Homeಮುಖಪುಟಕೇರಳ: ಸ್ವಿಗ್ಗಿ ಕೆಲಸಗಾರರಿಂದ ಮುಂದುವರಿದ ಮುಷ್ಕರ; ಬೇಡಿಕೆಗೆ ಸ್ಪಂದಿಸುವುದೇ ಕಂಪೆನಿ?

ಕೇರಳ: ಸ್ವಿಗ್ಗಿ ಕೆಲಸಗಾರರಿಂದ ಮುಂದುವರಿದ ಮುಷ್ಕರ; ಬೇಡಿಕೆಗೆ ಸ್ಪಂದಿಸುವುದೇ ಕಂಪೆನಿ?

- Advertisement -
- Advertisement -

ಕೇರಳದ ಕೊಚ್ಚಿಯಲ್ಲಿ 5,000 ಸ್ವಿಗ್ಗಿ ಉದ್ಯೋಗಿಗಳು ಹೆಚ್ಚಿನ ಸಂಭಾವನೆ ಮತ್ತು ಕಾರ್ಮಿಕರಿಗೆ ಸಿಗಬೇಕಾದ ಸವಲತ್ತುಗಳಿಗಾಗಿ ಒತ್ತಾಯಿಸಿ ಮುಷ್ಕರ ನಡೆಸಿ 11 ದಿನಗಳು ಕಳೆದಿವೆ.

ಜಿಲ್ಲಾ ಕಾರ್ಮಿಕ ಅಧಿಕಾರಿಗಳು ನಡೆಸಿದ ಮಾತುಕತೆಗಳು ಮುರಿದು ಬಿದ್ದಿವೆ. ಸ್ವಿಗ್ಗಿಯು ತನ್ನ ಕಾರ್ಮಿಕರಿಗೆ ಸ್ಥಿರ ಮತ್ತು ವಿಶ್ವಾಸಾರ್ಹ ಆದಾಯದ ಅವಕಾಶಗಳನ್ನು ನೀಡುವುದಾಗಿ ಹೇಳುತ್ತಿದೆ. ಆದರೆ ಕಾರ್ಮಿಕರ ಪ್ರಮುಖ ಬೇಡಿಕೆಗಳಿಗೆ ಸಂಬಂಧಿಸಿದಂತೆ ಯಾವುದೇ ಭರವಸೆಯನ್ನು ನೀಡುತ್ತಿಲ್ಲ.

“ನಾನು ಬೆಳಿಗ್ಗೆ 8 ಗಂಟೆಗೆ ಅಪ್ಲಿಕೇಶನ್‌ಗೆ ಲಾಗಿನ್ ಆಗಿ, ಒಂಬತ್ತುವರೆವರೆಗೆ ಆರ್ಡರ್‌ಗಳನ್ನು ತೆಗೆದುಕೊಂಡರೆ, ನಾನು ಗಳಿಸುವ ಮೊತ್ತ ಗರಿಷ್ಠ 900 ರೂ. ಆಗಿರುತ್ತದೆ. ಅದರಲ್ಲಿ 400 ರೂ ಪೆಟ್ರೋಲ್‌ಗೆ ಹೋಗುತ್ತದೆ” ಎಂದು ಸ್ವಿಗ್ಗಿ ಡೆಲಿವರಿ ಪಾಲುದಾರರಾಗಿ ಅರೆಕಾಲಿಕ ಕೆಲಸ ಮಾಡುವ 27 ವರ್ಷದ ಬೆಸಿಲ್ ಎಲ್ಡೋ ಹೇಳುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“14 ಅಥವಾ 15 ಗಂಟೆಗಳ ಕಾಲ ಓಡಾಡಿದ ಬಳಿಕ, ಒಬ್ಬ ಉದ್ಯೋಗಿ ಕೇವಲ 300-400 ರೂ. ಗಳಿಸುತ್ತಾನೆ” ಎಂದು ವಿಷಾದಿಸುತ್ತಾರೆ ಬೆಸಿಲ್‌.

