Homeಮುಖಪುಟಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌'ಸೀಲ್' ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

- Advertisement -
- Advertisement -

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ- ಸಿಪಿಐ (ಎಂ) ಪಕ್ಷ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಪತ್ರದ ವಿಷಯ ಬೆಳಕಿಗೆ ಬಂದಿತ್ತು.

2019ಕ್ಕೆ ಸಂಬಂಧಿಸಿದ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಯ ವಿವರಗಳ ಪ್ರಕಟಣೆಗೆ ಸಂಬಂಧಿಸಿದ ಚುನಾವಣಾ ಆಯೋಗದ ಪತ್ರದಲ್ಲಿ ಆಯೋಗದ ಸೀಲ್ ಬದಲು ಬಿಜೆಪಿ ಕೇರಳ ಘಟಕದ ಸೀಲ್ ಇತ್ತು.

ಈ ಪತ್ರವನ್ನು ಅನೇಕ ರಾಜಕೀಯ ಪಕ್ಷಗಳಿಗೆ ಕಳುಹಿಸಲಾಗಿತ್ತು. ಇದನ್ನು ಗಮನಿಸಿದ ಸಿಪಿಐ(ಎಂ), ಬಿಜೆಪಿ ಮತ್ತು ಚುನಾವಣಾ ಆಯೋಗದ ನಡುವೆ ‘ಒಂದೇ ರೀತಿಯ ಒಳಸಂಚು’ ಇದೆ ಎಂದು ಗಂಭೀರ ಆರೋಪ ಮಾಡಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿದ ಕೇರಳದ ಮುಖ್ಯ ಚುನಾವಣಾ ಅಧಿಕಾರಿ ಡಾ. ರತನ್ ಯು. ಖೇಲ್ಕರ್, “ಈ ಹಿಂದೆ ಬಿಜೆಪಿ ಘಟಕವು ವಿವರಣೆ ಕೇಳಲು ಬಂದಾಗ ಸಲ್ಲಿಸಿದ್ದ ಪೋಟೋಕಾಪಿ (ನಕಲು) ಪತ್ರವನ್ನು ಕಚೇರಿಯ ಸಿಬ್ಬಂದಿ ಅರಿಯದೇ ಇತರ ಪಕ್ಷಗಳಿಗೂ ವಿತರಿಸಿದ್ದಾರೆ. ಇದು ಕೇವಲ ಒಂದು ‘ಲಿಪಿಕ ದೋಷ’ (ಬರವಣಿಗೆಯ ದೋಷ/ ಸಿಬ್ಬಂದಿ ದೋಷ/ ತಾಂತ್ರಿಕ ತಪ್ಪು-clerical error)” ಎಂದು ತಿಳಿಸಿದ್ದಾರೆ.

“ಮುಖ್ಯ ಚುನಾವಣಾ ಅಧಿಕಾರಿಯ ಕಚೇರಿಯು ಈ ಲೋಪವನ್ನು ಪತ್ತೆಹಚ್ಚಿದ ಕೂಡಲೇ ಅದನ್ನು ಒಪ್ಪಿಕೊಂಡಿದೆ. ಅದರಂತೆ, ಮಾರ್ಚ್ 21ರಂದು ಉಪ ಮುಖ್ಯ ಚುನಾವಣಾ ಅಧಿಕಾರಿಯು ಆ ತಪ್ಪಾದ ಪತ್ರವನ್ನು ಹಿಂಪಡೆಯುವ ಅಧಿಕೃತ ಪತ್ರವನ್ನು ಹೊರಡಿಸಿದ್ದಾರೆ” ಎಂದು ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಸಹಾಯಕ ವಿಭಾಗೀಯ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಸಿಪಿಐ(ಎಂ)ನ ಕೇರಳ ಘಟಕವು ಸೋಮವಾರ ಮಧ್ಯಾಹ್ನ ಪತ್ರದ ವಿಷಯವನ್ನು ಮೊದಲು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿತ್ತು. ಮಾರ್ಚ್ 21ರ ಇ-ಮೇಲ್ ಒಂದರ ಸ್ಕ್ರೀನ್‌ಶಾಟ್ ಅನ್ನು ಪಕ್ಷವು ಹಂಚಿಕೊಂಡಿತ್ತು. ಅದರಲ್ಲಿ ದೇಶದ ರಾಜಕೀಯ ಪಕ್ಷಗಳಿಗೆ ಮಾರ್ಚ್ 19, 2019ರಂದು ಕಳುಹಿಸಲಾಗಿದ್ದ ಪತ್ರಕ್ಕೆ ಸಂಬಂಧಿಸಿದ ಅಫಿಡವಿಟ್ (ಪ್ರಮಾಣಪತ್ರ) ಲಗತ್ತಿಸಲಾಗಿತ್ತು.

