Homeಮುಖಪುಟದೇವಾಲಯ ತೆರೆಯುತ್ತಿದ್ದಂತೆ ರಾಜಕೀಯ ಲಾಭಕ್ಕೆ ಮುಂದಾದ ಕೇರಳ ಬಿಜೆಪಿಯ ದ್ವಂದ್ವ

ದೇವಾಲಯ ತೆರೆಯುತ್ತಿದ್ದಂತೆ ರಾಜಕೀಯ ಲಾಭಕ್ಕೆ ಮುಂದಾದ ಕೇರಳ ಬಿಜೆಪಿಯ ದ್ವಂದ್ವ

- Advertisement -
- Advertisement -

ಕೇಂದ್ರದ ಮಾರ್ಗಸೂಚಿಯನ್ನು ಅನುಸರಿಸಿ ಕೇರಳದಲ್ಲಿ ದೇವಾಲಯಗಳನ್ನು ಪುನಃ ತೆರೆಯುತ್ತಿದ್ದಂತೆ ಕೇರಳ ಬಿಜೆಪಿ ಇದನ್ನು ’ತುರಾತುರಿ ಕ್ರಮ’ ಎಂದು ಬಣ್ಣಿಸಿ ರಾಜ್ಯ ಸರ್ಕಾರವನ್ನು ಟೀಕಿಸಿದೆ. ಆದರೆ ಈ ಹಿಂದೆ ಅದೇ ಬಿಜೆಪಿ ರಾಜ್ಯದಲ್ಲಿ ದೇವಾಲಯವನ್ನು ತೆರೆಯಬೇಕು ಎಂದು ಆಗ್ರಹಿಸಿತ್ತು. ಒಟ್ಟಿನಲ್ಲಿ ದೇವಾಲಯದ ವಿಷಯದಲ್ಲಿ ಬಿಜೆಪಿಯು ರಾಜಕೀಯ ಮೈಲೇಜ್ ಪಡೆಯಲು ಪ್ರಯತ್ನಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

ದೇವಾಲಯಗಳನ್ನು ತೆರೆಯುತ್ತಿದ್ದಂತೆ ಕೇರಳದ ಬಿಜೆಪಿ ಮುಖಂಡ ಹಾಗೂ ಕೇಂದ್ರ ಸಚಿವ ವಿ ಮುರಳೀಧರನ್ ಈ ಕ್ರಮಕ್ಕೆ ವಿರುದ್ಧವಾಗಿ ಟ್ವೀಟ್ ಮಾಡಿದ್ದಾರೆ: “ಭಕ್ತರ ವಿರೋಧದ ನಡುವೆಯೂ ದೇವಾಲಯಗಳನ್ನು ಪುನಃ ತೆರೆಯುವುದರ ಹಿಂದೆ ಕೇರಳ ಸರ್ಕಾರವು ಬೇರೇನೋ ಕೆಟ್ಟ ಉದ್ದೇಶವನ್ನು ಹೊಂದಿದೆ. ದೇವಾಲಯವನ್ನು ತೆರೆಯಲು ಭಕ್ತರು ಅಥವಾ ದೇವಾಲಯ ಸಮಿತಿಗಳು ಒತ್ತಾಯಿಸಿಲ್ಲ” ಎಂದಿದ್ದಾರೆ.

“ಇಷ್ಟು ಆತುರ ಯಾಕೆ?  ಇದು ನಾಸ್ತಿಕ ‌ಪಿಣರಾಯಿ ವಿಜಯನ್ ಸರ್ಕಾರವು ಭಕ್ತರನ್ನು ನಿರಾಕರಿಸುವ ಉದ್ದೇಶಪೂರ್ವಕ ಪ್ರಯತ್ನವೇ? ಸರ್ಕಾರ ಭಕ್ತರ ಧ್ವನಿಗೆ ಕಿವಿಗೊಡಬೇಕು ಹಾಗೂ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು, ”ಎಂದು ಅವರು ಜೂನ್‌ 8 ರಂದು ಹೇಳಿದ್ದಾರೆ.

ಆದರೆ ಇದೇ ವಿ. ಮುರುಳೀಧರನ್ ದೇವಾಲಯವನ್ನು ತೆರೆಯದ ಕಾರಣಕ್ಕಾಗಿ ಈ ಹಿಂದೆ ಕೇರಳದ ಕಮ್ಯುನಿಷ್ಟ್ ಎಡ ಪಂಥೀಯ ಸರ್ಕಾರವನ್ನು ಟೀಕಿಸುತ್ತಿದ್ದರು.


