Homeಮುಖಪುಟಮೋದಿ ರೋಡ್‌ ಶೋ: ಬಿಜೆಪಿಯ ಏಕೈಕ ಮುಸ್ಲಿಂ ಅಭ್ಯರ್ಥಿಯ ನಿರ್ಲಕ್ಷ್ಯ

ಮೋದಿ ರೋಡ್‌ ಶೋ: ಬಿಜೆಪಿಯ ಏಕೈಕ ಮುಸ್ಲಿಂ ಅಭ್ಯರ್ಥಿಯ ನಿರ್ಲಕ್ಷ್ಯ

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ಕೇರಳದಲ್ಲಿ ಮಾರ್ಚ್ 19ರಂದು ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋ ನಡೆಸಿದ್ದು, ಕೇರಳದ ಏಕೈಕ ಮುಸ್ಲಿಂ ಅಭ್ಯರ್ಥಿಯನ್ನು ಕಾರ್ಯಕ್ರಮದಿಂದ ಹೊರಗಿಡಲಾಗಿದೆ. ಈ ಬಗ್ಗೆ ಬಿಜೆಪಿಯನ್ನು ಟೀಕಿಸಿದ ಸಿಪಿಐ(ಎಂ) ಬಿಜೆಪಿ ತನ್ನ ಏಕೈಕ ಮುಸ್ಲಿಂ ಅಭ್ಯರ್ಥಿಯನ್ನು ಕೂಡ ನಿರ್ಲಕ್ಷಿಸಿದೆ ಎಂದು ಟೀಕಿಸಿದೆ.

ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಯ ಪೊನ್ನಾನಿ ಕ್ಷೇತ್ರದ ಅಭ್ಯರ್ಥಿಗಳೊಂದಿಗೆ ಮೋದಿ ಪಾಲಕ್ಕಾಡ್‌ನಲ್ಲಿ ರೋಡ್‌ಶೋ ನಡೆಸಿದ್ದಾರೆ. ಆದರೆ ಬಿಜೆಪಿಯ ಮಲಪ್ಪುರಂ ಅಭ್ಯರ್ಥಿ ಅಬ್ದುಲ್ ಸಲಾಂ ಅವರನ್ನು ಕಾರ್ಯಕ್ರಮಕ್ಕೆ ಭಾಗವಹಿಸಲು ಆಹ್ವಾನಿಸಲಾಗಿಲ್ಲ ಎಂದು ಪಿಟಿಐ ವರದಿ ಮಾಡಿದೆ.

