Homeಮುಖಪುಟಸಿಎಎ ಮೂಲಕ ಸಂವಿಧಾನದ ಸಮಾನತೆಯ ಕಲ್ಪನೆಯನ್ನು ನುಚ್ಚುನೂರು ಮಾಡಲಾಗಿದೆ: ಪಿಣರಾಯಿ ವಿಜಯನ್

ಸಿಎಎ ಮೂಲಕ ಸಂವಿಧಾನದ ಸಮಾನತೆಯ ಕಲ್ಪನೆಯನ್ನು ನುಚ್ಚುನೂರು ಮಾಡಲಾಗಿದೆ: ಪಿಣರಾಯಿ ವಿಜಯನ್

- Advertisement -
- Advertisement -

ವಿವಾದಿತ ಪೌರತ್ವ ಕಾಯ್ದೆಯ ಅನುಷ್ಠಾನದ ಬಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂವಿಧಾನದಲ್ಲಿ ಪ್ರತಿಪಾದಿಸಿರುವ ಸಮಾನತೆಯ ಕಲ್ಪನೆಯನ್ನು ಸಿಎಎ ಮೂಲಕ ಚೂರುಚೂರು ಮಾಡಲಾಗಿದೆ ಎಂದು ವಾಗ್ಧಾಳಿಯನ್ನು ನಡೆಸಿದ್ದಾರೆ.

ಕಾಸರಗೋಡಿನಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಆಯೋಜಿಸಿದ್ದ ಬೃಹತ್ ಸಿಎಎ ವಿರೋಧಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕೇರಳ ಸಿಎಂ ಪಿಣರಾಯ್‌ ವಿಜಯನ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಿದ್ಧಾಂತವನ್ನು ಅಡಾಲ್ಫ್ ಹಿಟ್ಲರ್ ಮತ್ತು ಬೆನಿಟೊ ಮುಸೊಲಿನಿಯ ಫ್ಯಾಸಿಸಂನಿಂದ ಅಳವಡಿಸಿಕೊಳ್ಳಲಾಗಿದೆ. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವನ್ನು ನಿಯಂತ್ರಿಸುತ್ತಿರುವ ಆರೆಸ್ಸೆಸ್‌ ಜಾತ್ಯತೀತತೆಯನ್ನು ಬೆಂಬಲಿಸುವುದಿಲ್ಲ. ನಮ್ಮ ದೇಶ ಜಾತ್ಯತೀತವಾಗಿದೆ ಆದರೆ ಆರೆಸ್ಸೆಸ್‌ ಎಂದಿಗೂ ಜಾತ್ಯತೀತತೆಯನ್ನು ಸ್ವೀಕರಿಸಲಿಲ್ಲ. ಅದು ಭಾರತವನ್ನು ಧರ್ಮಾಧಿಕಾರವನ್ನಾಗಿ ಮಾಡಲು ಮತ್ತು ಜಾತ್ಯತೀತತೆಯನ್ನು ತೊಡೆದುಹಾಕಲು ಬಯಸಿದೆ. ಅದು ನಮ್ಮಲ್ಲಿ ಕೆಲವರನ್ನು ಶತ್ರುಗಳೆಂದು ಪರಿಗಣಿಸುತ್ತದೆ. ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಕಮ್ಯುನಿಸ್ಟರನ್ನು ಆಂತರಿಕ ಶತ್ರುಗಳೆಂದು ಆರೆಸ್ಸೆಸ್‌ ಹೇಳುತ್ತದೆ ಎಂದು ವಿಜಯನ್ ಹೇಳಿದ್ದಾರೆ.

