Homeಮುಖಪುಟಸಿಎಎ ಮೂಲಕ ಸಂವಿಧಾನದ ಸಮಾನತೆಯ ಕಲ್ಪನೆಯನ್ನು ನುಚ್ಚುನೂರು ಮಾಡಲಾಗಿದೆ: ಪಿಣರಾಯಿ ವಿಜಯನ್

ಸಿಎಎ ಮೂಲಕ ಸಂವಿಧಾನದ ಸಮಾನತೆಯ ಕಲ್ಪನೆಯನ್ನು ನುಚ್ಚುನೂರು ಮಾಡಲಾಗಿದೆ: ಪಿಣರಾಯಿ ವಿಜಯನ್

- Advertisement -
- Advertisement -

ವಿವಾದಿತ ಪೌರತ್ವ ಕಾಯ್ದೆಯ ಅನುಷ್ಠಾನದ ಬಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂವಿಧಾನದಲ್ಲಿ ಪ್ರತಿಪಾದಿಸಿರುವ ಸಮಾನತೆಯ ಕಲ್ಪನೆಯನ್ನು ಸಿಎಎ ಮೂಲಕ ಚೂರುಚೂರು ಮಾಡಲಾಗಿದೆ ಎಂದು ವಾಗ್ಧಾಳಿಯನ್ನು ನಡೆಸಿದ್ದಾರೆ.

ಕಾಸರಗೋಡಿನಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಆಯೋಜಿಸಿದ್ದ ಬೃಹತ್ ಸಿಎಎ ವಿರೋಧಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕೇರಳ ಸಿಎಂ ಪಿಣರಾಯ್‌ ವಿಜಯನ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಿದ್ಧಾಂತವನ್ನು ಅಡಾಲ್ಫ್ ಹಿಟ್ಲರ್ ಮತ್ತು ಬೆನಿಟೊ ಮುಸೊಲಿನಿಯ ಫ್ಯಾಸಿಸಂನಿಂದ ಅಳವಡಿಸಿಕೊಳ್ಳಲಾಗಿದೆ. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವನ್ನು ನಿಯಂತ್ರಿಸುತ್ತಿರುವ ಆರೆಸ್ಸೆಸ್‌ ಜಾತ್ಯತೀತತೆಯನ್ನು ಬೆಂಬಲಿಸುವುದಿಲ್ಲ. ನಮ್ಮ ದೇಶ ಜಾತ್ಯತೀತವಾಗಿದೆ ಆದರೆ ಆರೆಸ್ಸೆಸ್‌ ಎಂದಿಗೂ ಜಾತ್ಯತೀತತೆಯನ್ನು ಸ್ವೀಕರಿಸಲಿಲ್ಲ. ಅದು ಭಾರತವನ್ನು ಧರ್ಮಾಧಿಕಾರವನ್ನಾಗಿ ಮಾಡಲು ಮತ್ತು ಜಾತ್ಯತೀತತೆಯನ್ನು ತೊಡೆದುಹಾಕಲು ಬಯಸಿದೆ. ಅದು ನಮ್ಮಲ್ಲಿ ಕೆಲವರನ್ನು ಶತ್ರುಗಳೆಂದು ಪರಿಗಣಿಸುತ್ತದೆ. ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಕಮ್ಯುನಿಸ್ಟರನ್ನು ಆಂತರಿಕ ಶತ್ರುಗಳೆಂದು ಆರೆಸ್ಸೆಸ್‌ ಹೇಳುತ್ತದೆ ಎಂದು ವಿಜಯನ್ ಹೇಳಿದ್ದಾರೆ.

