Homeಮುಖಪುಟಹಳ್ಳಿಗಳ ಕನ್ನಡ ಹೆಸರು ಮಲಯಾಳೀಕರಣ: ವಿವಾದದ ಬಗ್ಗೆ ಕೇರಳ ಸಿಎಂ ಪ್ರತಿಕ್ರಿಯೆ ಹೀಗಿದೆ!

ಹಳ್ಳಿಗಳ ಕನ್ನಡ ಹೆಸರು ಮಲಯಾಳೀಕರಣ: ವಿವಾದದ ಬಗ್ಗೆ ಕೇರಳ ಸಿಎಂ ಪ್ರತಿಕ್ರಿಯೆ ಹೀಗಿದೆ!

- Advertisement -
- Advertisement -

ಗಡಿ ಜಿಲ್ಲೆಯಾಗಿರುವ ಕೇರಳದ ಕಾಸರಗೋಡಿನ ಗ್ರಾಮಗಳ ಹೆಸರುಗಳನ್ನು ಮಲಯಾಳೀಕರಣ ಮಾಡಲಾಗುತ್ತಿದೆ ಎಂದು ಕರ್ನಾಟಕದ ನಾಯಕರು ಎತ್ತಿರುವ ಆತಂಕಗಳಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕದೊಂದಿಗೆ ಗಡಿ ಹಂಚಿಕೊಳ್ಳುವ ಕಾಸರಗೋಡಿನ ಗ್ರಾಮಗಳ ಹೆಸರನ್ನು ಬದಲಾಯಿಸುವ ಉದ್ದೇಶ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.

ಕನ್ನಡ ಮತ್ತು ತುಳು ಭಾಷೆಯಲ್ಲಿ ಇರುವ ಹಳ್ಳಿಗಳ ಹೆಸರುಗಳನ್ನು ಮಲಯಾಳಂ ಭಾಷೆಗೆ ಬದಲಾಯಿಸುವ ಬಗ್ಗೆ ಯಾವುದೇ ಮಾತುಕತೆ ಹಿಂದಿನಿಂದಲೂ ಇರಲಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಇಂತಹ ಸುದ್ದಿಗಳು ಬಂದಿದ್ದಾದರೂ ಎಲ್ಲಿಂದ ಎಂದು ಮುಖ್ಯಮಂತ್ರಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದೊಂದಿಗೆ ಗಡಿ ಹಂಚಿಕೊಳ್ಳುವ ಗ್ರಾಮಗಳ ಹೆಸರನ್ನು ಬದಲಾಯಿಸಲಾಗುತ್ತಿದೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ, ಹಲವಾರು ನಾಯಕರು ಪಕ್ಷಬೇಧ ಮರೆತು ಈ ಪ್ರಕ್ರಿಯೆಯಿಂದ ಹಿಂದೆ ಸರಿಯಬೇಕು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಮನವಿ ಮಾಡಿದ್ದರು.

ಇದನ್ನೂ ಓದಿ: ಕಾಸರಗೋಡು ಗಡಿ ಗ್ರಾಮಗಳ ಹೆಸರು ಬದಲಿಸುವಿಕೆ: ಸತ್ಯ ಮತ್ತು ಅರೆಸತ್ಯಗಳು

ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಿಎಂ ವಿಜಯನ್ ಅವರಿಗೆ ಪತ್ರ ಬರೆದಿದ್ದು, ಈ ಪ್ರದೇಶದಲ್ಲಿನ ಸಂಸ್ಕೃತಿ ಮತ್ತು ಭಾವನಾತ್ಮಕ ಬಾಂಧವ್ಯವನ್ನು ವಿವರಿಸಿದ್ದಾರೆ.

