Homeಮುಖಪುಟಕೃಷಿ ಕಾಯ್ದೆಗಳ ವಿರುದ್ಧದ ನಿರ್ಣಯ ಬೆಂಬಲಿಸಿದ ಕೇರಳದ ಬಿಜೆಪಿ ಶಾಸಕ!

ಕೃಷಿ ಕಾಯ್ದೆಗಳ ವಿರುದ್ಧದ ನಿರ್ಣಯ ಬೆಂಬಲಿಸಿದ ಕೇರಳದ ಬಿಜೆಪಿ ಶಾಸಕ!

- Advertisement -
- Advertisement -

ಕಳೆದ 36 ದಿನಗಳಿಂದ ದೇಶದ ರಾಜಧಾನಿಯ ಗಡಿಗಳಲ್ಲಿ ಲಕ್ಷಾಂತರ ರೈತರು ಕೃಷಿ ಕಾಯ್ದೆಗಳ ರದ್ಧತಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಇಂದು ಕೇರಳ ವಿಧಾನಸಭೆಯಲ್ಲಿ ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ಣಯ ಮಂಡಿಸಿದ್ದು, ಅದು ಅವಿರೋಧವಾಗಿ ಅಂಗೀಕಾರಗೊಂಡಿದೆ. ವಿಶೇಷವೆಂದರೆ ಕೇರಳದ ಏಕೈಕ ಬಿಜೆಪಿ ಶಾಸಕ ಓ ರಾಜಗೋಪಾಲ್ ಸಹ ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಬೆಂಬಲಿಸಿದ್ದಾರೆ.

ಕೇರಳ ವಿಧಾನಸಭಾ ಸ್ಫಿಕರ್ ಪಿ ಶ್ರೀರಾಮಕೃಷ್ಣನ್ ಅವರು ಧ್ವನಿ ಮತದಾನದ ಮೂಲಕ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದರು. ಈ ವೇಳೆ ನೆಮೋಮ್ ಕ್ಷೇತ್ರದ ಬಿಜೆಪಿ ಶಾಸಕ ಓ ರಾಜಗೋಪಾಲ್ ರವರು ಕೃಷಿ ಕಾನೂನುಗಳ ಕೆಲವು ಅಂಶಗಳನ್ನು ಸಮರ್ಥಿಸಿಕೊಂಡರು, ಆದರೆ ಅವರು ನಿರ್ಣಯದ ಮತದಾನ ನಡೆಯುತ್ತಿರುವಾಗ ಮತಗಳ ವಿಭಜನೆಯನ್ನು ಕೇಳಲಿಲ್ಲ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ನಾನು ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯದ ಪರವಾಗಿ ಮತ ಹಾಕಿದ್ದೇನೆ. ನಾನು ಪ್ರಜಾಪ್ರಭುತ್ವದ ಭಾಗವಾಗಿ ವಿಧಾನಸಭೆಯ ಒಮ್ಮತವನ್ನು ಒಪ್ಪುತ್ತೇನೆ. ನಿರ್ಣಯದ ಕೆಲವು ಭಾಗಗಳೊಂದಿಗೆ ನನಗೆ ಭಿನ್ನಾಭಿಪ್ರಾಯಗಳಿವೆ, ಅದನ್ನು ನಾನು ವಿಧಾನಸಭೆಯಲ್ಲಿ ಸೂಚಿಸಿದ್ದೇನೆ. ಆದರೆ ನಾನು ಅಂತಿಮ ತೀರ್ಮಾನಕ್ಕೆ ಮರಳುತ್ತೇನೆ. ನಾನು ಬಿಜೆಪಿ ವ್ಯಕ್ತಿಯಾದ ಮಾತ್ರಕ್ಕೆ ರಾಜ್ಯದ ನಿಲುವನ್ನು ವಿರೋಧಿಸುವುದು ನ್ಯಾಯವಲ್ಲ” ಎಂದು ಅವರು ಹೇಳಿದ್ದಾರೆ.

ನೀವು ಮತ ಹಾಕಿದ ನಿರ್ಣಯವು ಕೃಷಿ ಕಾನೂನುಗಳನ್ನು ರದ್ದುಪಡಿಸಲು ಒತ್ತಾಯಿಸುತ್ತದೆ ಎಂಬುದು ನಿಮಗೆ ಚೆನ್ನಾಗಿ ತಿಳಿದಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ‘ಖಂಡಿತವಾಗಿಯೂ ತಿಳಿದಿದೆ’ ಎಂದು ಉತ್ತರಿಸಿದ್ದಾರೆ.

ರೈತರ ಸಮಸ್ಯೆಗಳನ್ನು ಚರ್ಚಿಸಲು ಮತ್ತು ಹೋರಾಟನಿರತ ರೈತರನ್ನು ಬೆಂಬಲಿಸಲು, ಹೋರಾಟಕ್ಕೆ ಸಹಮತ ವ್ಯಕ್ತಪಡಿಸಲು ಕರೆದ ಒಂದು ತಾಸಿನ ವಿಶೇಷ ಅಧಿವೇಶನದಲ್ಲಿ ಸಿಎಂ ಪಿಣರಾಯಿ ವಿಜಯನ್ ನಿರ್ಣಯ ಮಂಡಿಸಿದರು. ದೇಶವು ಈ ಅಪ್ರತಿಮ ರೈತ ಪ್ರತಿಭಟನೆಗೆ ಸಾಕ್ಷಿಯಾಗಿದೆ. ಸಂಸತ್ತಿನಲ್ಲಿ ಅಂಗೀಕಾರವಾದ ಕಾಯ್ದೆಗಳು ಕೇವಲ ರೈತ ವಿರೋಧಿಯಷ್ಟೇ ಅಲ್ಲ, ಅವು ಕಾರ್ಪೋರೇಟ್ ಪರವಾಗಿವೆ. ಈಗಾಗಲೇ ಪ್ರತಿಭಟನಾ ನಿರತ 32 ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದರು.

 

ತಮ್ಮ ಬದುಕಿನ ಮೇಲೆ ಪರಿಣಾಮ ಬೀರುವ ನಿರ್ದಿಷ್ಟ ಕಾನೂನುಗಳ ಬಗ್ಗೆ ಜನರಿಗೆ ಆತಂಕಗಳಿದ್ದಾಗ, ಶಾಸನಸಭೆಗಳು ಈ ಕುರಿತು ಗಂಭಿರ ದೃಷ್ಟಿಕೋನ ಹೊಂದಬೇಕಾದ ನೈತಿಕ ಜವಾಬ್ದಾರಿಯನ್ನು ಪ್ರದರ್ಶಿಸಬೇಕು ಎಂದ ಅವರು, “ಕೃಷಿ ಈ ದೇಶದ ಸಂಸ್ಕೃತಿಯ ಭಾಗವಾಗಿತ್ತು. ರೈತರು ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಕೇಂದ್ರವು ಈ ಕಾಯ್ದೆಗಳನ್ನು ಜಾರಿ ಮಾಡಿದೆ. ಇದರ ಪರಿಣಾಮ ಈಗ ಸಿಗುತ್ತಿರುವ ಬೆಂಬಲ ಬೆಲೆಯನ್ನೂ ಕಳೆದುಕೊಳ್ಳುವ ಆತಂಕದಲ್ಲಿ ರೈತರಿದ್ದಾರೆ” ಎಂದು ವಿಜಯನ್ ಹೇಳಿದರು.


ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...