ಕ್ರಿಶ್ಚಿಯನ್ನರು, ಮುಸ್ಲಿಮರು ಮತ್ತು ಕಮ್ಯುನಿಸ್ಟರು ದೇಶದ ಆಂತರಿಕ ಶತ್ರುಗಳು ಎಂದು ತಮ್ಮ ಪುಸ್ತಕವೊಂದರಲ್ಲಿ ಎಂಎಸ್ ಗೋಲ್ವಾಲ್ಕರ್ ಉಲ್ಲೇಖಿಸಿದ್ದಾರೆ. ಈ ಸಿದ್ಧಾಂತವು ಯಾವುದೇ ಪುರಾತನ ಗ್ರಂಥಗಳು ಅಥವಾ ಪುರಾಣಗಳು ಅಥವಾ ವೇದಗಳಿಂದ ಅಥವಾ ಮನುಸ್ಮೃತಿಯಿಂದ ಅಲ್ಲ, ಇದು ಹಿಟ್ಲರ್‌ನಿಂದ ತೆಗೆದುಕೊಳ್ಳಲಾಗಿದೆ. ಹಿಟ್ಲರ್ ಆಳ್ವಿಕೆಯಲ್ಲಿ ನಡೆದ ನರಮೇಧವನ್ನು ನಾವು ನೋಡಿದ್ದೇವೆ, ಇದು ಇಡೀ ಮನುಕುಲವನ್ನು ಬೆಚ್ಚಿಬೀಳಿಸಿದೆ. ಆದರೆ ಹಿಟ್ಲರ್‌ನ ಕಾರ್ಯಗಳನ್ನು ಭಾರತದಲ್ಲಿ ಆರೆಸ್ಸೆಸ್‌ ಪ್ರಶಂಸಿದೆ. ಹಿಟ್ಲರನ ಜರ್ಮನಿಯ ಉದಾಹರಣೆಯನ್ನು ತೆಗೆದುಕೊಂಡು ದೇಶದ ಆಂತರಿಕ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಅವರು ಘೋಷಿಸಿದ್ದಾರೆ ಎಂದು ಪಿಣರಾಯ್‌ ವಿಜಯನ್‌ ಹೇಳಿದ್ದಾರೆ.

ಆರೆಸ್ಸೆಸ್‌ ನಾಯಕರು ಮುಸೊಲಿನಿಯನ್ನು ಭೇಟಿ ನೀಡಿ ಫ್ಯಾಸಿಸ್ಟ್ ಸಾಂಸ್ಥಿಕ ರಚನೆಯನ್ನು ಅಳವಡಿಸಿಕೊಂಡಿದ್ದಾರೆ. ಭಾರತದ ಶಕ್ತಿ ಯಾವಾಗಲೂ ವಿವಿಧತೆಯಲ್ಲಿ ಏಕತೆಯಲ್ಲಿ ಅಡಗಿದೆ. ನಮ್ಮೆಲ್ಲರ ನಂಬಿಕೆಗಳು, ಭಾಷೆಗಳು, ಸಂಸ್ಕೃತಿಗಳು, ಆಹಾರ ಮತ್ತು ಉಡುಗೆ ತೊಡುಗೆಗಳಲ್ಲಿ ಭಿನ್ನವಾಗಿರುತ್ತವೆ. ನಾವು ಅನೇಕ ಕ್ಷೇತ್ರಗಳಲ್ಲಿ ವೈವಿಧ್ಯತೆಯನ್ನು ಹೊಂದಿದ್ದೇವೆ ಮತ್ತು ಅದಕ್ಕಾಗಿಯೇ ನಾವು ನಮ್ಮ ವೈವಿಧ್ಯತೆಯನ್ನು ತುಂಬಾ ಪ್ರೀತಿಯಿಂದ ಹಿಡಿದಿಟ್ಟುಕೊಳ್ಳುತ್ತೇವೆ. ಕೋಟ್ಯಂತರ ಜನರು ಸಿಎಎ ಬಗ್ಗೆ ಚಿಂತಿತರಾಗಿದ್ದಾರೆ, ಇದು ದೇಶದ ಮುಸ್ಲಿಮರನ್ನು ಗುರಿಯಾಗಿಸುತ್ತದೆ. ಇದು ನಮ್ಮ ಸಂವಿಧಾನದಲ್ಲಿ ಅಡಕವಾಗಿರುವ ಸಮಾನತೆಯ ಕಲ್ಪನೆಯನ್ನು ಚೂರುಚೂರು ಮಾಡುತ್ತಿದೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಸಿಎಎ ಘೋಷಿಸಿದಾಗ ಜಗತ್ತಿನಾದ್ಯಂತ ಪ್ರತಿಭಟನೆಗಳು ಭುಗಿಲೆದ್ದವು ಮತ್ತು ವಿಶ್ವ ನಾಯಕರು ಈ ಕ್ರಮವನ್ನು ಟೀಕಿಸಿದ್ದಾರೆ. ಏಕೆಂದರೆ ಜಗತ್ತಿನ ಯಾವುದೇ ಸುಸಂಸ್ಕೃತ ಸಮಾಜ ಧರ್ಮದ ಆಧಾರದ ಮೇಲೆ ಪೌರತ್ವವನ್ನು ನೀಡುವುದಕ್ಕೆ ಸಾಧ್ಯವಿಲ್ಲ. ಇಡೀ ವಿಶ್ವವೇ ಈ ಕ್ರಮಗಳನ್ನು ವಿರೋಧಿಸಿದಾಗಲೂ ಹಿಟ್ಲರ್ ತಲೆ ಕೆಡಿಸಿಕೊಳ್ಳದೆ ಉಳಿದಿದ್ದರು. ಆರೆಸ್ಸೆಸ್‌ ಅವರ ಹಾದಿಯನ್ನೇ ಅನುಸರಿಸುತ್ತಿದೆ ಎಂದು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಪಿಣರಾಯ್‌ ವಿಜಯನ್‌ ಹೇಳಿದ್ದಾರೆ.