ಸಿಪಿಐ(ಎಂ) ಮುಖಂಡ ಬಾಲನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮೋದಿಯ ರೋಡ್‌ಶೋನಲ್ಲಿ ಅಬ್ದುಲ್ ಅವರನ್ನು ಉದ್ದೇಶಪೂರ್ವಕವಾಗಿ ಬದಿಗಿಟ್ಟಿದ್ದು, ಧಾರ್ಮಿಕ ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿಯ ಧೋರಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ಕ್ಯಾಲಿಕಟ್ ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿಯಾಗಿದ್ದ ಸಲಾಂ ಅವರು 2021ರ ವಿಧಾನಸಭಾ ಚುನಾವಣೆಯಲ್ಲಿ ಮಲಪ್ಪುರಂನ ತಿರೂರ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಬಾರಿ ಅವರಿಗೆ ಮಲಪ್ಪುರಂನಿಂದ ಲೋಕಸಭೆಗೆ ಬಿಜೆಪಿ ಟಿಕೆಟ್‌ ನೀಡಿದೆ. ಸಲಾಮ್ ಈ ಆರೋಪವನ್ನು ತಳ್ಳಿಹಾಕಿದ್ದು, ತಮ್ಮ ಕ್ಷೇತ್ರಕ್ಕೂ ಪಾಲಕ್ಕಾಡ್ ಜಿಲ್ಲೆಗೂ ಯಾವುದೇ ಸಂಬಂಧವಿಲ್ಲ, ಪೊನ್ನಾನಿ ಲೋಕಸಭಾ ಕ್ಷೇತ್ರವು ಪಾಲಕ್ಕಾಡ್‌ನ ತ್ರಿತಾಲ ವಿಧಾನಸಭಾ ಕ್ಷೇತ್ರವನ್ನೂ ಒಳಗೊಂಡಿರುವ ಕಾರಣ ಪೊನ್ನನಿ ಅಭ್ಯರ್ಥಿ ನಿವೇದಿತಾ ಸುಬ್ರಮಣಿಯನ್ ರೋಡ್‌ಶೋನಲ್ಲಿ ಭಾಗವಹಿಸಿದ್ದರು. ಕೆಲವು ಅಭ್ಯರ್ಥಿಗಳು ರೋಡ್‌ಶೋನಲ್ಲಿ ಭಾಗವಹಿಸಲಿದ್ದಾರೆ ಎಂದು ನನಗೆ ತಿಳಿಯಿತು.  ನನ್ನನ್ನು ರೋಡ್‌ ಶೋಗೆ ಆಹ್ವಾನಿಸಿಲ್ಲ. ನಾನು ರೋಡ್‌ಶೋನಲ್ಲಿ ಭಾಗವಹಿಸಲು ಅಲ್ಲಿಗೆ ಹೋಗಿಲ್ಲ. ನಾನು ಮೋದಿಯನ್ನು ಭೇಟಿ ಮಾಡಲು ಅಲ್ಲಿಗೆ ಹೋಗಿದ್ದೆ ಮತ್ತು ಅವರನ್ನು ಮಲಪ್ಪುರಂಗೆ ಆಹ್ವಾನಿಸಿದ್ದೇನೆ ಎಂದು ಸಲಾಂ ಹೇಳಿದ್ದಾರೆ.

ಸುಬ್ರಮಣಿಯನ್ ಅವರು ಪ್ರಧಾನಿ ರೋಡ್‌ ಶೋ ನಡೆಸುವ ತೆರೆದ ವಾಹನವನ್ನು ಹತ್ತಲು ಆಹ್ವಾನಿಸಿದ್ದರು ಆದರೆ ಪ್ರಧಾನಿಯವರ ಭದ್ರತಾ ಸಿಬ್ಬಂದಿ ಪಟ್ಟಿಯಲ್ಲಿ ಅವರ ಹೆಸರಿಲ್ಲ ಎಂದು ಹೇಳಿದ್ದಾರೆ. ಇದಲ್ಲದೆ ವಾಹನವು ಈಗಾಗಲೇ ತುಂಬಿತ್ತು. ಹಾಗಾಗಿ ಈ ವಿಷಯದ ಬಗ್ಗೆ ವಾದ ಮಾಡುವುದರಲ್ಲಿ ಅರ್ಥವಿಲ್ಲ. ಖಂಡಿತವಾಗಿ, ನಾನು ಒಪ್ಪಿಕೊಳ್ಳುತ್ತೇನೆ, ನಾನು ಮೋದಿಯವರೊಂದಿಗೆ ವಾಹನದಲ್ಲಿ ಪ್ರಯಾಣಿಸಲು ಇಷ್ಟಪಡುತ್ತಿದ್ದೆ, ಇದನ್ನು ಯಾರು ಬಯಸುವುದಿಲ್ಲ? ಆದರೆ ಇದರಲ್ಲಿ ತಾರತಮ್ಯವಿದೆ ಎಂದು ನಾನು ನಂಬುವುದಿಲ್ಲ ಎಂದು ಸಲಾಂ ಅವರು ಹೇಳಿದ್ದಾರೆ.

ಇದನ್ನು ಓದಿ: ಮುಸ್ಲಿಂ ಯುವಕರ ಮೇಲೆ ಪಾಕ್ ಪರ ಸಂಭ್ರಮಾಚರಣೆ ಆರೋಪ: ಜೈಲು, ದೌರ್ಜನ್ಯದ 6 ವರ್ಷಗಳ ಬಳಿಕ ಕೇಸ್‌ ‘ಕಟ್ಟುಕಥೆ’ ಎಂದು ತೀರ್ಪು ನೀಡಿದ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...