Homeಮುಖಪುಟಕೇರಳ: ಸ್ವಿಗ್ಗಿ ಕೆಲಸಗಾರರಿಂದ ಮುಂದುವರಿದ ಮುಷ್ಕರ; ಬೇಡಿಕೆಗೆ ಸ್ಪಂದಿಸುವುದೇ ಕಂಪೆನಿ?

ಕೇರಳ: ಸ್ವಿಗ್ಗಿ ಕೆಲಸಗಾರರಿಂದ ಮುಂದುವರಿದ ಮುಷ್ಕರ; ಬೇಡಿಕೆಗೆ ಸ್ಪಂದಿಸುವುದೇ ಕಂಪೆನಿ?

- Advertisement -
- Advertisement -

ಕೇರಳದ ಕೊಚ್ಚಿಯಲ್ಲಿ 5,000 ಸ್ವಿಗ್ಗಿ ಉದ್ಯೋಗಿಗಳು ಹೆಚ್ಚಿನ ಸಂಭಾವನೆ ಮತ್ತು ಕಾರ್ಮಿಕರಿಗೆ ಸಿಗಬೇಕಾದ ಸವಲತ್ತುಗಳಿಗಾಗಿ ಒತ್ತಾಯಿಸಿ ಮುಷ್ಕರ ನಡೆಸಿ 11 ದಿನಗಳು ಕಳೆದಿವೆ.

ಜಿಲ್ಲಾ ಕಾರ್ಮಿಕ ಅಧಿಕಾರಿಗಳು ನಡೆಸಿದ ಮಾತುಕತೆಗಳು ಮುರಿದು ಬಿದ್ದಿವೆ. ಸ್ವಿಗ್ಗಿಯು ತನ್ನ ಕಾರ್ಮಿಕರಿಗೆ ಸ್ಥಿರ ಮತ್ತು ವಿಶ್ವಾಸಾರ್ಹ ಆದಾಯದ ಅವಕಾಶಗಳನ್ನು ನೀಡುವುದಾಗಿ ಹೇಳುತ್ತಿದೆ. ಆದರೆ ಕಾರ್ಮಿಕರ ಪ್ರಮುಖ ಬೇಡಿಕೆಗಳಿಗೆ ಸಂಬಂಧಿಸಿದಂತೆ ಯಾವುದೇ ಭರವಸೆಯನ್ನು ನೀಡುತ್ತಿಲ್ಲ.

“ನಾನು ಬೆಳಿಗ್ಗೆ 8 ಗಂಟೆಗೆ ಅಪ್ಲಿಕೇಶನ್‌ಗೆ ಲಾಗಿನ್ ಆಗಿ, ಒಂಬತ್ತುವರೆವರೆಗೆ ಆರ್ಡರ್‌ಗಳನ್ನು ತೆಗೆದುಕೊಂಡರೆ, ನಾನು ಗಳಿಸುವ ಮೊತ್ತ ಗರಿಷ್ಠ 900 ರೂ. ಆಗಿರುತ್ತದೆ. ಅದರಲ್ಲಿ 400 ರೂ ಪೆಟ್ರೋಲ್‌ಗೆ ಹೋಗುತ್ತದೆ” ಎಂದು ಸ್ವಿಗ್ಗಿ ಡೆಲಿವರಿ ಪಾಲುದಾರರಾಗಿ ಅರೆಕಾಲಿಕ ಕೆಲಸ ಮಾಡುವ 27 ವರ್ಷದ ಬೆಸಿಲ್ ಎಲ್ಡೋ ಹೇಳುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“14 ಅಥವಾ 15 ಗಂಟೆಗಳ ಕಾಲ ಓಡಾಡಿದ ಬಳಿಕ, ಒಬ್ಬ ಉದ್ಯೋಗಿ ಕೇವಲ 300-400 ರೂ. ಗಳಿಸುತ್ತಾನೆ” ಎಂದು ವಿಷಾದಿಸುತ್ತಾರೆ ಬೆಸಿಲ್‌.

