Homeಮುಖಪುಟದಲಿತರ ಬಗ್ಗೆ ಕೇಂದ್ರ ಸರಕಾರ ಹಗೆತನದ ಧೋರಣೆ ಅನುಸರಿಸುತ್ತಿದೆ: ಪಿಣರಾಯ್‌ ವಿಜಯನ್‌

ದಲಿತರ ಬಗ್ಗೆ ಕೇಂದ್ರ ಸರಕಾರ ಹಗೆತನದ ಧೋರಣೆ ಅನುಸರಿಸುತ್ತಿದೆ: ಪಿಣರಾಯ್‌ ವಿಜಯನ್‌

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು  ದೇಶದಲ್ಲಿ ದಲಿತ ಸಮುದಾಯದ ವಿರುದ್ಧ ಹಗೆತನದ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದು, ತಳ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನಿಲ್ಲಿಸಿರುವುದು ಇದಕ್ಕೆ ಒಂದು ನಿದರ್ಶನವಾಗಿದೆ ಎಂದು ಹೇಳಿದ್ದಾರೆ.

ಕೇರಳ ಉತ್ತರ ಜಿಲ್ಲೆಯ ಬುಡಕಟ್ಟು ಮತ್ತು ದಲಿತ ಸಮುದಾಯಗಳಿಗೆ ಸೇರಿದ ಜನರೊಂದಿಗೆ ಮುಖ್ಯಮಂತ್ರಿಗಳ ಮುಖಾಮುಖಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಪಿಣರಾಯ್‌ ವಿಜಯನ್‌, ರಾಜ್ಯದಲ್ಲಿ ಎಡ ಸರ್ಕಾರವು ಸಮಾಜದಲ್ಲಿ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಮತ್ತು ದಲಿತ ಮತ್ತು ಬುಡಕಟ್ಟು ಸಮುದಾಯಗಳ ಸಾಮಾಜಿಕ-ಸಾಂಸ್ಕೃತಿಕ ಮತ್ತು ಆರ್ಥಿಕ ಉನ್ನತಿಯನ್ನು ಖಚಿತಪಡಿಸಿಕೊಳ್ಳಲು ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ, ಹಿಂದುಳಿದ ಸಮುದಾಯಗಳ ಜೀವನಮಟ್ಟವನ್ನು ಸುಧಾರಿಸುವುದರ ಜೊತೆಗೆ ಸಮಾಜದಲ್ಲಿ ಚಾಲ್ತಿಯಲ್ಲಿರುವ ಅಮಾನವೀಯ ಜಾತಿ ವ್ಯವಸ್ಥೆಯನ್ನು ಬೇರುಸಹಿತ ಕಿತ್ತೆಸೆಯಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಮಕ್ಕಳ ಅಭ್ಯುದಯಕ್ಕಾಗಿ ತಮ್ಮ ಸರ್ಕಾರ ಜಾರಿಗೊಳಿಸುತ್ತಿರುವ ವಿವಿಧ ಕ್ರಮಗಳ ಕುರಿತು ವಿವರಿಸಿದ ಅವರು, ಕೇಂದ್ರವು ಹಿಂದುಳಿದ ವರ್ಗಗಳ ಜನರನ್ನು ನಿರ್ಲಕ್ಷಿಸುತ್ತಿದೆ. ಕೇಂದ್ರ ಸರಕಾರವು ದಲಿತ ಸಮುದಾಯದ ಬಗ್ಗೆ ದ್ವೇಷದ ಧೋರಣೆ ಅನುಸರಿಸುತ್ತಿದೆ. ಇದಕ್ಕೆ ಸ್ಪಷ್ಟ ಉದಾಹರಣೆಯೆಂದರೆ ಅವರಿಗೆ ವಿದ್ಯಾರ್ಥಿವೇತನದ ಮೊತ್ತವನ್ನು ನಿಲ್ಲಿಸಿರುವುದಾಗಿದೆ. ಆದರೆ ರಾಜ್ಯ ಸರ್ಕಾರ ಈ ಯೋಜನೆಯನ್ನು ನಿಲ್ಲಿಸಿಲ್ಲ. ಬದಲಾಗಿ 2.5 ಲಕ್ಷಕ್ಕಿಂತ ಹೆಚ್ಚಿನ ಆದಾಯ ಹೊಂದಿರುವ ಕುಟುಂಬಗಳ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮತ್ತು ಎಂಟನೇ ತರಗತಿವರೆಗಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನಕ್ಕೆ ಸಂಪೂರ್ಣ ಮೊತ್ತವನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದು ಸಾಮಾಜಿಕ ಬದ್ಧತೆಯಾಗಿದೆ. ಇವೆಲ್ಲವೂ ಸಮುದಾಯದ ಅಂಚಿನಲ್ಲಿರುವ ವರ್ಗಗಳ ಬಗ್ಗೆ ರಾಜ್ಯ ಸರ್ಕಾರ ಹೊಂದಿರುವ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಸಿಎಂ ಹೇಳಿದ್ದಾರೆ.

