Homeಮುಖಪುಟದೇವಾಲಯ ತೆರೆಯುತ್ತಿದ್ದಂತೆ ರಾಜಕೀಯ ಲಾಭಕ್ಕೆ ಮುಂದಾದ ಕೇರಳ ಬಿಜೆಪಿಯ ದ್ವಂದ್ವ

ದೇವಾಲಯ ತೆರೆಯುತ್ತಿದ್ದಂತೆ ರಾಜಕೀಯ ಲಾಭಕ್ಕೆ ಮುಂದಾದ ಕೇರಳ ಬಿಜೆಪಿಯ ದ್ವಂದ್ವ

- Advertisement -
- Advertisement -

ಕೇಂದ್ರದ ಮಾರ್ಗಸೂಚಿಯನ್ನು ಅನುಸರಿಸಿ ಕೇರಳದಲ್ಲಿ ದೇವಾಲಯಗಳನ್ನು ಪುನಃ ತೆರೆಯುತ್ತಿದ್ದಂತೆ ಕೇರಳ ಬಿಜೆಪಿ ಇದನ್ನು ’ತುರಾತುರಿ ಕ್ರಮ’ ಎಂದು ಬಣ್ಣಿಸಿ ರಾಜ್ಯ ಸರ್ಕಾರವನ್ನು ಟೀಕಿಸಿದೆ. ಆದರೆ ಈ ಹಿಂದೆ ಅದೇ ಬಿಜೆಪಿ ರಾಜ್ಯದಲ್ಲಿ ದೇವಾಲಯವನ್ನು ತೆರೆಯಬೇಕು ಎಂದು ಆಗ್ರಹಿಸಿತ್ತು. ಒಟ್ಟಿನಲ್ಲಿ ದೇವಾಲಯದ ವಿಷಯದಲ್ಲಿ ಬಿಜೆಪಿಯು ರಾಜಕೀಯ ಮೈಲೇಜ್ ಪಡೆಯಲು ಪ್ರಯತ್ನಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

ದೇವಾಲಯಗಳನ್ನು ತೆರೆಯುತ್ತಿದ್ದಂತೆ ಕೇರಳದ ಬಿಜೆಪಿ ಮುಖಂಡ ಹಾಗೂ ಕೇಂದ್ರ ಸಚಿವ ವಿ ಮುರಳೀಧರನ್ ಈ ಕ್ರಮಕ್ಕೆ ವಿರುದ್ಧವಾಗಿ ಟ್ವೀಟ್ ಮಾಡಿದ್ದಾರೆ: “ಭಕ್ತರ ವಿರೋಧದ ನಡುವೆಯೂ ದೇವಾಲಯಗಳನ್ನು ಪುನಃ ತೆರೆಯುವುದರ ಹಿಂದೆ ಕೇರಳ ಸರ್ಕಾರವು ಬೇರೇನೋ ಕೆಟ್ಟ ಉದ್ದೇಶವನ್ನು ಹೊಂದಿದೆ. ದೇವಾಲಯವನ್ನು ತೆರೆಯಲು ಭಕ್ತರು ಅಥವಾ ದೇವಾಲಯ ಸಮಿತಿಗಳು ಒತ್ತಾಯಿಸಿಲ್ಲ” ಎಂದಿದ್ದಾರೆ.

“ಇಷ್ಟು ಆತುರ ಯಾಕೆ?  ಇದು ನಾಸ್ತಿಕ ‌ಪಿಣರಾಯಿ ವಿಜಯನ್ ಸರ್ಕಾರವು ಭಕ್ತರನ್ನು ನಿರಾಕರಿಸುವ ಉದ್ದೇಶಪೂರ್ವಕ ಪ್ರಯತ್ನವೇ? ಸರ್ಕಾರ ಭಕ್ತರ ಧ್ವನಿಗೆ ಕಿವಿಗೊಡಬೇಕು ಹಾಗೂ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು, ”ಎಂದು ಅವರು ಜೂನ್‌ 8 ರಂದು ಹೇಳಿದ್ದಾರೆ.

ಆದರೆ ಇದೇ ವಿ. ಮುರುಳೀಧರನ್ ದೇವಾಲಯವನ್ನು ತೆರೆಯದ ಕಾರಣಕ್ಕಾಗಿ ಈ ಹಿಂದೆ ಕೇರಳದ ಕಮ್ಯುನಿಷ್ಟ್ ಎಡ ಪಂಥೀಯ ಸರ್ಕಾರವನ್ನು ಟೀಕಿಸುತ್ತಿದ್ದರು.


