Homeಮುಖಪುಟದಲಿತರ ಬಗ್ಗೆ ಕೇಂದ್ರ ಸರಕಾರ ಹಗೆತನದ ಧೋರಣೆ ಅನುಸರಿಸುತ್ತಿದೆ: ಪಿಣರಾಯ್‌ ವಿಜಯನ್‌

ದಲಿತರ ಬಗ್ಗೆ ಕೇಂದ್ರ ಸರಕಾರ ಹಗೆತನದ ಧೋರಣೆ ಅನುಸರಿಸುತ್ತಿದೆ: ಪಿಣರಾಯ್‌ ವಿಜಯನ್‌

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು  ದೇಶದಲ್ಲಿ ದಲಿತ ಸಮುದಾಯದ ವಿರುದ್ಧ ಹಗೆತನದ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದು, ತಳ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನಿಲ್ಲಿಸಿರುವುದು ಇದಕ್ಕೆ ಒಂದು ನಿದರ್ಶನವಾಗಿದೆ ಎಂದು ಹೇಳಿದ್ದಾರೆ.

ಕೇರಳ ಉತ್ತರ ಜಿಲ್ಲೆಯ ಬುಡಕಟ್ಟು ಮತ್ತು ದಲಿತ ಸಮುದಾಯಗಳಿಗೆ ಸೇರಿದ ಜನರೊಂದಿಗೆ ಮುಖ್ಯಮಂತ್ರಿಗಳ ಮುಖಾಮುಖಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಪಿಣರಾಯ್‌ ವಿಜಯನ್‌, ರಾಜ್ಯದಲ್ಲಿ ಎಡ ಸರ್ಕಾರವು ಸಮಾಜದಲ್ಲಿ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಮತ್ತು ದಲಿತ ಮತ್ತು ಬುಡಕಟ್ಟು ಸಮುದಾಯಗಳ ಸಾಮಾಜಿಕ-ಸಾಂಸ್ಕೃತಿಕ ಮತ್ತು ಆರ್ಥಿಕ ಉನ್ನತಿಯನ್ನು ಖಚಿತಪಡಿಸಿಕೊಳ್ಳಲು ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ, ಹಿಂದುಳಿದ ಸಮುದಾಯಗಳ ಜೀವನಮಟ್ಟವನ್ನು ಸುಧಾರಿಸುವುದರ ಜೊತೆಗೆ ಸಮಾಜದಲ್ಲಿ ಚಾಲ್ತಿಯಲ್ಲಿರುವ ಅಮಾನವೀಯ ಜಾತಿ ವ್ಯವಸ್ಥೆಯನ್ನು ಬೇರುಸಹಿತ ಕಿತ್ತೆಸೆಯಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಮಕ್ಕಳ ಅಭ್ಯುದಯಕ್ಕಾಗಿ ತಮ್ಮ ಸರ್ಕಾರ ಜಾರಿಗೊಳಿಸುತ್ತಿರುವ ವಿವಿಧ ಕ್ರಮಗಳ ಕುರಿತು ವಿವರಿಸಿದ ಅವರು, ಕೇಂದ್ರವು ಹಿಂದುಳಿದ ವರ್ಗಗಳ ಜನರನ್ನು ನಿರ್ಲಕ್ಷಿಸುತ್ತಿದೆ. ಕೇಂದ್ರ ಸರಕಾರವು ದಲಿತ ಸಮುದಾಯದ ಬಗ್ಗೆ ದ್ವೇಷದ ಧೋರಣೆ ಅನುಸರಿಸುತ್ತಿದೆ. ಇದಕ್ಕೆ ಸ್ಪಷ್ಟ ಉದಾಹರಣೆಯೆಂದರೆ ಅವರಿಗೆ ವಿದ್ಯಾರ್ಥಿವೇತನದ ಮೊತ್ತವನ್ನು ನಿಲ್ಲಿಸಿರುವುದಾಗಿದೆ. ಆದರೆ ರಾಜ್ಯ ಸರ್ಕಾರ ಈ ಯೋಜನೆಯನ್ನು ನಿಲ್ಲಿಸಿಲ್ಲ. ಬದಲಾಗಿ 2.5 ಲಕ್ಷಕ್ಕಿಂತ ಹೆಚ್ಚಿನ ಆದಾಯ ಹೊಂದಿರುವ ಕುಟುಂಬಗಳ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮತ್ತು ಎಂಟನೇ ತರಗತಿವರೆಗಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನಕ್ಕೆ ಸಂಪೂರ್ಣ ಮೊತ್ತವನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದು ಸಾಮಾಜಿಕ ಬದ್ಧತೆಯಾಗಿದೆ. ಇವೆಲ್ಲವೂ ಸಮುದಾಯದ ಅಂಚಿನಲ್ಲಿರುವ ವರ್ಗಗಳ ಬಗ್ಗೆ ರಾಜ್ಯ ಸರ್ಕಾರ ಹೊಂದಿರುವ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಸಿಎಂ ಹೇಳಿದ್ದಾರೆ.

