Homeಮುಖಪುಟಹಳ್ಳಿಗಳ ಕನ್ನಡ ಹೆಸರು ಮಲಯಾಳೀಕರಣ: ವಿವಾದದ ಬಗ್ಗೆ ಕೇರಳ ಸಿಎಂ ಪ್ರತಿಕ್ರಿಯೆ ಹೀಗಿದೆ!

ಹಳ್ಳಿಗಳ ಕನ್ನಡ ಹೆಸರು ಮಲಯಾಳೀಕರಣ: ವಿವಾದದ ಬಗ್ಗೆ ಕೇರಳ ಸಿಎಂ ಪ್ರತಿಕ್ರಿಯೆ ಹೀಗಿದೆ!

- Advertisement -
- Advertisement -

ಗಡಿ ಜಿಲ್ಲೆಯಾಗಿರುವ ಕೇರಳದ ಕಾಸರಗೋಡಿನ ಗ್ರಾಮಗಳ ಹೆಸರುಗಳನ್ನು ಮಲಯಾಳೀಕರಣ ಮಾಡಲಾಗುತ್ತಿದೆ ಎಂದು ಕರ್ನಾಟಕದ ನಾಯಕರು ಎತ್ತಿರುವ ಆತಂಕಗಳಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕದೊಂದಿಗೆ ಗಡಿ ಹಂಚಿಕೊಳ್ಳುವ ಕಾಸರಗೋಡಿನ ಗ್ರಾಮಗಳ ಹೆಸರನ್ನು ಬದಲಾಯಿಸುವ ಉದ್ದೇಶ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.

ಕನ್ನಡ ಮತ್ತು ತುಳು ಭಾಷೆಯಲ್ಲಿ ಇರುವ ಹಳ್ಳಿಗಳ ಹೆಸರುಗಳನ್ನು ಮಲಯಾಳಂ ಭಾಷೆಗೆ ಬದಲಾಯಿಸುವ ಬಗ್ಗೆ ಯಾವುದೇ ಮಾತುಕತೆ ಹಿಂದಿನಿಂದಲೂ ಇರಲಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಇಂತಹ ಸುದ್ದಿಗಳು ಬಂದಿದ್ದಾದರೂ ಎಲ್ಲಿಂದ ಎಂದು ಮುಖ್ಯಮಂತ್ರಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದೊಂದಿಗೆ ಗಡಿ ಹಂಚಿಕೊಳ್ಳುವ ಗ್ರಾಮಗಳ ಹೆಸರನ್ನು ಬದಲಾಯಿಸಲಾಗುತ್ತಿದೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ, ಹಲವಾರು ನಾಯಕರು ಪಕ್ಷಬೇಧ ಮರೆತು ಈ ಪ್ರಕ್ರಿಯೆಯಿಂದ ಹಿಂದೆ ಸರಿಯಬೇಕು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಮನವಿ ಮಾಡಿದ್ದರು.

ಇದನ್ನೂ ಓದಿ: ಕಾಸರಗೋಡು ಗಡಿ ಗ್ರಾಮಗಳ ಹೆಸರು ಬದಲಿಸುವಿಕೆ: ಸತ್ಯ ಮತ್ತು ಅರೆಸತ್ಯಗಳು

ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಿಎಂ ವಿಜಯನ್ ಅವರಿಗೆ ಪತ್ರ ಬರೆದಿದ್ದು, ಈ ಪ್ರದೇಶದಲ್ಲಿನ ಸಂಸ್ಕೃತಿ ಮತ್ತು ಭಾವನಾತ್ಮಕ ಬಾಂಧವ್ಯವನ್ನು ವಿವರಿಸಿದ್ದಾರೆ.

