Homeಮುಖಪುಟಕೊಚ್ಚಿ ಸ್ಫೋಟ: ಕೇಂದ್ರ ಸಚಿವರ ‘ಕೋಮುವಾದಿ’ ಹೇಳಿಕೆಗೆ ಪಿಣರಾಯಿ ವಿಜಯನ್ ಕಿಡಿ

ಕೊಚ್ಚಿ ಸ್ಫೋಟ: ಕೇಂದ್ರ ಸಚಿವರ ‘ಕೋಮುವಾದಿ’ ಹೇಳಿಕೆಗೆ ಪಿಣರಾಯಿ ವಿಜಯನ್ ಕಿಡಿ

- Advertisement -
- Advertisement -

ಕೇರಳದ ಎರ್ನಾಕುಲಂನಲ್ಲಿರುವ ಕ್ರಿಶ್ಚಿಯನ್ ಧಾರ್ಮಿಕ ಗುಂಪಿನ ಸಮಾವೇಶ ಕೇಂದ್ರದಲ್ಲಿ ಸಂಭವಿಸಿದ ಸರಣಿ ಸ್ಫೋಟದಲ್ಲಿ ಸೋಮವಾರ ಸಾವಿನ ಸಂಖ್ಯೆ ಮೂರಕ್ಕೆ ತಲುಪಿದೆ ಎಂದು ಪಿಟಿಐ ವರದಿ ಮಾಡಿದೆ.

ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಜಮ್ರಾ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಮತ್ತು ಎಕ್ಸಿಬಿಷನ್ ಸೆಂಟರ್‌ನಲ್ಲಿ ಪ್ರಾರ್ಥನಾ ಅಧಿವೇಶನಕ್ಕಾಗಿ ರಾಜ್ಯದಾದ್ಯಂತ ಸುಮಾರು 2,500 ಯೆಹೋವನ ಸಾಕ್ಷಿಗಳು ಸೇರಿದ್ದರು ಬೆಳಿಗ್ಗೆ 9.30 ರ ಸುಮಾರಿಗೆ ಸ್ಫೋಟಗಳು ಸಂಭವಿಸಿದವು.

ಸ್ಫೋಟ ಸಂಭವಿಸಿದ ಕೆಲವೇ ಗಂಟೆಗಳ ನಂತರ 48 ವರ್ಷದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ಪೊಲೀಸರಿಗೆ ಶರಣಗಾಗಿದ್ದಾನೆ. ಈತ ಪ್ರಾರ್ಥನಾ ಸಭೆಯನ್ನು ಆಯೋಜಿಸಿದ ಅದೇ ಕ್ರಿಶ್ಚಿಯನ್ ಪಂಗಡಕ್ಕೆ ಸೇರಿದವನು ಎಂದು ಹೇಳಿಕೊಂಡಿದ್ದಾನೆ.

ಮಲಯತ್ತೂರಿನ ಲಿಬಿನಾ ಎಂದು ಗುರುತಿಸಲಾದ 12 ವರ್ಷದ ಬಾಲಕಿ ಸೋಮವಾರ ಮುಂಜಾನೆ ಕಲಮಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಆಕೆಯ ದೇಹದ 95% ರಷ್ಟು ತೀವ್ರವಾದ ಸುಟ್ಟಗಾಯಗಳಾಗಿ ದಾಖಲಾಗಿದ್ದಳು. ಈ ಹಿಂದೆ ಇಬ್ಬರು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದರು ಮತ್ತು ಸುಮಾರು 40 ಜನರು ಗಾಯಗೊಂಡಿದ್ದಾರೆ.

