Homeಮುಖಪುಟದೇವಾಲಯ ತೆರೆಯುತ್ತಿದ್ದಂತೆ ರಾಜಕೀಯ ಲಾಭಕ್ಕೆ ಮುಂದಾದ ಕೇರಳ ಬಿಜೆಪಿಯ ದ್ವಂದ್ವ

ದೇವಾಲಯ ತೆರೆಯುತ್ತಿದ್ದಂತೆ ರಾಜಕೀಯ ಲಾಭಕ್ಕೆ ಮುಂದಾದ ಕೇರಳ ಬಿಜೆಪಿಯ ದ್ವಂದ್ವ

- Advertisement -
- Advertisement -

ಕೇಂದ್ರದ ಮಾರ್ಗಸೂಚಿಯನ್ನು ಅನುಸರಿಸಿ ಕೇರಳದಲ್ಲಿ ದೇವಾಲಯಗಳನ್ನು ಪುನಃ ತೆರೆಯುತ್ತಿದ್ದಂತೆ ಕೇರಳ ಬಿಜೆಪಿ ಇದನ್ನು ’ತುರಾತುರಿ ಕ್ರಮ’ ಎಂದು ಬಣ್ಣಿಸಿ ರಾಜ್ಯ ಸರ್ಕಾರವನ್ನು ಟೀಕಿಸಿದೆ. ಆದರೆ ಈ ಹಿಂದೆ ಅದೇ ಬಿಜೆಪಿ ರಾಜ್ಯದಲ್ಲಿ ದೇವಾಲಯವನ್ನು ತೆರೆಯಬೇಕು ಎಂದು ಆಗ್ರಹಿಸಿತ್ತು. ಒಟ್ಟಿನಲ್ಲಿ ದೇವಾಲಯದ ವಿಷಯದಲ್ಲಿ ಬಿಜೆಪಿಯು ರಾಜಕೀಯ ಮೈಲೇಜ್ ಪಡೆಯಲು ಪ್ರಯತ್ನಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

ದೇವಾಲಯಗಳನ್ನು ತೆರೆಯುತ್ತಿದ್ದಂತೆ ಕೇರಳದ ಬಿಜೆಪಿ ಮುಖಂಡ ಹಾಗೂ ಕೇಂದ್ರ ಸಚಿವ ವಿ ಮುರಳೀಧರನ್ ಈ ಕ್ರಮಕ್ಕೆ ವಿರುದ್ಧವಾಗಿ ಟ್ವೀಟ್ ಮಾಡಿದ್ದಾರೆ: “ಭಕ್ತರ ವಿರೋಧದ ನಡುವೆಯೂ ದೇವಾಲಯಗಳನ್ನು ಪುನಃ ತೆರೆಯುವುದರ ಹಿಂದೆ ಕೇರಳ ಸರ್ಕಾರವು ಬೇರೇನೋ ಕೆಟ್ಟ ಉದ್ದೇಶವನ್ನು ಹೊಂದಿದೆ. ದೇವಾಲಯವನ್ನು ತೆರೆಯಲು ಭಕ್ತರು ಅಥವಾ ದೇವಾಲಯ ಸಮಿತಿಗಳು ಒತ್ತಾಯಿಸಿಲ್ಲ” ಎಂದಿದ್ದಾರೆ.

“ಇಷ್ಟು ಆತುರ ಯಾಕೆ?  ಇದು ನಾಸ್ತಿಕ ‌ಪಿಣರಾಯಿ ವಿಜಯನ್ ಸರ್ಕಾರವು ಭಕ್ತರನ್ನು ನಿರಾಕರಿಸುವ ಉದ್ದೇಶಪೂರ್ವಕ ಪ್ರಯತ್ನವೇ? ಸರ್ಕಾರ ಭಕ್ತರ ಧ್ವನಿಗೆ ಕಿವಿಗೊಡಬೇಕು ಹಾಗೂ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು, ”ಎಂದು ಅವರು ಜೂನ್‌ 8 ರಂದು ಹೇಳಿದ್ದಾರೆ.

ಆದರೆ ಇದೇ ವಿ. ಮುರುಳೀಧರನ್ ದೇವಾಲಯವನ್ನು ತೆರೆಯದ ಕಾರಣಕ್ಕಾಗಿ ಈ ಹಿಂದೆ ಕೇರಳದ ಕಮ್ಯುನಿಷ್ಟ್ ಎಡ ಪಂಥೀಯ ಸರ್ಕಾರವನ್ನು ಟೀಕಿಸುತ್ತಿದ್ದರು.


