Homeಮುಖಪುಟಕೇರಳದಲ್ಲಿ ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

ಕೇರಳದಲ್ಲಿ ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

- Advertisement -
- Advertisement -

ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ)ಯೊಬ್ಬರು ಭಾನುವಾರ (ನವೆಂಬರ್ 16) ಮೃತಪಟ್ಟಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ತವ್ಯಗಳಿಗೆ ಸಂಬಂಧಿಸಿದ ಮಾನಸಿಕ ಒತ್ತಡದಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಶಾಲಾ ಶಿಕ್ಷಕ ಅನೀಶ್ ಜಾರ್ಜ್ (44) ಸಾವಿಗೀಡಾದ ವ್ಯಕ್ತಿ. ಇವರ ಮೃತದೇಹ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಮತ್ತು ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯ ಸಿದ್ಧತೆಗಳಿಗೆ ಸಂಬಂಧಿಸಿದ ಕರ್ತವ್ಯಗಳಿಂದ ಜಾರ್ಜ್ ಹೆಚ್ಚಿನ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ಎಫ್‌ಐಆರ್ ಹೇಳಿದೆ.

ಎಸ್‌ಐಆರ್ ಟಾರ್ಗೆಟ್ ರೀಚ್ ಮಾಡಲು ಜಾರ್ಜ್ ತಡರಾತ್ರಿಯವರೆಗೆ ಕೆಲಸ ಮಾಡುತ್ತಿದ್ದರು ಎಂದು ಮೃತ ಜಾರ್ಜ್ ಅವರ ಕುಟುಂಬಸ್ಥರು ಮತ್ತು ಅವರ ಊರಿನವರು ಹೇಳಿದ್ದಾರೆ. ಎಸ್‌ಐಆರ್‌ಗೆ ಸಂಬಂಧಿತ ಫಾರ್ಮ್‌ಗಳನ್ನು ಪೂರ್ಣಗೊಳಿಸಲು ಮತ್ತು ಅವುಗಳನ್ನು ತನ್ನ ಗೊತ್ತುಪಡಿಸಿದ ಪ್ರದೇಶದಾದ್ಯಂತ ವಿತರಿಸುವ ಅಪಾರ ಒತ್ತಡದಲ್ಲಿದ್ದ ಜಾರ್ಜ್, ಭಾನುವಾರ ಬೆಳಗಿನ ಜಾವ 2 ಗಂಟೆಯವರೆಗೆ ಕೆಲಸ ಮಾಡಿದ್ದರು ಎಂದು ಜಾರ್ಜ್ ಅವರು ಕುಟುಂಬದ ಪರಿಚಯಸ್ಥ ಶ್ಯಾಮ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿದ್ದಾರೆ.

ಜಾರ್ಜ್ ಅವರ ಆತ್ಮಹತ್ಯೆ ಸರ್ಕಾರಿ ನೌಕರರಲ್ಲಿ ಆಕ್ರೋಶದ ಅಲೆಯನ್ನು ಹುಟ್ಟುಹಾಕಿದ್ದು, ಮೂರು ಪ್ರಮುಖ ಸಂಘಟನೆಗಳಾದ ರಾಜ್ಯ ಸರ್ಕಾರಿ ನೌಕರರು ಮತ್ತು ಶಿಕ್ಷಕರ ಕ್ರಿಯಾ ಮಂಡಳಿ, ಶಿಕ್ಷಕರ ಸೇವಾ ಸಂಸ್ಥೆಗಳ ಜಂಟಿ ಸಮಿತಿ ಮತ್ತು ಕೇರಳ ಎನ್‌ಜಿಒ ಸಂಘ ನವೆಂಬರ್ 17, ಸೋಮವಾರದಂದು ರಾಜ್ಯಾದ್ಯಂತ ಬಿಎಲ್‌ಒ ಕರ್ತವ್ಯಗಳನ್ನು ಬಹಿಷ್ಕರಿಸುವುದಾಗಿ ಘೋಷಿಸಿವೆ. ತಿರುವನಂತಪುರಂನಲ್ಲಿರುವ ಮುಖ್ಯ ಚುನಾವಣಾ ಅಧಿಕಾರಿ ಕಚೇರಿ ಮತ್ತು ಎಲ್ಲಾ ಜಿಲ್ಲೆಗಳ ಕಲೆಕ್ಟರೇಟ್‌ಗಳಲ್ಲಿ ಜಂಟಿ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಹೇಳಿವೆ.

