೆದಿದ್ದಾರೆ. ಡಿಸೆಂಬರ್ 16 ರ ಗುರುವಾರದಂದು ಕೇರಳದ ಮಲಪ್ಪುರಂನಲ್ಲಿ ಅವರು ತಮ್ಮ ನಿಲುವನ್ನು ಘೋಷಿಸಿದ್ದಾರೆ. ಏಪ್ರಿಲ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿನ ಸೋಲಿನಿಂದ ತಾನು ಪಾಠ ಕಲಿತಿದ್ದಾಗಿ ಅವರು ಹೇಳಿದ್ದಾರೆ.

“ನಾನು ಎಂದಿಗೂ ರಾಜಕಾರಣಿಯಾಗಿರಲಿಲ್ಲ. ರಾಜಕೀಯದಲ್ಲಿ ಸಕ್ರಿಯವಾಗಿಲ್ಲ ಎಂದರೆ ನಾನು ರಾಜಕೀಯವನ್ನು ಬಿಟ್ಟುಬಿಡುತ್ತೇನೆ ಎಂದು ಅರ್ಥವಲ್ಲ” ಎಂದು ಅವರು ಸಕ್ರಿಯ ರಾಜಕೀಯದಿಂದ ನಿರ್ಗಮಿಸುವಾಗ ಹೇಳಿದ್ದಾರೆ.

ಇದನ್ನೂ ಓದಿ:ಕೇರಳದಲ್ಲಿ ಬಿಜೆಪಿ ಕಿಂಗ್‌ಮೇಕರ್‌ ಆಗಲಿದೆ – ರಾಜ್ಯ ಬಿಜೆಪಿ ನಾಯಕ ಇ. ಶ್ರೀಧರನ್‌

ಇ. ಶ್ರೀಧರನ್ ಅವರು ರಾಜಕೀಯ ಪ್ರವೇಶಿಸುವಾಗ, ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದರು ಮತ್ತು ಕೇರಳ ರಾಜಕೀಯದಲ್ಲಿ ಮಹತ್ತರದ ಪಾತ್ರವನ್ನು ವಹಿಸಲು ಆಸಕ್ತಿಯನ್ನು ವ್ಯಕ್ತಪಡಿಸಿದ್ದರು.

“ನಾನು ಸೋತಾಗ ನಿರಾಸೆಯಾಯಿತು. ಆದರೆ ಪರವಾಗಿಲ್ಲ. ಈಗ ಆ ಕಾಲಮಿತಿ ಕಳೆದಿದೆ. ನಾನು ಆಯ್ಕೆಯಾಗಿದ್ದರೆ ನಾನು ಎಂಎಲ್‌ಎ ಆಗುತ್ತಿದ್ದೆ. ಆದರೆ ಒಬ್ಬನೇ ಶಾಸಕನಾಗಿ ಏನೂ ಮಾಡಲಾಗುತ್ತಿರಲಿಲ್ಲ” ಎಂದು ಅವರು ಹೇಳಿದ್ದಾರೆ.

“ನನಗೆ ಈಗ 90 ವರ್ಷ. ನನ್ನನ್ನು ರಾಜಕೀಯಕ್ಕೆ ಮತ್ತಷ್ಟು ತಳ್ಳುವುದು ಅಪಾಯಕಾರಿ. ನನಗೆ ಈಗ ರಾಜಕೀಯದ ಕನಸು ಇಲ್ಲ. ಸೇವೆ ಮಾಡಲು ನನಗೆ ರಾಜಕೀಯ ಅಗತ್ಯವಿಲ್ಲ. ನಾನು ಈಗಾಗಲೇ ಮೂರು ಟ್ರಸ್ಟ್‌ಗಳ ಮೂಲಕ ಅದನ್ನು ಮಾಡುತ್ತಿದ್ದೇನೆ” ಎಂದು ಶ್ರೀಧರನ್ ತಿಳಿಸಿದ್ದಾರೆ.

ಕಳೆದ ಚುನಾವಣೆಯಲ್ಲಿ ಇ. ಶ್ರೀಧರನ್ ಅವರು ಪಾಲಕ್ಕಾಡ್ ಕ್ಷೇತ್ರದಲ್ಲಿ ಹಾಲಿ ಶಾಸಕ ಶಾಫಿ ಪರಂಬಿಲ್ ವಿರುದ್ಧ 3,859 ಮತಗಳಿಂದ ಸೋತಿದ್ದಾರೆ. ಕೇರಳದಲ್ಲಿ ಕನಿಷ್ಠ 35 ಸ್ಥಾನಗಳಲ್ಲಿ ಗೆಲುವಿನ ಆಸೆಯಿಂದ ಏಪ್ರಿಲ್ 2 ರ ವಿಧಾನಸಭಾ ಚುನಾವಣೆಯಲ್ಲಿ ಸೆಣಸಿದ್ದ ಬಿಜೆಪಿ ಮತ್ತು ಮೈತ್ರಿ ಪಕ್ಷಗಳು ಈ ಹಿಂದೆ ಇದ್ದ ಏಕೈಕ ಕ್ಷೇತ್ರವನ್ನೂ ಕಳೆದುಕೊಂಡಿತ್ತು. ‘ಮೆಟ್ರೋಮ್ಯಾನ್’ ಶ್ರೀಧರನ್ ಮತ್ತು ಪಕ್ಷದ ರಾಜ್ಯ ಮುಖ್ಯಸ್ಥ ಕೆ. ಸುರೇಂದ್ರನ್ ಸೇರಿದಂತೆ ಅದರ ಎಲ್ಲಾ ಪ್ರಮುಖ ಸ್ಪರ್ಧಿಗಳು ಸೋತಿದ್ದರು.

ಇದನ್ನೂ ಓದಿ: ಕೇರಳ ಬಿಜೆಪಿ ರೈಲಿನಲ್ಲಿ ಮೆಟ್ರೋಮ್ಯಾನ್: ಪ್ಯಾಸೆಂಜರ್‌ಗಳಿಲ್ಲ, ರೆಡ್ ಸಿಗ್ನಲ್‌ಗಳೇ ಎಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...