Homeಮುಖಪುಟಕೇರಳ - ಈಗ ಚುನಾವಣೆ ನಡೆದರೂ ಕಮ್ಯುನಿಷ್ಟ್ ಸರ್ಕಾರ ಮತ್ತೆ ಅಧಿಕಾರಕ್ಕೆ!

ಕೇರಳ – ಈಗ ಚುನಾವಣೆ ನಡೆದರೂ ಕಮ್ಯುನಿಷ್ಟ್ ಸರ್ಕಾರ ಮತ್ತೆ ಅಧಿಕಾರಕ್ಕೆ!

- Advertisement -
- Advertisement -

ಕೇರಳದಲ್ಲಿ ಈಗ ಚುನಾವಣೆ ನಡೆದರೆ ಭಾರತೀಯ ಕಮ್ಯುನಿಷ್ಟ್‌ ಪಕ್ಷ(ಮಾರ್ಕ್ಸ್‌ವಾದಿ) ನೇತೃತ್ವದ ಎಲ್‌ಡಿಎಫ್‌ ಸರ್ಕಾರ ರಾಜ್ಯದಲ್ಲಿ ಮತ್ತೇ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಹೀಗಾದರೆ ಕೇರಳದ 40 ವರ್ಷಗಳ ರಾಜಕೀಯ ಸಂಪ್ರದಾಯವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸರ್ಕಾರ ಮುರಿಯಲಿದೆ.

1980 ರಿಂದೀಚೆಗೆ, ಕೇರಳವು ಯಾವುದೇ ಪಕ್ಷ ಅಥವಾ ಮೈತ್ರಿ ಕೂಟಕ್ಕೆ ರಾಜ್ಯದಲ್ಲಿ ಮತ್ತೆ ಅಧಿಕಾರ ನೀಡಿಲ್ಲ.

ಏಷ್ಯಾನೆಟ್ ನ್ಯೂಸ್-ಸಿಫೋರ್ ಸಮೀಕ್ಷೆಯ ಪ್ರಕಾರ, 140 ಸದಸ್ಯರ ವಿಧಾನಸಭೆಯಲ್ಲಿ ಎಲ್‌ಡಿಎಫ್‌‌ 72-78 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಸರ್ಕಾರ ಬಹುಮತ ಪಡೆಯಲು 71 ಸ್ಥಾನಗಳು ಸಾಕಾಗುತ್ತದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್‌‌ಗೆ ಕೇವಲ 59-65 ಸ್ಥಾನಗಳಷ್ಟೇ ಸಿಗುತ್ತದೆ ಎಂದು ಅದು ತಿಳಿಸಿದೆ. ಯುಡಿಎಫ್‌ 2016 ರಲ್ಲಿ 47 ಸ್ಥಾನಗಳನ್ನು ಪಡೆದಿತ್ತು. ಬಿಜೆಪಿ ನೇತೃತ್ವದ ಎನ್‌ಡಿಎ 3-7 ಸ್ಥಾನಗಲು ಪಡೆಯುತ್ತದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಸಿಎಎ ಜಾರಿ ಮಾಡುವುದಿಲ್ಲ: ಅಮಿತ್ ಶಾಗೆ ಸ್ಪಷ್ಟ ಉತ್ತರ ನೀಡಿದ ಕೇರಳ ಮುಖ್ಯಮಂತ್ರಿ

ಉತ್ತರ ಮತ್ತು ದಕ್ಷಿಣ ಕೇರಳದಲ್ಲಿ ಯುಡಿಎಫ್‌ ಸ್ಥಾನಗಳನ್ನು ಕಳೆದುಕೊಳ್ಳಲಿದ್ದು ಅದು ಎಲ್‌ಡಿಎಫ್‌‌ ಪಾಲಾಗಲಿದೆ, ಆದರೆ ಮಧ್ಯ ಕೇರಳದಲ್ಲಿ ಯುಡಿಎಫ್ ಪ್ರಬಲವಾಲಿದೆ ಎಂದು ಎಂದು ಸಮೀಕ್ಷೆಯು ಊಹಿಸಿದೆ.

