Homeಮುಖಪುಟಕೇರಳ | ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿಗೆ ಮುತ್ತಿಗೆ ಹಾಕಿದ ಬಿಜೆಪಿ-ಆರ್‌ಎಸ್‌ಎಸ್‌

ಕೇರಳ | ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿಗೆ ಮುತ್ತಿಗೆ ಹಾಕಿದ ಬಿಜೆಪಿ-ಆರ್‌ಎಸ್‌ಎಸ್‌

- Advertisement -
- Advertisement -

ತಿರುವನಂತಪುರದ ಹೊರವಲಯ ನೆಯ್ಯಟ್ಟಿಂಕರ ಬಳಿ ಬುಧವಾರ (ಮಾ.12) ಸಂಜೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರ ಗುಂಪೊಂದು ಮಹಾತ್ಮ ಗಾಂಧಿಯವರ ಮರಿಮೊಮ್ಮಗ ತುಷಾರ್ ಗಾಂಧಿಗೆ ಮುತ್ತಿಗೆ ಹಾಕಿದೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿರುವುದಲ್ಲದೆ, ಆಡಳಿತ ಮತ್ತು ಪ್ರತಿಪಕ್ಷಗಳ ಪ್ರತಿಭಟನೆಗೆ ಕಾರಣವಾಯಿತು ಎಂದು ದಿ ಹಿಂದೂ ವರದಿ ಮಾಡಿದೆ.

ಶಿವಗಿರಿ ಮಠದ ಆಹ್ವಾನದ ಮೇರೆಗೆ ಕೇರಳಕ್ಕೆ ಭೇಟಿ ನೀಡಿದ್ದ ತುಷಾರ್ ಗಾಂಧಿ, ಮಠಕ್ಕೆ ಮಹಾತ್ಮ ಗಾಂಧಿ ಭೇಟಿ ನೀಡಿ 100 ವರ್ಷ ತುಂಬಿದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ “ಆರೆಸ್ಸೆಸ್ ಮತ್ತು ಸಂಘಪರಿವಾರ ದೇಶದ ಆತ್ಮಕ್ಕೆ ಕ್ಯಾನ್ಸರ್ ಇದ್ದಂತೆ, ನಾವು ಜಾಗರೂಕರಾಗಿರಬೇಕು” ಎಂದು ಹೇಳಿದ್ದಾರೆ. ಇದು ಸಂಘಪರಿವಾರದವರನ್ನು ಕೆರಳಿಸಿದೆ ಎಂದು ವರದಿ ಹೇಳಿದೆ.

ಮಠದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ, ನೆಯ್ಯಟ್ಟಿಂಕರದಲ್ಲಿ ದಿವಂಗತ ಗಾಂಧಿವಾದಿ ಪಿ. ಗೋಪಿನಾಥನ್ ನಾಯರ್ ಅವರ ಪೂರ್ವಜರ ಮನೆಯಲ್ಲಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಲು ತುಷಾರ್ ಗಾಂಧಿ ತೆರಳಿದ್ದರು. ಈ ಕಾರ್ಯಕ್ರಮ ಮುಗಿಸಿ ಅವರು ವಾಹನ ಹತ್ತಲು ಮುಂದಾಗುತ್ತಿದ್ದಂತೆ ಆರ್‌ಎಸ್‌ಎಸ್ ಕಾರ್ಯಕರ್ತರು ಅವರಿಗೆ ಮುತ್ತಿಗೆ ಹಾಕಿದ್ದಾರೆ. ಶಿವಗಿರಿ ಮಠದಲ್ಲಿ ಆರ್‌ಎಸ್‌ಎಸ್ ವಿರುದ್ದ ಮಾಡಿದ ಭಾಷಣ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಪೊಲೀಸರು ಇರಲಿಲ್ಲ

ಆರ್‌ಎಸ್‌ಎಸ್‌ ಕಾರ್ಯಕರ್ತರು ಮುತ್ತಿಗೆ ಹಾಕಿದಾಗ ತುಷಾರ್ ಗಾಂಧಿಯವರು ವಾಹನದಿಂದ ಕೆಳಗಿಳಿದು ಅವರನ್ನು ಎದುರಿಸಿದರು. ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಪ್ರತಿಯಾಗಿ “ಆರ್‌ಎಸ್‌ಎಸ್ ಮುರ್ದಾಬಾದ್, ಗಾಂಧೀಜಿ ಝಿಂದಾಬಾದ್” ಎಂದು ಕೂಗಿದರು. ಸ್ಥಳದಲ್ಲಿ ಯಾವುದೇ ಗಮನಾರ್ಹ ಪೊಲೀಸ್ ಉಪಸ್ಥಿತಿ ಇರಲಿಲ್ಲ. ಗಾಂಧಿಯವರು ತಮ್ಮ ರಾಜಕೀಯ ನಿಲುವನ್ನು ಸ್ಪಷ್ಟಪಡಿಸಿ ಅಲ್ಲಿಂದ ಹೊರಟರು. ನೆಯ್ಯತ್ತಿಂಕರ ಪೊಲೀಸರನ್ನು ಸಂಪರ್ಕಿಸಿದಾಗ, ಘಟನೆಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ ಎಂಬುದಾಗಿ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ತಿಳಿಸಿದೆ.