ಓದಿ: ಕೇರಳದ ಗರ್ಭಿಣಿ ಆನೆ ಸಾವಿನ ಬಗ್ಗೆ ಬಲ ಪಂಥೀಯರು ಹರಡಿದ ಎರಡು ಸುಳ್ಳುಗಳು


ಮೇ 28 ರಂದು ಮುರಲೀಧರನ್ ಅವರು ರಾಜ್ಯಗಳಾದ್ಯಂತ ಮದ್ಯದ ಮಳಿಗೆಗಳು ತೆರೆದಿದೆ, ದೇವಾಲಯಗಳನ್ನೂ ತೆರೆಯಬಹುದು ಎಂದು ಹೇಳಿದ್ದರು. ದೇವಾಲಯಗಳನ್ನು ತೆರೆಯುವ ಮೂಲಕ ಭಕ್ತರ ಮೇಲೆ “ಕರುಣೆ ತೋರಿಸಿ” ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ವಿಡಿಯೋ ನೋಡಿ

കള്ള് കുടിയന്മാരോടുള്ള താല്‍പര്യം ദൈവവിശ്വാസിയോടും കാണണം-കെ.മുരളീധരന്‍

കള്ള് കുടിയന്മാരോടുള്ള സര്‍ക്കാരിനുള്ള താല്‍പര്യം ദൈവവിശ്വാസിയോടും കാണിക്കണമെന്ന് കെ.മുരളീധരന്‍ എം.പി. ആരാധനാലയങ്ങള്‍ തുറക്കാനുള്ള സൗകര്യമൊരുക്കണം. മദ്യ ഷാപ്പ് തുറുന്നാല്‍ സാമൂഹിക അകലം പാലിക്കപ്പെടുന്നതും ആരാധനാലയങ്ങള്‍ തുറന്നാല്‍ സാമൂഹിക അകല ലംഘനം നടക്കുന്നതും എങ്ങനെയാണെന്ന് കെ.മുരളീധരന്‍ ചോദിച്ചു. വേണ്ടത്ര സുരക്ഷയൊരുക്കാനും മാനദണ്ഡങ്ങള്‍ പാലിക്കാനുമൊക്കെ ആരാധനാലയ ഭാരവാഹികളും ബന്ധപ്പെട്ടവരുമൊക്കെ തയ്യാറാണ്. വേണമെങ്കില്‍ വെര്‍ച്വല്‍ ക്യൂ സംവിധാനമൊക്കെ ഇവിടെയും നടപ്പാക്കാമെന്നും മുരളീധരന്‍ പറഞ്ഞു.ആരാധനാലയങ്ങള്‍ തുറക്കുന്നത് കൊണ്ട് ഒരു വ്യാപനവും ഉണ്ടാവില്ല. സംസ്ഥാനത്ത് ഇപ്പോള്‍ കൊറോണയുടെ സമൂഹ വ്യാപനമല്ല മദ്യത്തിന്റെ സമൂഹ വ്യാപനമാന്ന് ഉണ്ടായികൊണ്ടിരിക്കുന്നത്. ആപ്പ് സര്‍ക്കാരിനെ ആപ്പാക്കും. മന്ത്രി ടി.പി രാമകൃഷ്ണന്‍ ഭാവിയില്‍ ഒരു പാട് കാര്യങ്ങള്‍ക്ക് വിശദീകരണം നല്‍കേണ്ടി വരുമെന്നും മുരളീധരന്‍ പറഞ്ഞു.#Covid19 #Lockdown #Muraleedharan

Posted by Mathrubhumi on Thursday, May 28, 2020

ಕೊರೊನಾ ಲಾಕ್‌ಡೌನ್ ಅನ್ನು ಕ್ರಮೇಣ ತೆರವುಗೊಳಿಸುವ ಭಾಗವಾಗಿ ಲಾಕ್‌ಡೌನ್‌ 5.0 ಮಾರ್ಗಸೂಚಿಗಳಲ್ಲಿ ರೆಸ್ಟೋರೆಂಟ್‌ಗಳು, ಮಾಲ್‌ಗಳು ಹಾಗೂ ಪೂಜಾ ಸ್ಥಳಗಳನ್ನು ತೆರೆಯುವ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಅನ್ನು ಜೂನ್ 4 ರಂದು ಕೇಂದ್ರ ಸರ್ಕಾರವೂ ಹೊರಡಿಸಿದೆ.