ಎಡ ಪಕ್ಷವು ರಾಜ್ಯದ ಐದು ಸ್ಥಳಗಳಲ್ಲಿ ಬೃಹತ್ ಸಿಎಎ ವಿರೋಧಿ ರ್ಯಾಲಿಗಳನ್ನು ಆಯೋಜಿಸುತ್ತಿದೆ. ಮೊದಲ ರ್ಯಾಲಿ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ನಡೆಯಿತು. ಮುಂದಿನ ದಿನಗಳಲ್ಲಿ ಕಣ್ಣೂರು, ಮಲಪ್ಪುರಂ ಮತ್ತು ಕೊಲ್ಲಂನಲ್ಲಿ ಮೂರು ರ್ಯಾಲಿಗಳು ನಡೆಯಲಿವೆ.

ಮೋದಿ ಸರ್ಕಾರವು ಅಂಗೀಕರಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಕಾಯ್ದೆಯು ಡಿಸೆಂಬರ್ 31, 2014ರೊಳಗೆ ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ. CAA ಡಿಸೆಂಬರ್ 2019ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿದ್ದು, ಆ ಬಳಿಕ  ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದಿದೆ. ಧರ್ಮದ ಆಧಾರದಲ್ಲಿ ಪೌರತ್ವ ನೀಡುವುದಕ್ಕೆ ಭಾರತದ ಸಂವಿಧಾನದಲ್ಲಿ ಅವಕಾಶ ಇಲ್ಲ, ಆದ್ದರಿಂದ ಈ ಅಸಂವಿಧಾನಿಕ ಕಾಯ್ದೆ ದೇಶದ ವಿವಿಧ ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು. ಆದರೆ ಮಾ.11ರಂದು ಕೇಂದ್ರ ಸರಕಾರ ಸಿಎಎ ಕುರಿತ ಅಧಿಸೂಚನೆಯನ್ನು ಹೊರಡಿಸಿತ್ತು.

ಇದನ್ನು ಓದಿ: ಜಾತಿ ಗಣತಿ ವೆಬ್‌ಸೈಟ್ ಎರಡು ತಿಂಗಳಿನಿಂದ ಸ್ಥಗಿತ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...