Homeಮುಖಪುಟಕೃಷಿ ಕಾಯ್ದೆಗಳ ವಿರುದ್ಧದ ನಿರ್ಣಯ ಬೆಂಬಲಿಸಿದ ಕೇರಳದ ಬಿಜೆಪಿ ಶಾಸಕ!

ಕೃಷಿ ಕಾಯ್ದೆಗಳ ವಿರುದ್ಧದ ನಿರ್ಣಯ ಬೆಂಬಲಿಸಿದ ಕೇರಳದ ಬಿಜೆಪಿ ಶಾಸಕ!

- Advertisement -
- Advertisement -

ಕಳೆದ 36 ದಿನಗಳಿಂದ ದೇಶದ ರಾಜಧಾನಿಯ ಗಡಿಗಳಲ್ಲಿ ಲಕ್ಷಾಂತರ ರೈತರು ಕೃಷಿ ಕಾಯ್ದೆಗಳ ರದ್ಧತಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಇಂದು ಕೇರಳ ವಿಧಾನಸಭೆಯಲ್ಲಿ ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ಣಯ ಮಂಡಿಸಿದ್ದು, ಅದು ಅವಿರೋಧವಾಗಿ ಅಂಗೀಕಾರಗೊಂಡಿದೆ. ವಿಶೇಷವೆಂದರೆ ಕೇರಳದ ಏಕೈಕ ಬಿಜೆಪಿ ಶಾಸಕ ಓ ರಾಜಗೋಪಾಲ್ ಸಹ ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಬೆಂಬಲಿಸಿದ್ದಾರೆ.

ಕೇರಳ ವಿಧಾನಸಭಾ ಸ್ಫಿಕರ್ ಪಿ ಶ್ರೀರಾಮಕೃಷ್ಣನ್ ಅವರು ಧ್ವನಿ ಮತದಾನದ ಮೂಲಕ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದರು. ಈ ವೇಳೆ ನೆಮೋಮ್ ಕ್ಷೇತ್ರದ ಬಿಜೆಪಿ ಶಾಸಕ ಓ ರಾಜಗೋಪಾಲ್ ರವರು ಕೃಷಿ ಕಾನೂನುಗಳ ಕೆಲವು ಅಂಶಗಳನ್ನು ಸಮರ್ಥಿಸಿಕೊಂಡರು, ಆದರೆ ಅವರು ನಿರ್ಣಯದ ಮತದಾನ ನಡೆಯುತ್ತಿರುವಾಗ ಮತಗಳ ವಿಭಜನೆಯನ್ನು ಕೇಳಲಿಲ್ಲ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ನಾನು ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯದ ಪರವಾಗಿ ಮತ ಹಾಕಿದ್ದೇನೆ. ನಾನು ಪ್ರಜಾಪ್ರಭುತ್ವದ ಭಾಗವಾಗಿ ವಿಧಾನಸಭೆಯ ಒಮ್ಮತವನ್ನು ಒಪ್ಪುತ್ತೇನೆ. ನಿರ್ಣಯದ ಕೆಲವು ಭಾಗಗಳೊಂದಿಗೆ ನನಗೆ ಭಿನ್ನಾಭಿಪ್ರಾಯಗಳಿವೆ, ಅದನ್ನು ನಾನು ವಿಧಾನಸಭೆಯಲ್ಲಿ ಸೂಚಿಸಿದ್ದೇನೆ. ಆದರೆ ನಾನು ಅಂತಿಮ ತೀರ್ಮಾನಕ್ಕೆ ಮರಳುತ್ತೇನೆ. ನಾನು ಬಿಜೆಪಿ ವ್ಯಕ್ತಿಯಾದ ಮಾತ್ರಕ್ಕೆ ರಾಜ್ಯದ ನಿಲುವನ್ನು ವಿರೋಧಿಸುವುದು ನ್ಯಾಯವಲ್ಲ” ಎಂದು ಅವರು ಹೇಳಿದ್ದಾರೆ.

ನೀವು ಮತ ಹಾಕಿದ ನಿರ್ಣಯವು ಕೃಷಿ ಕಾನೂನುಗಳನ್ನು ರದ್ದುಪಡಿಸಲು ಒತ್ತಾಯಿಸುತ್ತದೆ ಎಂಬುದು ನಿಮಗೆ ಚೆನ್ನಾಗಿ ತಿಳಿದಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ‘ಖಂಡಿತವಾಗಿಯೂ ತಿಳಿದಿದೆ’ ಎಂದು ಉತ್ತರಿಸಿದ್ದಾರೆ.

ರೈತರ ಸಮಸ್ಯೆಗಳನ್ನು ಚರ್ಚಿಸಲು ಮತ್ತು ಹೋರಾಟನಿರತ ರೈತರನ್ನು ಬೆಂಬಲಿಸಲು, ಹೋರಾಟಕ್ಕೆ ಸಹಮತ ವ್ಯಕ್ತಪಡಿಸಲು ಕರೆದ ಒಂದು ತಾಸಿನ ವಿಶೇಷ ಅಧಿವೇಶನದಲ್ಲಿ ಸಿಎಂ ಪಿಣರಾಯಿ ವಿಜಯನ್ ನಿರ್ಣಯ ಮಂಡಿಸಿದರು. ದೇಶವು ಈ ಅಪ್ರತಿಮ ರೈತ ಪ್ರತಿಭಟನೆಗೆ ಸಾಕ್ಷಿಯಾಗಿದೆ. ಸಂಸತ್ತಿನಲ್ಲಿ ಅಂಗೀಕಾರವಾದ ಕಾಯ್ದೆಗಳು ಕೇವಲ ರೈತ ವಿರೋಧಿಯಷ್ಟೇ ಅಲ್ಲ, ಅವು ಕಾರ್ಪೋರೇಟ್ ಪರವಾಗಿವೆ. ಈಗಾಗಲೇ ಪ್ರತಿಭಟನಾ ನಿರತ 32 ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದರು.

 

ತಮ್ಮ ಬದುಕಿನ ಮೇಲೆ ಪರಿಣಾಮ ಬೀರುವ ನಿರ್ದಿಷ್ಟ ಕಾನೂನುಗಳ ಬಗ್ಗೆ ಜನರಿಗೆ ಆತಂಕಗಳಿದ್ದಾಗ, ಶಾಸನಸಭೆಗಳು ಈ ಕುರಿತು ಗಂಭಿರ ದೃಷ್ಟಿಕೋನ ಹೊಂದಬೇಕಾದ ನೈತಿಕ ಜವಾಬ್ದಾರಿಯನ್ನು ಪ್ರದರ್ಶಿಸಬೇಕು ಎಂದ ಅವರು, “ಕೃಷಿ ಈ ದೇಶದ ಸಂಸ್ಕೃತಿಯ ಭಾಗವಾಗಿತ್ತು. ರೈತರು ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಕೇಂದ್ರವು ಈ ಕಾಯ್ದೆಗಳನ್ನು ಜಾರಿ ಮಾಡಿದೆ. ಇದರ ಪರಿಣಾಮ ಈಗ ಸಿಗುತ್ತಿರುವ ಬೆಂಬಲ ಬೆಲೆಯನ್ನೂ ಕಳೆದುಕೊಳ್ಳುವ ಆತಂಕದಲ್ಲಿ ರೈತರಿದ್ದಾರೆ” ಎಂದು ವಿಜಯನ್ ಹೇಳಿದರು.


ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...