Homeಮುಖಪುಟಕೇರಳದ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯ: LDF ಸಭೆಯಲ್ಲಿ ಮಹತ್ವದ ನಿರ್ಧಾರ

ಕೇರಳದ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯ: LDF ಸಭೆಯಲ್ಲಿ ಮಹತ್ವದ ನಿರ್ಧಾರ

- Advertisement -
- Advertisement -

ಕೇರಳದ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಮತ್ತು ಜನವಿರೋಧಿ ನೀತಿಗಳನ್ನು ಖಂಡಿಸಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಜನವರಿಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ದೆಹಲಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ಶುಕ್ರವಾರ ನಡೆದ ಕೇರಳದ ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್(ಎಲ್ ಡಿಎಫ್) ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಎಲ್‌ಡಿಎಫ್ ಸಂಚಾಲಕ ಮತ್ತು ಸಿಪಿಐ(ಎಂ) ಹಿರಿಯ ನಾಯಕ ಇ ಪಿ ಜಯರಾಜನ್ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯೇತರ ಆಡಳಿತವಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಈ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುವುದು. ಎಲ್ಲಾ ಸಮಾನ ಮನಸ್ಕ ಪಕ್ಷಗಳನ್ನು ಕೂಡ ಪ್ರತಿಭಟನೆಗೆ ಆಹ್ವಾನಿಸಲಾಗುವುದು ಎಂದು ಹೇಳಿದ್ದಾರೆ.

ಕೇರಳ ಎಡರಂಗದ ಎಲ್ಲಾ ಸಚಿವರು, ಶಾಸಕರು ಮತ್ತು ಸಂಸದರು ರಾಜ್ಯದ ನಿಜವಾದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕೇಂದ್ರದ ಜನವಿರೋಧಿ ನೀತಿಗಳನ್ನು ಖಂಡಿಸುವ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಅದಕ್ಕೂ ಮುನ್ನ ಕೇರಳದ ಬಗ್ಗೆ ಕೇಂದ್ರದ ನಿರ್ಲಕ್ಷ್ಯ ವಿಚಾರದಲ್ಲಿ ಸರಣಿ ಅಭಿಯಾನ ನಡೆಸಲು ಪಕ್ಷವು ತೀರ್ಮಾನಿಸಿದೆ.

ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್‌ನ 18 ಸಂಸದರು ಲೋಕಸಭೆಯಲ್ಲಿದ್ದರೂ ಅವರು ಕೇರಳದ ಬಗ್ಗೆ ಕೇಂದ್ರದ ನಿರ್ಲಕ್ಷ್ಯದ ಬಗ್ಗೆ ಮಾತನಾಡುತ್ತಿಲ್ಲ ಎಂದು ಜಯರಾಜನ್ ಆರೋಪಿಸಿದ್ದಾರೆ.

ಇತ್ತೀಚೆಗೆ ವಿಧಾನಸಭೆಯಲ್ಲಿ ಅಂಗೀಕಾರವಾದ ಬಿಲ್‌ಗೆ ಕೇರಳ ರಾಜ್ಯಪಾಲರಾದ ಆರೀಫ್‌ ಮೊಹಮ್ಮದ್‌ ಖಾನ್‌ ಅವರು ಅಂಕಿತ ಹಾಕುತ್ತಿಲ್ಲ ಎಂದು ಕೇರಳ ಸರಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ರಾಜ್ಯಪಾಲರ ವಿರುದ್ಧ ಸುಪ್ರೀಂಕೋರ್ಟ್‌ಗೆ ದೂರು ನೀಡಿದ ಮೂರನೇ ರಾಜ್ಯ ಕೇರಳವಾಗಿದೆ.

ಪಂಜಾಬ್‌ ಸರಕಾರ ಸಲ್ಲಿಸಿದ ರಾಜ್ಯಪಾಲರ ವಿರುದ್ಧದ ಅರ್ಜಿಯಲ್ಲಿ ಸುಪ್ರೀಂಕೋರ್ಟ್‌, ರಾಜ್ಯಪಾಲರು ಚುನಾಯಿತ ಪ್ರತಿನಿಧಿಗಳಲ್ಲ ಎಂಬುದನ್ನು ಅರ್ಥೈಸಬೇಕು ಎಂದು ಹೇಳಿದ್ದರು. ಸುಪ್ರೀಂಕೋರ್ಟ್‌ಗೆ ಈ ಕುರಿತು ವಿಷಯ ತಲುಪುವ ಮುನ್ನವೇ ಇತ್ಯರ್ಥ ಆಗಬೇಕು ಎಂದು ಹೇಳಿದ್ದರು.

 ಇದನ್ನು ಓದಿ: ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ: ಅಲಹಾಬಾದ್ ಹೈಕೋರ್ಟ್‌ ಆದೇಶಕ್ಕೆ ತಡೆಗೆ ಸುಪ್ರೀಂ ನಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...