Homeಮುಖಪುಟಸಿಎಎ ಮೂಲಕ ಸಂವಿಧಾನದ ಸಮಾನತೆಯ ಕಲ್ಪನೆಯನ್ನು ನುಚ್ಚುನೂರು ಮಾಡಲಾಗಿದೆ: ಪಿಣರಾಯಿ ವಿಜಯನ್

ಸಿಎಎ ಮೂಲಕ ಸಂವಿಧಾನದ ಸಮಾನತೆಯ ಕಲ್ಪನೆಯನ್ನು ನುಚ್ಚುನೂರು ಮಾಡಲಾಗಿದೆ: ಪಿಣರಾಯಿ ವಿಜಯನ್

- Advertisement -
- Advertisement -

ವಿವಾದಿತ ಪೌರತ್ವ ಕಾಯ್ದೆಯ ಅನುಷ್ಠಾನದ ಬಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂವಿಧಾನದಲ್ಲಿ ಪ್ರತಿಪಾದಿಸಿರುವ ಸಮಾನತೆಯ ಕಲ್ಪನೆಯನ್ನು ಸಿಎಎ ಮೂಲಕ ಚೂರುಚೂರು ಮಾಡಲಾಗಿದೆ ಎಂದು ವಾಗ್ಧಾಳಿಯನ್ನು ನಡೆಸಿದ್ದಾರೆ.

ಕಾಸರಗೋಡಿನಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಆಯೋಜಿಸಿದ್ದ ಬೃಹತ್ ಸಿಎಎ ವಿರೋಧಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕೇರಳ ಸಿಎಂ ಪಿಣರಾಯ್‌ ವಿಜಯನ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಿದ್ಧಾಂತವನ್ನು ಅಡಾಲ್ಫ್ ಹಿಟ್ಲರ್ ಮತ್ತು ಬೆನಿಟೊ ಮುಸೊಲಿನಿಯ ಫ್ಯಾಸಿಸಂನಿಂದ ಅಳವಡಿಸಿಕೊಳ್ಳಲಾಗಿದೆ. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವನ್ನು ನಿಯಂತ್ರಿಸುತ್ತಿರುವ ಆರೆಸ್ಸೆಸ್‌ ಜಾತ್ಯತೀತತೆಯನ್ನು ಬೆಂಬಲಿಸುವುದಿಲ್ಲ. ನಮ್ಮ ದೇಶ ಜಾತ್ಯತೀತವಾಗಿದೆ ಆದರೆ ಆರೆಸ್ಸೆಸ್‌ ಎಂದಿಗೂ ಜಾತ್ಯತೀತತೆಯನ್ನು ಸ್ವೀಕರಿಸಲಿಲ್ಲ. ಅದು ಭಾರತವನ್ನು ಧರ್ಮಾಧಿಕಾರವನ್ನಾಗಿ ಮಾಡಲು ಮತ್ತು ಜಾತ್ಯತೀತತೆಯನ್ನು ತೊಡೆದುಹಾಕಲು ಬಯಸಿದೆ. ಅದು ನಮ್ಮಲ್ಲಿ ಕೆಲವರನ್ನು ಶತ್ರುಗಳೆಂದು ಪರಿಗಣಿಸುತ್ತದೆ. ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಕಮ್ಯುನಿಸ್ಟರನ್ನು ಆಂತರಿಕ ಶತ್ರುಗಳೆಂದು ಆರೆಸ್ಸೆಸ್‌ ಹೇಳುತ್ತದೆ ಎಂದು ವಿಜಯನ್ ಹೇಳಿದ್ದಾರೆ.