ಈ ಸ್ಪೋಟಕ್ಕೆ ಕಾರಣವಾದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ತನ್ನ ಫೇಸ್‌ಬುಕ್ ಲೈವ್‌ನಲ್ಲಿ ವೀಡಿಯೊ ಮೂಲಕ ಈ ಕೃತ್ಯ ಎಸಗಿದ್ದು ತಾನೇ ಎಂದು ಹೇಳಿ, ಆ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ವಿಡಿಯೋದಲ್ಲಿ, ಯೆಹೋವನ ಸಾಕ್ಷಿಗಳ ಸಭೆಯ “ಬೋಧನೆ” ಯಿಂದ ಕೋಪಗೊಂಡಿದ್ದಾಗಿ ಹೇಳಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ.

ಮಾರ್ಟಿನ್ ಹಂಚಿಕೊಂಡ ವಿಡಿಯೋದಲ್ಲಿ ಏನಿದೆ?

”ಹಲೋ, ನನ್ನ ಹೆಸರು ಮಾರ್ಟಿನ್. ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಬಾಂಬ್ ಸ್ಫೋಟ ಘಟನೆಗೆ ಬಗ್ಗೆ ನಿಮಗೆ ಸುದ್ದಿ ಸಿಕ್ಕಿರಬಹುದು. ಅಲ್ಲಿ ಏನು ನಡೆದಿದೆ ಎಂಬ ಬಗ್ಗೆ ನನಗೆ ಖಚಿತವಾಗಿ ತಿಳಿದಿಲ್ಲ. ಘಟನೆ ನಡೆದಿದೆ, ಏನಾದರೂ ಸಂಭವಿಸಿದೆ ಎಂಬುದು ಖಚಿತ . ಆ ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾನೆ.

”ಯಹೋವನ ಸಾಕ್ಷಿಗಳ ಗುಂಪಿನಲ್ಲಿ ನಾನು ಕಳೆದ 16 ವರ್ಷಗಳಿಂದ ಗುರುತಿಸಿಕೊಂಡಿದ್ದೆ. ಆದರೆ ಕಳೆದ ಆರು ವರ್ಷಗಳ ಹಿಂದೆ  ಈ ಪಂಗಡವು ತಪ್ಪಾದ ಪಂಗಡವೆಂದು ನನಗೆ ಅರಿವಾಯಿತು. ನೀವು ಬೋಧಿಸುತ್ತಿರುವ ವಿಚಾರಗಳು ತಪ್ಪು ಎಂದು ಸಂಬಂಧಪಟ್ಟವರಲ್ಲಿ ತಿಳಿಸಿದೆ. ಆದರೆ ಅವರು ಅದಕ್ಕೆ ಮನ್ನಣೆ ನೀಡಲಿಲ್ಲ. ಇವರು ಈ ದೇಶದಲ್ಲಿದ್ದುಕೊಂಡು ಈ ದೇಶದ ಜನರೊಂದಿಗೆ ಬೆರೆಯಬಾರದು, ಅವರು ವೇಶ್ಯೆಯಂತೆ, ಅವರೊಂದಿಗೆ ವ್ಯವಹರಿಸಬಾರದು ಎಂದು ಬೋಧಿಸುತ್ತಾರೆ” ಎಂದು ಆರೋಪಿಸಿದ್ದಾನೆ.