2019ರ ಆ ಪತ್ರವು ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಗೆ ಸಂಬಂಧಿಸಿದ ನಿಯಮಗಳನ್ನು ವಿವರಿಸಿತ್ತು. ಆ ಪತ್ರದ ಮೇಲೆ ಬಿಜೆಪಿ ಕೇರಳ ಘಟಕದ ಸೀಲ್ ಇತ್ತು ಮತ್ತು ಅದರ ಮೇಲೆ ಚುನಾವಣಾ ಆಯೋಗದ ಅಧಿಕಾರಿಯ ಸಹಿ ಕೂಡ ಇತ್ತು.

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಪಕ್ಷದ ಸೀಲ್ ಇರುವುದನ್ನು ನೋಡಿ, “ಇವರು ಸರ್ಕಾರಿ ಸೀಲ್ ಮತ್ತು ಬಿಜೆಪಿ ಸೀಲ್‌ಗಳ ನಡುವೆ ವ್ಯತ್ಯಾಸವೇ ಇಲ್ಲದಂತೆ ಬೇಕಾಬಿಟ್ಟಿ ಬಳಸುತ್ತಿದ್ದಾರೆ” ಎಂದು ಸಿಪಿಐ(ಎಂ) ಟೀಕಿಸಿತ್ತು. ಚುನಾವಣಾ ಆಯೋಗ ಮತ್ತು ಬಿಜೆಪಿ ಒಂದೇ ಆಗಿಬಿಟ್ಟಿವೆಯೇ? ಇಷ್ಟು ದಿನ ತಾವು ಬೇರೆ ಬೇರೆ ಎಂದು ಮಾಡುತ್ತಿದ್ದ ನಾಟಕವನ್ನು ಈಗ ಪೂರ್ತಿಯಾಗಿ ಬಿಟ್ಟುಬಿಟ್ಟಿದ್ದಾರೆಯೇ?” ಎಂದು ವ್ಯಂಗ್ಯವಾಗಿ ಪ್ರಶ್ನಿಸಿತ್ತು.

“ಚುನಾವಣಾ ಆಯೋಗ ಮತ್ತು ಬಿಜೆಪಿ ಎರಡನ್ನೂ ಒಂದೇ ಅಧಿಕಾರ ಕೇಂದ್ರ ನಿಯಂತ್ರಿಸುತ್ತಿದೆ ಎಂಬುದು ಗುಟ್ಟಾಗಿಯೇನೂ ಉಳಿದಿಲ್ಲ. ಹಾಗಿದ್ದರೂ ಸಹ, ಕನಿಷ್ಠ ಸೌಜನ್ಯಕ್ಕಾದರೂ ಇವೆರಡಕ್ಕೂ ಪ್ರತ್ಯೇಕ ಕಚೇರಿ ಅಥವಾ ವ್ಯವಸ್ಥೆಯನ್ನು ನಿರ್ವಹಿಸಿ” ಎಂದು ವ್ಯಂಗ್ಯವಾಗಿ ಹೇಳಿತ್ತು.

ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಕೂಡ ಸಿಪಿಐ(ಎಂ) ಆರೋಪಗಳನ್ನು ಬೆಂಬಲಿಸಿದ್ದವು. ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು, ಚುನಾವಣಾ ಆಯೋಗವು ಕೊನೆಗೂ ಬಿಜೆಪಿ ಸೀಲ್ ಇರುವ ಅಧಿಕೃತ ಪತ್ರಗಳನ್ನು ಹೊರಡಿಸುವ ಧೈರ್ಯವನ್ನು ತೋರಿದೆ” ಎಂದು ವ್ಯಂಗ್ಯವಾಗಿ ಕಿಡಿಕಾರಿದ್ದರು.

ಕಾಂಗ್ರೆಸ್‌ನ ಕೇರಳ ಘಟಕವು ಚುನಾವಣಾ ಸಂಸ್ಥೆಯನ್ನು ಪ್ರಶ್ನಿಸುತ್ತಾ, “ನೀವು ಬಿಜೆಪಿಯ ಕಚೇರಿಯಿಂದಲೇ ಕಾರ್ಯನಿರ್ವಹಿಸುತ್ತಿದ್ದೀರಾ?” ಎಂದು ಕೇಳಿತ್ತು. ಅಲ್ಲದೆ, “ಚುನಾವಣಾ ಅಧಿಕಾರಿಗಳಿಗೆ ಬಿಜೆಪಿಯ ಅಧಿಕೃತ ಮುದ್ರೆಗಳು (ಸೀಲುಗಳು) ಸಿಕ್ಕಿದ್ದಾದರೂ ಹೇಗೆ?” ಎಂದು ಆಶ್ಚರ್ಯ ವ್ಯಕ್ತಪಡಿಸಿತ್ತು.

