Homeಮುಖಪುಟದಲಿತರ ಬಗ್ಗೆ ಕೇಂದ್ರ ಸರಕಾರ ಹಗೆತನದ ಧೋರಣೆ ಅನುಸರಿಸುತ್ತಿದೆ: ಪಿಣರಾಯ್‌ ವಿಜಯನ್‌

ದಲಿತರ ಬಗ್ಗೆ ಕೇಂದ್ರ ಸರಕಾರ ಹಗೆತನದ ಧೋರಣೆ ಅನುಸರಿಸುತ್ತಿದೆ: ಪಿಣರಾಯ್‌ ವಿಜಯನ್‌

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು  ದೇಶದಲ್ಲಿ ದಲಿತ ಸಮುದಾಯದ ವಿರುದ್ಧ ಹಗೆತನದ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದು, ತಳ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನಿಲ್ಲಿಸಿರುವುದು ಇದಕ್ಕೆ ಒಂದು ನಿದರ್ಶನವಾಗಿದೆ ಎಂದು ಹೇಳಿದ್ದಾರೆ.

ಕೇರಳ ಉತ್ತರ ಜಿಲ್ಲೆಯ ಬುಡಕಟ್ಟು ಮತ್ತು ದಲಿತ ಸಮುದಾಯಗಳಿಗೆ ಸೇರಿದ ಜನರೊಂದಿಗೆ ಮುಖ್ಯಮಂತ್ರಿಗಳ ಮುಖಾಮುಖಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಪಿಣರಾಯ್‌ ವಿಜಯನ್‌, ರಾಜ್ಯದಲ್ಲಿ ಎಡ ಸರ್ಕಾರವು ಸಮಾಜದಲ್ಲಿ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಮತ್ತು ದಲಿತ ಮತ್ತು ಬುಡಕಟ್ಟು ಸಮುದಾಯಗಳ ಸಾಮಾಜಿಕ-ಸಾಂಸ್ಕೃತಿಕ ಮತ್ತು ಆರ್ಥಿಕ ಉನ್ನತಿಯನ್ನು ಖಚಿತಪಡಿಸಿಕೊಳ್ಳಲು ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ, ಹಿಂದುಳಿದ ಸಮುದಾಯಗಳ ಜೀವನಮಟ್ಟವನ್ನು ಸುಧಾರಿಸುವುದರ ಜೊತೆಗೆ ಸಮಾಜದಲ್ಲಿ ಚಾಲ್ತಿಯಲ್ಲಿರುವ ಅಮಾನವೀಯ ಜಾತಿ ವ್ಯವಸ್ಥೆಯನ್ನು ಬೇರುಸಹಿತ ಕಿತ್ತೆಸೆಯಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಮಕ್ಕಳ ಅಭ್ಯುದಯಕ್ಕಾಗಿ ತಮ್ಮ ಸರ್ಕಾರ ಜಾರಿಗೊಳಿಸುತ್ತಿರುವ ವಿವಿಧ ಕ್ರಮಗಳ ಕುರಿತು ವಿವರಿಸಿದ ಅವರು, ಕೇಂದ್ರವು ಹಿಂದುಳಿದ ವರ್ಗಗಳ ಜನರನ್ನು ನಿರ್ಲಕ್ಷಿಸುತ್ತಿದೆ. ಕೇಂದ್ರ ಸರಕಾರವು ದಲಿತ ಸಮುದಾಯದ ಬಗ್ಗೆ ದ್ವೇಷದ ಧೋರಣೆ ಅನುಸರಿಸುತ್ತಿದೆ. ಇದಕ್ಕೆ ಸ್ಪಷ್ಟ ಉದಾಹರಣೆಯೆಂದರೆ ಅವರಿಗೆ ವಿದ್ಯಾರ್ಥಿವೇತನದ ಮೊತ್ತವನ್ನು ನಿಲ್ಲಿಸಿರುವುದಾಗಿದೆ. ಆದರೆ ರಾಜ್ಯ ಸರ್ಕಾರ ಈ ಯೋಜನೆಯನ್ನು ನಿಲ್ಲಿಸಿಲ್ಲ. ಬದಲಾಗಿ 2.5 ಲಕ್ಷಕ್ಕಿಂತ ಹೆಚ್ಚಿನ ಆದಾಯ ಹೊಂದಿರುವ ಕುಟುಂಬಗಳ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮತ್ತು ಎಂಟನೇ ತರಗತಿವರೆಗಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನಕ್ಕೆ ಸಂಪೂರ್ಣ ಮೊತ್ತವನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದು ಸಾಮಾಜಿಕ ಬದ್ಧತೆಯಾಗಿದೆ. ಇವೆಲ್ಲವೂ ಸಮುದಾಯದ ಅಂಚಿನಲ್ಲಿರುವ ವರ್ಗಗಳ ಬಗ್ಗೆ ರಾಜ್ಯ ಸರ್ಕಾರ ಹೊಂದಿರುವ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಸಿಎಂ ಹೇಳಿದ್ದಾರೆ.