ಓದಿ: ಕೇರಳದ ಗರ್ಭಿಣಿ ಆನೆ ಸಾವಿನ ಬಗ್ಗೆ ಬಲ ಪಂಥೀಯರು ಹರಡಿದ ಎರಡು ಸುಳ್ಳುಗಳು


ಮೇ 28 ರಂದು ಮುರಲೀಧರನ್ ಅವರು ರಾಜ್ಯಗಳಾದ್ಯಂತ ಮದ್ಯದ ಮಳಿಗೆಗಳು ತೆರೆದಿದೆ, ದೇವಾಲಯಗಳನ್ನೂ ತೆರೆಯಬಹುದು ಎಂದು ಹೇಳಿದ್ದರು. ದೇವಾಲಯಗಳನ್ನು ತೆರೆಯುವ ಮೂಲಕ ಭಕ್ತರ ಮೇಲೆ “ಕರುಣೆ ತೋರಿಸಿ” ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ವಿಡಿಯೋ ನೋಡಿ

കള്ള് കുടിയന്മാരോടുള്ള താല്‍പര്യം ദൈവവിശ്വാസിയോടും കാണണം-കെ.മുരളീധരന്‍

കള്ള് കുടിയന്മാരോടുള്ള സര്‍ക്കാരിനുള്ള താല്‍പര്യം ദൈവവിശ്വാസിയോടും കാണിക്കണമെന്ന് കെ.മുരളീധരന്‍ എം.പി. ആരാധനാലയങ്ങള്‍ തുറക്കാനുള്ള സൗകര്യമൊരുക്കണം. മദ്യ ഷാപ്പ് തുറുന്നാല്‍ സാമൂഹിക അകലം പാലിക്കപ്പെടുന്നതും ആരാധനാലയങ്ങള്‍ തുറന്നാല്‍ സാമൂഹിക അകല ലംഘനം നടക്കുന്നതും എങ്ങനെയാണെന്ന് കെ.മുരളീധരന്‍ ചോദിച്ചു. വേണ്ടത്ര സുരക്ഷയൊരുക്കാനും മാനദണ്ഡങ്ങള്‍ പാലിക്കാനുമൊക്കെ ആരാധനാലയ ഭാരവാഹികളും ബന്ധപ്പെട്ടവരുമൊക്കെ തയ്യാറാണ്. വേണമെങ്കില്‍ വെര്‍ച്വല്‍ ക്യൂ സംവിധാനമൊക്കെ ഇവിടെയും നടപ്പാക്കാമെന്നും മുരളീധരന്‍ പറഞ്ഞു.ആരാധനാലയങ്ങള്‍ തുറക്കുന്നത് കൊണ്ട് ഒരു വ്യാപനവും ഉണ്ടാവില്ല. സംസ്ഥാനത്ത് ഇപ്പോള്‍ കൊറോണയുടെ സമൂഹ വ്യാപനമല്ല മദ്യത്തിന്റെ സമൂഹ വ്യാപനമാന്ന് ഉണ്ടായികൊണ്ടിരിക്കുന്നത്. ആപ്പ് സര്‍ക്കാരിനെ ആപ്പാക്കും. മന്ത്രി ടി.പി രാമകൃഷ്ണന്‍ ഭാവിയില്‍ ഒരു പാട് കാര്യങ്ങള്‍ക്ക് വിശദീകരണം നല്‍കേണ്ടി വരുമെന്നും മുരളീധരന്‍ പറഞ്ഞു.#Covid19 #Lockdown #Muraleedharan

Posted by Mathrubhumi on Thursday, May 28, 2020

ಕೊರೊನಾ ಲಾಕ್‌ಡೌನ್ ಅನ್ನು ಕ್ರಮೇಣ ತೆರವುಗೊಳಿಸುವ ಭಾಗವಾಗಿ ಲಾಕ್‌ಡೌನ್‌ 5.0 ಮಾರ್ಗಸೂಚಿಗಳಲ್ಲಿ ರೆಸ್ಟೋರೆಂಟ್‌ಗಳು, ಮಾಲ್‌ಗಳು ಹಾಗೂ ಪೂಜಾ ಸ್ಥಳಗಳನ್ನು ತೆರೆಯುವ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಅನ್ನು ಜೂನ್ 4 ರಂದು ಕೇಂದ್ರ ಸರ್ಕಾರವೂ ಹೊರಡಿಸಿದೆ.