ಕೊಚ್ಚಿಯಲ್ಲಿರುವ ಸ್ವಿಗ್ಗಿ ಕಾರ್ಮಿಕರಿಗೆ ಪ್ರಸ್ತುತ ಪ್ರತಿ ಕಿ.ಮೀ.ಗೆ 5 ರೂ. ನೀಡಲಾಗುತ್ತಿದೆ. “ಆರ್ಡರ್‌ಗಳು ಕಡಿಮೆಯಾಗುತ್ತಿವೆ, ಆದರೆ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದೆ. ಇದರಿಂದಾಗಿ ಪ್ರತಿ ಕಿ.ಮೀಗೆ 8 ರೂ.ಗೆ ಹೆಚ್ಚಿಸಬೇಕು” ಎಂದು ಸ್ವಿಗ್ಗಿ ಕಾರ್ಮಿಕರು ಒತ್ತಾಯಿಸುತ್ತಿದ್ದಾರೆ.

ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನೊಂದಿಗೆ ಸಂಯೋಜಿತವಾಗಿರುವ ‘ಫುಡ್ ಆನ್‌ಲೈನ್ ಡೆಲಿವರಿ ವರ್ಕರ್ಸ್ ಅಸೋಸಿಯೇಷನ್ (FODW) ಅಕ್ಟೋಬರ್ 31ರಂದು ಕೊಚ್ಚಿಯಲ್ಲಿರುವ ಸ್ವಿಗ್ಗಿ ಉದ್ಯೋಗಿಗಳ ಕಚೇರಿಗೆ ಪತ್ರ ಬರೆಯಿತು. “ಉದ್ಯೋಗದಲ್ಲಿನ ಅನ್ಯಾಯ, ಪಾವತಿ ರಚನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ” ಕುರಿತು ಪತ್ರದಲ್ಲಿ ಉಲ್ಲೇಖಿಸಲಾಯಿತು.

ಪ್ರತಿ ವಾರ ಇನ್‌ಸೆನ್‌ಟೀವ್ಸ್‌ ನೀಡಬೇಕು. ವಾರದಲ್ಲಿ ಕನಿಷ್ಠ ಎರಡು ದಿನ ರಜೆ, ಭವಿಷ್ಯ ನಿಧಿ ಪ್ರಯೋಜನ, ಪಾವತಿ ರಚನೆಯಲ್ಲಿ ಕಾರ್ಮಿಕರ ಅನುಮತಿ, ಎರಡೂವರೆಗೆ ಕಿಮಿಗೆ 35 ರೂಪಾಯಿ ಪಾವತಿ- ಸೇರಿದಂತೆ ಮೊದಲಾದ ಬೇಡಿಕೆಗಳನ್ನು ಇಡಲಾಯಿತು.

ನವೆಂಬರ್ 12ರಂದು, ಕೊಚ್ಚಿಯ ಮರೈನ್ ಡ್ರೈವ್ ಬಳಿಯ ಸ್ವಿಗ್ಗಿ ಕಚೇರಿಗೆ ಡೆಲಿವರಿ ಪಾರ್ಟ್‌ನರ್‌‌‌ ತೆರಳಿ ಕಂಪನಿಯ ಅಧಿಕಾರಿಗಳ ಜೊತೆ ಮಾತನಾಡಿದರು. ಸಭೆಯಲ್ಲಿ ಆಪರೇಷನ್ ಮ್ಯಾನೇಜರ್‌ ಸೇರಿದಂತೆ ಸ್ವಿಗ್ಗಿಯ ನಾಲ್ವರು ಅಧಿಕಾರಿಗಳು ಭಾಗವಹಿಸಿದ್ದರು. ಕೆಲವು ಬೇಡಿಕೆಗಳನ್ನು ಅಂಗೀಕರಿಸುವುದಾಗಿ ಹೇಳಿದ ಕಂಪನಿಯು ಪ್ರಮುಖ ಬೇಡಿಕೆಯಾದ ಪಾವತಿ ಹೆಚ್ಚಳವನ್ನು ಒಪ್ಪಲಿಲ್ಲ.

