Homeಮುಖಪುಟಕೇರಳ | ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿಗೆ ಮುತ್ತಿಗೆ ಹಾಕಿದ ಬಿಜೆಪಿ-ಆರ್‌ಎಸ್‌ಎಸ್‌

ಕೇರಳ | ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿಗೆ ಮುತ್ತಿಗೆ ಹಾಕಿದ ಬಿಜೆಪಿ-ಆರ್‌ಎಸ್‌ಎಸ್‌

- Advertisement -
- Advertisement -

ತಿರುವನಂತಪುರದ ಹೊರವಲಯ ನೆಯ್ಯಟ್ಟಿಂಕರ ಬಳಿ ಬುಧವಾರ (ಮಾ.12) ಸಂಜೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರ ಗುಂಪೊಂದು ಮಹಾತ್ಮ ಗಾಂಧಿಯವರ ಮರಿಮೊಮ್ಮಗ ತುಷಾರ್ ಗಾಂಧಿಗೆ ಮುತ್ತಿಗೆ ಹಾಕಿದೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿರುವುದಲ್ಲದೆ, ಆಡಳಿತ ಮತ್ತು ಪ್ರತಿಪಕ್ಷಗಳ ಪ್ರತಿಭಟನೆಗೆ ಕಾರಣವಾಯಿತು ಎಂದು ದಿ ಹಿಂದೂ ವರದಿ ಮಾಡಿದೆ.

ಶಿವಗಿರಿ ಮಠದ ಆಹ್ವಾನದ ಮೇರೆಗೆ ಕೇರಳಕ್ಕೆ ಭೇಟಿ ನೀಡಿದ್ದ ತುಷಾರ್ ಗಾಂಧಿ, ಮಠಕ್ಕೆ ಮಹಾತ್ಮ ಗಾಂಧಿ ಭೇಟಿ ನೀಡಿ 100 ವರ್ಷ ತುಂಬಿದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ “ಆರೆಸ್ಸೆಸ್ ಮತ್ತು ಸಂಘಪರಿವಾರ ದೇಶದ ಆತ್ಮಕ್ಕೆ ಕ್ಯಾನ್ಸರ್ ಇದ್ದಂತೆ, ನಾವು ಜಾಗರೂಕರಾಗಿರಬೇಕು” ಎಂದು ಹೇಳಿದ್ದಾರೆ. ಇದು ಸಂಘಪರಿವಾರದವರನ್ನು ಕೆರಳಿಸಿದೆ ಎಂದು ವರದಿ ಹೇಳಿದೆ.

ಮಠದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ, ನೆಯ್ಯಟ್ಟಿಂಕರದಲ್ಲಿ ದಿವಂಗತ ಗಾಂಧಿವಾದಿ ಪಿ. ಗೋಪಿನಾಥನ್ ನಾಯರ್ ಅವರ ಪೂರ್ವಜರ ಮನೆಯಲ್ಲಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಲು ತುಷಾರ್ ಗಾಂಧಿ ತೆರಳಿದ್ದರು. ಈ ಕಾರ್ಯಕ್ರಮ ಮುಗಿಸಿ ಅವರು ವಾಹನ ಹತ್ತಲು ಮುಂದಾಗುತ್ತಿದ್ದಂತೆ ಆರ್‌ಎಸ್‌ಎಸ್ ಕಾರ್ಯಕರ್ತರು ಅವರಿಗೆ ಮುತ್ತಿಗೆ ಹಾಕಿದ್ದಾರೆ. ಶಿವಗಿರಿ ಮಠದಲ್ಲಿ ಆರ್‌ಎಸ್‌ಎಸ್ ವಿರುದ್ದ ಮಾಡಿದ ಭಾಷಣ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಪೊಲೀಸರು ಇರಲಿಲ್ಲ

ಆರ್‌ಎಸ್‌ಎಸ್‌ ಕಾರ್ಯಕರ್ತರು ಮುತ್ತಿಗೆ ಹಾಕಿದಾಗ ತುಷಾರ್ ಗಾಂಧಿಯವರು ವಾಹನದಿಂದ ಕೆಳಗಿಳಿದು ಅವರನ್ನು ಎದುರಿಸಿದರು. ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಪ್ರತಿಯಾಗಿ “ಆರ್‌ಎಸ್‌ಎಸ್ ಮುರ್ದಾಬಾದ್, ಗಾಂಧೀಜಿ ಝಿಂದಾಬಾದ್” ಎಂದು ಕೂಗಿದರು. ಸ್ಥಳದಲ್ಲಿ ಯಾವುದೇ ಗಮನಾರ್ಹ ಪೊಲೀಸ್ ಉಪಸ್ಥಿತಿ ಇರಲಿಲ್ಲ. ಗಾಂಧಿಯವರು ತಮ್ಮ ರಾಜಕೀಯ ನಿಲುವನ್ನು ಸ್ಪಷ್ಟಪಡಿಸಿ ಅಲ್ಲಿಂದ ಹೊರಟರು. ನೆಯ್ಯತ್ತಿಂಕರ ಪೊಲೀಸರನ್ನು ಸಂಪರ್ಕಿಸಿದಾಗ, ಘಟನೆಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ ಎಂಬುದಾಗಿ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ತಿಳಿಸಿದೆ.