ಶಿವಗಿರಿ ಮಠದವರನ್ನು ಸಂಪರ್ಕಿಸಿದಾಗ, ಗುರುವಾರ ಈ ಬೆಳವಣಿಗೆಗೆ ಪ್ರತಿಕ್ರಿಯಿಸುವುದಾಗಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರು ಆರ್‌ಎಸ್‌ಎಸ್‌ನ ಕೃತ್ಯವನ್ನು ಖಂಡಿಸಿದ್ದಾರೆ. ಮಹಾತ್ಮಾ ಗಾಂಧಿಯವರು ನಾರಾಯಣ ಗುರುಗಳೊಂದಿಗೆ ಮಠದಲ್ಲಿ ನಡೆಸಿದ ಐತಿಹಾಸಿಕ ಭೇಟಿಯ 100 ನೇ ವಾರ್ಷಿಕೋತ್ಸವವನ್ನು ಆಚರಿಸಲು ತುಷಾರ್ ಗಾಂಧಿ ಕೇರಳಕ್ಕೆ ಆಗಮಿಸಿದ್ದರು. ಆರ್‌ಎಸ್‌ಎಸ್ ಕೇರಳ ನಾಚಿಕೆಪಡುವಂತೆ ಮಾಡಿದೆ. ಪ್ರತಿಭಟನೆಯ ಮೂಲಕ ತಮ್ಮ ನಿಜವಾದ ಬಣ್ಣವನ್ನು ಬಹಿರಂಗಪಡಿಸಿದೆ” ಎಂದು ಹೇಳಿದ್ದಾರೆ.

ಸಿಪಿಐ ಹೇಳಿದ್ದೇನು?

ಮಹಾತ್ಮಾ ಗಾಂಧಿ ಮತ್ತು ಸ್ವಾತಂತ್ರ್ಯ ಚಳವಳಿಯ ಬಗ್ಗೆ ಆರ್‌ಎಸ್‌ಎಸ್‌ನ ತಿರಸ್ಕಾರ ಮತ್ತು ಊಳಿಗಮಾನ್ಯ ವಸಾಹತುಶಾಹಿ ವ್ಯವಸ್ಥೆಗೆ ಸಂಘಟನೆಯ ಬೆಂಬಲವು ತುಷಾರ್ ಗಾಂಧಿ ವಿರುದ್ಧದ ಅವರ ನಡೆಯಿಂದ ಸ್ಪಷ್ಟವಾಗಿ ಗೊತ್ತಾಗಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ರಾಜ್ಯ ಕಾರ್ಯದರ್ಶಿ ಬಿನೋಯ್ ವಿಶ್ವಂ ಹೇಳಿದ್ದಾರೆ.

“ಆರ್‌ಎಸ್‌ಎಸ್ ಸ್ವಾತಂತ್ರ್ಯ ಚಳವಳಿಯ ದ್ರೋಹಿ. ದೇಶದ ಸ್ವಾತಂತ್ರ್ಯ ಚಳವಳಿ ಮತ್ತು ಪ್ರಜಾಪ್ರಭುತ್ವದ ಪ್ರಗತಿಯಲ್ಲಿ ಅದರದ್ದು ಯಾವುದೇ ಪಾತ್ರವಿಲ್ಲ. ಗಾಂಧಿಯವರ ಹಂತಕ ಗೋಡ್ಸೆ ಮತ್ತು ಸಾವರ್ಕರ್ ಸೇರಿದಂತೆ ಅವರ ನಾಯಕರನ್ನು ಆರ್‌ಎಸ್‌ಎಸ್ ಸಿಂಹಾಸನವೇರಿಸಿದೆ. ಕೇರಳವು ಈ ಫ್ಯಾಸಿಸ್ಟ್ ಶಕ್ತಿಯ ವಿರುದ್ಧ ಒಂದಾಗಿ ನಿಲ್ಲಬೇಕು” ಎಂದಿದ್ದಾರೆ.

ಸರ್ಕಾರಿ ಪ್ರಾಥಮಿಕ ಶಾಲೆಗಳು ಇಂಗ್ಲಿಷ್‌ಗೆ ಬದಲಾಗಬೇಕು: ಗೋವಾ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...