ಕ್ರಿಶ್ಚಿಯನ್ನರು, ಮುಸ್ಲಿಮರು ಮತ್ತು ಕಮ್ಯುನಿಸ್ಟರು ದೇಶದ ಆಂತರಿಕ ಶತ್ರುಗಳು ಎಂದು ತಮ್ಮ ಪುಸ್ತಕವೊಂದರಲ್ಲಿ ಎಂಎಸ್ ಗೋಲ್ವಾಲ್ಕರ್ ಉಲ್ಲೇಖಿಸಿದ್ದಾರೆ. ಈ ಸಿದ್ಧಾಂತವು ಯಾವುದೇ ಪುರಾತನ ಗ್ರಂಥಗಳು ಅಥವಾ ಪುರಾಣಗಳು ಅಥವಾ ವೇದಗಳಿಂದ ಅಥವಾ ಮನುಸ್ಮೃತಿಯಿಂದ ಅಲ್ಲ, ಇದು ಹಿಟ್ಲರ್‌ನಿಂದ ತೆಗೆದುಕೊಳ್ಳಲಾಗಿದೆ. ಹಿಟ್ಲರ್ ಆಳ್ವಿಕೆಯಲ್ಲಿ ನಡೆದ ನರಮೇಧವನ್ನು ನಾವು ನೋಡಿದ್ದೇವೆ, ಇದು ಇಡೀ ಮನುಕುಲವನ್ನು ಬೆಚ್ಚಿಬೀಳಿಸಿದೆ. ಆದರೆ ಹಿಟ್ಲರ್‌ನ ಕಾರ್ಯಗಳನ್ನು ಭಾರತದಲ್ಲಿ ಆರೆಸ್ಸೆಸ್‌ ಪ್ರಶಂಸಿದೆ. ಹಿಟ್ಲರನ ಜರ್ಮನಿಯ ಉದಾಹರಣೆಯನ್ನು ತೆಗೆದುಕೊಂಡು ದೇಶದ ಆಂತರಿಕ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಅವರು ಘೋಷಿಸಿದ್ದಾರೆ ಎಂದು ಪಿಣರಾಯ್‌ ವಿಜಯನ್‌ ಹೇಳಿದ್ದಾರೆ.

ಆರೆಸ್ಸೆಸ್‌ ನಾಯಕರು ಮುಸೊಲಿನಿಯನ್ನು ಭೇಟಿ ನೀಡಿ ಫ್ಯಾಸಿಸ್ಟ್ ಸಾಂಸ್ಥಿಕ ರಚನೆಯನ್ನು ಅಳವಡಿಸಿಕೊಂಡಿದ್ದಾರೆ. ಭಾರತದ ಶಕ್ತಿ ಯಾವಾಗಲೂ ವಿವಿಧತೆಯಲ್ಲಿ ಏಕತೆಯಲ್ಲಿ ಅಡಗಿದೆ. ನಮ್ಮೆಲ್ಲರ ನಂಬಿಕೆಗಳು, ಭಾಷೆಗಳು, ಸಂಸ್ಕೃತಿಗಳು, ಆಹಾರ ಮತ್ತು ಉಡುಗೆ ತೊಡುಗೆಗಳಲ್ಲಿ ಭಿನ್ನವಾಗಿರುತ್ತವೆ. ನಾವು ಅನೇಕ ಕ್ಷೇತ್ರಗಳಲ್ಲಿ ವೈವಿಧ್ಯತೆಯನ್ನು ಹೊಂದಿದ್ದೇವೆ ಮತ್ತು ಅದಕ್ಕಾಗಿಯೇ ನಾವು ನಮ್ಮ ವೈವಿಧ್ಯತೆಯನ್ನು ತುಂಬಾ ಪ್ರೀತಿಯಿಂದ ಹಿಡಿದಿಟ್ಟುಕೊಳ್ಳುತ್ತೇವೆ. ಕೋಟ್ಯಂತರ ಜನರು ಸಿಎಎ ಬಗ್ಗೆ ಚಿಂತಿತರಾಗಿದ್ದಾರೆ, ಇದು ದೇಶದ ಮುಸ್ಲಿಮರನ್ನು ಗುರಿಯಾಗಿಸುತ್ತದೆ. ಇದು ನಮ್ಮ ಸಂವಿಧಾನದಲ್ಲಿ ಅಡಕವಾಗಿರುವ ಸಮಾನತೆಯ ಕಲ್ಪನೆಯನ್ನು ಚೂರುಚೂರು ಮಾಡುತ್ತಿದೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಸಿಎಎ ಘೋಷಿಸಿದಾಗ ಜಗತ್ತಿನಾದ್ಯಂತ ಪ್ರತಿಭಟನೆಗಳು ಭುಗಿಲೆದ್ದವು ಮತ್ತು ವಿಶ್ವ ನಾಯಕರು ಈ ಕ್ರಮವನ್ನು ಟೀಕಿಸಿದ್ದಾರೆ. ಏಕೆಂದರೆ ಜಗತ್ತಿನ ಯಾವುದೇ ಸುಸಂಸ್ಕೃತ ಸಮಾಜ ಧರ್ಮದ ಆಧಾರದ ಮೇಲೆ ಪೌರತ್ವವನ್ನು ನೀಡುವುದಕ್ಕೆ ಸಾಧ್ಯವಿಲ್ಲ. ಇಡೀ ವಿಶ್ವವೇ ಈ ಕ್ರಮಗಳನ್ನು ವಿರೋಧಿಸಿದಾಗಲೂ ಹಿಟ್ಲರ್ ತಲೆ ಕೆಡಿಸಿಕೊಳ್ಳದೆ ಉಳಿದಿದ್ದರು. ಆರೆಸ್ಸೆಸ್‌ ಅವರ ಹಾದಿಯನ್ನೇ ಅನುಸರಿಸುತ್ತಿದೆ ಎಂದು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಪಿಣರಾಯ್‌ ವಿಜಯನ್‌ ಹೇಳಿದ್ದಾರೆ.

