Homeಮುಖಪುಟಕೇರಳ ಸಿಎಂ ಭೇಟಿಯಾದ ಡಬ್ಲ್ಯುಸಿಸಿ ಸದಸ್ಯರು; ಹೇಮಾ ಸಮಿತಿ ವರದಿಯ ಮುಂದಿನ ಕ್ರಮಕ್ಕೆ ಒತ್ತಾಯ

ಕೇರಳ ಸಿಎಂ ಭೇಟಿಯಾದ ಡಬ್ಲ್ಯುಸಿಸಿ ಸದಸ್ಯರು; ಹೇಮಾ ಸಮಿತಿ ವರದಿಯ ಮುಂದಿನ ಕ್ರಮಕ್ಕೆ ಒತ್ತಾಯ

- Advertisement -
- Advertisement -

ಹೇಮಾ ಸಮಿತಿಯ ವರದಿ ಪ್ರಕಟವಾದ ವಾರಗಳ ನಂತರ, ಮಲಯಾಳಂ ಮಹಿಳಾ ನಟರ ವೇದಿಕೆಯಾದ ವುಮೆನ್ ಇನ್ ಸಿನಿಮಾ ಕಲೆಕ್ಟಿವ್ (ಡಬ್ಲ್ಯುಸಿಸಿ) ಸದಸ್ಯರು ಬುಧವಾರ ಬೆಳಿಗ್ಗೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿ, ಮುಂದಿನ ಕ್ರಮಕ್ಕಾಗಿ ಒತ್ತಾಯಿಸಿದ್ದಾರೆ. 2017 ರಲ್ಲಿ ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳಾ ನಟರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಸಮಸ್ಯೆಗಳನ್ನು ಅಧ್ಯಯನ ಮಾಡಲು ಡಬ್ಲ್ಯುಸಿಸಿಯ ಒತ್ತಾಯದ ಮೇರೆಗೆ ಹೇಮಾ ಸಮಿತಿಯನ್ನು ಕೇರಳ ಸರ್ಕಾರ ರಚಿಸಿತ್ತು.

ಹೇಮಾ ಸಮಿತಿಯ ಮುಂದೆ ತಮ್ಮ ಅನುಭವಗಳ ಬಗ್ಗೆ ಮಾತನಾಡಿದ ಮಹಿಳೆಯರ ಖಾಸಗಿತನದ ಬಗ್ಗೆ ಸರ್ಕಾರ ಸೂಕ್ಷ್ಮವಾಗಿರಬೇಕು ಎಂದು ಡಬ್ಲ್ಯುಸಿಸಿ ಸಿಎಂಗೆ ಬರೆದ ಪತ್ರದಲ್ಲಿ ಒತ್ತಾಯಿಸಿದೆ. ವರದಿಯಲ್ಲಿನ ಅಂಶಗಳ ಕುರಿತು ತನಿಖೆ ನಡೆಸಲು ಪೊಲೀಸ್ ಅಧಿಕಾರಿಗಳ ವಿಶೇಷ ತನಿಖಾ ತಂಡವನ್ನು ಸರ್ಕಾರ ರಚಿಸಿರುವ ಹಿನ್ನೆಲೆಯಲ್ಲಿ ಈ ಮನವಿ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇರಳದ ಹೈಕೋರ್ಟ್ ಆಡಿಯೋ ರೆಕಾರ್ಡಿಂಗ್‌ಗಳು ಸೇರಿದಂತೆ ಸಂಪೂರ್ಣ ಹೇಮಾ ಸಮಿತಿಯ ವರದಿಯನ್ನು ಎಸ್‌ಐಟಿಗೆ ಹಸ್ತಾಂತರಿಸುವಂತೆ ಎರಡು ದಿನಗಳ ಹಿಂದೆ ಸರ್ಕಾರವನ್ನು ಕೇಳಿತ್ತು. ಅಲ್ಲದೆ, ಈ ಅಪರಾಧಗಳ ವಿರುದ್ಧ ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂಬುದರ ಕುರಿತು ವರದಿಯನ್ನು ಸಲ್ಲಿಸುವಂತೆ ಎಸ್‌ಐಟಿಗೆ ಸೂಚಿಸಿತು.