ಕ್ರಿಶ್ಚಿಯನ್ನರು, ಮುಸ್ಲಿಮರು ಮತ್ತು ಕಮ್ಯುನಿಸ್ಟರು ದೇಶದ ಆಂತರಿಕ ಶತ್ರುಗಳು ಎಂದು ತಮ್ಮ ಪುಸ್ತಕವೊಂದರಲ್ಲಿ ಎಂಎಸ್ ಗೋಲ್ವಾಲ್ಕರ್ ಉಲ್ಲೇಖಿಸಿದ್ದಾರೆ. ಈ ಸಿದ್ಧಾಂತವು ಯಾವುದೇ ಪುರಾತನ ಗ್ರಂಥಗಳು ಅಥವಾ ಪುರಾಣಗಳು ಅಥವಾ ವೇದಗಳಿಂದ ಅಥವಾ ಮನುಸ್ಮೃತಿಯಿಂದ ಅಲ್ಲ, ಇದು ಹಿಟ್ಲರ್‌ನಿಂದ ತೆಗೆದುಕೊಳ್ಳಲಾಗಿದೆ. ಹಿಟ್ಲರ್ ಆಳ್ವಿಕೆಯಲ್ಲಿ ನಡೆದ ನರಮೇಧವನ್ನು ನಾವು ನೋಡಿದ್ದೇವೆ, ಇದು ಇಡೀ ಮನುಕುಲವನ್ನು ಬೆಚ್ಚಿಬೀಳಿಸಿದೆ. ಆದರೆ ಹಿಟ್ಲರ್‌ನ ಕಾರ್ಯಗಳನ್ನು ಭಾರತದಲ್ಲಿ ಆರೆಸ್ಸೆಸ್‌ ಪ್ರಶಂಸಿದೆ. ಹಿಟ್ಲರನ ಜರ್ಮನಿಯ ಉದಾಹರಣೆಯನ್ನು ತೆಗೆದುಕೊಂಡು ದೇಶದ ಆಂತರಿಕ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಅವರು ಘೋಷಿಸಿದ್ದಾರೆ ಎಂದು ಪಿಣರಾಯ್‌ ವಿಜಯನ್‌ ಹೇಳಿದ್ದಾರೆ.

ಆರೆಸ್ಸೆಸ್‌ ನಾಯಕರು ಮುಸೊಲಿನಿಯನ್ನು ಭೇಟಿ ನೀಡಿ ಫ್ಯಾಸಿಸ್ಟ್ ಸಾಂಸ್ಥಿಕ ರಚನೆಯನ್ನು ಅಳವಡಿಸಿಕೊಂಡಿದ್ದಾರೆ. ಭಾರತದ ಶಕ್ತಿ ಯಾವಾಗಲೂ ವಿವಿಧತೆಯಲ್ಲಿ ಏಕತೆಯಲ್ಲಿ ಅಡಗಿದೆ. ನಮ್ಮೆಲ್ಲರ ನಂಬಿಕೆಗಳು, ಭಾಷೆಗಳು, ಸಂಸ್ಕೃತಿಗಳು, ಆಹಾರ ಮತ್ತು ಉಡುಗೆ ತೊಡುಗೆಗಳಲ್ಲಿ ಭಿನ್ನವಾಗಿರುತ್ತವೆ. ನಾವು ಅನೇಕ ಕ್ಷೇತ್ರಗಳಲ್ಲಿ ವೈವಿಧ್ಯತೆಯನ್ನು ಹೊಂದಿದ್ದೇವೆ ಮತ್ತು ಅದಕ್ಕಾಗಿಯೇ ನಾವು ನಮ್ಮ ವೈವಿಧ್ಯತೆಯನ್ನು ತುಂಬಾ ಪ್ರೀತಿಯಿಂದ ಹಿಡಿದಿಟ್ಟುಕೊಳ್ಳುತ್ತೇವೆ. ಕೋಟ್ಯಂತರ ಜನರು ಸಿಎಎ ಬಗ್ಗೆ ಚಿಂತಿತರಾಗಿದ್ದಾರೆ, ಇದು ದೇಶದ ಮುಸ್ಲಿಮರನ್ನು ಗುರಿಯಾಗಿಸುತ್ತದೆ. ಇದು ನಮ್ಮ ಸಂವಿಧಾನದಲ್ಲಿ ಅಡಕವಾಗಿರುವ ಸಮಾನತೆಯ ಕಲ್ಪನೆಯನ್ನು ಚೂರುಚೂರು ಮಾಡುತ್ತಿದೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಸಿಎಎ ಘೋಷಿಸಿದಾಗ ಜಗತ್ತಿನಾದ್ಯಂತ ಪ್ರತಿಭಟನೆಗಳು ಭುಗಿಲೆದ್ದವು ಮತ್ತು ವಿಶ್ವ ನಾಯಕರು ಈ ಕ್ರಮವನ್ನು ಟೀಕಿಸಿದ್ದಾರೆ. ಏಕೆಂದರೆ ಜಗತ್ತಿನ ಯಾವುದೇ ಸುಸಂಸ್ಕೃತ ಸಮಾಜ ಧರ್ಮದ ಆಧಾರದ ಮೇಲೆ ಪೌರತ್ವವನ್ನು ನೀಡುವುದಕ್ಕೆ ಸಾಧ್ಯವಿಲ್ಲ. ಇಡೀ ವಿಶ್ವವೇ ಈ ಕ್ರಮಗಳನ್ನು ವಿರೋಧಿಸಿದಾಗಲೂ ಹಿಟ್ಲರ್ ತಲೆ ಕೆಡಿಸಿಕೊಳ್ಳದೆ ಉಳಿದಿದ್ದರು. ಆರೆಸ್ಸೆಸ್‌ ಅವರ ಹಾದಿಯನ್ನೇ ಅನುಸರಿಸುತ್ತಿದೆ ಎಂದು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಪಿಣರಾಯ್‌ ವಿಜಯನ್‌ ಹೇಳಿದ್ದಾರೆ.