ಮುಖ್ಯಮಂತ್ರಿ ವಿಜಯನ್ ಈ ವಿಷಯದಲ್ಲಿ ಕೇಂದ್ರವು ಹೊರಡಿಸಿದ ಮಾರ್ಗಸೂಚಿಗಳನ್ನು ಕೇರಳ ಅನುಸರಿಸಲಿದೆ ಅಷ್ಟೇ ಎಂದು ಅವರ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ.

ಆದರೆ, ಈಗ ಕೇರಳ ರಾಜ್ಯ ಬಿಜೆಪಿ ಹಾಗೂ ಹಿಂದೂ ಐಕ್ಯ ವೇದಿಕೆ, ರಾಜ್ಯ ಸರ್ಕಾರವು ದೇವಾಲಯದ ಆದಾಯದ ಮೇಲೆ ಕಣ್ಣಿಟ್ಟಿದೆ ಎಂದು ಎಂದು ಆರೋಪಿಸುತ್ತಿದೆ. ದೇವಾಲಯಗಳನ್ನು ತೆರೆಯುವ ಬದಲು ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ದೇವಾಲಯಗಳಿಗೆ ಮತ್ತು ಅದರ ಉದ್ಯೋಗಿಗಳಿಗೆ ರಾಜ್ಯ ಸರ್ಕಾರ ಆರ್ಥಿಕ ಸಹಾಯವನ್ನು ನೀಡಬೇಕು ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇರಳದ ಎಡಪಕ್ಷ ಸರ್ಕಾರದ ರಾಜ್ಯ ಸಚಿವ ಕಡಕಂಪಲ್ಲಿ ಸುರೇಂದ್ರನ್ “ಈ ಕ್ರಮವನ್ನು ವಿರೋಧಿಸುತ್ತಿರುವವರು ಈ ಹಿಂದೆ ದೇವಾಲಯಗಳನ್ನು ಪುನಃ ತೆರೆಯಲು ಯಾಕೆ ಒತ್ತಾಯಿಸುತ್ತಿದ್ದಾರೆಂದು ಅರ್ಥಮಾಡಿಕೊಳ್ಳಲು ಅಸಾಧ್ಯವಾಗಿದೆ. ಕೇಂದ್ರದ ನಿರ್ದೇಶನದಂತೆ ಧಾರ್ಮಿಕ ಸ್ಥಳಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಇಬ್ಬಂದಿತನವನ್ನು ಬಹಿರಂಗಪಡಿಸಿದ ಅವರು, ಈಗ ದೇವಾಲಯಗಳನ್ನು ತೆರೆಯುವುದನ್ನು ವಿರೋಧಿಸುವವರು ಈ ಹಿಂದೆ ಭಕ್ತರಿಗೆ ಅವಕಾಶ ನೀಡಬೇಕೆಂದು ಬೊಬ್ಬೆಹಾಕಿದ್ದರು ಎಂದು ಅವರು ಹೇಳಿದ್ದಾರೆ.

ದೇವಾಲಯಗಳನ್ನು ಪುನಃ ತೆರೆಯುವ ಹಿಂದಿನ ಉದ್ದೇಶವೇ ಆದಾಯ ಎಂಬ ಆರೋಪವನ್ನು ತಳ್ಳಿಹಾಕಿದ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಅಧ್ಯಕ್ಷ ಎನ್ ವಾಸು ಭಕ್ತರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು  ಹೇಳಿದ್ದಾರೆ.

ಕೇಂದ್ರದ ಎಸ್‌ಒಪಿಗಳ ಪ್ರಕಾರ, ಎಲ್ಲಾ ಪೂಜಾ ಸ್ಥಳಗಳಲ್ಲಿ ಸಾಮಾಜಿಕ ದೂರವನ್ನು ಅನುಸರಿಸಬೇಕು ಮತ್ತು ಭಕ್ತರು ಮಾಸ್ಕ್‌ಗಳನ್ನು ಧರಿಸಬೇಕು. 65 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪೂಜಾ ಸ್ಥಳಗಳಲ್ಲಿ ಅವಕಾಶವಿಲ್ಲ. ಆಹಾರ ವಿತರಣೆ, ಪ್ರಸಾದಗಳು ನೀಡುವಂತಿಲ್ಲ ಎಂದು ಸೂಚಿಸಿದೆ.


ಓದಿ: ಆನೆಯ ಹೆಸರಲ್ಲಿ ದ್ವೇಷ ಅಭಿಯಾನ ಮಾಡುವವರ ವಿರುದ್ದ ವಿಭಿನ್ನವಾಗಿ ಪ್ರತಿಕ್ರಿಯಿಸಿದ ಕೇರಳ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...