“ಇತ್ತೀಚಿನ ದಿನಗಳಲ್ಲಿ, ಈ ಪ್ರದೇಶಗಳ ನಿವಾಸಿಗಳಿಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ನೀಡದೆ ಕೆಲವು ಹಳ್ಳಿಗಳ ಹೆಸರನ್ನು ಬದಲಾಯಿಸಲು ಸ್ಥಳೀಯ ಸಂಸ್ಥೆಗಳು ಪ್ರಯತ್ನಿಸುತ್ತಿವೆ” ಎಂದು ಯಡಿಯೂರಪ್ಪ ಅವರು ಪಿಣರಾಯಿ ವಿಜಯನ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

ಸಿದ್ದರಾಮಯ್ಯ ಅವರು ಪತ್ರದಲ್ಲಿ “ಎರಡು ರಾಜ್ಯಗಳ ನಡುವೆ ಭೌಗೋಳಿಕವಾದ ಗಡಿರೇಖೆಯಿದ್ದರೂ ಎರಡೂ ರಾಜ್ಯಗಳ ನಡುವೆ ಸಾಂಸ್ಕೃತಿಕವಾದ ಅವಿನಾಭಾವ ಸಂಬಂಧ ಇದೆ. ಗಡಿ ಪ್ರದೇಶದಲ್ಲಿ ಕನ್ನಡಿಗರು ಮತ್ತು ಕೇರಳಿಗರು ಸೋದರ-ಸೋದರಿಯರಂತೆ ಸಹಬಾಳ್ವೆ ನಡೆಸುತ್ತಿದ್ದಾರೆ. ಗ್ರಾಮಗಳ ಹೆಸರಿನ ಜೊತೆ ಅಲ್ಲಿನ ಸ್ಥಳೀಯರು ಭಾವನಾತ್ಮಕ ಸಂಬಂಧ ಹೊಂದಿರುತ್ತಾರೆ. ಹೆಸರಿನ ಬದಲಾವಣೆಯಿಂದ ತಾಯ್ನಾಡಿನ ಜೊತೆಗಿನ ಅವರ ಕರುಳಬಳ್ಳಿಯ ಸಂಬಂಧವನ್ನು ಕಿತ್ತುಕೊಂಡ ಹಾಗಾಗುತ್ತದೆ. ಹೀಗಿದ್ದರೂ ಕೆಲ ಗುಂಪುಗಳು ಈ ಸಂಬಂಧವನ್ನು ಕಲಕಲು ಪ್ರಯತ್ನಿಸುತ್ತಿರುವುದು ಖೇದಕರ ಸಂಗತಿ” ಎಂದು ಹೇಳಿದ್ದರೆ.

ಇದನ್ನೂ ಓದಿ: ಕಾಸರಗೋಡಿನ ಗ್ರಾಮಗಳ ಕನ್ನಡದ ಹೆಸರು ಬದಲಿಸದಂತೆ ಕೇರಳ ಸಿಎಂಗೆ ಪತ್ರ ಬರೆಯುವೆ: ಬಿಎಸ್‌ವೈ

ಈ ನಡುವೆ ಕೇರಳದ ಮಂಜೇಶ್ವರ ಶಾಸಕ, ಕನ್ನಡಿಗ ಎ.ಕೆ.ಎಂ.ಆಶ್ರಫ್ ಮತ್ತು ಕಾಸರಗೋಡು ಜಿಲ್ಲಾಧಿಕಾರಿ ಸಜಿತ್ ಬಾಬು ಅವರು ಈ ಬಗ್ಗೆ ಸ್ಪಷ್ಟೀಕರಣ ನೀಡಿ ಹೆಸರು ಬದಲಾವಣೆಯ ಪ್ರಸ್ತಾಪ ಇಲ್ಲವೆಂದು ತಿಳಿಸಿದ್ದರು.

ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ (KBADA) ಅಧ್ಯಕ್ಷರಾಗಿರುವ ಡಾ. ಸಿ ಸೋಮಶೇಖರ ಅವರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಕೇರಳದ ಕಾಸರಗೋಡು ಭಾಗದಲ್ಲಿ ಕನ್ನಡದ ಹೆಸರುಗಳನ್ನು ಬದಲಾಯಿಸುವ ಪ್ರಯತ್ನ ನಡೆಯುತ್ತಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು. ಆ ನಂತರ ವಿವಾದ ದೊಡ್ಡ ರೀತಿಯಲ್ಲಿ ಸದ್ದು ಮಾಡಿತ್ತು. 

ಇದನ್ನೂ ಓದಿ: ಕೇರಳದ ಗ್ರಾಮಗಳ ಹೆಸರು ಬದಲಾವಣೆ ಇಲ್ಲವೆಂದು ಶಾಸಕ ಎ.ಕೆ.ಎಂ. ಅಶ್ರಫ್ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...