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಈ ಬಗ್ಗೆ ವ್ಯಂಗ್ಯವಾಡುತ್ತಾ, ಬಿಜೆಪಿಯ ಘೋಷಣೆಯಾದ “ಅಬ್ಕಿ ಬಾರ್, ಮೋದಿ ಸರ್ಕಾರ್” (ಈ ಬಾರಿ ಮೋದಿ ಸರ್ಕಾರ) ಎಂಬುದು ಕೂಡ ಇದೇ ರೀತಿಯ “ಲಿಪಿಕ ದೋಷ”ದ ಫಲಿತಾಂಶವೇ? ಎಂದು ಪ್ರಶ್ನಿಸಿದ್ದರು.

ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಪ್ರಕಟಿಸುವ ಕುರಿತಾದ 2019ರ ಮಾರ್ಗಸೂಚಿಗಳ ಬಗ್ಗೆ ಸ್ಪಷ್ಟನೆ ಕೋರಿ ಬಿಜೆಪಿ ಕೇರಳ ಘಟಕವು ಚುನಾವಣಾ ಆಯೋಗವನ್ನು ಸಂಪರ್ಕಿಸಿತ್ತು, ಈ ಸಂದರ್ಭದಲ್ಲಿ ಈ ತಪ್ಪು ಸಂಭವಿಸಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬಿಜೆಪಿ ಸಲ್ಲಿಸಿದ ದಾಖಲೆಯಲ್ಲಿ ಪಕ್ಷದ ಸೀಲ್ ಇರುವುದನ್ನು ಕಚೇರಿಯ ಸಿಬ್ಬಂದಿ ಗಮನಿಸದ ಕಾರಣ ಈ ಅಚಾತುರ್ಯ ಸಂಭವಿಸಿದೆ. ಸ್ಪಷ್ಟನೆ ಕೇಳಿ ಬಂದಿದ್ದ ಸಮಯದಲ್ಲಿ, ಅದೇ ದಾಖಲೆಯನ್ನು ಅಜಾಗರೂಕತೆಯಿಂದ ಇತರ ರಾಜಕೀಯ ಪಕ್ಷಗಳಿಗೂ ವಿತರಿಸಲಾಗಿದೆ ಎಂದು ಆಯೋಗ ಸಮರ್ಥಿಸಿಕೊಂಡಿದೆ.

ಆ ತಪ್ಪನ್ನು ಗಮನಿಸಿದ ತಕ್ಷಣವೇ, ಎಲ್ಲಾ ರಾಜಕೀಯ ಪಕ್ಷಗಳು, ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ರಿಟರ್ನಿಂಗ್ ಆಫೀಸರ್‌ಗಳಿಗೆ ಅಧಿಕೃತ ಪತ್ರದ ಮೂಲಕ ಈ ‘ತಪ್ಪಾದ ದಾಖಲೆ’ಯನ್ನು ಹಿಂಪಡೆಯಲಾಗಿದೆ ಮತ್ತು ಅದನ್ನು ಪರಿಗಣಿಸಬಾರದು ಎಂದು ತಿಳಿಸಲಾಗಿದೆ ಎಂದು ಆಯೋಗವು ಹೇಳಿದೆ.

ಈ ಲಿಪಿಕ ದೋಷದ ಆಧಾರದ ಮೇಲೆ ತಪ್ಪು ಮಾಹಿತಿಯನ್ನು ಹರಡದಂತೆ ಸಾರ್ವಜನಿಕರು ಮತ್ತು ಮಾಧ್ಯಮಗಳಲ್ಲಿ ವಿನಂತಿಸುತ್ತೇವೆ ಎಂದು ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಪ್ರಕ್ರಿಯೆಯು ಯಾವುದೇ ಹೊರಗಿನ ಹಸ್ತಕ್ಷೇಪ ಅಥವಾ ಪ್ರಭಾವಕ್ಕೆ ಒಳಗಾಗದಂತೆ ತಡೆಯಲು ಚುನಾವಣಾ ಆಯೋಗವು ಅತ್ಯಂತ ಕಟ್ಟುನಿಟ್ಟಾದ ಮತ್ತು ದೋಷರಹಿತ ವ್ಯವಸ್ಥೆಯನ್ನು ಹೊಂದಿದೆ ಎಂದು ಅದು ಹೇಳಿಕೊಂಡಿದೆ.




 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...