Homeಮುಖಪುಟಕೇರಳ: ಸ್ವಿಗ್ಗಿ ಕೆಲಸಗಾರರಿಂದ ಮುಂದುವರಿದ ಮುಷ್ಕರ; ಬೇಡಿಕೆಗೆ ಸ್ಪಂದಿಸುವುದೇ ಕಂಪೆನಿ?

ಕೇರಳ: ಸ್ವಿಗ್ಗಿ ಕೆಲಸಗಾರರಿಂದ ಮುಂದುವರಿದ ಮುಷ್ಕರ; ಬೇಡಿಕೆಗೆ ಸ್ಪಂದಿಸುವುದೇ ಕಂಪೆನಿ?

- Advertisement -
- Advertisement -

ಕೇರಳದ ಕೊಚ್ಚಿಯಲ್ಲಿ 5,000 ಸ್ವಿಗ್ಗಿ ಉದ್ಯೋಗಿಗಳು ಹೆಚ್ಚಿನ ಸಂಭಾವನೆ ಮತ್ತು ಕಾರ್ಮಿಕರಿಗೆ ಸಿಗಬೇಕಾದ ಸವಲತ್ತುಗಳಿಗಾಗಿ ಒತ್ತಾಯಿಸಿ ಮುಷ್ಕರ ನಡೆಸಿ 11 ದಿನಗಳು ಕಳೆದಿವೆ.

ಜಿಲ್ಲಾ ಕಾರ್ಮಿಕ ಅಧಿಕಾರಿಗಳು ನಡೆಸಿದ ಮಾತುಕತೆಗಳು ಮುರಿದು ಬಿದ್ದಿವೆ. ಸ್ವಿಗ್ಗಿಯು ತನ್ನ ಕಾರ್ಮಿಕರಿಗೆ ಸ್ಥಿರ ಮತ್ತು ವಿಶ್ವಾಸಾರ್ಹ ಆದಾಯದ ಅವಕಾಶಗಳನ್ನು ನೀಡುವುದಾಗಿ ಹೇಳುತ್ತಿದೆ. ಆದರೆ ಕಾರ್ಮಿಕರ ಪ್ರಮುಖ ಬೇಡಿಕೆಗಳಿಗೆ ಸಂಬಂಧಿಸಿದಂತೆ ಯಾವುದೇ ಭರವಸೆಯನ್ನು ನೀಡುತ್ತಿಲ್ಲ.

“ನಾನು ಬೆಳಿಗ್ಗೆ 8 ಗಂಟೆಗೆ ಅಪ್ಲಿಕೇಶನ್‌ಗೆ ಲಾಗಿನ್ ಆಗಿ, ಒಂಬತ್ತುವರೆವರೆಗೆ ಆರ್ಡರ್‌ಗಳನ್ನು ತೆಗೆದುಕೊಂಡರೆ, ನಾನು ಗಳಿಸುವ ಮೊತ್ತ ಗರಿಷ್ಠ 900 ರೂ. ಆಗಿರುತ್ತದೆ. ಅದರಲ್ಲಿ 400 ರೂ ಪೆಟ್ರೋಲ್‌ಗೆ ಹೋಗುತ್ತದೆ” ಎಂದು ಸ್ವಿಗ್ಗಿ ಡೆಲಿವರಿ ಪಾಲುದಾರರಾಗಿ ಅರೆಕಾಲಿಕ ಕೆಲಸ ಮಾಡುವ 27 ವರ್ಷದ ಬೆಸಿಲ್ ಎಲ್ಡೋ ಹೇಳುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“14 ಅಥವಾ 15 ಗಂಟೆಗಳ ಕಾಲ ಓಡಾಡಿದ ಬಳಿಕ, ಒಬ್ಬ ಉದ್ಯೋಗಿ ಕೇವಲ 300-400 ರೂ. ಗಳಿಸುತ್ತಾನೆ” ಎಂದು ವಿಷಾದಿಸುತ್ತಾರೆ ಬೆಸಿಲ್‌.

