Homeಮುಖಪುಟಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌'ಸೀಲ್' ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

- Advertisement -
- Advertisement -

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ- ಸಿಪಿಐ (ಎಂ) ಪಕ್ಷ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಪತ್ರದ ವಿಷಯ ಬೆಳಕಿಗೆ ಬಂದಿತ್ತು.

2019ಕ್ಕೆ ಸಂಬಂಧಿಸಿದ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಯ ವಿವರಗಳ ಪ್ರಕಟಣೆಗೆ ಸಂಬಂಧಿಸಿದ ಚುನಾವಣಾ ಆಯೋಗದ ಪತ್ರದಲ್ಲಿ ಆಯೋಗದ ಸೀಲ್ ಬದಲು ಬಿಜೆಪಿ ಕೇರಳ ಘಟಕದ ಸೀಲ್ ಇತ್ತು.

ಈ ಪತ್ರವನ್ನು ಅನೇಕ ರಾಜಕೀಯ ಪಕ್ಷಗಳಿಗೆ ಕಳುಹಿಸಲಾಗಿತ್ತು. ಇದನ್ನು ಗಮನಿಸಿದ ಸಿಪಿಐ(ಎಂ), ಬಿಜೆಪಿ ಮತ್ತು ಚುನಾವಣಾ ಆಯೋಗದ ನಡುವೆ ‘ಒಂದೇ ರೀತಿಯ ಒಳಸಂಚು’ ಇದೆ ಎಂದು ಗಂಭೀರ ಆರೋಪ ಮಾಡಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿದ ಕೇರಳದ ಮುಖ್ಯ ಚುನಾವಣಾ ಅಧಿಕಾರಿ ಡಾ. ರತನ್ ಯು. ಖೇಲ್ಕರ್, “ಈ ಹಿಂದೆ ಬಿಜೆಪಿ ಘಟಕವು ವಿವರಣೆ ಕೇಳಲು ಬಂದಾಗ ಸಲ್ಲಿಸಿದ್ದ ಪೋಟೋಕಾಪಿ (ನಕಲು) ಪತ್ರವನ್ನು ಕಚೇರಿಯ ಸಿಬ್ಬಂದಿ ಅರಿಯದೇ ಇತರ ಪಕ್ಷಗಳಿಗೂ ವಿತರಿಸಿದ್ದಾರೆ. ಇದು ಕೇವಲ ಒಂದು ‘ಲಿಪಿಕ ದೋಷ’ (ಬರವಣಿಗೆಯ ದೋಷ/ ಸಿಬ್ಬಂದಿ ದೋಷ/ ತಾಂತ್ರಿಕ ತಪ್ಪು-clerical error)” ಎಂದು ತಿಳಿಸಿದ್ದಾರೆ.

“ಮುಖ್ಯ ಚುನಾವಣಾ ಅಧಿಕಾರಿಯ ಕಚೇರಿಯು ಈ ಲೋಪವನ್ನು ಪತ್ತೆಹಚ್ಚಿದ ಕೂಡಲೇ ಅದನ್ನು ಒಪ್ಪಿಕೊಂಡಿದೆ. ಅದರಂತೆ, ಮಾರ್ಚ್ 21ರಂದು ಉಪ ಮುಖ್ಯ ಚುನಾವಣಾ ಅಧಿಕಾರಿಯು ಆ ತಪ್ಪಾದ ಪತ್ರವನ್ನು ಹಿಂಪಡೆಯುವ ಅಧಿಕೃತ ಪತ್ರವನ್ನು ಹೊರಡಿಸಿದ್ದಾರೆ” ಎಂದು ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಸಹಾಯಕ ವಿಭಾಗೀಯ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಸಿಪಿಐ(ಎಂ)ನ ಕೇರಳ ಘಟಕವು ಸೋಮವಾರ ಮಧ್ಯಾಹ್ನ ಪತ್ರದ ವಿಷಯವನ್ನು ಮೊದಲು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿತ್ತು. ಮಾರ್ಚ್ 21ರ ಇ-ಮೇಲ್ ಒಂದರ ಸ್ಕ್ರೀನ್‌ಶಾಟ್ ಅನ್ನು ಪಕ್ಷವು ಹಂಚಿಕೊಂಡಿತ್ತು. ಅದರಲ್ಲಿ ದೇಶದ ರಾಜಕೀಯ ಪಕ್ಷಗಳಿಗೆ ಮಾರ್ಚ್ 19, 2019ರಂದು ಕಳುಹಿಸಲಾಗಿದ್ದ ಪತ್ರಕ್ಕೆ ಸಂಬಂಧಿಸಿದ ಅಫಿಡವಿಟ್ (ಪ್ರಮಾಣಪತ್ರ) ಲಗತ್ತಿಸಲಾಗಿತ್ತು.