WCC ಮಲಯಾಳಂ ಚಲನಚಿತ್ರೋದ್ಯಮವನ್ನು ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯಿದೆ ಕಾಯ್ದೆಯ (POSH) ವ್ಯಾಪ್ತಿಗೆ ತರಲು ಸಿಎಂ ಅವರನ್ನು ಕೇಳಿದೆ. WCC ಈ  ಹಿಂದೆ ನಡೆಸಿದ್ದ ಪ್ರಯತ್ನಗಳ ನಂತರ, ನ್ಯಾಯಾಲಯಕ್ಕೆ ಹೋಗುವುದು ಸೇರಿದಂತೆ, POSH ಕಾಯಿದೆಯಡಿಯಲ್ಲಿ ಆಂತರಿಕ ಸಮಿತಿಗಳು (ICs) ಪ್ರತಿ ಚಲನಚಿತ್ರ ಸೆಟ್‌ನಲ್ಲಿ ಇರಬೇಕು ಎಂದು ಕಡ್ಡಾಯಗೊಳಿಸಲಾಗಿತ್ತು.

ಚಲನಚಿತ್ರ ನಿರ್ಮಾಣವು ಲೈಂಗಿಕ ಕಿರುಕುಳದ ದೂರು ಪರಿಹಾರ ಕೋಶವನ್ನು ಹೊಂದಿರಬೇಕು ಮತ್ತು ಅಂತಹ ಕೋಶವನ್ನು ರಚಿಸಲಾಗಿದೆ ಎಂದು ಪ್ರಮಾಣಪತ್ರವನ್ನು ನೀಡದೆ ಯಾವುದೇ ಚಲನಚಿತ್ರವನ್ನು ನೋಂದಾಯಿಸಬಾರದು ಎಂದು ನ್ಯಾಯಾಲಯ ತೀರ್ಪು ನೀಡಿತ್ತು.

ಇದನ್ನೂಓದಿ: ನಾವು ಸಂವಿಧಾನ ಎತ್ತಿಹಿಡಿಯುವ ಮಾತನಾಡುವಾಗ ಬಿಜೆಪಿಗೆ ಯಾಕೆ ಸಮಸ್ಯೆಯಾಗುತ್ತದೆ: ಅಮಿತ್ ಶಾಗೆ ಕಾಂಗ್ರೆಸ್ ತಿರುಗೇಟು

ಕೇರಳ ಚಲನಚಿತ್ರ ವಾಣಿಜ್ಯ ಮಂಡಳಿಯ ನೇತೃತ್ವದಲ್ಲಿ ವಿವಿಧ ಚಲನಚಿತ್ರ ಸಂಸ್ಥೆಗಳ ಸದಸ್ಯರನ್ನೊಳಗೊಂಡ 27 ಸದಸ್ಯರ ಮೇಲ್ವಿಚಾರಣಾ ಸಮಿತಿಯನ್ನು ರಚಿಸಲಾಯಿತು. POSH ಕಾಯಿದೆಯ ಪ್ರಕಾರ ಈ ಸಮಿತಿಯನ್ನು ಮಹಿಳಾ ಅಧ್ಯಕ್ಷರು ಮತ್ತು ಹೆಚ್ಚಾಗಿ ಮಹಿಳಾ ಸದಸ್ಯರೊಂದಿಗೆ ಶಾಸನಬದ್ಧ ಸಮಿತಿಯಾಗಿ ಪುನರ್ರಚಿಸಬೇಕೆಂದು WCC ಕೇಳಿದೆ.

ಕೇರಳ ರಾಜ್ಯ ಚಲನಚಿತ್ರ ಅಭಿವೃದ್ಧಿ ನಿಗಮದ ಯೋಜನೆಯಲ್ಲಿ ಮಹಿಳಾ ಚಲನಚಿತ್ರ ನಿರ್ಮಾಪಕರಿಗೆ ಧನಸಹಾಯ ನೀಡುವ ಸರ್ಕಾರದ ಉಪಕ್ರಮವನ್ನು ಶ್ಲಾಘಿಸಿರುವ ಡಬ್ಲ್ಯುಸಿಸಿ, ಹೆಚ್ಚಿನ ಹಣದೊಂದಿಗೆ ಯೋಜನೆಯನ್ನು ಮುಂದುವರೆಸಲು ಮತ್ತು ನಿರ್ಮಾಣದ ಪ್ರತಿಯೊಂದು ಹಂತದಲ್ಲೂ ಮಹಿಳೆಯರನ್ನು ತೊಡಗಿಸಿಕೊಳ್ಳಲು ಒತ್ತಾಯಿಸಿದೆ.