ಕೊಚ್ಚಿಯಲ್ಲಿರುವ ಸ್ವಿಗ್ಗಿ ಕಾರ್ಮಿಕರಿಗೆ ಪ್ರಸ್ತುತ ಪ್ರತಿ ಕಿ.ಮೀ.ಗೆ 5 ರೂ. ನೀಡಲಾಗುತ್ತಿದೆ. “ಆರ್ಡರ್‌ಗಳು ಕಡಿಮೆಯಾಗುತ್ತಿವೆ, ಆದರೆ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದೆ. ಇದರಿಂದಾಗಿ ಪ್ರತಿ ಕಿ.ಮೀಗೆ 8 ರೂ.ಗೆ ಹೆಚ್ಚಿಸಬೇಕು” ಎಂದು ಸ್ವಿಗ್ಗಿ ಕಾರ್ಮಿಕರು ಒತ್ತಾಯಿಸುತ್ತಿದ್ದಾರೆ.

ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನೊಂದಿಗೆ ಸಂಯೋಜಿತವಾಗಿರುವ ‘ಫುಡ್ ಆನ್‌ಲೈನ್ ಡೆಲಿವರಿ ವರ್ಕರ್ಸ್ ಅಸೋಸಿಯೇಷನ್ (FODW) ಅಕ್ಟೋಬರ್ 31ರಂದು ಕೊಚ್ಚಿಯಲ್ಲಿರುವ ಸ್ವಿಗ್ಗಿ ಉದ್ಯೋಗಿಗಳ ಕಚೇರಿಗೆ ಪತ್ರ ಬರೆಯಿತು. “ಉದ್ಯೋಗದಲ್ಲಿನ ಅನ್ಯಾಯ, ಪಾವತಿ ರಚನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ” ಕುರಿತು ಪತ್ರದಲ್ಲಿ ಉಲ್ಲೇಖಿಸಲಾಯಿತು.

ಪ್ರತಿ ವಾರ ಇನ್‌ಸೆನ್‌ಟೀವ್ಸ್‌ ನೀಡಬೇಕು. ವಾರದಲ್ಲಿ ಕನಿಷ್ಠ ಎರಡು ದಿನ ರಜೆ, ಭವಿಷ್ಯ ನಿಧಿ ಪ್ರಯೋಜನ, ಪಾವತಿ ರಚನೆಯಲ್ಲಿ ಕಾರ್ಮಿಕರ ಅನುಮತಿ, ಎರಡೂವರೆಗೆ ಕಿಮಿಗೆ 35 ರೂಪಾಯಿ ಪಾವತಿ- ಸೇರಿದಂತೆ ಮೊದಲಾದ ಬೇಡಿಕೆಗಳನ್ನು ಇಡಲಾಯಿತು.

ನವೆಂಬರ್ 12ರಂದು, ಕೊಚ್ಚಿಯ ಮರೈನ್ ಡ್ರೈವ್ ಬಳಿಯ ಸ್ವಿಗ್ಗಿ ಕಚೇರಿಗೆ ಡೆಲಿವರಿ ಪಾರ್ಟ್‌ನರ್‌‌‌ ತೆರಳಿ ಕಂಪನಿಯ ಅಧಿಕಾರಿಗಳ ಜೊತೆ ಮಾತನಾಡಿದರು. ಸಭೆಯಲ್ಲಿ ಆಪರೇಷನ್ ಮ್ಯಾನೇಜರ್‌ ಸೇರಿದಂತೆ ಸ್ವಿಗ್ಗಿಯ ನಾಲ್ವರು ಅಧಿಕಾರಿಗಳು ಭಾಗವಹಿಸಿದ್ದರು. ಕೆಲವು ಬೇಡಿಕೆಗಳನ್ನು ಅಂಗೀಕರಿಸುವುದಾಗಿ ಹೇಳಿದ ಕಂಪನಿಯು ಪ್ರಮುಖ ಬೇಡಿಕೆಯಾದ ಪಾವತಿ ಹೆಚ್ಚಳವನ್ನು ಒಪ್ಪಲಿಲ್ಲ.