ಕೊಚ್ಚಿಯಲ್ಲಿರುವ ಸ್ವಿಗ್ಗಿ ಕಾರ್ಮಿಕರಿಗೆ ಪ್ರಸ್ತುತ ಪ್ರತಿ ಕಿ.ಮೀ.ಗೆ 5 ರೂ. ನೀಡಲಾಗುತ್ತಿದೆ. “ಆರ್ಡರ್‌ಗಳು ಕಡಿಮೆಯಾಗುತ್ತಿವೆ, ಆದರೆ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದೆ. ಇದರಿಂದಾಗಿ ಪ್ರತಿ ಕಿ.ಮೀಗೆ 8 ರೂ.ಗೆ ಹೆಚ್ಚಿಸಬೇಕು” ಎಂದು ಸ್ವಿಗ್ಗಿ ಕಾರ್ಮಿಕರು ಒತ್ತಾಯಿಸುತ್ತಿದ್ದಾರೆ.

ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನೊಂದಿಗೆ ಸಂಯೋಜಿತವಾಗಿರುವ ‘ಫುಡ್ ಆನ್‌ಲೈನ್ ಡೆಲಿವರಿ ವರ್ಕರ್ಸ್ ಅಸೋಸಿಯೇಷನ್ (FODW) ಅಕ್ಟೋಬರ್ 31ರಂದು ಕೊಚ್ಚಿಯಲ್ಲಿರುವ ಸ್ವಿಗ್ಗಿ ಉದ್ಯೋಗಿಗಳ ಕಚೇರಿಗೆ ಪತ್ರ ಬರೆಯಿತು. “ಉದ್ಯೋಗದಲ್ಲಿನ ಅನ್ಯಾಯ, ಪಾವತಿ ರಚನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ” ಕುರಿತು ಪತ್ರದಲ್ಲಿ ಉಲ್ಲೇಖಿಸಲಾಯಿತು.

ಪ್ರತಿ ವಾರ ಇನ್‌ಸೆನ್‌ಟೀವ್ಸ್‌ ನೀಡಬೇಕು. ವಾರದಲ್ಲಿ ಕನಿಷ್ಠ ಎರಡು ದಿನ ರಜೆ, ಭವಿಷ್ಯ ನಿಧಿ ಪ್ರಯೋಜನ, ಪಾವತಿ ರಚನೆಯಲ್ಲಿ ಕಾರ್ಮಿಕರ ಅನುಮತಿ, ಎರಡೂವರೆಗೆ ಕಿಮಿಗೆ 35 ರೂಪಾಯಿ ಪಾವತಿ- ಸೇರಿದಂತೆ ಮೊದಲಾದ ಬೇಡಿಕೆಗಳನ್ನು ಇಡಲಾಯಿತು.

ನವೆಂಬರ್ 12ರಂದು, ಕೊಚ್ಚಿಯ ಮರೈನ್ ಡ್ರೈವ್ ಬಳಿಯ ಸ್ವಿಗ್ಗಿ ಕಚೇರಿಗೆ ಡೆಲಿವರಿ ಪಾರ್ಟ್‌ನರ್‌‌‌ ತೆರಳಿ ಕಂಪನಿಯ ಅಧಿಕಾರಿಗಳ ಜೊತೆ ಮಾತನಾಡಿದರು. ಸಭೆಯಲ್ಲಿ ಆಪರೇಷನ್ ಮ್ಯಾನೇಜರ್‌ ಸೇರಿದಂತೆ ಸ್ವಿಗ್ಗಿಯ ನಾಲ್ವರು ಅಧಿಕಾರಿಗಳು ಭಾಗವಹಿಸಿದ್ದರು. ಕೆಲವು ಬೇಡಿಕೆಗಳನ್ನು ಅಂಗೀಕರಿಸುವುದಾಗಿ ಹೇಳಿದ ಕಂಪನಿಯು ಪ್ರಮುಖ ಬೇಡಿಕೆಯಾದ ಪಾವತಿ ಹೆಚ್ಚಳವನ್ನು ಒಪ್ಪಲಿಲ್ಲ.

