Homeಮುಖಪುಟದಲಿತರ ಬಗ್ಗೆ ಕೇಂದ್ರ ಸರಕಾರ ಹಗೆತನದ ಧೋರಣೆ ಅನುಸರಿಸುತ್ತಿದೆ: ಪಿಣರಾಯ್‌ ವಿಜಯನ್‌

ದಲಿತರ ಬಗ್ಗೆ ಕೇಂದ್ರ ಸರಕಾರ ಹಗೆತನದ ಧೋರಣೆ ಅನುಸರಿಸುತ್ತಿದೆ: ಪಿಣರಾಯ್‌ ವಿಜಯನ್‌

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು  ದೇಶದಲ್ಲಿ ದಲಿತ ಸಮುದಾಯದ ವಿರುದ್ಧ ಹಗೆತನದ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದು, ತಳ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನಿಲ್ಲಿಸಿರುವುದು ಇದಕ್ಕೆ ಒಂದು ನಿದರ್ಶನವಾಗಿದೆ ಎಂದು ಹೇಳಿದ್ದಾರೆ.

ಕೇರಳ ಉತ್ತರ ಜಿಲ್ಲೆಯ ಬುಡಕಟ್ಟು ಮತ್ತು ದಲಿತ ಸಮುದಾಯಗಳಿಗೆ ಸೇರಿದ ಜನರೊಂದಿಗೆ ಮುಖ್ಯಮಂತ್ರಿಗಳ ಮುಖಾಮುಖಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಪಿಣರಾಯ್‌ ವಿಜಯನ್‌, ರಾಜ್ಯದಲ್ಲಿ ಎಡ ಸರ್ಕಾರವು ಸಮಾಜದಲ್ಲಿ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಮತ್ತು ದಲಿತ ಮತ್ತು ಬುಡಕಟ್ಟು ಸಮುದಾಯಗಳ ಸಾಮಾಜಿಕ-ಸಾಂಸ್ಕೃತಿಕ ಮತ್ತು ಆರ್ಥಿಕ ಉನ್ನತಿಯನ್ನು ಖಚಿತಪಡಿಸಿಕೊಳ್ಳಲು ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ, ಹಿಂದುಳಿದ ಸಮುದಾಯಗಳ ಜೀವನಮಟ್ಟವನ್ನು ಸುಧಾರಿಸುವುದರ ಜೊತೆಗೆ ಸಮಾಜದಲ್ಲಿ ಚಾಲ್ತಿಯಲ್ಲಿರುವ ಅಮಾನವೀಯ ಜಾತಿ ವ್ಯವಸ್ಥೆಯನ್ನು ಬೇರುಸಹಿತ ಕಿತ್ತೆಸೆಯಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಮಕ್ಕಳ ಅಭ್ಯುದಯಕ್ಕಾಗಿ ತಮ್ಮ ಸರ್ಕಾರ ಜಾರಿಗೊಳಿಸುತ್ತಿರುವ ವಿವಿಧ ಕ್ರಮಗಳ ಕುರಿತು ವಿವರಿಸಿದ ಅವರು, ಕೇಂದ್ರವು ಹಿಂದುಳಿದ ವರ್ಗಗಳ ಜನರನ್ನು ನಿರ್ಲಕ್ಷಿಸುತ್ತಿದೆ. ಕೇಂದ್ರ ಸರಕಾರವು ದಲಿತ ಸಮುದಾಯದ ಬಗ್ಗೆ ದ್ವೇಷದ ಧೋರಣೆ ಅನುಸರಿಸುತ್ತಿದೆ. ಇದಕ್ಕೆ ಸ್ಪಷ್ಟ ಉದಾಹರಣೆಯೆಂದರೆ ಅವರಿಗೆ ವಿದ್ಯಾರ್ಥಿವೇತನದ ಮೊತ್ತವನ್ನು ನಿಲ್ಲಿಸಿರುವುದಾಗಿದೆ. ಆದರೆ ರಾಜ್ಯ ಸರ್ಕಾರ ಈ ಯೋಜನೆಯನ್ನು ನಿಲ್ಲಿಸಿಲ್ಲ. ಬದಲಾಗಿ 2.5 ಲಕ್ಷಕ್ಕಿಂತ ಹೆಚ್ಚಿನ ಆದಾಯ ಹೊಂದಿರುವ ಕುಟುಂಬಗಳ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮತ್ತು ಎಂಟನೇ ತರಗತಿವರೆಗಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನಕ್ಕೆ ಸಂಪೂರ್ಣ ಮೊತ್ತವನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದು ಸಾಮಾಜಿಕ ಬದ್ಧತೆಯಾಗಿದೆ. ಇವೆಲ್ಲವೂ ಸಮುದಾಯದ ಅಂಚಿನಲ್ಲಿರುವ ವರ್ಗಗಳ ಬಗ್ಗೆ ರಾಜ್ಯ ಸರ್ಕಾರ ಹೊಂದಿರುವ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಸಿಎಂ ಹೇಳಿದ್ದಾರೆ.