ನಂತರ ನವೆಂಬರ್ 14ರಂದು ಮುಷ್ಕರ ಪ್ರಾರಂಭವಾಯಿತು. ಅಂದು ರಾತ್ರಿ 11 ಗಂಟೆ ಸುಮಾರಿಗೆ ಮುಷ್ಕರ ನಿರತ ಕಾರ್ಮಿಕರು ಮತ್ತು ಸ್ವಿಗ್ಗಿ ಅಧಿಕಾರಿಗಳ ನಡುವೆ ಜಿಲ್ಲಾ ಕಾರ್ಮಿಕ ಅಧಿಕಾರಿ ಸಭೆ ಆಯೋಜಿಸಿದ್ದರು. “ನಾವು 2.5 ಕಿಮೀಗೆ 34 ರೂ ಕೇಳಿದ್ದೇವೆ” ಎಂದು ಹಾಜರಿದ್ದ ಬೇಸಿಲ್ ಹೇಳಿದರು. ಕಾರ್ಮಿಕ ಅಧಿಕಾರಿ ಪ್ರತಿ ನಾಲ್ಕು ಕಿ.ಮೀ.ಗೆ 30 ರೂ. ನೀಡುವುದಾಗಿ ಹೇಳಿದರು. ಕಾರ್ಮಿಕರ ಬೇಡಿಕೆಯನ್ನು ಸ್ವಿಗ್ಗಿ ತಿರಸ್ಕರಿಸಿತು ಮತ್ತು ಮುಷ್ಕರ ಮುಂದುವರೆಯಿತು.

ನವೆಂಬರ್ 17 ರಂದು, ಸುಮಾರು 300-400 ಸ್ವಿಗ್ಗಿ ಡೆಲಿವರಿ ಪಾರ್ಟ್‌‌ನರ್‌‌ ಮರೈನ್ ಡ್ರೈವ್‌ನಲ್ಲಿ ರ್‍ಯಾಲಿಯನ್ನು ನಡೆಸಿದರು. ನವೆಂಬರ್ 18 ರಂದು, ಎರ್ನಾಕುಲಂ ಪ್ರಾದೇಶಿಕ ಕಾರ್ಮಿಕ ಕಚೇರಿಯಲ್ಲಿ ಸ್ವಿಗ್ಗಿ ಅಧಿಕಾರಿಗಳು ಮತ್ತು ಕಾರ್ಮಿಕರ ನಡುವೆ ಎರಡನೇ ಸಭೆ ನಡೆಯಿತು. ಕಾರ್ಮಿಕರು ಪ್ರತಿ ಮೂರು ಕಿಮೀಗೆ 25 ರೂ ಕೇಳಿದರು. ಆದರೆ ಸ್ವಿಗ್ಗಿ ಕಂಪನಿಯು ಪ್ರತಿ ನಾಲ್ಕು ಕಿಮೀಗೆ 23 ರೂ. ನೀಡುವುದಾಗಿ ಹೇಳಿತು. ಕಾರ್ಮಿಕರು ಈ ಪ್ರಸ್ತಾಪವನ್ನು ತಿರಸ್ಕರಿಸಿದರು.

