Homeಮುಖಪುಟದೇವಾಲಯ ತೆರೆಯುತ್ತಿದ್ದಂತೆ ರಾಜಕೀಯ ಲಾಭಕ್ಕೆ ಮುಂದಾದ ಕೇರಳ ಬಿಜೆಪಿಯ ದ್ವಂದ್ವ

ದೇವಾಲಯ ತೆರೆಯುತ್ತಿದ್ದಂತೆ ರಾಜಕೀಯ ಲಾಭಕ್ಕೆ ಮುಂದಾದ ಕೇರಳ ಬಿಜೆಪಿಯ ದ್ವಂದ್ವ

- Advertisement -
- Advertisement -

ಕೇಂದ್ರದ ಮಾರ್ಗಸೂಚಿಯನ್ನು ಅನುಸರಿಸಿ ಕೇರಳದಲ್ಲಿ ದೇವಾಲಯಗಳನ್ನು ಪುನಃ ತೆರೆಯುತ್ತಿದ್ದಂತೆ ಕೇರಳ ಬಿಜೆಪಿ ಇದನ್ನು ’ತುರಾತುರಿ ಕ್ರಮ’ ಎಂದು ಬಣ್ಣಿಸಿ ರಾಜ್ಯ ಸರ್ಕಾರವನ್ನು ಟೀಕಿಸಿದೆ. ಆದರೆ ಈ ಹಿಂದೆ ಅದೇ ಬಿಜೆಪಿ ರಾಜ್ಯದಲ್ಲಿ ದೇವಾಲಯವನ್ನು ತೆರೆಯಬೇಕು ಎಂದು ಆಗ್ರಹಿಸಿತ್ತು. ಒಟ್ಟಿನಲ್ಲಿ ದೇವಾಲಯದ ವಿಷಯದಲ್ಲಿ ಬಿಜೆಪಿಯು ರಾಜಕೀಯ ಮೈಲೇಜ್ ಪಡೆಯಲು ಪ್ರಯತ್ನಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

ದೇವಾಲಯಗಳನ್ನು ತೆರೆಯುತ್ತಿದ್ದಂತೆ ಕೇರಳದ ಬಿಜೆಪಿ ಮುಖಂಡ ಹಾಗೂ ಕೇಂದ್ರ ಸಚಿವ ವಿ ಮುರಳೀಧರನ್ ಈ ಕ್ರಮಕ್ಕೆ ವಿರುದ್ಧವಾಗಿ ಟ್ವೀಟ್ ಮಾಡಿದ್ದಾರೆ: “ಭಕ್ತರ ವಿರೋಧದ ನಡುವೆಯೂ ದೇವಾಲಯಗಳನ್ನು ಪುನಃ ತೆರೆಯುವುದರ ಹಿಂದೆ ಕೇರಳ ಸರ್ಕಾರವು ಬೇರೇನೋ ಕೆಟ್ಟ ಉದ್ದೇಶವನ್ನು ಹೊಂದಿದೆ. ದೇವಾಲಯವನ್ನು ತೆರೆಯಲು ಭಕ್ತರು ಅಥವಾ ದೇವಾಲಯ ಸಮಿತಿಗಳು ಒತ್ತಾಯಿಸಿಲ್ಲ” ಎಂದಿದ್ದಾರೆ.

“ಇಷ್ಟು ಆತುರ ಯಾಕೆ?  ಇದು ನಾಸ್ತಿಕ ‌ಪಿಣರಾಯಿ ವಿಜಯನ್ ಸರ್ಕಾರವು ಭಕ್ತರನ್ನು ನಿರಾಕರಿಸುವ ಉದ್ದೇಶಪೂರ್ವಕ ಪ್ರಯತ್ನವೇ? ಸರ್ಕಾರ ಭಕ್ತರ ಧ್ವನಿಗೆ ಕಿವಿಗೊಡಬೇಕು ಹಾಗೂ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು, ”ಎಂದು ಅವರು ಜೂನ್‌ 8 ರಂದು ಹೇಳಿದ್ದಾರೆ.

ಆದರೆ ಇದೇ ವಿ. ಮುರುಳೀಧರನ್ ದೇವಾಲಯವನ್ನು ತೆರೆಯದ ಕಾರಣಕ್ಕಾಗಿ ಈ ಹಿಂದೆ ಕೇರಳದ ಕಮ್ಯುನಿಷ್ಟ್ ಎಡ ಪಂಥೀಯ ಸರ್ಕಾರವನ್ನು ಟೀಕಿಸುತ್ತಿದ್ದರು.