”4 ವರ್ಷದ ಮಗುವಿಗೂ ಇವರು ನಿನ್ನ ಸ್ನೇಹಿತ ನೀಡಿದ ಚಾಕೊಲೇಟ್ ತಿನ್ನಬಾರದೆಂದು ಕಲಿಸಿಕೊಡುತ್ತಾರೆ. ಇದು ಯಾವ ರೀತಿಯ ಬೋಧನೆ. ಆ ಮಗುವಿನ ಮನಸ್ಥಿತಿ ಹೇಗಿರಬೇಡ. ನಾಲ್ಕು ವರ್ಷದಿಂದಲೇ ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಸರ್ಕಾರಿ ಸೇವೆಗೆ ಸೇರಬಾರದು, ದೇಶ ಭಕ್ತಿ ಗೀತೆ ಹಾಡಬಾರದು, ಸೇನೆಗೆ ಸೇರಬಾರದು, ಮತದಾನ ಮಾಡಬಾರದು ಎಂದು ಕಲಿಸಿಕೊಡುತ್ತಾರೆ. ಇಂತಹ ಬೋಧನೆ ಮಾಡುವವರಿಗೆ ಇನ್ನು ಏನು ಮಾಡಬೇಕು. ಭೂಮಿಯಲ್ಲಿ ಎಲ್ಲರೂ ನಾಶವಾಗುತ್ತಾರೆ, ಯಹೋವನ ಸಾಕ್ಷಿಗಳ ಗುಂಪು ಮಾತ್ರ ಬದುಕುಳಿಯುತ್ತಾರೆ ಎಂದು ಬೋಧಿಸುತ್ತಾರೆ. ಇವರು ಜನರ ನಾಶವನ್ನು ಬಯಸುತ್ತಾರೆ. ಇವರನ್ನು ಇನ್ನು ಏನು ಮಾಡಬೇಕು? ಈ ಪಂಗಡವು ತಪ್ಪು ಪಂಗಡ. ಹಾಗಾಗಿ, ಬಹಳ ಯೋಚಿಸಿ ಬಾಂಬ್ ಇಡುವ ತೀರ್ಮಾನ ಮಾಡಿದೆ” ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

”ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ. ಪೊಲೀಸರಿಗೆ ಶರಣಾಗುತ್ತೇನೆ. ಬಾಂಬ್ ತಯಾರಿಸುವ ವಿಡಿಯೋವನ್ನು ಯಾರೂ ಕೂಡ ಜನರಿಗೆ ತೋರಿಸಬಾರದು. ಜನಸಾಮಾನ್ಯನಿಗೆ ಬಾಂಬ್ ತಯಾರಿಸುವ ಅರಿವು ಬಂದುಬಿಟ್ಟರೆ ದೊಡ್ಡ ಅಪಾಯವಾಗಬಹುದು” ಎಂದು ಬಾಂಬ್ ಸ್ಫೋಟ ನಡೆಸಿರುವ ಹೊಣೆ ಹೊತ್ತುಕೊಂಡಿರುವ ಡೊಮಿನಿಕ್ ಮಾರ್ಟಿನ್ ಹೇಳಿಕೊಂಡಿದ್ದಾನೆ.

ಘಟನೆಗೆ “ಕೋಮುವಾದಿ” ಬಣ್ಣ ಬಳಿಯಲು ಯತ್ನಿಸಿದ ಬಿಜೆಪಿ ನಾಯಕ

ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ಸ್ಫೋಟಗಳ ಕುರಿತು ಎಕ್ಸಾನಲ್ಲಿ ಪೋಸ್ಟ್‌ ಮಾಡಿ “ಕೋಮುವಾದಿ” ಹೇಳಿಕೆಗಳನ್ನು ನೀಡಿದ್ದಾರೆ.

”ದಿಲ್ಲಿಯಲ್ಲಿ ಕುಳಿತು ಇಸ್ರೇಲ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವಾಗ, ಕೇರಳದಲ್ಲಿ ಭಯೋತ್ಪಾದನೆ, ಹಮಾಸ್‌ನಿಂದ ಜಿಹಾದ್‌ಗಾಗಿ ಮುಕ್ತ ಕರೆಗಳು, ಅಮಾಯಕ ಕ್ರಿಶ್ಚಿಯನ್ನರ ಮೇಲೆ ದಾಳಿ ಮತ್ತು ಬಾಂಬ್ ಸ್ಫೋಟಗಳು ನಡೆಯುತ್ತಿವೆ” ಎಂದು ಅವರು ಹೇಳಿದರು.