ನಂತರ ನವೆಂಬರ್ 14ರಂದು ಮುಷ್ಕರ ಪ್ರಾರಂಭವಾಯಿತು. ಅಂದು ರಾತ್ರಿ 11 ಗಂಟೆ ಸುಮಾರಿಗೆ ಮುಷ್ಕರ ನಿರತ ಕಾರ್ಮಿಕರು ಮತ್ತು ಸ್ವಿಗ್ಗಿ ಅಧಿಕಾರಿಗಳ ನಡುವೆ ಜಿಲ್ಲಾ ಕಾರ್ಮಿಕ ಅಧಿಕಾರಿ ಸಭೆ ಆಯೋಜಿಸಿದ್ದರು. “ನಾವು 2.5 ಕಿಮೀಗೆ 34 ರೂ ಕೇಳಿದ್ದೇವೆ” ಎಂದು ಹಾಜರಿದ್ದ ಬೇಸಿಲ್ ಹೇಳಿದರು. ಕಾರ್ಮಿಕ ಅಧಿಕಾರಿ ಪ್ರತಿ ನಾಲ್ಕು ಕಿ.ಮೀ.ಗೆ 30 ರೂ. ನೀಡುವುದಾಗಿ ಹೇಳಿದರು. ಕಾರ್ಮಿಕರ ಬೇಡಿಕೆಯನ್ನು ಸ್ವಿಗ್ಗಿ ತಿರಸ್ಕರಿಸಿತು ಮತ್ತು ಮುಷ್ಕರ ಮುಂದುವರೆಯಿತು.

ನವೆಂಬರ್ 17 ರಂದು, ಸುಮಾರು 300-400 ಸ್ವಿಗ್ಗಿ ಡೆಲಿವರಿ ಪಾರ್ಟ್‌‌ನರ್‌‌ ಮರೈನ್ ಡ್ರೈವ್‌ನಲ್ಲಿ ರ್‍ಯಾಲಿಯನ್ನು ನಡೆಸಿದರು. ನವೆಂಬರ್ 18 ರಂದು, ಎರ್ನಾಕುಲಂ ಪ್ರಾದೇಶಿಕ ಕಾರ್ಮಿಕ ಕಚೇರಿಯಲ್ಲಿ ಸ್ವಿಗ್ಗಿ ಅಧಿಕಾರಿಗಳು ಮತ್ತು ಕಾರ್ಮಿಕರ ನಡುವೆ ಎರಡನೇ ಸಭೆ ನಡೆಯಿತು. ಕಾರ್ಮಿಕರು ಪ್ರತಿ ಮೂರು ಕಿಮೀಗೆ 25 ರೂ ಕೇಳಿದರು. ಆದರೆ ಸ್ವಿಗ್ಗಿ ಕಂಪನಿಯು ಪ್ರತಿ ನಾಲ್ಕು ಕಿಮೀಗೆ 23 ರೂ. ನೀಡುವುದಾಗಿ ಹೇಳಿತು. ಕಾರ್ಮಿಕರು ಈ ಪ್ರಸ್ತಾಪವನ್ನು ತಿರಸ್ಕರಿಸಿದರು.