ಎಸ್‌ಐಆರ್ ಪ್ರಕ್ರಿಯೆಯನ್ನು ಮುಂದೂಡಲು ಪದೇ ಪದೇ ಮಾಡಿದ ಮನವಿಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ಸಂಘಟನೆಗಳು ತಮ್ಮ ಹೇಳಿಕೆಯಲ್ಲಿ ಚುನಾವಣಾ ಆಯೋಗವನ್ನು (ಇಸಿ) ದೂಷಿಸಿವೆ. 23 ವರ್ಷಗಳ ಹಿಂದೆ ಪ್ರಕಟಿಸಲಾದ ಮತದಾರರ ಪಟ್ಟಿಯನ್ನು ನವೀಕರಿಸಲು ಅತ್ಯಂತ ಕಡಿಮೆ ಅವಧಿಯಲ್ಲಿ ಅವಾಸ್ತವಿಕ ಗುರಿಗಳೊಂದಿಗೆ ಬಿಎಲ್‌ಒಗಳನ್ನು ‘ಹಗಲಿರುಳು’ ಕೆಲಸ ಮಾಡುವಂತೆ ಒತ್ತಾಯಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸದಿದ್ದರೆ ತೀವ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಜಾರ್ಜ್ ಅವರ ಸಾವು ರಾಜಕೀಯ ಚರ್ಚೆಯನ್ನೂ ತೀವ್ರಗೊಳಿಸಿದೆ. ಎಸ್‌ಐಆರ್ ಅವಧಿಯಲ್ಲಿ ಬಿಎಲ್‌ಒಗಳ ಮೇಲೆ ಅತಿಯಾದ ಕೆಲಸದ ಒತ್ತಡವನ್ನು ಹೇರಲಾಗುತ್ತಿದೆ ಎಂದು ನಮ್ಮ ಪಕ್ಷವು ಈಗಾಗಲೇ ಹೇಳಿದೆ ಎಂದು ಸಿಪಿಐ(ಎಂ) ನಾಯಕ ಎಂ. ವಿ ಜಯರಾಜನ್ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಿಜಿಲ್ ಮಾಕ್ಕುಟ್ಟಿ, ‘ಬಿಜೆಪಿ ಕಾರ್ಯಸೂಚಿಯನ್ನು ಪೂರೈಸಲು’ ಚುನಾವಣೆಗೆ ಮುಂಚಿತವಾಗಿ ಎಸ್‌ಐಆರ್ ಅನ್ನು ಜಾರಿಗೆ ತಂದಿರುವ ಚುನಾವಣಾ ಆಯೋಗದ ಒತ್ತಡಕ್ಕೆ ಜಾರ್ಜ್ ಬಲಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇಬ್ಬರೂ ನಾಯಕರು ಆತ್ಮಹತ್ಯೆಯನ್ನು ‘ತೀವ್ರ ದುರದೃಷ್ಟಕರ’ ಎಂದು ಹೇಳಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಯವರೆಗೆ ಚುನಾವಣಾ ಆಯೋಗ ಎಸ್‌ಐಆರ್ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಾರ್ಜ್ ಅವರ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಆಗ್ರಹಿಸಿದ್ದಾರೆ. ಚುನಾವಣಾ ಆಯೋಗ ಮತ್ತು ರಾಜ್ಯ ಸರ್ಕಾರ ಸರಿಯಾದ ತನಿಖೆ ನಡೆಸಿ ಸ್ಪಷ್ಟ ವಿವರಣೆಯನ್ನು ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಎಸ್‌ಐಆರ್‌ ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವಾಗಿದೆ. ಈಗ ನಡೆಯುತ್ತಿರುವ ಪ್ರಕ್ರಿಯೆಯು ವಿಧಾನಸಭಾ ಚುನಾವಣೆಯ ಸಿದ್ಧತೆಗಳಿಗಿಂತ ಹೆಚ್ಚು ತೀವ್ರವಾಗಿದೆ ಎಂದು ಅವರು ಹೇಳಿದ್ದಾರೆ.

ಜಾರ್ಜ್ ಅವರ ಸಾವಿನ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ ಮತ್ತು ಕಣ್ಣೂರು ಜಿಲ್ಲಾ ಕಲೆಕ್ಟರ್ ಅವರಿಂದ ವಿವರವಾದ ವರದಿಯನ್ನು ಕೇಳಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ರಥನ್ ಯು ಕೇಳ್ಕರ್ ಹೇಳಿದ್ದಾರೆ. ಬಿಎಲ್ಒಗಳು ‘ಸಾಮೂಹಿಕ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ’ ಮತ್ತು ಕೆಲಸದ ಒತ್ತಡದ ಬಗ್ಗೆ ಯಾವುದೇ ಔಪಚಾರಿಕ ದೂರುಗಳು ಬಂದಿಲ್ಲ ಎಂದು ಕೇಳ್ಕರ್ ಸಮರ್ಥಿಸಿಕೊಂಡಿದ್ದಾರೆ. ಬಿಎಲ್ಒಗಳು 31 ದಿನಗಳವರೆಗೆ ಎಸ್ಐಆರ್ ಕರ್ತವ್ಯಗಳ ಮೇಲೆ ಮಾತ್ರ ಗಮನಹರಿಸಬೇಕಾಗುತ್ತದೆ. ಹೀಗಿರುವಾಗ ಸಾಮಾನ್ಯವಾಗಿ ಹೆಚ್ಚುವರಿ ಕೆಲಸದ ಹೊರೆ ಬೀಳುವ ಸಾಧ್ಯತೆಯಿಲ್ಲ ಎಂದಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಕೇರಳ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ನಾಯಕನಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...