ಎಡ ಪಕ್ಷವು ರಾಜ್ಯದ ಐದು ಸ್ಥಳಗಳಲ್ಲಿ ಬೃಹತ್ ಸಿಎಎ ವಿರೋಧಿ ರ್ಯಾಲಿಗಳನ್ನು ಆಯೋಜಿಸುತ್ತಿದೆ. ಮೊದಲ ರ್ಯಾಲಿ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ನಡೆಯಿತು. ಮುಂದಿನ ದಿನಗಳಲ್ಲಿ ಕಣ್ಣೂರು, ಮಲಪ್ಪುರಂ ಮತ್ತು ಕೊಲ್ಲಂನಲ್ಲಿ ಮೂರು ರ್ಯಾಲಿಗಳು ನಡೆಯಲಿವೆ.

ಮೋದಿ ಸರ್ಕಾರವು ಅಂಗೀಕರಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಕಾಯ್ದೆಯು ಡಿಸೆಂಬರ್ 31, 2014ರೊಳಗೆ ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ. CAA ಡಿಸೆಂಬರ್ 2019ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿದ್ದು, ಆ ಬಳಿಕ  ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದಿದೆ. ಧರ್ಮದ ಆಧಾರದಲ್ಲಿ ಪೌರತ್ವ ನೀಡುವುದಕ್ಕೆ ಭಾರತದ ಸಂವಿಧಾನದಲ್ಲಿ ಅವಕಾಶ ಇಲ್ಲ, ಆದ್ದರಿಂದ ಈ ಅಸಂವಿಧಾನಿಕ ಕಾಯ್ದೆ ದೇಶದ ವಿವಿಧ ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು. ಆದರೆ ಮಾ.11ರಂದು ಕೇಂದ್ರ ಸರಕಾರ ಸಿಎಎ ಕುರಿತ ಅಧಿಸೂಚನೆಯನ್ನು ಹೊರಡಿಸಿತ್ತು.

ಇದನ್ನು ಓದಿ: ಜಾತಿ ಗಣತಿ ವೆಬ್‌ಸೈಟ್ ಎರಡು ತಿಂಗಳಿನಿಂದ ಸ್ಥಗಿತ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...