ಮುಷ್ಕರ ಮುಂದುವರಿಯಲಿದೆ ಎಂದು FODW ಕಾರ್ಯದರ್ಶಿ ವಿಪಿನ್ ವಿನ್ಸೆಂಟ್ ‘ನ್ಯೂಸ್‌ಲಾಂಡ್ರಿ’ಗೆ ತಿಳಿಸಿದ್ದಾರೆ. “ನಾವು ಬಹಳ ಸಮಯದಿಂದ ಕಂಪನಿಗೆ ಸೇವೆ ಸಲ್ಲಿಸುತ್ತಿದ್ದೇವೆ” ಎಂದಿದ್ದಾರೆ. “ಡೆಲಿವರಿ ಕೆಲಸಗಾರರು ಈಗ ತಮ್ಮ ಹಕ್ಕುಗಳ ಬಗ್ಗೆ ತಿಳಿದಿದ್ದಾರೆ. ಹೀಗಾಗಿ ನಮ್ಮ ಹಕ್ಕು ಸಿಗುವವರೆಗೂ ಹೋರಾಟ ನಡೆಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಗುಜರಾತ್‌: 2036ರ ಒಲಂಪಿಕ್ಸ್‌ ಆಯೋಜನೆ ಕನಸು ಕಂಡ ಬಿಜೆಪಿ ಪ್ರಣಾಳಿಕೆ

ನವೆಂಬರ್ 25 ರಂದು ಕಾರ್ಮಿಕರು ಎರ್ನಾಕುಲಂ ಜಿಲ್ಲಾಧಿಕಾರಿಗಳಿಗೆ ಮುಷ್ಕರದ ಕಾಲಮಿತಿಯೊಂದಿಗೆ ಪತ್ರವನ್ನು ಸಲ್ಲಿಸಿದರು. “ದಯವಿಟ್ಟು ಮನವಿಯನ್ನು ಸ್ವೀಕರಿಸಿ, ನಾವು ಎತ್ತಿರುವ ಬೇಡಿಕೆಗಳನ್ನು ಪಡೆಯಲು ನಮಗೆ ಸಹಾಯ ಮಾಡಿ” ಎಂದು ಒತ್ತಾಯಿಸಲಾಗಿದೆ. ಸೋಮವಾರ ಮತ್ತೊಂದು ಸಭೆಗೆ ಕಾರ್ಮಿಕ ಕಚೇರಿ ಕರೆದಿದೆ ಎಂದು ಬೆಸಿಲ್ ಮಾಹಿತಿ ನೀಡಿದ್ದಾರೆ.

ಸ್ವಿಗ್ಗಿ, ಜೊಮೊಟೊ, ಊಬರ್‌‌, ಓಲಾ ಥರದ ಆನ್‌ಲೈನ್‌ ಸೇವೆಗಳು ಕೆಲಸಗಾರರ ಹಕ್ಕುಗಳನ್ನು ನಿರ್ಲಕ್ಷಿಸುತ್ತಿರುವ ಕುರಿತು ಮೊದಲಿನಿಂದಲೂ ಆಕ್ಷೇಪಗಳು ಬರುತ್ತಿವೆ. ಸ್ವಿಗ್ಗಿ, ಜೊಮೊಟೊದಲ್ಲಿ ಆಗುತ್ತಿರುವ ಅನ್ಯಾಯದ ಕುರಿತು ಸಾಮಾಜಿಕ ಮಾಧ್ಯಮಗಳ ಮೂಲಕ ಡೆಲಿವರಿ ಕೆಲಸಗಾರರು ಮಾತನಾಡಲಾರಂಭಿಸಿದ್ದಾರೆ.

ಆ್ಯಪ್ ಆಧಾರಿತ ಕೆಲಸಗಾರರಿಗೆ ಭದ್ರತೆ ನೀಡುವಂತೆ ಆಗ್ರಹಿಸಿ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿ ಒಂದು ವರ್ಷ ಕಳೆದಿದೆ. ಪ್ರತಿವಾದಿ ಸ್ಥಾನದಲ್ಲಿರುವ ಕೇಂದ್ರ ಸರ್ಕಾರ ಇನ್ನೂ ಈ ವಿಚಾರದಲ್ಲಿ ಅಫಿಡವಿಟ್ ಸಲ್ಲಿಸಿಲ್ಲ.

ವರದಿ ಕೃಪೆ: ನ್ಯೂಸ್‌ ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...