ಓದಿ: ಕೇರಳದ ಗರ್ಭಿಣಿ ಆನೆ ಸಾವಿನ ಬಗ್ಗೆ ಬಲ ಪಂಥೀಯರು ಹರಡಿದ ಎರಡು ಸುಳ್ಳುಗಳು


ಮೇ 28 ರಂದು ಮುರಲೀಧರನ್ ಅವರು ರಾಜ್ಯಗಳಾದ್ಯಂತ ಮದ್ಯದ ಮಳಿಗೆಗಳು ತೆರೆದಿದೆ, ದೇವಾಲಯಗಳನ್ನೂ ತೆರೆಯಬಹುದು ಎಂದು ಹೇಳಿದ್ದರು. ದೇವಾಲಯಗಳನ್ನು ತೆರೆಯುವ ಮೂಲಕ ಭಕ್ತರ ಮೇಲೆ “ಕರುಣೆ ತೋರಿಸಿ” ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ವಿಡಿಯೋ ನೋಡಿ

കള്ള് കുടിയന്മാരോടുള്ള താല്‍പര്യം ദൈവവിശ്വാസിയോടും കാണണം-കെ.മുരളീധരന്‍

കള്ള് കുടിയന്മാരോടുള്ള സര്‍ക്കാരിനുള്ള താല്‍പര്യം ദൈവവിശ്വാസിയോടും കാണിക്കണമെന്ന് കെ.മുരളീധരന്‍ എം.പി. ആരാധനാലയങ്ങള്‍ തുറക്കാനുള്ള സൗകര്യമൊരുക്കണം. മദ്യ ഷാപ്പ് തുറുന്നാല്‍ സാമൂഹിക അകലം പാലിക്കപ്പെടുന്നതും ആരാധനാലയങ്ങള്‍ തുറന്നാല്‍ സാമൂഹിക അകല ലംഘനം നടക്കുന്നതും എങ്ങനെയാണെന്ന് കെ.മുരളീധരന്‍ ചോദിച്ചു. വേണ്ടത്ര സുരക്ഷയൊരുക്കാനും മാനദണ്ഡങ്ങള്‍ പാലിക്കാനുമൊക്കെ ആരാധനാലയ ഭാരവാഹികളും ബന്ധപ്പെട്ടവരുമൊക്കെ തയ്യാറാണ്. വേണമെങ്കില്‍ വെര്‍ച്വല്‍ ക്യൂ സംവിധാനമൊക്കെ ഇവിടെയും നടപ്പാക്കാമെന്നും മുരളീധരന്‍ പറഞ്ഞു.ആരാധനാലയങ്ങള്‍ തുറക്കുന്നത് കൊണ്ട് ഒരു വ്യാപനവും ഉണ്ടാവില്ല. സംസ്ഥാനത്ത് ഇപ്പോള്‍ കൊറോണയുടെ സമൂഹ വ്യാപനമല്ല മദ്യത്തിന്റെ സമൂഹ വ്യാപനമാന്ന് ഉണ്ടായികൊണ്ടിരിക്കുന്നത്. ആപ്പ് സര്‍ക്കാരിനെ ആപ്പാക്കും. മന്ത്രി ടി.പി രാമകൃഷ്ണന്‍ ഭാവിയില്‍ ഒരു പാട് കാര്യങ്ങള്‍ക്ക് വിശദീകരണം നല്‍കേണ്ടി വരുമെന്നും മുരളീധരന്‍ പറഞ്ഞു.#Covid19 #Lockdown #Muraleedharan

Posted by Mathrubhumi on Thursday, May 28, 2020

ಕೊರೊನಾ ಲಾಕ್‌ಡೌನ್ ಅನ್ನು ಕ್ರಮೇಣ ತೆರವುಗೊಳಿಸುವ ಭಾಗವಾಗಿ ಲಾಕ್‌ಡೌನ್‌ 5.0 ಮಾರ್ಗಸೂಚಿಗಳಲ್ಲಿ ರೆಸ್ಟೋರೆಂಟ್‌ಗಳು, ಮಾಲ್‌ಗಳು ಹಾಗೂ ಪೂಜಾ ಸ್ಥಳಗಳನ್ನು ತೆರೆಯುವ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಅನ್ನು ಜೂನ್ 4 ರಂದು ಕೇಂದ್ರ ಸರ್ಕಾರವೂ ಹೊರಡಿಸಿದೆ.

