Homeಮುಖಪುಟಕೊಚ್ಚಿ: ಸರಣಿ ಸ್ಪೋಟ ಪ್ರಕರಣ; ಆರೋಪಿಗೆ 10 ದಿನ ಪೊಲೀಸ್ ಕಸ್ಟಡಿ

ಕೊಚ್ಚಿ: ಸರಣಿ ಸ್ಪೋಟ ಪ್ರಕರಣ; ಆರೋಪಿಗೆ 10 ದಿನ ಪೊಲೀಸ್ ಕಸ್ಟಡಿ

- Advertisement -
- Advertisement -

ಕೊಚ್ಚಿ ಕಲಮಸ್ಸೆರಿಯ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯುತ್ತಿದ್ದ ಯೆಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ನಡೆದ ಸ್ಫೋಟದ ಆರೋಪಿ ಡೊಮಿನಿಕ್ ಮಾರ್ಟಿನ್‌ಗೆ ನ್ಯಾಯಾಲಯವು  10 ದಿನಗಳ ಪೊಲೀಸ್ ಕಸ್ಟಡಿ ವಿಧಿಸಿದೆ.

ಸ್ಫೋಟದಲ್ಲಿ 4 ಜನರು ಸಾವನ್ನಪ್ಪಿ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದಾದ ಕೆಲವು ಗಂಟೆಗಳ ನಂತರ ತಾನು ಯೆಹೋವನ ಸಾಕ್ಷಿಗಳ  ಸಂಘದ ಮಾಜಿ ಸದಸ್ಯ ಎಂದು ಹೇಳಿಕೊಂಡ ಮಾರ್ಟಿನ್ ಸಿದ್ದಾಂತದ ವ್ಯತ್ಯಾಸಗಳ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಬಳಿಕ ಪೊಲೀಸರಿಗೆ ಶರಣಾಗಿದ್ದ.

ಪ್ರಧಾನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಹನಿ ಎಂ ವರ್ಗೀಸ್, ಮಾರ್ಟಿನ್‌ಗೆ ಪೊಲೀಸರ ಮನವಿಯಂತೆ 10 ದಿನಗಳ ಪೊಲೀಸ್ ಕಸ್ಟಡಿ ನೀಡಿದ್ದಾರೆ. ಮಾರ್ಟಿನ್‌ಗೆ ಇರುವ ಆದಾಯದ ಮೂಲಗಳು, ಅಂತರಾಷ್ಟ್ರೀಯ ಸಂಪರ್ಕಗಳು ಮತ್ತು ಇತರ ಸಂಬಂಧಿತ ವಿಷಯಗಳ ಬಗ್ಗೆ ತನಿಖೆ ನಡೆಸಬೇಕಾಗಿದೆ. ಹೆಚ್ಚಿನ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲು ಆರೋಪಿಯನ್ನು ಕೆಲವು ಸ್ಥಳಗಳಿಗೆ ಕರೆದೊಯ್ಯಬೇಕಿದೆ ಎಂದು ಪೊಲೀಸರು ಕೋರ್ಟ್‌ಗೆ ಮನವಿಯನ್ನು ಸಲ್ಲಿಸಿದ್ದರು.

ಮಾರ್ಟಿನ್ ಮತ್ತೊಮ್ಮೆ ಕಾನೂನು ನೆರವು ಮತ್ತು ವಕೀಲರ ಸಹಾಯವನ್ನು ಪಡೆಯಲು ನಿರಾಕರಿಸಿದ್ದು, ಅ.31 ರಂದು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇಂದು ಬೆಳಿಗ್ಗೆ ಡೊಮಿನಿಕ್‌ಗೆ ವೈದ್ಯಕೀಯ ತಪಾಸಣೆ ಮಾಡಿಸಿದ ಕೊಚ್ಚಿ ಪೊಲೀಸರು ಬಳಿಕ ಎರ್ನಾಕುಳಂ ಪ್ರಿನ್ಸಿಪಾಲ್ ಸೆಷನ್ಸ್‌ ಕೋರ್ಟ್‌ಗೆ ಹಾಜರುಪಡಿಸಿದ್ದರು.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ 61 ವರ್ಷದ ಮಹಿಳೆ ಮೊಲಿ ಜಾಯ್ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇವರು ಕಲಮಶ್ಶೇರಿಯ ನಿವಾಸಿ ಎಂದು ತಿಳಿದು ಬಂದಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅ. 29ರಂದು ಸಂಭವಿಸಿದ್ದ ಸ್ಫೋಟದಲ್ಲಿ ಮೊಲಿ ಜಾಯ್ ಅವರಿಗೆ ಶೇಕಡ 70ರಷ್ಟು ಸುಟ್ಟ ಗಾಯಗಳಾಗಿದ್ದವು. ಅವರಿಗೆ ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಅ.29ರಂದು ಸರಣಿ ಸ್ಪೋಟ ನಡೆದಾಗ ಸ್ಪೋಟದ ಸ್ಥಳದಲ್ಲೇ ಇಬ್ಬರು ಮಹಿಳೆಯರು ಮೃತಪಟ್ಟಿದ್ದರು. ಮರುದಿನ ತೀವ್ರವಾಗಿ ಗಾಯಗೊಂಡಿದ್ದ 12 ವರ್ಷ ವಯಸ್ಸಿನ ಲಿಬಿನಾ ಎಂಬ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.

ಡೊಮಿನಿಕ್ ಮಾರ್ಟಿನ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೊಚ್ಚಿ ಸ್ಪೋಟಕ್ಕೆ ಐಇಡಿ ಬಳಕೆ ಮಾಡಿರುವುದು ಪತ್ತೆಯಾಗಿತ್ತು. ಟಿಫಿನ್‌ ಬಾಕ್ಸ್‌ನಲ್ಲಿ ಸ್ಪೋಟಕ ಇಟ್ಟಿರುವುದು ತನಿಖೆಯ ವೇಳೆ ಕಂಡು ಬಂದಿತ್ತು. ಸಮಾವೇಶದ ಸ್ಥಳದಿಂದ ಸ್ಪೋಟಕ್ಕೆ ಕೆಲವೇ ನಿಮಿಷಗಳ ಮೊದಲು ಕಾರೊಂದು ವೇಗವಾಗಿ ಸ್ಥಳದಿಂದ ತೆರಳಿದ್ದು, ಈ ಕುರಿತ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಇದನ್ನು ಓದಿ: 29ನೇ ದಿನಕ್ಕೆ ಕಾಲಿಟ್ಟ ಯುದ್ಧ; ಇಸ್ರೇಲ್‌ನಿಂದ ಗಾಝಾದಲ್ಲಿ 9,770 ನಾಗರಿಕರ ಹತ್ಯೆ; ಮೃತರಲ್ಲಿ ಹೆಚ್ಚಿನವರು ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...