ಇದನ್ನೂಓದಿ: ದ್ವೇಷ ಭಾಷಣ ಪ್ರಕರಣ: ರಾಜ್ಯ ಸರ್ಕಾರವನ್ನು ಪ್ರತಿವಾದಿಯನ್ನಾಗಿ ಮಾಡುವಂತೆ ಸುಪ್ರೀಂ ಮೆಟ್ಟಿಲೇರಿದ ಅಣ್ಣಾಮಲೈ

ಸಿ.ಎಂ.ಗೆ ಬರೆದ ಪತ್ರದಲ್ಲಿ ಹೆಚ್ಚಿನ ಹೆಣ್ಣುಮಕ್ಕಳಿಗೆ ಚಲನಚಿತ್ರ ಶಾಲೆಗಳಲ್ಲಿ ಅಧ್ಯಯನ ಮಾಡಲು ಅವಕಾಶಗಳನ್ನು ನೀಡುವ ಅಗತ್ಯವನ್ನು ಎತ್ತಿ ತೋರಿಸಿದೆ. ಜೊತೆಗೆ ವಿದ್ಯಾರ್ಥಿವೇತನ ಮತ್ತು ಇತರ ಶುಲ್ಕ ಪ್ರಯೋಜನಗಳನ್ನು ನೀಡುವಂತೆ ಕೇಳಿದೆ. ಸಿನಿಮಾಕ್ಕೆ ಸಂಬಂಧಿಸಿದ ಸರ್ಕಾರಿ ಉಪಕ್ರಮಗಳಲ್ಲಿ ಮಹಿಳೆಯರು ಪ್ರಮುಖ ಸ್ಥಾನಗಳನ್ನು ಹೊಂದಿರುವುದು ಸಹ ಮುಖ್ಯವಾಗಿದೆ ಎಂದು ಅದು ಹೇಳಿದೆ.

2019 ರ ಡಿಸೆಂಬರ್‌ನಲ್ಲಿ ಸರ್ಕಾರಕ್ಕೆ ಸಲ್ಲಿಸಲಾದ ಹೇಮಾ ಸಮಿತಿಯ ವರದಿಯನ್ನು ಟೀಕೆಗಳು ಮತ್ತು ರಾಜ್ಯ ಮಾಹಿತಿ ಆಯೋಗದ ನೇರ ಆದೇಶದ ನಂತರ ಈ ವರ್ಷದ ಆಗಸ್ಟ್‌ನಲ್ಲಿ ಸಾರ್ವಜನಿಕಗೊಳಿಸಲಾಯಿತು. ಈ ವರದಿಯನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಆಗಸ್ಟ್ 19 ರಂದು ಮರುರೂಪಿಸಲಾದ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದ್ದು, ನಂತರ ಹಲವಾರು ಮಹಿಳೆಯರು ಚಿತ್ರರಂಗದಲ್ಲಿ ತಾವು ಎದುರಿಸಿದ ವಿವಿಧ ಹಂತದ ಕಿರುಕುಳದ ಬಗ್ಗೆ ಮಾತನಾಡಿದ್ದಾರೆ. ವರದಿಯ ಬಗ್ಗೆ ಸುದೀರ್ಘ ಮೌನಕ್ಕಾಗಿ ಎರಡು ದಿನಗಳ ಹಿಂದೆಯಷ್ಟೆ ಹೈಕೋರ್ಟ್ ರಾಜ್ಯ  ಸರ್ಕಾರವನ್ನು ಕಟುವಾಗಿ ತರಾಟೆಗೆ ತೆಗೆದುಕೊಂಡಿತ್ತು.

ವಿಡಿಯೊ ನೋಡಿ: ಗದ್ದರ್ ಪ್ರಥಮ ಪರಿನಿಬ್ಬಾಣ: ಗದ್ದರ್‌ ಜೊತೆಗಿನ ಒಡನಾಟದ ನೆನಪು ಹಂಚಿಕೊಂಡ ಪಿಚ್ಚಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...