ಮುಖ್ಯಮಂತ್ರಿ ವಿಜಯನ್ ಈ ವಿಷಯದಲ್ಲಿ ಕೇಂದ್ರವು ಹೊರಡಿಸಿದ ಮಾರ್ಗಸೂಚಿಗಳನ್ನು ಕೇರಳ ಅನುಸರಿಸಲಿದೆ ಅಷ್ಟೇ ಎಂದು ಅವರ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ.

ಆದರೆ, ಈಗ ಕೇರಳ ರಾಜ್ಯ ಬಿಜೆಪಿ ಹಾಗೂ ಹಿಂದೂ ಐಕ್ಯ ವೇದಿಕೆ, ರಾಜ್ಯ ಸರ್ಕಾರವು ದೇವಾಲಯದ ಆದಾಯದ ಮೇಲೆ ಕಣ್ಣಿಟ್ಟಿದೆ ಎಂದು ಎಂದು ಆರೋಪಿಸುತ್ತಿದೆ. ದೇವಾಲಯಗಳನ್ನು ತೆರೆಯುವ ಬದಲು ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ದೇವಾಲಯಗಳಿಗೆ ಮತ್ತು ಅದರ ಉದ್ಯೋಗಿಗಳಿಗೆ ರಾಜ್ಯ ಸರ್ಕಾರ ಆರ್ಥಿಕ ಸಹಾಯವನ್ನು ನೀಡಬೇಕು ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇರಳದ ಎಡಪಕ್ಷ ಸರ್ಕಾರದ ರಾಜ್ಯ ಸಚಿವ ಕಡಕಂಪಲ್ಲಿ ಸುರೇಂದ್ರನ್ “ಈ ಕ್ರಮವನ್ನು ವಿರೋಧಿಸುತ್ತಿರುವವರು ಈ ಹಿಂದೆ ದೇವಾಲಯಗಳನ್ನು ಪುನಃ ತೆರೆಯಲು ಯಾಕೆ ಒತ್ತಾಯಿಸುತ್ತಿದ್ದಾರೆಂದು ಅರ್ಥಮಾಡಿಕೊಳ್ಳಲು ಅಸಾಧ್ಯವಾಗಿದೆ. ಕೇಂದ್ರದ ನಿರ್ದೇಶನದಂತೆ ಧಾರ್ಮಿಕ ಸ್ಥಳಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಇಬ್ಬಂದಿತನವನ್ನು ಬಹಿರಂಗಪಡಿಸಿದ ಅವರು, ಈಗ ದೇವಾಲಯಗಳನ್ನು ತೆರೆಯುವುದನ್ನು ವಿರೋಧಿಸುವವರು ಈ ಹಿಂದೆ ಭಕ್ತರಿಗೆ ಅವಕಾಶ ನೀಡಬೇಕೆಂದು ಬೊಬ್ಬೆಹಾಕಿದ್ದರು ಎಂದು ಅವರು ಹೇಳಿದ್ದಾರೆ.

ದೇವಾಲಯಗಳನ್ನು ಪುನಃ ತೆರೆಯುವ ಹಿಂದಿನ ಉದ್ದೇಶವೇ ಆದಾಯ ಎಂಬ ಆರೋಪವನ್ನು ತಳ್ಳಿಹಾಕಿದ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಅಧ್ಯಕ್ಷ ಎನ್ ವಾಸು ಭಕ್ತರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು  ಹೇಳಿದ್ದಾರೆ.

ಕೇಂದ್ರದ ಎಸ್‌ಒಪಿಗಳ ಪ್ರಕಾರ, ಎಲ್ಲಾ ಪೂಜಾ ಸ್ಥಳಗಳಲ್ಲಿ ಸಾಮಾಜಿಕ ದೂರವನ್ನು ಅನುಸರಿಸಬೇಕು ಮತ್ತು ಭಕ್ತರು ಮಾಸ್ಕ್‌ಗಳನ್ನು ಧರಿಸಬೇಕು. 65 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪೂಜಾ ಸ್ಥಳಗಳಲ್ಲಿ ಅವಕಾಶವಿಲ್ಲ. ಆಹಾರ ವಿತರಣೆ, ಪ್ರಸಾದಗಳು ನೀಡುವಂತಿಲ್ಲ ಎಂದು ಸೂಚಿಸಿದೆ.


ಓದಿ: ಆನೆಯ ಹೆಸರಲ್ಲಿ ದ್ವೇಷ ಅಭಿಯಾನ ಮಾಡುವವರ ವಿರುದ್ದ ವಿಭಿನ್ನವಾಗಿ ಪ್ರತಿಕ್ರಿಯಿಸಿದ ಕೇರಳ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...