ಮುಷ್ಕರ ಮುಂದುವರಿಯಲಿದೆ ಎಂದು FODW ಕಾರ್ಯದರ್ಶಿ ವಿಪಿನ್ ವಿನ್ಸೆಂಟ್ ‘ನ್ಯೂಸ್‌ಲಾಂಡ್ರಿ’ಗೆ ತಿಳಿಸಿದ್ದಾರೆ. “ನಾವು ಬಹಳ ಸಮಯದಿಂದ ಕಂಪನಿಗೆ ಸೇವೆ ಸಲ್ಲಿಸುತ್ತಿದ್ದೇವೆ” ಎಂದಿದ್ದಾರೆ. “ಡೆಲಿವರಿ ಕೆಲಸಗಾರರು ಈಗ ತಮ್ಮ ಹಕ್ಕುಗಳ ಬಗ್ಗೆ ತಿಳಿದಿದ್ದಾರೆ. ಹೀಗಾಗಿ ನಮ್ಮ ಹಕ್ಕು ಸಿಗುವವರೆಗೂ ಹೋರಾಟ ನಡೆಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಗುಜರಾತ್‌: 2036ರ ಒಲಂಪಿಕ್ಸ್‌ ಆಯೋಜನೆ ಕನಸು ಕಂಡ ಬಿಜೆಪಿ ಪ್ರಣಾಳಿಕೆ

ನವೆಂಬರ್ 25 ರಂದು ಕಾರ್ಮಿಕರು ಎರ್ನಾಕುಲಂ ಜಿಲ್ಲಾಧಿಕಾರಿಗಳಿಗೆ ಮುಷ್ಕರದ ಕಾಲಮಿತಿಯೊಂದಿಗೆ ಪತ್ರವನ್ನು ಸಲ್ಲಿಸಿದರು. “ದಯವಿಟ್ಟು ಮನವಿಯನ್ನು ಸ್ವೀಕರಿಸಿ, ನಾವು ಎತ್ತಿರುವ ಬೇಡಿಕೆಗಳನ್ನು ಪಡೆಯಲು ನಮಗೆ ಸಹಾಯ ಮಾಡಿ” ಎಂದು ಒತ್ತಾಯಿಸಲಾಗಿದೆ. ಸೋಮವಾರ ಮತ್ತೊಂದು ಸಭೆಗೆ ಕಾರ್ಮಿಕ ಕಚೇರಿ ಕರೆದಿದೆ ಎಂದು ಬೆಸಿಲ್ ಮಾಹಿತಿ ನೀಡಿದ್ದಾರೆ.

ಸ್ವಿಗ್ಗಿ, ಜೊಮೊಟೊ, ಊಬರ್‌‌, ಓಲಾ ಥರದ ಆನ್‌ಲೈನ್‌ ಸೇವೆಗಳು ಕೆಲಸಗಾರರ ಹಕ್ಕುಗಳನ್ನು ನಿರ್ಲಕ್ಷಿಸುತ್ತಿರುವ ಕುರಿತು ಮೊದಲಿನಿಂದಲೂ ಆಕ್ಷೇಪಗಳು ಬರುತ್ತಿವೆ. ಸ್ವಿಗ್ಗಿ, ಜೊಮೊಟೊದಲ್ಲಿ ಆಗುತ್ತಿರುವ ಅನ್ಯಾಯದ ಕುರಿತು ಸಾಮಾಜಿಕ ಮಾಧ್ಯಮಗಳ ಮೂಲಕ ಡೆಲಿವರಿ ಕೆಲಸಗಾರರು ಮಾತನಾಡಲಾರಂಭಿಸಿದ್ದಾರೆ.

ಆ್ಯಪ್ ಆಧಾರಿತ ಕೆಲಸಗಾರರಿಗೆ ಭದ್ರತೆ ನೀಡುವಂತೆ ಆಗ್ರಹಿಸಿ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿ ಒಂದು ವರ್ಷ ಕಳೆದಿದೆ. ಪ್ರತಿವಾದಿ ಸ್ಥಾನದಲ್ಲಿರುವ ಕೇಂದ್ರ ಸರ್ಕಾರ ಇನ್ನೂ ಈ ವಿಚಾರದಲ್ಲಿ ಅಫಿಡವಿಟ್ ಸಲ್ಲಿಸಿಲ್ಲ.

ವರದಿ ಕೃಪೆ: ನ್ಯೂಸ್‌ ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...