ಐತಿಹಾಸಿಕ ಕಾರಣಗಳಿಂದಾಗಿ ಎಸ್ಸಿ-ಎಸ್ಟಿ ಸಮುದಾಯದವರು ಸಾಮಾಜಿಕ ಪ್ರಗತಿಯಲ್ಲಿ ತೀರಾ ಹಿಂದುಳಿದಿದ್ದಾರೆ ಎಂದು ತಿಳಿಸಿದ ಪಿಣರಾಯ್‌ ವಿಜಯನ್, ಆ ಕಾರಣಗಳನ್ನು ‘ಚಾತುರ್ವರ್ಣ’ ಮತ್ತು ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಪುರೋಹಿತಶಾಹಿ ವ್ಯವಸ್ಥೆಗಳು ಸಮಾಜದ ಮೇಲೆ ಹೇರಿವೆ. ಆ ಅಸಮಾನತೆಗಳನ್ನು ದೂರ ಮಾಡುವುದು ಆಧುನಿಕ ಸಮಾಜದ ಬಹುದೊಡ್ಡ ಜವಾಬ್ದಾರಿಯಾಗಿದೆ, ಕೇರಳವು ಅದನ್ನು ಹೆಚ್ಚಿನ ಪ್ರಮಾಣದಲ್ಲಿ ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

2025ರ ವೇಳೆಗೆ ಎಸ್‌ಸಿ, ಎಸ್‌ಟಿ ಮತ್ತು ಆದಿವಾಸಿ ಸಮುದಾಯಗಳಿಗೆ ಸೇರಿದ ಎಲ್ಲಾ ಭೂರಹಿತ ಮತ್ತು ವಸತಿ ರಹಿತರಿಗೆ ಭೂಮಿ ಮತ್ತು ವಸತಿ ಒದಗಿಸುವುದು ನಮ್ಮ ಘೋಷಿತ ನೀತಿಯಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಸ್‌ಸಿಗಳಿಗೆ 98,317 ನಿವೇಸನಗಳು ಮತ್ತು ಎಸ್‌ಟಿ 41,804 ನಿವೇಸನಗಳು ಸೇರಿದಂತೆ ಒಟ್ಟು 1,40,121 ನಿವೇಸನಗಳನ್ನು ಹಂಚಲಾಗಿದೆ. ಹಿಂದುಳಿದ ವರ್ಗದ ಮಕ್ಕಳಿಗೆ ಆಧುನಿಕ ಯುಗದ ಸವಾಲುಗಳನ್ನು ಎದುರಿಸಲು ಅನುವು ಮಾಡಿಕೊಡುವ ಕಾರ್ಯಚಟುವಟಿಕೆಗಳು ಈಗಾಗಲೇ ರಾಜ್ಯ ಸರ್ಕಾರದಿಂದ ಪ್ರಾರಂಭವಾಗಿವೆ. ವಿದೇಶಿ ವಿಶ್ವವಿದ್ಯಾನಿಲಯಗಳಿಗೆ ಈ ಸಮುದಾಯದ ವಿದ್ಯಾರ್ಥಿಗಳನ್ನು ಕಳುಹಿಸಲು ಮತ್ತು ದೇಶ-ವಿದೇಶಗಳಲ್ಲಿ ಉತ್ತಮ ಉದ್ಯೋಗಗಳನ್ನು ಕಲ್ಪಿಸುವ ದೃಷ್ಟಿಯಿಂದ ಸರ್ಕಾರವು ಪರಿಣಾಮಕಾರಿಯಾಗಿ ಮಧ್ಯಪ್ರವೇಶಿಸುತ್ತಿದೆ. ರಾಜ್ಯದಲ್ಲಿ ಜಾರಿಗೆ ತರುತ್ತಿರುವ ವಿದೇಶಿ ಶಿಕ್ಷಣ ಕಾರ್ಯಕ್ರಮದಡಿ ಎಸ್‌ಸಿ, ಎಸ್‌ಟಿ ಮತ್ತು ಇತರೆ ಹಿಂದುಳಿದ ವರ್ಗಗಳ 425 ವಿದ್ಯಾರ್ಥಿಗಳಿಗೆ ಇದುವರೆಗೆ ವಿವಿಧ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಲು ಅವಕಾಶ ನೀಡಲಾಗಿದೆ. ಈ ಯೋಜನೆಯಡಿಯಲ್ಲಿ 10 ಲಕ್ಷದಿಂದ 25 ಲಕ್ಷದವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ವಿವಿಧ ಹಿಂದುಳಿದ ಸಮುದಾಯಗಳ ಜೀವನ ಮಟ್ಟವು ಇತರ ರಾಜ್ಯಗಳಿಗಿಂತ ಕೇರಳದಲ್ಲಿ ಉತ್ತಮವಾಗಿದೆ ಎಂದು ಹೇಳಿದ ವಿಜಯನ್, ತಮ್ಮ ಸರ್ಕಾರವು ವಿವಿಧ ಕಾರ್ಯಕ್ರಮಗಳ ಮೂಲಕ ಅದನ್ನು ಇನ್ನಷ್ಟು ಸುಧಾರಿಸಲು ಪ್ರಯತ್ನಿಸುತ್ತಿದೆ. ನಮ್ಮ ಸಾರ್ವಜನಿಕ ಜಾಗೃತಿಗೆ ಮೂಢನಂಬಿಕೆ, ಅಸ್ಪೃಶ್ಯತೆ  ಮುಂತಾದವುಗಳನ್ನು ತುಂಬುವ ಪ್ರಯತ್ನಗಳು ನಡೆಯುತ್ತಿವೆ. ಈ ಪ್ರವೃತ್ತಿಗಳ ವಿರುದ್ಧ ನಾವು ಬಹಳ ಜಾಗರೂಕರಾಗಿರಬೇಕು ಎಂದು ಸಿಎಂ ಪಿಣರಾಯ್‌ ವಿಜಯನ್‌ ಹೇಳಿದ್ದಾರೆ.

ಇದನ್ನು ಓದಿ: ಪೊಲೀಸ್ ದಾಳಿಗೆ ರೈತ ಸಾವು ಆರೋಪ: ಎಫ್‌ಐಆರ್ ದಾಖಲಿಸಲು ಪಟ್ಟು ಹಿಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...