ಐತಿಹಾಸಿಕ ಕಾರಣಗಳಿಂದಾಗಿ ಎಸ್ಸಿ-ಎಸ್ಟಿ ಸಮುದಾಯದವರು ಸಾಮಾಜಿಕ ಪ್ರಗತಿಯಲ್ಲಿ ತೀರಾ ಹಿಂದುಳಿದಿದ್ದಾರೆ ಎಂದು ತಿಳಿಸಿದ ಪಿಣರಾಯ್‌ ವಿಜಯನ್, ಆ ಕಾರಣಗಳನ್ನು ‘ಚಾತುರ್ವರ್ಣ’ ಮತ್ತು ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಪುರೋಹಿತಶಾಹಿ ವ್ಯವಸ್ಥೆಗಳು ಸಮಾಜದ ಮೇಲೆ ಹೇರಿವೆ. ಆ ಅಸಮಾನತೆಗಳನ್ನು ದೂರ ಮಾಡುವುದು ಆಧುನಿಕ ಸಮಾಜದ ಬಹುದೊಡ್ಡ ಜವಾಬ್ದಾರಿಯಾಗಿದೆ, ಕೇರಳವು ಅದನ್ನು ಹೆಚ್ಚಿನ ಪ್ರಮಾಣದಲ್ಲಿ ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

2025ರ ವೇಳೆಗೆ ಎಸ್‌ಸಿ, ಎಸ್‌ಟಿ ಮತ್ತು ಆದಿವಾಸಿ ಸಮುದಾಯಗಳಿಗೆ ಸೇರಿದ ಎಲ್ಲಾ ಭೂರಹಿತ ಮತ್ತು ವಸತಿ ರಹಿತರಿಗೆ ಭೂಮಿ ಮತ್ತು ವಸತಿ ಒದಗಿಸುವುದು ನಮ್ಮ ಘೋಷಿತ ನೀತಿಯಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಸ್‌ಸಿಗಳಿಗೆ 98,317 ನಿವೇಸನಗಳು ಮತ್ತು ಎಸ್‌ಟಿ 41,804 ನಿವೇಸನಗಳು ಸೇರಿದಂತೆ ಒಟ್ಟು 1,40,121 ನಿವೇಸನಗಳನ್ನು ಹಂಚಲಾಗಿದೆ. ಹಿಂದುಳಿದ ವರ್ಗದ ಮಕ್ಕಳಿಗೆ ಆಧುನಿಕ ಯುಗದ ಸವಾಲುಗಳನ್ನು ಎದುರಿಸಲು ಅನುವು ಮಾಡಿಕೊಡುವ ಕಾರ್ಯಚಟುವಟಿಕೆಗಳು ಈಗಾಗಲೇ ರಾಜ್ಯ ಸರ್ಕಾರದಿಂದ ಪ್ರಾರಂಭವಾಗಿವೆ. ವಿದೇಶಿ ವಿಶ್ವವಿದ್ಯಾನಿಲಯಗಳಿಗೆ ಈ ಸಮುದಾಯದ ವಿದ್ಯಾರ್ಥಿಗಳನ್ನು ಕಳುಹಿಸಲು ಮತ್ತು ದೇಶ-ವಿದೇಶಗಳಲ್ಲಿ ಉತ್ತಮ ಉದ್ಯೋಗಗಳನ್ನು ಕಲ್ಪಿಸುವ ದೃಷ್ಟಿಯಿಂದ ಸರ್ಕಾರವು ಪರಿಣಾಮಕಾರಿಯಾಗಿ ಮಧ್ಯಪ್ರವೇಶಿಸುತ್ತಿದೆ. ರಾಜ್ಯದಲ್ಲಿ ಜಾರಿಗೆ ತರುತ್ತಿರುವ ವಿದೇಶಿ ಶಿಕ್ಷಣ ಕಾರ್ಯಕ್ರಮದಡಿ ಎಸ್‌ಸಿ, ಎಸ್‌ಟಿ ಮತ್ತು ಇತರೆ ಹಿಂದುಳಿದ ವರ್ಗಗಳ 425 ವಿದ್ಯಾರ್ಥಿಗಳಿಗೆ ಇದುವರೆಗೆ ವಿವಿಧ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಲು ಅವಕಾಶ ನೀಡಲಾಗಿದೆ. ಈ ಯೋಜನೆಯಡಿಯಲ್ಲಿ 10 ಲಕ್ಷದಿಂದ 25 ಲಕ್ಷದವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ವಿವಿಧ ಹಿಂದುಳಿದ ಸಮುದಾಯಗಳ ಜೀವನ ಮಟ್ಟವು ಇತರ ರಾಜ್ಯಗಳಿಗಿಂತ ಕೇರಳದಲ್ಲಿ ಉತ್ತಮವಾಗಿದೆ ಎಂದು ಹೇಳಿದ ವಿಜಯನ್, ತಮ್ಮ ಸರ್ಕಾರವು ವಿವಿಧ ಕಾರ್ಯಕ್ರಮಗಳ ಮೂಲಕ ಅದನ್ನು ಇನ್ನಷ್ಟು ಸುಧಾರಿಸಲು ಪ್ರಯತ್ನಿಸುತ್ತಿದೆ. ನಮ್ಮ ಸಾರ್ವಜನಿಕ ಜಾಗೃತಿಗೆ ಮೂಢನಂಬಿಕೆ, ಅಸ್ಪೃಶ್ಯತೆ  ಮುಂತಾದವುಗಳನ್ನು ತುಂಬುವ ಪ್ರಯತ್ನಗಳು ನಡೆಯುತ್ತಿವೆ. ಈ ಪ್ರವೃತ್ತಿಗಳ ವಿರುದ್ಧ ನಾವು ಬಹಳ ಜಾಗರೂಕರಾಗಿರಬೇಕು ಎಂದು ಸಿಎಂ ಪಿಣರಾಯ್‌ ವಿಜಯನ್‌ ಹೇಳಿದ್ದಾರೆ.

ಇದನ್ನು ಓದಿ: ಪೊಲೀಸ್ ದಾಳಿಗೆ ರೈತ ಸಾವು ಆರೋಪ: ಎಫ್‌ಐಆರ್ ದಾಖಲಿಸಲು ಪಟ್ಟು ಹಿಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...