ಮುಖ್ಯಮಂತ್ರಿ ವಿಜಯನ್ ಈ ವಿಷಯದಲ್ಲಿ ಕೇಂದ್ರವು ಹೊರಡಿಸಿದ ಮಾರ್ಗಸೂಚಿಗಳನ್ನು ಕೇರಳ ಅನುಸರಿಸಲಿದೆ ಅಷ್ಟೇ ಎಂದು ಅವರ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ.

ಆದರೆ, ಈಗ ಕೇರಳ ರಾಜ್ಯ ಬಿಜೆಪಿ ಹಾಗೂ ಹಿಂದೂ ಐಕ್ಯ ವೇದಿಕೆ, ರಾಜ್ಯ ಸರ್ಕಾರವು ದೇವಾಲಯದ ಆದಾಯದ ಮೇಲೆ ಕಣ್ಣಿಟ್ಟಿದೆ ಎಂದು ಎಂದು ಆರೋಪಿಸುತ್ತಿದೆ. ದೇವಾಲಯಗಳನ್ನು ತೆರೆಯುವ ಬದಲು ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ದೇವಾಲಯಗಳಿಗೆ ಮತ್ತು ಅದರ ಉದ್ಯೋಗಿಗಳಿಗೆ ರಾಜ್ಯ ಸರ್ಕಾರ ಆರ್ಥಿಕ ಸಹಾಯವನ್ನು ನೀಡಬೇಕು ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇರಳದ ಎಡಪಕ್ಷ ಸರ್ಕಾರದ ರಾಜ್ಯ ಸಚಿವ ಕಡಕಂಪಲ್ಲಿ ಸುರೇಂದ್ರನ್ “ಈ ಕ್ರಮವನ್ನು ವಿರೋಧಿಸುತ್ತಿರುವವರು ಈ ಹಿಂದೆ ದೇವಾಲಯಗಳನ್ನು ಪುನಃ ತೆರೆಯಲು ಯಾಕೆ ಒತ್ತಾಯಿಸುತ್ತಿದ್ದಾರೆಂದು ಅರ್ಥಮಾಡಿಕೊಳ್ಳಲು ಅಸಾಧ್ಯವಾಗಿದೆ. ಕೇಂದ್ರದ ನಿರ್ದೇಶನದಂತೆ ಧಾರ್ಮಿಕ ಸ್ಥಳಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಇಬ್ಬಂದಿತನವನ್ನು ಬಹಿರಂಗಪಡಿಸಿದ ಅವರು, ಈಗ ದೇವಾಲಯಗಳನ್ನು ತೆರೆಯುವುದನ್ನು ವಿರೋಧಿಸುವವರು ಈ ಹಿಂದೆ ಭಕ್ತರಿಗೆ ಅವಕಾಶ ನೀಡಬೇಕೆಂದು ಬೊಬ್ಬೆಹಾಕಿದ್ದರು ಎಂದು ಅವರು ಹೇಳಿದ್ದಾರೆ.

ದೇವಾಲಯಗಳನ್ನು ಪುನಃ ತೆರೆಯುವ ಹಿಂದಿನ ಉದ್ದೇಶವೇ ಆದಾಯ ಎಂಬ ಆರೋಪವನ್ನು ತಳ್ಳಿಹಾಕಿದ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಅಧ್ಯಕ್ಷ ಎನ್ ವಾಸು ಭಕ್ತರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು  ಹೇಳಿದ್ದಾರೆ.

ಕೇಂದ್ರದ ಎಸ್‌ಒಪಿಗಳ ಪ್ರಕಾರ, ಎಲ್ಲಾ ಪೂಜಾ ಸ್ಥಳಗಳಲ್ಲಿ ಸಾಮಾಜಿಕ ದೂರವನ್ನು ಅನುಸರಿಸಬೇಕು ಮತ್ತು ಭಕ್ತರು ಮಾಸ್ಕ್‌ಗಳನ್ನು ಧರಿಸಬೇಕು. 65 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪೂಜಾ ಸ್ಥಳಗಳಲ್ಲಿ ಅವಕಾಶವಿಲ್ಲ. ಆಹಾರ ವಿತರಣೆ, ಪ್ರಸಾದಗಳು ನೀಡುವಂತಿಲ್ಲ ಎಂದು ಸೂಚಿಸಿದೆ.


ಓದಿ: ಆನೆಯ ಹೆಸರಲ್ಲಿ ದ್ವೇಷ ಅಭಿಯಾನ ಮಾಡುವವರ ವಿರುದ್ದ ವಿಭಿನ್ನವಾಗಿ ಪ್ರತಿಕ್ರಿಯಿಸಿದ ಕೇರಳ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...