Homeಮುಖಪುಟಕೊರೊನ ವಿರುದ್ಧ ಹೋರಾಡಲು 20 ಸಾವಿರ ಕೋಟಿ ಪ್ಯಾಕೇಜ್‌ ಘೋಷಿಸಿದ ಕೇರಳ ಸಿಎಂ ವಿಜಯನ್‌

ಕೊರೊನ ವಿರುದ್ಧ ಹೋರಾಡಲು 20 ಸಾವಿರ ಕೋಟಿ ಪ್ಯಾಕೇಜ್‌ ಘೋಷಿಸಿದ ಕೇರಳ ಸಿಎಂ ವಿಜಯನ್‌

- Advertisement -
- Advertisement -

ದಿನೇ ದಿನೇ ಉಲ್ಬಣಗೊಳ್ಳುತ್ತಿರುವ ಕೊರೊನ ವೈರಸ್‌ ವಿರುದ್ಧ ಹೋರಾಡಲು ಕೇರಳ ಸರ್ಕಾರ ಪಣತೊಟ್ಟಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರವರು ತಕ್ಷಣವೇ 20 ಸಾವಿರ ಕೋಟಿ ಪ್ಯಾಕೇಜ್‌ ಘೋಷಿಸಿದ್ದಾರೆ.

ಕೇರಳದಲ್ಲಿ ಸುಮಾರು 25 ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಎದುರಾಗಬಹುದಾದ ಬಿಕ್ಕಟ್ಟನ್ನು  ತಗ್ಗಿಸಲು 20000 ಕೋಟಿ ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದೆ ಎಂದು ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಕಟಿಸಿದ್ದಾರೆ.

2018 ರಲ್ಲಿ ಎದುರಾದ ಭೀಕರ ಪ್ರವಾಹ ಮತ್ತು 2019 ರಲ್ಲಿ ಅದರ ವಿನಾಶಕಾರಿ ಪುನರಾವರ್ತನೆಯ ನಂತರ ಘೋಷಿಸಲಾದ ಪರಿಹಾರ ಪ್ಯಾಕೇಜ್‌ಗಿಂತ ಈ ಕೊರೊನಾ ಹಣಕಾಸಿನ ಪ್ಯಾಕೇಜ್ ದೊಡ್ಡದಾಗಿದೆ. ಏಕೆಂದರೆ ಕೊರೊನ ವೈರಸ್ ಪರಿಣಾಮವು ವ್ಯಾಪಕವಾಗಲಿದೆ ಎಂದು ವಿಜಯನ್ ಹೇಳಿದ್ದಾರೆ.

ಇದರಲ್ಲಿ 2000 ಕೋಟಿಯನ್ನು ಉದ್ಯೋಗ ಖಾತರಿ ಕಾರ್ಯಕ್ರಮದಡಿ ಹೆಚ್ಚಿನ ಗ್ರಾಮೀಣ ಉದ್ಯೋಗಗಳಿಗೆ ಬಳಸಲಾಗುವುದು ಮತ್ತು ಇನ್ನೊಂದು 100 ಕೋಟಿಯನ್ನು ಈ ತಿಂಗಳವರೆಗೆ ಉಚಿತ ಪಡಿತರಕ್ಕಾಗಿ ಬಳಸಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

ಪರಿಸ್ಥಿತಿ ಹದಗೆಡುವ ಸಾಧ್ಯತೆಯಿದೆ. ಆದ್ದರಿಂದ ನಾವು ಅತ್ಯಂತ ಕೆಟ್ಟ ಪರಿಸ್ಥಿತಿಗೆ ಯೋಜಿಸುತ್ತಿದ್ದೇವೆ “ಎಂದು ಸಿಎಂ ನಿಕಟವರ್ತಿಯೊಬ್ಬರು ತಿಳಿಸಿದ್ದಾರೆ. ಪ್ಯಾಕೇಜ್‌‌ ಹಣದ ವಿಂಗಣಡಣೆ ಇನ್ನು ಅಧಿಕೃತ ಪತ್ರಿಕಾ ಪ್ರಕಟಣೆಯಾಗಿ ಹೊರಬಂದಿಲ್ಲ. ಆದರೆ ಅಂದಾಜು ಈ ಕೆಳಕಂಡಂತಿದೆ.

  • ರಾಜ್ಯದ ಪ್ರತಿಯೊಬ್ಬರಿಗೂ (ಎಪಿಎಲ್ ಮತ್ತು ಬಿಪಿಎಲ್) ಒಂದು ತಿಂಗಳ ಕಾಲ ಉಚಿತ ಪಡಿತರ ಪೂರೈಕೆ.
  • ಏಪ್ರಿಲ್-ಮೇ ಎರಡು ತಿಂಗಳ ಎಲ್ಲಾ ಜನಕಲ್ಯಾಣ ನಿವೃತ್ತಿ ವೇತನಗಳನ್ನು ಮಾರ್ಚ್ ತಿಂಗಳಲ್ಲೇ ಮನೆ ಬಾಗಿಲಿಗೆ ತಲುಪಿಸಲಾಗುವುದು.
  • ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 2000 ಕೋಟಿ ರೂಪಾಯಿ ವಿಶೇಷ ಹೂಡಿಕೆ ಮೂಲಕ ಅರ್ಹರಿಗೆ ಎರಡು ತಿಂಗಳ ಕೂಲಿ ನೀಡಲಾಗುವುದು.
  • ಕುಟುಂಬಶ್ರೀ ಯೋಜನೆಯ ಸಾಲಸೌಲಭ್ಯಕ್ಕಾಗಿ 2000 ಕೋಟಿ ರೂಪಾಯಿ ನೀಡಲಾಗುವುದು.
  • 1000 ಸುಭಿಕ್ಷ ರೆಸ್ಟೋರೆಂಟ್ ಗಳನ್ನು ಏಪ್ರಿಲ್ ತಿಂಗಳಿನಲ್ಲೇ ತೆರೆದು ರೂ.20
    ಬೆಲೆಯಲ್ಲಿ ಊಟ ಪೂರೈಸಲಾಗುವುದು.
  • ಕೋವಿಡ್-19ರ ಅವಧಿಗೆ 500 ಕೋಟಿ ರೂಪಾಯಿ ಆರೋಗ್ಯ ಯೋಜನೆ ಜಾರಿ.
  • ವಿದ್ಯುಚ್ಛಕ್ತಿ ಮತ್ತು ನೀರಿನ ಶುಲ್ಕ ಸಂದಾಯ ಒಂದು ತಿಂಗಳ ಕಾಲ ಮುಂದೂಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...