2019ರ ಆ ಪತ್ರವು ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಗೆ ಸಂಬಂಧಿಸಿದ ನಿಯಮಗಳನ್ನು ವಿವರಿಸಿತ್ತು. ಆ ಪತ್ರದ ಮೇಲೆ ಬಿಜೆಪಿ ಕೇರಳ ಘಟಕದ ಸೀಲ್ ಇತ್ತು ಮತ್ತು ಅದರ ಮೇಲೆ ಚುನಾವಣಾ ಆಯೋಗದ ಅಧಿಕಾರಿಯ ಸಹಿ ಕೂಡ ಇತ್ತು.

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಪಕ್ಷದ ಸೀಲ್ ಇರುವುದನ್ನು ನೋಡಿ, “ಇವರು ಸರ್ಕಾರಿ ಸೀಲ್ ಮತ್ತು ಬಿಜೆಪಿ ಸೀಲ್‌ಗಳ ನಡುವೆ ವ್ಯತ್ಯಾಸವೇ ಇಲ್ಲದಂತೆ ಬೇಕಾಬಿಟ್ಟಿ ಬಳಸುತ್ತಿದ್ದಾರೆ” ಎಂದು ಸಿಪಿಐ(ಎಂ) ಟೀಕಿಸಿತ್ತು. ಚುನಾವಣಾ ಆಯೋಗ ಮತ್ತು ಬಿಜೆಪಿ ಒಂದೇ ಆಗಿಬಿಟ್ಟಿವೆಯೇ? ಇಷ್ಟು ದಿನ ತಾವು ಬೇರೆ ಬೇರೆ ಎಂದು ಮಾಡುತ್ತಿದ್ದ ನಾಟಕವನ್ನು ಈಗ ಪೂರ್ತಿಯಾಗಿ ಬಿಟ್ಟುಬಿಟ್ಟಿದ್ದಾರೆಯೇ?” ಎಂದು ವ್ಯಂಗ್ಯವಾಗಿ ಪ್ರಶ್ನಿಸಿತ್ತು.

“ಚುನಾವಣಾ ಆಯೋಗ ಮತ್ತು ಬಿಜೆಪಿ ಎರಡನ್ನೂ ಒಂದೇ ಅಧಿಕಾರ ಕೇಂದ್ರ ನಿಯಂತ್ರಿಸುತ್ತಿದೆ ಎಂಬುದು ಗುಟ್ಟಾಗಿಯೇನೂ ಉಳಿದಿಲ್ಲ. ಹಾಗಿದ್ದರೂ ಸಹ, ಕನಿಷ್ಠ ಸೌಜನ್ಯಕ್ಕಾದರೂ ಇವೆರಡಕ್ಕೂ ಪ್ರತ್ಯೇಕ ಕಚೇರಿ ಅಥವಾ ವ್ಯವಸ್ಥೆಯನ್ನು ನಿರ್ವಹಿಸಿ” ಎಂದು ವ್ಯಂಗ್ಯವಾಗಿ ಹೇಳಿತ್ತು.

ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಕೂಡ ಸಿಪಿಐ(ಎಂ) ಆರೋಪಗಳನ್ನು ಬೆಂಬಲಿಸಿದ್ದವು. ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು, ಚುನಾವಣಾ ಆಯೋಗವು ಕೊನೆಗೂ ಬಿಜೆಪಿ ಸೀಲ್ ಇರುವ ಅಧಿಕೃತ ಪತ್ರಗಳನ್ನು ಹೊರಡಿಸುವ ಧೈರ್ಯವನ್ನು ತೋರಿದೆ” ಎಂದು ವ್ಯಂಗ್ಯವಾಗಿ ಕಿಡಿಕಾರಿದ್ದರು.

ಕಾಂಗ್ರೆಸ್‌ನ ಕೇರಳ ಘಟಕವು ಚುನಾವಣಾ ಸಂಸ್ಥೆಯನ್ನು ಪ್ರಶ್ನಿಸುತ್ತಾ, “ನೀವು ಬಿಜೆಪಿಯ ಕಚೇರಿಯಿಂದಲೇ ಕಾರ್ಯನಿರ್ವಹಿಸುತ್ತಿದ್ದೀರಾ?” ಎಂದು ಕೇಳಿತ್ತು. ಅಲ್ಲದೆ, “ಚುನಾವಣಾ ಅಧಿಕಾರಿಗಳಿಗೆ ಬಿಜೆಪಿಯ ಅಧಿಕೃತ ಮುದ್ರೆಗಳು (ಸೀಲುಗಳು) ಸಿಕ್ಕಿದ್ದಾದರೂ ಹೇಗೆ?” ಎಂದು ಆಶ್ಚರ್ಯ ವ್ಯಕ್ತಪಡಿಸಿತ್ತು.