ನಂತರ ನವೆಂಬರ್ 14ರಂದು ಮುಷ್ಕರ ಪ್ರಾರಂಭವಾಯಿತು. ಅಂದು ರಾತ್ರಿ 11 ಗಂಟೆ ಸುಮಾರಿಗೆ ಮುಷ್ಕರ ನಿರತ ಕಾರ್ಮಿಕರು ಮತ್ತು ಸ್ವಿಗ್ಗಿ ಅಧಿಕಾರಿಗಳ ನಡುವೆ ಜಿಲ್ಲಾ ಕಾರ್ಮಿಕ ಅಧಿಕಾರಿ ಸಭೆ ಆಯೋಜಿಸಿದ್ದರು. “ನಾವು 2.5 ಕಿಮೀಗೆ 34 ರೂ ಕೇಳಿದ್ದೇವೆ” ಎಂದು ಹಾಜರಿದ್ದ ಬೇಸಿಲ್ ಹೇಳಿದರು. ಕಾರ್ಮಿಕ ಅಧಿಕಾರಿ ಪ್ರತಿ ನಾಲ್ಕು ಕಿ.ಮೀ.ಗೆ 30 ರೂ. ನೀಡುವುದಾಗಿ ಹೇಳಿದರು. ಕಾರ್ಮಿಕರ ಬೇಡಿಕೆಯನ್ನು ಸ್ವಿಗ್ಗಿ ತಿರಸ್ಕರಿಸಿತು ಮತ್ತು ಮುಷ್ಕರ ಮುಂದುವರೆಯಿತು.

ನವೆಂಬರ್ 17 ರಂದು, ಸುಮಾರು 300-400 ಸ್ವಿಗ್ಗಿ ಡೆಲಿವರಿ ಪಾರ್ಟ್‌‌ನರ್‌‌ ಮರೈನ್ ಡ್ರೈವ್‌ನಲ್ಲಿ ರ್‍ಯಾಲಿಯನ್ನು ನಡೆಸಿದರು. ನವೆಂಬರ್ 18 ರಂದು, ಎರ್ನಾಕುಲಂ ಪ್ರಾದೇಶಿಕ ಕಾರ್ಮಿಕ ಕಚೇರಿಯಲ್ಲಿ ಸ್ವಿಗ್ಗಿ ಅಧಿಕಾರಿಗಳು ಮತ್ತು ಕಾರ್ಮಿಕರ ನಡುವೆ ಎರಡನೇ ಸಭೆ ನಡೆಯಿತು. ಕಾರ್ಮಿಕರು ಪ್ರತಿ ಮೂರು ಕಿಮೀಗೆ 25 ರೂ ಕೇಳಿದರು. ಆದರೆ ಸ್ವಿಗ್ಗಿ ಕಂಪನಿಯು ಪ್ರತಿ ನಾಲ್ಕು ಕಿಮೀಗೆ 23 ರೂ. ನೀಡುವುದಾಗಿ ಹೇಳಿತು. ಕಾರ್ಮಿಕರು ಈ ಪ್ರಸ್ತಾಪವನ್ನು ತಿರಸ್ಕರಿಸಿದರು.