ಐತಿಹಾಸಿಕ ಕಾರಣಗಳಿಂದಾಗಿ ಎಸ್ಸಿ-ಎಸ್ಟಿ ಸಮುದಾಯದವರು ಸಾಮಾಜಿಕ ಪ್ರಗತಿಯಲ್ಲಿ ತೀರಾ ಹಿಂದುಳಿದಿದ್ದಾರೆ ಎಂದು ತಿಳಿಸಿದ ಪಿಣರಾಯ್‌ ವಿಜಯನ್, ಆ ಕಾರಣಗಳನ್ನು ‘ಚಾತುರ್ವರ್ಣ’ ಮತ್ತು ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಪುರೋಹಿತಶಾಹಿ ವ್ಯವಸ್ಥೆಗಳು ಸಮಾಜದ ಮೇಲೆ ಹೇರಿವೆ. ಆ ಅಸಮಾನತೆಗಳನ್ನು ದೂರ ಮಾಡುವುದು ಆಧುನಿಕ ಸಮಾಜದ ಬಹುದೊಡ್ಡ ಜವಾಬ್ದಾರಿಯಾಗಿದೆ, ಕೇರಳವು ಅದನ್ನು ಹೆಚ್ಚಿನ ಪ್ರಮಾಣದಲ್ಲಿ ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

2025ರ ವೇಳೆಗೆ ಎಸ್‌ಸಿ, ಎಸ್‌ಟಿ ಮತ್ತು ಆದಿವಾಸಿ ಸಮುದಾಯಗಳಿಗೆ ಸೇರಿದ ಎಲ್ಲಾ ಭೂರಹಿತ ಮತ್ತು ವಸತಿ ರಹಿತರಿಗೆ ಭೂಮಿ ಮತ್ತು ವಸತಿ ಒದಗಿಸುವುದು ನಮ್ಮ ಘೋಷಿತ ನೀತಿಯಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಸ್‌ಸಿಗಳಿಗೆ 98,317 ನಿವೇಸನಗಳು ಮತ್ತು ಎಸ್‌ಟಿ 41,804 ನಿವೇಸನಗಳು ಸೇರಿದಂತೆ ಒಟ್ಟು 1,40,121 ನಿವೇಸನಗಳನ್ನು ಹಂಚಲಾಗಿದೆ. ಹಿಂದುಳಿದ ವರ್ಗದ ಮಕ್ಕಳಿಗೆ ಆಧುನಿಕ ಯುಗದ ಸವಾಲುಗಳನ್ನು ಎದುರಿಸಲು ಅನುವು ಮಾಡಿಕೊಡುವ ಕಾರ್ಯಚಟುವಟಿಕೆಗಳು ಈಗಾಗಲೇ ರಾಜ್ಯ ಸರ್ಕಾರದಿಂದ ಪ್ರಾರಂಭವಾಗಿವೆ. ವಿದೇಶಿ ವಿಶ್ವವಿದ್ಯಾನಿಲಯಗಳಿಗೆ ಈ ಸಮುದಾಯದ ವಿದ್ಯಾರ್ಥಿಗಳನ್ನು ಕಳುಹಿಸಲು ಮತ್ತು ದೇಶ-ವಿದೇಶಗಳಲ್ಲಿ ಉತ್ತಮ ಉದ್ಯೋಗಗಳನ್ನು ಕಲ್ಪಿಸುವ ದೃಷ್ಟಿಯಿಂದ ಸರ್ಕಾರವು ಪರಿಣಾಮಕಾರಿಯಾಗಿ ಮಧ್ಯಪ್ರವೇಶಿಸುತ್ತಿದೆ. ರಾಜ್ಯದಲ್ಲಿ ಜಾರಿಗೆ ತರುತ್ತಿರುವ ವಿದೇಶಿ ಶಿಕ್ಷಣ ಕಾರ್ಯಕ್ರಮದಡಿ ಎಸ್‌ಸಿ, ಎಸ್‌ಟಿ ಮತ್ತು ಇತರೆ ಹಿಂದುಳಿದ ವರ್ಗಗಳ 425 ವಿದ್ಯಾರ್ಥಿಗಳಿಗೆ ಇದುವರೆಗೆ ವಿವಿಧ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಲು ಅವಕಾಶ ನೀಡಲಾಗಿದೆ. ಈ ಯೋಜನೆಯಡಿಯಲ್ಲಿ 10 ಲಕ್ಷದಿಂದ 25 ಲಕ್ಷದವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ವಿವಿಧ ಹಿಂದುಳಿದ ಸಮುದಾಯಗಳ ಜೀವನ ಮಟ್ಟವು ಇತರ ರಾಜ್ಯಗಳಿಗಿಂತ ಕೇರಳದಲ್ಲಿ ಉತ್ತಮವಾಗಿದೆ ಎಂದು ಹೇಳಿದ ವಿಜಯನ್, ತಮ್ಮ ಸರ್ಕಾರವು ವಿವಿಧ ಕಾರ್ಯಕ್ರಮಗಳ ಮೂಲಕ ಅದನ್ನು ಇನ್ನಷ್ಟು ಸುಧಾರಿಸಲು ಪ್ರಯತ್ನಿಸುತ್ತಿದೆ. ನಮ್ಮ ಸಾರ್ವಜನಿಕ ಜಾಗೃತಿಗೆ ಮೂಢನಂಬಿಕೆ, ಅಸ್ಪೃಶ್ಯತೆ  ಮುಂತಾದವುಗಳನ್ನು ತುಂಬುವ ಪ್ರಯತ್ನಗಳು ನಡೆಯುತ್ತಿವೆ. ಈ ಪ್ರವೃತ್ತಿಗಳ ವಿರುದ್ಧ ನಾವು ಬಹಳ ಜಾಗರೂಕರಾಗಿರಬೇಕು ಎಂದು ಸಿಎಂ ಪಿಣರಾಯ್‌ ವಿಜಯನ್‌ ಹೇಳಿದ್ದಾರೆ.

ಇದನ್ನು ಓದಿ: ಪೊಲೀಸ್ ದಾಳಿಗೆ ರೈತ ಸಾವು ಆರೋಪ: ಎಫ್‌ಐಆರ್ ದಾಖಲಿಸಲು ಪಟ್ಟು ಹಿಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...