ಐತಿಹಾಸಿಕ ಕಾರಣಗಳಿಂದಾಗಿ ಎಸ್ಸಿ-ಎಸ್ಟಿ ಸಮುದಾಯದವರು ಸಾಮಾಜಿಕ ಪ್ರಗತಿಯಲ್ಲಿ ತೀರಾ ಹಿಂದುಳಿದಿದ್ದಾರೆ ಎಂದು ತಿಳಿಸಿದ ಪಿಣರಾಯ್‌ ವಿಜಯನ್, ಆ ಕಾರಣಗಳನ್ನು ‘ಚಾತುರ್ವರ್ಣ’ ಮತ್ತು ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಪುರೋಹಿತಶಾಹಿ ವ್ಯವಸ್ಥೆಗಳು ಸಮಾಜದ ಮೇಲೆ ಹೇರಿವೆ. ಆ ಅಸಮಾನತೆಗಳನ್ನು ದೂರ ಮಾಡುವುದು ಆಧುನಿಕ ಸಮಾಜದ ಬಹುದೊಡ್ಡ ಜವಾಬ್ದಾರಿಯಾಗಿದೆ, ಕೇರಳವು ಅದನ್ನು ಹೆಚ್ಚಿನ ಪ್ರಮಾಣದಲ್ಲಿ ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

2025ರ ವೇಳೆಗೆ ಎಸ್‌ಸಿ, ಎಸ್‌ಟಿ ಮತ್ತು ಆದಿವಾಸಿ ಸಮುದಾಯಗಳಿಗೆ ಸೇರಿದ ಎಲ್ಲಾ ಭೂರಹಿತ ಮತ್ತು ವಸತಿ ರಹಿತರಿಗೆ ಭೂಮಿ ಮತ್ತು ವಸತಿ ಒದಗಿಸುವುದು ನಮ್ಮ ಘೋಷಿತ ನೀತಿಯಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಸ್‌ಸಿಗಳಿಗೆ 98,317 ನಿವೇಸನಗಳು ಮತ್ತು ಎಸ್‌ಟಿ 41,804 ನಿವೇಸನಗಳು ಸೇರಿದಂತೆ ಒಟ್ಟು 1,40,121 ನಿವೇಸನಗಳನ್ನು ಹಂಚಲಾಗಿದೆ. ಹಿಂದುಳಿದ ವರ್ಗದ ಮಕ್ಕಳಿಗೆ ಆಧುನಿಕ ಯುಗದ ಸವಾಲುಗಳನ್ನು ಎದುರಿಸಲು ಅನುವು ಮಾಡಿಕೊಡುವ ಕಾರ್ಯಚಟುವಟಿಕೆಗಳು ಈಗಾಗಲೇ ರಾಜ್ಯ ಸರ್ಕಾರದಿಂದ ಪ್ರಾರಂಭವಾಗಿವೆ. ವಿದೇಶಿ ವಿಶ್ವವಿದ್ಯಾನಿಲಯಗಳಿಗೆ ಈ ಸಮುದಾಯದ ವಿದ್ಯಾರ್ಥಿಗಳನ್ನು ಕಳುಹಿಸಲು ಮತ್ತು ದೇಶ-ವಿದೇಶಗಳಲ್ಲಿ ಉತ್ತಮ ಉದ್ಯೋಗಗಳನ್ನು ಕಲ್ಪಿಸುವ ದೃಷ್ಟಿಯಿಂದ ಸರ್ಕಾರವು ಪರಿಣಾಮಕಾರಿಯಾಗಿ ಮಧ್ಯಪ್ರವೇಶಿಸುತ್ತಿದೆ. ರಾಜ್ಯದಲ್ಲಿ ಜಾರಿಗೆ ತರುತ್ತಿರುವ ವಿದೇಶಿ ಶಿಕ್ಷಣ ಕಾರ್ಯಕ್ರಮದಡಿ ಎಸ್‌ಸಿ, ಎಸ್‌ಟಿ ಮತ್ತು ಇತರೆ ಹಿಂದುಳಿದ ವರ್ಗಗಳ 425 ವಿದ್ಯಾರ್ಥಿಗಳಿಗೆ ಇದುವರೆಗೆ ವಿವಿಧ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಲು ಅವಕಾಶ ನೀಡಲಾಗಿದೆ. ಈ ಯೋಜನೆಯಡಿಯಲ್ಲಿ 10 ಲಕ್ಷದಿಂದ 25 ಲಕ್ಷದವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ವಿವಿಧ ಹಿಂದುಳಿದ ಸಮುದಾಯಗಳ ಜೀವನ ಮಟ್ಟವು ಇತರ ರಾಜ್ಯಗಳಿಗಿಂತ ಕೇರಳದಲ್ಲಿ ಉತ್ತಮವಾಗಿದೆ ಎಂದು ಹೇಳಿದ ವಿಜಯನ್, ತಮ್ಮ ಸರ್ಕಾರವು ವಿವಿಧ ಕಾರ್ಯಕ್ರಮಗಳ ಮೂಲಕ ಅದನ್ನು ಇನ್ನಷ್ಟು ಸುಧಾರಿಸಲು ಪ್ರಯತ್ನಿಸುತ್ತಿದೆ. ನಮ್ಮ ಸಾರ್ವಜನಿಕ ಜಾಗೃತಿಗೆ ಮೂಢನಂಬಿಕೆ, ಅಸ್ಪೃಶ್ಯತೆ  ಮುಂತಾದವುಗಳನ್ನು ತುಂಬುವ ಪ್ರಯತ್ನಗಳು ನಡೆಯುತ್ತಿವೆ. ಈ ಪ್ರವೃತ್ತಿಗಳ ವಿರುದ್ಧ ನಾವು ಬಹಳ ಜಾಗರೂಕರಾಗಿರಬೇಕು ಎಂದು ಸಿಎಂ ಪಿಣರಾಯ್‌ ವಿಜಯನ್‌ ಹೇಳಿದ್ದಾರೆ.

ಇದನ್ನು ಓದಿ: ಪೊಲೀಸ್ ದಾಳಿಗೆ ರೈತ ಸಾವು ಆರೋಪ: ಎಫ್‌ಐಆರ್ ದಾಖಲಿಸಲು ಪಟ್ಟು ಹಿಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...