ಶಿವಗಿರಿ ಮಠದವರನ್ನು ಸಂಪರ್ಕಿಸಿದಾಗ, ಗುರುವಾರ ಈ ಬೆಳವಣಿಗೆಗೆ ಪ್ರತಿಕ್ರಿಯಿಸುವುದಾಗಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರು ಆರ್‌ಎಸ್‌ಎಸ್‌ನ ಕೃತ್ಯವನ್ನು ಖಂಡಿಸಿದ್ದಾರೆ. ಮಹಾತ್ಮಾ ಗಾಂಧಿಯವರು ನಾರಾಯಣ ಗುರುಗಳೊಂದಿಗೆ ಮಠದಲ್ಲಿ ನಡೆಸಿದ ಐತಿಹಾಸಿಕ ಭೇಟಿಯ 100 ನೇ ವಾರ್ಷಿಕೋತ್ಸವವನ್ನು ಆಚರಿಸಲು ತುಷಾರ್ ಗಾಂಧಿ ಕೇರಳಕ್ಕೆ ಆಗಮಿಸಿದ್ದರು. ಆರ್‌ಎಸ್‌ಎಸ್ ಕೇರಳ ನಾಚಿಕೆಪಡುವಂತೆ ಮಾಡಿದೆ. ಪ್ರತಿಭಟನೆಯ ಮೂಲಕ ತಮ್ಮ ನಿಜವಾದ ಬಣ್ಣವನ್ನು ಬಹಿರಂಗಪಡಿಸಿದೆ” ಎಂದು ಹೇಳಿದ್ದಾರೆ.

ಸಿಪಿಐ ಹೇಳಿದ್ದೇನು?

ಮಹಾತ್ಮಾ ಗಾಂಧಿ ಮತ್ತು ಸ್ವಾತಂತ್ರ್ಯ ಚಳವಳಿಯ ಬಗ್ಗೆ ಆರ್‌ಎಸ್‌ಎಸ್‌ನ ತಿರಸ್ಕಾರ ಮತ್ತು ಊಳಿಗಮಾನ್ಯ ವಸಾಹತುಶಾಹಿ ವ್ಯವಸ್ಥೆಗೆ ಸಂಘಟನೆಯ ಬೆಂಬಲವು ತುಷಾರ್ ಗಾಂಧಿ ವಿರುದ್ಧದ ಅವರ ನಡೆಯಿಂದ ಸ್ಪಷ್ಟವಾಗಿ ಗೊತ್ತಾಗಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ರಾಜ್ಯ ಕಾರ್ಯದರ್ಶಿ ಬಿನೋಯ್ ವಿಶ್ವಂ ಹೇಳಿದ್ದಾರೆ.

“ಆರ್‌ಎಸ್‌ಎಸ್ ಸ್ವಾತಂತ್ರ್ಯ ಚಳವಳಿಯ ದ್ರೋಹಿ. ದೇಶದ ಸ್ವಾತಂತ್ರ್ಯ ಚಳವಳಿ ಮತ್ತು ಪ್ರಜಾಪ್ರಭುತ್ವದ ಪ್ರಗತಿಯಲ್ಲಿ ಅದರದ್ದು ಯಾವುದೇ ಪಾತ್ರವಿಲ್ಲ. ಗಾಂಧಿಯವರ ಹಂತಕ ಗೋಡ್ಸೆ ಮತ್ತು ಸಾವರ್ಕರ್ ಸೇರಿದಂತೆ ಅವರ ನಾಯಕರನ್ನು ಆರ್‌ಎಸ್‌ಎಸ್ ಸಿಂಹಾಸನವೇರಿಸಿದೆ. ಕೇರಳವು ಈ ಫ್ಯಾಸಿಸ್ಟ್ ಶಕ್ತಿಯ ವಿರುದ್ಧ ಒಂದಾಗಿ ನಿಲ್ಲಬೇಕು” ಎಂದಿದ್ದಾರೆ.

ಸರ್ಕಾರಿ ಪ್ರಾಥಮಿಕ ಶಾಲೆಗಳು ಇಂಗ್ಲಿಷ್‌ಗೆ ಬದಲಾಗಬೇಕು: ಗೋವಾ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...