“ಇತ್ತೀಚಿನ ದಿನಗಳಲ್ಲಿ, ಈ ಪ್ರದೇಶಗಳ ನಿವಾಸಿಗಳಿಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ನೀಡದೆ ಕೆಲವು ಹಳ್ಳಿಗಳ ಹೆಸರನ್ನು ಬದಲಾಯಿಸಲು ಸ್ಥಳೀಯ ಸಂಸ್ಥೆಗಳು ಪ್ರಯತ್ನಿಸುತ್ತಿವೆ” ಎಂದು ಯಡಿಯೂರಪ್ಪ ಅವರು ಪಿಣರಾಯಿ ವಿಜಯನ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

ಸಿದ್ದರಾಮಯ್ಯ ಅವರು ಪತ್ರದಲ್ಲಿ “ಎರಡು ರಾಜ್ಯಗಳ ನಡುವೆ ಭೌಗೋಳಿಕವಾದ ಗಡಿರೇಖೆಯಿದ್ದರೂ ಎರಡೂ ರಾಜ್ಯಗಳ ನಡುವೆ ಸಾಂಸ್ಕೃತಿಕವಾದ ಅವಿನಾಭಾವ ಸಂಬಂಧ ಇದೆ. ಗಡಿ ಪ್ರದೇಶದಲ್ಲಿ ಕನ್ನಡಿಗರು ಮತ್ತು ಕೇರಳಿಗರು ಸೋದರ-ಸೋದರಿಯರಂತೆ ಸಹಬಾಳ್ವೆ ನಡೆಸುತ್ತಿದ್ದಾರೆ. ಗ್ರಾಮಗಳ ಹೆಸರಿನ ಜೊತೆ ಅಲ್ಲಿನ ಸ್ಥಳೀಯರು ಭಾವನಾತ್ಮಕ ಸಂಬಂಧ ಹೊಂದಿರುತ್ತಾರೆ. ಹೆಸರಿನ ಬದಲಾವಣೆಯಿಂದ ತಾಯ್ನಾಡಿನ ಜೊತೆಗಿನ ಅವರ ಕರುಳಬಳ್ಳಿಯ ಸಂಬಂಧವನ್ನು ಕಿತ್ತುಕೊಂಡ ಹಾಗಾಗುತ್ತದೆ. ಹೀಗಿದ್ದರೂ ಕೆಲ ಗುಂಪುಗಳು ಈ ಸಂಬಂಧವನ್ನು ಕಲಕಲು ಪ್ರಯತ್ನಿಸುತ್ತಿರುವುದು ಖೇದಕರ ಸಂಗತಿ” ಎಂದು ಹೇಳಿದ್ದರೆ.

ಇದನ್ನೂ ಓದಿ: ಕಾಸರಗೋಡಿನ ಗ್ರಾಮಗಳ ಕನ್ನಡದ ಹೆಸರು ಬದಲಿಸದಂತೆ ಕೇರಳ ಸಿಎಂಗೆ ಪತ್ರ ಬರೆಯುವೆ: ಬಿಎಸ್‌ವೈ

ಈ ನಡುವೆ ಕೇರಳದ ಮಂಜೇಶ್ವರ ಶಾಸಕ, ಕನ್ನಡಿಗ ಎ.ಕೆ.ಎಂ.ಆಶ್ರಫ್ ಮತ್ತು ಕಾಸರಗೋಡು ಜಿಲ್ಲಾಧಿಕಾರಿ ಸಜಿತ್ ಬಾಬು ಅವರು ಈ ಬಗ್ಗೆ ಸ್ಪಷ್ಟೀಕರಣ ನೀಡಿ ಹೆಸರು ಬದಲಾವಣೆಯ ಪ್ರಸ್ತಾಪ ಇಲ್ಲವೆಂದು ತಿಳಿಸಿದ್ದರು.

ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ (KBADA) ಅಧ್ಯಕ್ಷರಾಗಿರುವ ಡಾ. ಸಿ ಸೋಮಶೇಖರ ಅವರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಕೇರಳದ ಕಾಸರಗೋಡು ಭಾಗದಲ್ಲಿ ಕನ್ನಡದ ಹೆಸರುಗಳನ್ನು ಬದಲಾಯಿಸುವ ಪ್ರಯತ್ನ ನಡೆಯುತ್ತಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು. ಆ ನಂತರ ವಿವಾದ ದೊಡ್ಡ ರೀತಿಯಲ್ಲಿ ಸದ್ದು ಮಾಡಿತ್ತು. 

ಇದನ್ನೂ ಓದಿ: ಕೇರಳದ ಗ್ರಾಮಗಳ ಹೆಸರು ಬದಲಾವಣೆ ಇಲ್ಲವೆಂದು ಶಾಸಕ ಎ.ಕೆ.ಎಂ. ಅಶ್ರಫ್ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...