ಓದಿ: ಕೇರಳದ ಗರ್ಭಿಣಿ ಆನೆ ಸಾವಿನ ಬಗ್ಗೆ ಬಲ ಪಂಥೀಯರು ಹರಡಿದ ಎರಡು ಸುಳ್ಳುಗಳು


ಮೇ 28 ರಂದು ಮುರಲೀಧರನ್ ಅವರು ರಾಜ್ಯಗಳಾದ್ಯಂತ ಮದ್ಯದ ಮಳಿಗೆಗಳು ತೆರೆದಿದೆ, ದೇವಾಲಯಗಳನ್ನೂ ತೆರೆಯಬಹುದು ಎಂದು ಹೇಳಿದ್ದರು. ದೇವಾಲಯಗಳನ್ನು ತೆರೆಯುವ ಮೂಲಕ ಭಕ್ತರ ಮೇಲೆ “ಕರುಣೆ ತೋರಿಸಿ” ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ವಿಡಿಯೋ ನೋಡಿ

കള്ള് കുടിയന്മാരോടുള്ള താല്‍പര്യം ദൈവവിശ്വാസിയോടും കാണണം-കെ.മുരളീധരന്‍

കള്ള് കുടിയന്മാരോടുള്ള സര്‍ക്കാരിനുള്ള താല്‍പര്യം ദൈവവിശ്വാസിയോടും കാണിക്കണമെന്ന് കെ.മുരളീധരന്‍ എം.പി. ആരാധനാലയങ്ങള്‍ തുറക്കാനുള്ള സൗകര്യമൊരുക്കണം. മദ്യ ഷാപ്പ് തുറുന്നാല്‍ സാമൂഹിക അകലം പാലിക്കപ്പെടുന്നതും ആരാധനാലയങ്ങള്‍ തുറന്നാല്‍ സാമൂഹിക അകല ലംഘനം നടക്കുന്നതും എങ്ങനെയാണെന്ന് കെ.മുരളീധരന്‍ ചോദിച്ചു. വേണ്ടത്ര സുരക്ഷയൊരുക്കാനും മാനദണ്ഡങ്ങള്‍ പാലിക്കാനുമൊക്കെ ആരാധനാലയ ഭാരവാഹികളും ബന്ധപ്പെട്ടവരുമൊക്കെ തയ്യാറാണ്. വേണമെങ്കില്‍ വെര്‍ച്വല്‍ ക്യൂ സംവിധാനമൊക്കെ ഇവിടെയും നടപ്പാക്കാമെന്നും മുരളീധരന്‍ പറഞ്ഞു.ആരാധനാലയങ്ങള്‍ തുറക്കുന്നത് കൊണ്ട് ഒരു വ്യാപനവും ഉണ്ടാവില്ല. സംസ്ഥാനത്ത് ഇപ്പോള്‍ കൊറോണയുടെ സമൂഹ വ്യാപനമല്ല മദ്യത്തിന്റെ സമൂഹ വ്യാപനമാന്ന് ഉണ്ടായികൊണ്ടിരിക്കുന്നത്. ആപ്പ് സര്‍ക്കാരിനെ ആപ്പാക്കും. മന്ത്രി ടി.പി രാമകൃഷ്ണന്‍ ഭാവിയില്‍ ഒരു പാട് കാര്യങ്ങള്‍ക്ക് വിശദീകരണം നല്‍കേണ്ടി വരുമെന്നും മുരളീധരന്‍ പറഞ്ഞു.#Covid19 #Lockdown #Muraleedharan

Posted by Mathrubhumi on Thursday, May 28, 2020

ಕೊರೊನಾ ಲಾಕ್‌ಡೌನ್ ಅನ್ನು ಕ್ರಮೇಣ ತೆರವುಗೊಳಿಸುವ ಭಾಗವಾಗಿ ಲಾಕ್‌ಡೌನ್‌ 5.0 ಮಾರ್ಗಸೂಚಿಗಳಲ್ಲಿ ರೆಸ್ಟೋರೆಂಟ್‌ಗಳು, ಮಾಲ್‌ಗಳು ಹಾಗೂ ಪೂಜಾ ಸ್ಥಳಗಳನ್ನು ತೆರೆಯುವ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಅನ್ನು ಜೂನ್ 4 ರಂದು ಕೇಂದ್ರ ಸರ್ಕಾರವೂ ಹೊರಡಿಸಿದೆ.