ಎಡ ಪಕ್ಷವು ರಾಜ್ಯದ ಐದು ಸ್ಥಳಗಳಲ್ಲಿ ಬೃಹತ್ ಸಿಎಎ ವಿರೋಧಿ ರ್ಯಾಲಿಗಳನ್ನು ಆಯೋಜಿಸುತ್ತಿದೆ. ಮೊದಲ ರ್ಯಾಲಿ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ನಡೆಯಿತು. ಮುಂದಿನ ದಿನಗಳಲ್ಲಿ ಕಣ್ಣೂರು, ಮಲಪ್ಪುರಂ ಮತ್ತು ಕೊಲ್ಲಂನಲ್ಲಿ ಮೂರು ರ್ಯಾಲಿಗಳು ನಡೆಯಲಿವೆ.

ಮೋದಿ ಸರ್ಕಾರವು ಅಂಗೀಕರಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಕಾಯ್ದೆಯು ಡಿಸೆಂಬರ್ 31, 2014ರೊಳಗೆ ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ. CAA ಡಿಸೆಂಬರ್ 2019ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿದ್ದು, ಆ ಬಳಿಕ  ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದಿದೆ. ಧರ್ಮದ ಆಧಾರದಲ್ಲಿ ಪೌರತ್ವ ನೀಡುವುದಕ್ಕೆ ಭಾರತದ ಸಂವಿಧಾನದಲ್ಲಿ ಅವಕಾಶ ಇಲ್ಲ, ಆದ್ದರಿಂದ ಈ ಅಸಂವಿಧಾನಿಕ ಕಾಯ್ದೆ ದೇಶದ ವಿವಿಧ ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು. ಆದರೆ ಮಾ.11ರಂದು ಕೇಂದ್ರ ಸರಕಾರ ಸಿಎಎ ಕುರಿತ ಅಧಿಸೂಚನೆಯನ್ನು ಹೊರಡಿಸಿತ್ತು.

ಇದನ್ನು ಓದಿ: ಜಾತಿ ಗಣತಿ ವೆಬ್‌ಸೈಟ್ ಎರಡು ತಿಂಗಳಿನಿಂದ ಸ್ಥಗಿತ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...