ಗಾಜಾದ ಮೇಲಿನ ಇಸ್ರೇಲ್‌ನ ಯುದ್ಧವನ್ನು ತಕ್ಷಣವೇ ಅಂತ್ಯಗೊಳಿಸಲು ಕೋರಿ ಭಾನುವಾರ ನವದೆಹಲಿಯಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನೇತೃತ್ವದ ರ್ಯಾಲಿಯನ್ನು ಚಂದ್ರಶೇಖರ್ ಉಲ್ಲೇಖಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ”ಅವರು ಸಚಿವರಾಗಿದ್ದಾರೆ ಮತ್ತು ಅವರು ತನಿಖಾ ಸಂಸ್ಥೆಗಳಿಗೆ ಕನಿಷ್ಠ ಮಟ್ಟದ ಗೌರವವನ್ನು ತೋರಿಸಬೇಕು” ಎಂದು ವಿಜಯನ್ ಸುದ್ದಿಗಾರರಿಗೆ ತಿಳಿಸಿದರು.

”ತನಿಖೆ ನಡೆಯುತ್ತಿದೆ… ಇಂತಹ ಗಂಭೀರ ಘಟನೆಯಲ್ಲಿ, ಇಂತಹ ಆರಂಭಿಕ ಹಂತದಲ್ಲಿ, ಅವರು ಕೆಲವು ಸೆಟ್ ಜನರನ್ನು ಗುರಿಯಾಗಿಸಿಕೊಂಡು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಅವರ ಕೋಮುವಾದಿ ಅಜೆಂಡಾವನ್ನು ಆಧರಿಸಿದೆ, ಆದರೆ ಕೇರಳವು ಅಂತಹ ಕಾರ್ಯಸೂಚಿಯನ್ನು ಹೊಂದಿಲ್ಲ” ಎಂದು ತಿರುಗೇಟು ನೀಡಿದ್ದಾರೆ.

ಅಕ್ಟೋಬರ್ 27 ರಂದು, ಜಮಾತ್-ಎ-ಇಸ್ಲಾಮಿಯ ಯುವ ಘಟಕದ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನಿಂದ ಮತ್ತೊಂದು ರ್ಯಾಲಿಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಹಮಾಸ್ ಮುಖ್ಯಸ್ಥ ಖಲೀದ್ ಮಶಾಲ್ ಮಾತನಾಡಿದರು.

ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಶಾಲ್, ”ಇಸ್ಲಾಂ ಧರ್ಮದ ಮೂರು ಪವಿತ್ರ ಸ್ಥಳಗಳಲ್ಲಿ ಒಂದಾದ ಜೆರುಸಲೆಮ್‌ನಲ್ಲಿರುವ ಅಲ್-ಅಕ್ಸಾ ಮಸೀದಿಯನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿರುವ ಪ್ಯಾಲೇಸ್ಟಿನಿಯನ್ ಹೋರಾಟಗಾರರನ್ನು ಪ್ರಪಂಚದಾದ್ಯಂತದ ಜನರು ಬೆಂಬಲಿಸಬೇಕು” ಎಂದು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

”ಇಸ್ರೇಲ್ ನಮ್ಮ ನಿವಾಸಿಗಳ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ” ಎಂದು ಮಾಜಿ ಹಮಾಸ್ ಮುಖ್ಯಸ್ಥರು ಹೇಳಿದರು.

”ಮನೆಗಳನ್ನು ಕೆಡವಲಾಗುತ್ತಿದೆ. ಅವರು ಗಾಜಾದ ಅರ್ಧಕ್ಕಿಂತ ಹೆಚ್ಚು ಭಾಗವನ್ನು ನಾಶಪಡಿಸಿದ್ದಾರೆ. ಚರ್ಚುಗಳು, ದೇವಾಲಯಗಳು, ವಿಶ್ವವಿದ್ಯಾನಿಲಯಗಳು ಮತ್ತು UN ಸಂಸ್ಥೆಗಳನ್ನು ಸಹ ನಾಶಪಡಿಸುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಕೊಚ್ಚಿ ಸ್ಪೋಟಕ್ಕೆ ಮುಸ್ಲಿಂ ನಂಟು ಸೃಷ್ಟಿಸಿದ ಬಿಜೆಪಿ ನಾಯಕ ಭಾಸ್ಕರ್ ರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...