ಸಮೀಕ್ಷೆಯ ಪ್ರಕಾರ ಸುಮಾರು 39% ರಷ್ಟು ಜನರು ಪಿಣರಾಯಿ ವಿಜಯನ್ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಿ ಮರಳಬೇಕೆಂದು ತಿಳಿಸಿದ್ದಾರೆ. ಮಾಜಿ ಸಿಎಂ ಮತ್ತು ಕಾಂಗ್ರೆಸ್ ಮುಖಂಡ ಉಮ್ಮನ್ ಚಾಂಡಿ ಅವರನ್ನು 18% ಜನರಷ್ಟೇ ಆಯ್ಕೆ ಮಾಡಿಕೊಂಡರೆ, ಅವರ ಸಹೋದ್ಯೋಗಿ ಮತ್ತು ತಿರುವನಂತಪುರ ಸಂಸದ ಶಶಿ ತರೂರ್ ಅವರು 9% ಮತಗಳನ್ನು ಪಡೆದ್ದಾರೆ. ಆರೋಗ್ಯ ಸಚಿವೆ ಕೆ.ಕೆ.ಶೈಲಜಾ 7% ಮತಗಳನ್ನು ಪಡೆದರೆ, ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಮತ್ತು ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ 6% ಮತಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ: ಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಸಮೀಕ್ಷೆಯ ಪ್ರಕಾರ, 34% ರಷ್ಟು ಜನರು ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಉಚಿತ ಆಹಾರ ಕಿಟ್‌ಗಳನ್ನು ವಿತರಿಸಿದ್ದು ಎಲ್‌ಡಿಎಫ್ ಸರ್ಕಾರದ ದೊಡ್ಡ ಸಾಧನೆ ಎಂದು ಹೇಳಿದ್ದಾರೆ. ಪ್ರತಿಕ್ರಿಯಿಸಿದವರಲ್ಲಿ 27% ಜನರು ಕಲ್ಯಾಣ ಪಿಂಚಣಿ ನೀಡಿದ್ದು ದೊಡ್ಡ ಸಾಧನೆ ಎಂದಿದ್ದರೆ, 18% ಜನರು ಸರ್ಕಾರದ ಕೊರೊನಾ ನಿರ್ವಹಣೆಯನ್ನು ಶ್ಲಾಘಿಸಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

ಕಳೆದ ವರ್ಷ ಜೂನ್‌ನಲ್ಲಿ ಏಷ್ಯಾನೆಟ್ ನ್ಯೂಸ್-ಸಿಫೋರ್ ನಡೆಸಿದ ಇದೇ ರೀತಿಯ ಸಮೀಕ್ಷೆಯು ಚುನಾವಣೆಗಳನ್ನು ನಡೆಸಿದರೆ ಎಲ್‌ಡಿಎಫ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಊಹಿಸಿತ್ತು. ಅದರಂತೆ ಡಿಸೆಂಬರ್‌ನಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಲ್‌ಡಿಎಫ್ ಬಹುಪಾಲು ಪಂಚಾಯಿತಿಗಳು, ಬ್ಲಾಕ್ ಪಂಚಾಯಿತಿಗಳು, ಜಿಲ್ಲಾ ಪಂಚಾಯಿತಿಗಳು ಮತ್ತು ಕಾರ್ಪೋಷನ್‌‌ಗಳನ್ನು ಗೆಲ್ಲುವ ಮೂಲಕ ಭಾರಿ ಜಯಗಳಿಸಿತ್ತು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧದ ನಿರ್ಣಯ ಬೆಂಬಲಿಸಿದ ಕೇರಳದ ಬಿಜೆಪಿ ಶಾಸಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...