ಮುಖ್ಯಮಂತ್ರಿ ವಿಜಯನ್ ಈ ವಿಷಯದಲ್ಲಿ ಕೇಂದ್ರವು ಹೊರಡಿಸಿದ ಮಾರ್ಗಸೂಚಿಗಳನ್ನು ಕೇರಳ ಅನುಸರಿಸಲಿದೆ ಅಷ್ಟೇ ಎಂದು ಅವರ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ.

ಆದರೆ, ಈಗ ಕೇರಳ ರಾಜ್ಯ ಬಿಜೆಪಿ ಹಾಗೂ ಹಿಂದೂ ಐಕ್ಯ ವೇದಿಕೆ, ರಾಜ್ಯ ಸರ್ಕಾರವು ದೇವಾಲಯದ ಆದಾಯದ ಮೇಲೆ ಕಣ್ಣಿಟ್ಟಿದೆ ಎಂದು ಎಂದು ಆರೋಪಿಸುತ್ತಿದೆ. ದೇವಾಲಯಗಳನ್ನು ತೆರೆಯುವ ಬದಲು ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ದೇವಾಲಯಗಳಿಗೆ ಮತ್ತು ಅದರ ಉದ್ಯೋಗಿಗಳಿಗೆ ರಾಜ್ಯ ಸರ್ಕಾರ ಆರ್ಥಿಕ ಸಹಾಯವನ್ನು ನೀಡಬೇಕು ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇರಳದ ಎಡಪಕ್ಷ ಸರ್ಕಾರದ ರಾಜ್ಯ ಸಚಿವ ಕಡಕಂಪಲ್ಲಿ ಸುರೇಂದ್ರನ್ “ಈ ಕ್ರಮವನ್ನು ವಿರೋಧಿಸುತ್ತಿರುವವರು ಈ ಹಿಂದೆ ದೇವಾಲಯಗಳನ್ನು ಪುನಃ ತೆರೆಯಲು ಯಾಕೆ ಒತ್ತಾಯಿಸುತ್ತಿದ್ದಾರೆಂದು ಅರ್ಥಮಾಡಿಕೊಳ್ಳಲು ಅಸಾಧ್ಯವಾಗಿದೆ. ಕೇಂದ್ರದ ನಿರ್ದೇಶನದಂತೆ ಧಾರ್ಮಿಕ ಸ್ಥಳಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಇಬ್ಬಂದಿತನವನ್ನು ಬಹಿರಂಗಪಡಿಸಿದ ಅವರು, ಈಗ ದೇವಾಲಯಗಳನ್ನು ತೆರೆಯುವುದನ್ನು ವಿರೋಧಿಸುವವರು ಈ ಹಿಂದೆ ಭಕ್ತರಿಗೆ ಅವಕಾಶ ನೀಡಬೇಕೆಂದು ಬೊಬ್ಬೆಹಾಕಿದ್ದರು ಎಂದು ಅವರು ಹೇಳಿದ್ದಾರೆ.

ದೇವಾಲಯಗಳನ್ನು ಪುನಃ ತೆರೆಯುವ ಹಿಂದಿನ ಉದ್ದೇಶವೇ ಆದಾಯ ಎಂಬ ಆರೋಪವನ್ನು ತಳ್ಳಿಹಾಕಿದ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಅಧ್ಯಕ್ಷ ಎನ್ ವಾಸು ಭಕ್ತರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು  ಹೇಳಿದ್ದಾರೆ.

ಕೇಂದ್ರದ ಎಸ್‌ಒಪಿಗಳ ಪ್ರಕಾರ, ಎಲ್ಲಾ ಪೂಜಾ ಸ್ಥಳಗಳಲ್ಲಿ ಸಾಮಾಜಿಕ ದೂರವನ್ನು ಅನುಸರಿಸಬೇಕು ಮತ್ತು ಭಕ್ತರು ಮಾಸ್ಕ್‌ಗಳನ್ನು ಧರಿಸಬೇಕು. 65 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪೂಜಾ ಸ್ಥಳಗಳಲ್ಲಿ ಅವಕಾಶವಿಲ್ಲ. ಆಹಾರ ವಿತರಣೆ, ಪ್ರಸಾದಗಳು ನೀಡುವಂತಿಲ್ಲ ಎಂದು ಸೂಚಿಸಿದೆ.


ಓದಿ: ಆನೆಯ ಹೆಸರಲ್ಲಿ ದ್ವೇಷ ಅಭಿಯಾನ ಮಾಡುವವರ ವಿರುದ್ದ ವಿಭಿನ್ನವಾಗಿ ಪ್ರತಿಕ್ರಿಯಿಸಿದ ಕೇರಳ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...