ಮುಷ್ಕರ ಮುಂದುವರಿಯಲಿದೆ ಎಂದು FODW ಕಾರ್ಯದರ್ಶಿ ವಿಪಿನ್ ವಿನ್ಸೆಂಟ್ ‘ನ್ಯೂಸ್‌ಲಾಂಡ್ರಿ’ಗೆ ತಿಳಿಸಿದ್ದಾರೆ. “ನಾವು ಬಹಳ ಸಮಯದಿಂದ ಕಂಪನಿಗೆ ಸೇವೆ ಸಲ್ಲಿಸುತ್ತಿದ್ದೇವೆ” ಎಂದಿದ್ದಾರೆ. “ಡೆಲಿವರಿ ಕೆಲಸಗಾರರು ಈಗ ತಮ್ಮ ಹಕ್ಕುಗಳ ಬಗ್ಗೆ ತಿಳಿದಿದ್ದಾರೆ. ಹೀಗಾಗಿ ನಮ್ಮ ಹಕ್ಕು ಸಿಗುವವರೆಗೂ ಹೋರಾಟ ನಡೆಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಗುಜರಾತ್‌: 2036ರ ಒಲಂಪಿಕ್ಸ್‌ ಆಯೋಜನೆ ಕನಸು ಕಂಡ ಬಿಜೆಪಿ ಪ್ರಣಾಳಿಕೆ

ನವೆಂಬರ್ 25 ರಂದು ಕಾರ್ಮಿಕರು ಎರ್ನಾಕುಲಂ ಜಿಲ್ಲಾಧಿಕಾರಿಗಳಿಗೆ ಮುಷ್ಕರದ ಕಾಲಮಿತಿಯೊಂದಿಗೆ ಪತ್ರವನ್ನು ಸಲ್ಲಿಸಿದರು. “ದಯವಿಟ್ಟು ಮನವಿಯನ್ನು ಸ್ವೀಕರಿಸಿ, ನಾವು ಎತ್ತಿರುವ ಬೇಡಿಕೆಗಳನ್ನು ಪಡೆಯಲು ನಮಗೆ ಸಹಾಯ ಮಾಡಿ” ಎಂದು ಒತ್ತಾಯಿಸಲಾಗಿದೆ. ಸೋಮವಾರ ಮತ್ತೊಂದು ಸಭೆಗೆ ಕಾರ್ಮಿಕ ಕಚೇರಿ ಕರೆದಿದೆ ಎಂದು ಬೆಸಿಲ್ ಮಾಹಿತಿ ನೀಡಿದ್ದಾರೆ.

ಸ್ವಿಗ್ಗಿ, ಜೊಮೊಟೊ, ಊಬರ್‌‌, ಓಲಾ ಥರದ ಆನ್‌ಲೈನ್‌ ಸೇವೆಗಳು ಕೆಲಸಗಾರರ ಹಕ್ಕುಗಳನ್ನು ನಿರ್ಲಕ್ಷಿಸುತ್ತಿರುವ ಕುರಿತು ಮೊದಲಿನಿಂದಲೂ ಆಕ್ಷೇಪಗಳು ಬರುತ್ತಿವೆ. ಸ್ವಿಗ್ಗಿ, ಜೊಮೊಟೊದಲ್ಲಿ ಆಗುತ್ತಿರುವ ಅನ್ಯಾಯದ ಕುರಿತು ಸಾಮಾಜಿಕ ಮಾಧ್ಯಮಗಳ ಮೂಲಕ ಡೆಲಿವರಿ ಕೆಲಸಗಾರರು ಮಾತನಾಡಲಾರಂಭಿಸಿದ್ದಾರೆ.

ಆ್ಯಪ್ ಆಧಾರಿತ ಕೆಲಸಗಾರರಿಗೆ ಭದ್ರತೆ ನೀಡುವಂತೆ ಆಗ್ರಹಿಸಿ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿ ಒಂದು ವರ್ಷ ಕಳೆದಿದೆ. ಪ್ರತಿವಾದಿ ಸ್ಥಾನದಲ್ಲಿರುವ ಕೇಂದ್ರ ಸರ್ಕಾರ ಇನ್ನೂ ಈ ವಿಚಾರದಲ್ಲಿ ಅಫಿಡವಿಟ್ ಸಲ್ಲಿಸಿಲ್ಲ.

ವರದಿ ಕೃಪೆ: ನ್ಯೂಸ್‌ ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...