Homeಮುಖಪುಟಕೇರಳ:NCERT ತೆಗೆದು ಹಾಕಿದ್ದ ಗಾಂಧಿ ಹತ್ಯೆ, ಗುಜರಾತ್ ಗಲಭೆ ಕುರಿತ ಕಲಿಕೆಗೆ ಪೂರಕ ಪಠ್ಯ ವಿತರಣೆ

ಕೇರಳ:NCERT ತೆಗೆದು ಹಾಕಿದ್ದ ಗಾಂಧಿ ಹತ್ಯೆ, ಗುಜರಾತ್ ಗಲಭೆ ಕುರಿತ ಕಲಿಕೆಗೆ ಪೂರಕ ಪಠ್ಯ ವಿತರಣೆ

- Advertisement -
- Advertisement -

ಎನ್‌ಸಿಇಆರ್‌ಟಿ(NCERT) ತೆಗೆದು ಹಾಕಿದ್ದ ಗಾಂಧಿ ಹತ್ಯೆ, ಗುಜರಾತ್ ಗಲಭೆ ಕುರಿತು ಕಲಿಕೆಗೆ  ಕೇರಳ ಶಿಕ್ಷಣ ಇಲಾಖೆಯು 11 ಮತ್ತು 12ನೇ ತರಗತಿಗಳಿಗೆ ಪೂರಕ ಪಠ್ಯಪುಸ್ತಕಗಳನ್ನು ವಿತರಿಸುತ್ತದೆ. ಇದರಲ್ಲಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ತನ್ನ ಈ ಹಿಂದೆ ತೆಗೆದುಹಾಕಿದ್ದ ಪಠ್ಯದ ಭಾಗಗಳನ್ನು ಸೇರಿಸಲಾಗಿದೆ.

ಮುಂದಿನ ತಿಂಗಳು ಪೂರಕ ಪಠ್ಯಪುಸ್ತಕಗಳು ಲಭ್ಯವಾಗಲಿವೆ ಎಂದು ಕೇರಳ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಶನಿವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.ಪೂರಕ ಪಠ್ಯಪುಸ್ತಕಗಳಲ್ಲಿ ಎನ್‌ಸಿಇಆರ್‌ಟಿ ಇತಿಹಾಸ ಪಠ್ಯಪುಸ್ತಕಗಳಿಂದ ಅಳಿಸಲಾದ ಮಹಾತ್ಮ ಗಾಂಧಿಯವರ ಹತ್ಯೆ ಮತ್ತು ಗುಜರಾತ್ ಗಲಭೆ ಕುರಿತ  ಭಾಗಗಳನ್ನು ಒಳಗೊಂಡಿರುತ್ತವೆ ಎಂದು ಅವರು ಹೇಳಿದರು.

ಈ ಹಿಂದೆ, ಕೇರಳ ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (SCERT) 11 ಮತ್ತು 12 ನೇ ತರಗತಿಗಳ ಪಠ್ಯಪುಸ್ತಕಗಳಿಂದ NCERT ಅಳಿಸಿದ ಭಾಗಗಳನ್ನು ಕಲಿಸಲು ನಿರ್ಧರಿಸಿತ್ತು.ಇದೀಗ  ಪೂರಕ ಪಠ್ಯಪುಸ್ತಕಗಳನ್ನು ಹೊರತರುವ ನಿರ್ಧಾರವನ್ನು SCERT ಪಠ್ಯಕ್ರಮ ಸಮಿತಿಯು ತೆಗೆದುಕೊಂಡಿದೆ.

ಪಠ್ಯಪುಸ್ತಕಗಳಿಂದ ಕೆಲವು ಭಾಗಗಳನ್ನು ತೆಗೆದುಹಾಕುವ NCERT ನಿರ್ಧಾರವನ್ನು ಕೇರಳದ CPI(M) ಸರ್ಕಾರ ತೀವ್ರವಾಗಿ ವಿರೋಧಿಸಿತ್ತು.

ಕೇರಳದಲ್ಲಿ 11 ಮತ್ತು 12 ನೇ ತರಗತಿಗಳಿಗೆ ಮಾತ್ರ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳು ಅವಲಂಬಿಸಿದೆ. ಎನ್‌ಸಿಇಆರ್‌ಟಿ ಮಾಡಿದ ಬದಲಾವಣೆಗಳು 6 ರಿಂದ 10 ನೇ ತರಗತಿಯ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುವುದಿಲ್ಲ.

ಈ ಕುರಿತು ‘ನಾನು ಗೌರಿ’ ಮಾದ್ಯಮದ ಜೊತೆ  ಮಾತನಾಡಿದ ಶಿಕ್ಷಣ ತಜ್ಞರಾದ ನಿರಂಜನಾರಾಧ್ಯ, ಈ ಕುರಿತು ರಾಜ್ಯಗಳಿಗೆ  ಪೂರ್ಣವಾದ ಸ್ವಾತಂತ್ರ್ಯ ಇದೆ. ಕರ್ನಾಟಕದಲ್ಲಿ ಪಠ್ಯ  ಪರಿಷ್ಕರಣೆ ಮಾಡುತ್ತೇವೆ ಎಂದಿದ್ದನ್ನೇ ಈವರೆಗೆ ಪೂರ್ಣ ಮಾಡಿಲ್ಲ.ಕೇಂದ್ರ ಸರಕಾರ ಪ್ರೇಮ್ ವರ್ಕ್ ಕೊಡುತ್ತದೆ. ಅದನ್ನು ಅಳವಡಿಸುವುದು ಆಯಾ  ರಾಜ್ಯ ಸರಕಾರಕ್ಕೆ ಸಂಪೂರ್ಣ ಅಧಿಕಾರ ಇದೆ.ಕೇರಳದಂತೆ ಕರ್ನಾಟಕದಲ್ಲೂ ಇದೇ ರೀತಿ ಮಾಡಬಹುದು. ಪಠ್ಯ  ಪುಸ್ತಕ ಪರಿಶೀಲನೆಗೆ ನೇಮಿತ ಸಮಿತಿಯವರು ಈ ಕುರಿತು ಪರಿಶೀಲನೆ ಮಾಡಿ ಮಾಡಬೇಕಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...