Homeಮುಖಪುಟಕೇರಳ ಬಜೆಟ್‌: ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ 10 ಕೋಟಿ ರೂ. ಮೀಸಲಿಟ್ಟ ಸರ್ಕಾರ

ಕೇರಳ ಬಜೆಟ್‌: ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ 10 ಕೋಟಿ ರೂ. ಮೀಸಲಿಟ್ಟ ಸರ್ಕಾರ

- Advertisement -
- Advertisement -

ಉಕ್ರೇನ್-ರಷ್ಯಾ ಬಿಕ್ಕಟ್ಟು ಮುಂದುವರೆಯುತ್ತಿದ್ದಂತೆ ದೇಶದ ಸಾವಿರಾರು ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದಾರೆ. ಈ ಹಿನ್ನಲೆಯಲ್ಲಿ ಉಕ್ರೇನ್‌ನಿಂದ ಮರಳಿದ ಕೇರಳದ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಬಜೆಟ್‌ನಲ್ಲಿ 10 ಕೋಟಿ ರೂ. ಅನುದಾನವನ್ನು ಮೀಸಲಿಡುವುದಾಗಿ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್‌ ಸರ್ಕಾರ ಘೋಷಿಸಿದೆ.

ಶುಕ್ರವಾರ ವಿಧಾನಸಭೆಯಲ್ಲಿ 2022-23 ರ ಹಣಕಾಸು ವರ್ಷದ ಬಜೆಟ್ ಅನ್ನು ಮಂಡಿಸಿದ ಕೇರಳದ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್‌ ಅವರು, “ಅನಿವಾಸಿ ಕೇರಳೀಯರ ವ್ಯವಹಾರಗಳ ಇಲಾಖೆಯು (NORKA) ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನವನ್ನು ಮುಂದುವರಿಸಲು ಮತ್ತು ಪ್ರಮಾಣಪತ್ರಗಳನ್ನು ಮರುಪಡೆಯಲು ಸಹಾಯ ಮಾಡಲು ವಿಶೇಷ ವಿಭಾಗವೊಂದನ್ನು ತೆರೆಯುತ್ತದೆ” ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಸಾಂಕ್ರಾಮಿಕದಿಂದಾಗಿ ಉಂಟಾದ ಆರ್ಥಿಕ ಹಿನ್ನಡೆಯ ಹಿನ್ನಲೆಯಲ್ಲಿ ಆರ್ಥಿಕ ಬೆಳವಣಿಗೆಯನ್ನು ಪ್ರಚೋದಿಸಲು ಮತ್ತು ಉದ್ಯೋಗವನ್ನು ಸೃಷ್ಟಿಸಲು ಬೇಕಾಗಿ ಈ ವರ್ಷದ ಬಜೆಟ್‌‌ ಪರಿಹಾರಗಳನ್ನು ನೀಡುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ:ಯುಪಿ ಕೇರಳವಾದರೆ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಜೀವನಮಟ್ಟ ಸಿಗಲಿದೆ: ಆದಿತ್ಯನಾಥ್‌ಗೆ ಪಿಣರಾಯಿ ತಿರುಗೇಟು 

ವರದಿಗಳ ಪ್ರಕಾರ, ಹಣದುಬ್ಬರವನ್ನು ಎದುರಿಸಲು ಮತ್ತು ರಾಜ್ಯದಲ್ಲಿ ಆಹಾರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಹಣಕಾಸು ಸಚಿವರು 2,000 ಕೋಟಿ ರೂಪಾಯಿಗಳ ಪ್ಯಾಕೇಜ್ ಘೋಷಿಸಿದ್ದಾರೆ.

ಶಿಕ್ಷಣ ಕ್ಷೇತ್ರಕ್ಕೆ 2,546 ಕೋಟಿ ರೂ.ಗಳನ್ನು ಮೀಸಲಿಡುವುದಾಗಿ ಹಣಕಾಸು ಸಚಿವರು ಹೇಳಿದ್ದು, ಶಾಲೆಗಳಲ್ಲಿ ಮಧ್ಯಾಹ್ನದ ಊಟಕ್ಕೆ 346 ಕೋಟಿ ರೂ., ವಿಶೇಷಚೇತನ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ 15 ಕೋಟಿ ರೂ. ಮೀಸಲಿಡುವುದಾಗಿ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಐಟಿ ಕ್ಷೇತ್ರವನ್ನು ಉತ್ತೇಜಿಸಲು ವಿವಿಧ ಪ್ಯಾಕೇಜ್‌ಗಳನ್ನು ಘೋಷಿಸಲಾಗಿದೆ. ಗೃಹಿಣಿಯರಿಗೆ ಉದ್ಯೋಗಾವಕಾಶಗಳನ್ನು ಖಾತ್ರಿಪಡಿಸುವ ‘ವರ್ಕ್ ನಿಯರ್ ಹೋಮ್’ ಯೋಜನೆಗೆ 50 ಕೋಟಿ ರೂ. ಮೀಸಲಿಡಲಾಗಿದೆ. ಈ ಯೋಜನೆಯು ವಿದ್ಯಾವಂತ ಮಹಿಳೆಯರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಕೇರಳ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್‌ಮೆಂಟ್ ಫಂಡ್ ಬೋರ್ಡ್ (KIIFB) ಮೂಲಕ 1000 ಕೋಟಿ ರೂಪಾಯಿ ವೆಚ್ಚದಲ್ಲಿ ನಾಲ್ಕು ಐಟಿ-ಕಾರಿಡಾರ್‌ಗಳನ್ನು ಸ್ಥಾಪಿಸಲಾಗುವುದು ಎಂದು ಸರ್ಕಾರ ಹೇಳಿದೆ. 5ಜಿ ಕ್ರಾಂತಿಯಲ್ಲಿ ರಾಜ್ಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಹಣಕಾಸು ಸಚಿವರು ಈ ಪ್ಯಾಕೇಜ್‌ಗಳನ್ನು ಘೋಷಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...