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಈ ಬಗ್ಗೆ ವ್ಯಂಗ್ಯವಾಡುತ್ತಾ, ಬಿಜೆಪಿಯ ಘೋಷಣೆಯಾದ “ಅಬ್ಕಿ ಬಾರ್, ಮೋದಿ ಸರ್ಕಾರ್” (ಈ ಬಾರಿ ಮೋದಿ ಸರ್ಕಾರ) ಎಂಬುದು ಕೂಡ ಇದೇ ರೀತಿಯ “ಲಿಪಿಕ ದೋಷ”ದ ಫಲಿತಾಂಶವೇ? ಎಂದು ಪ್ರಶ್ನಿಸಿದ್ದರು.

ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಪ್ರಕಟಿಸುವ ಕುರಿತಾದ 2019ರ ಮಾರ್ಗಸೂಚಿಗಳ ಬಗ್ಗೆ ಸ್ಪಷ್ಟನೆ ಕೋರಿ ಬಿಜೆಪಿ ಕೇರಳ ಘಟಕವು ಚುನಾವಣಾ ಆಯೋಗವನ್ನು ಸಂಪರ್ಕಿಸಿತ್ತು, ಈ ಸಂದರ್ಭದಲ್ಲಿ ಈ ತಪ್ಪು ಸಂಭವಿಸಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬಿಜೆಪಿ ಸಲ್ಲಿಸಿದ ದಾಖಲೆಯಲ್ಲಿ ಪಕ್ಷದ ಸೀಲ್ ಇರುವುದನ್ನು ಕಚೇರಿಯ ಸಿಬ್ಬಂದಿ ಗಮನಿಸದ ಕಾರಣ ಈ ಅಚಾತುರ್ಯ ಸಂಭವಿಸಿದೆ. ಸ್ಪಷ್ಟನೆ ಕೇಳಿ ಬಂದಿದ್ದ ಸಮಯದಲ್ಲಿ, ಅದೇ ದಾಖಲೆಯನ್ನು ಅಜಾಗರೂಕತೆಯಿಂದ ಇತರ ರಾಜಕೀಯ ಪಕ್ಷಗಳಿಗೂ ವಿತರಿಸಲಾಗಿದೆ ಎಂದು ಆಯೋಗ ಸಮರ್ಥಿಸಿಕೊಂಡಿದೆ.

ಆ ತಪ್ಪನ್ನು ಗಮನಿಸಿದ ತಕ್ಷಣವೇ, ಎಲ್ಲಾ ರಾಜಕೀಯ ಪಕ್ಷಗಳು, ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ರಿಟರ್ನಿಂಗ್ ಆಫೀಸರ್‌ಗಳಿಗೆ ಅಧಿಕೃತ ಪತ್ರದ ಮೂಲಕ ಈ ‘ತಪ್ಪಾದ ದಾಖಲೆ’ಯನ್ನು ಹಿಂಪಡೆಯಲಾಗಿದೆ ಮತ್ತು ಅದನ್ನು ಪರಿಗಣಿಸಬಾರದು ಎಂದು ತಿಳಿಸಲಾಗಿದೆ ಎಂದು ಆಯೋಗವು ಹೇಳಿದೆ.

ಈ ಲಿಪಿಕ ದೋಷದ ಆಧಾರದ ಮೇಲೆ ತಪ್ಪು ಮಾಹಿತಿಯನ್ನು ಹರಡದಂತೆ ಸಾರ್ವಜನಿಕರು ಮತ್ತು ಮಾಧ್ಯಮಗಳಲ್ಲಿ ವಿನಂತಿಸುತ್ತೇವೆ ಎಂದು ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಪ್ರಕ್ರಿಯೆಯು ಯಾವುದೇ ಹೊರಗಿನ ಹಸ್ತಕ್ಷೇಪ ಅಥವಾ ಪ್ರಭಾವಕ್ಕೆ ಒಳಗಾಗದಂತೆ ತಡೆಯಲು ಚುನಾವಣಾ ಆಯೋಗವು ಅತ್ಯಂತ ಕಟ್ಟುನಿಟ್ಟಾದ ಮತ್ತು ದೋಷರಹಿತ ವ್ಯವಸ್ಥೆಯನ್ನು ಹೊಂದಿದೆ ಎಂದು ಅದು ಹೇಳಿಕೊಂಡಿದೆ.




 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...