Homeಮುಖಪುಟಕೇರಳ: ಸ್ವಿಗ್ಗಿ ಕೆಲಸಗಾರರಿಂದ ಮುಂದುವರಿದ ಮುಷ್ಕರ; ಬೇಡಿಕೆಗೆ ಸ್ಪಂದಿಸುವುದೇ ಕಂಪೆನಿ?

ಕೇರಳ: ಸ್ವಿಗ್ಗಿ ಕೆಲಸಗಾರರಿಂದ ಮುಂದುವರಿದ ಮುಷ್ಕರ; ಬೇಡಿಕೆಗೆ ಸ್ಪಂದಿಸುವುದೇ ಕಂಪೆನಿ?

- Advertisement -
- Advertisement -

ಕೇರಳದ ಕೊಚ್ಚಿಯಲ್ಲಿ 5,000 ಸ್ವಿಗ್ಗಿ ಉದ್ಯೋಗಿಗಳು ಹೆಚ್ಚಿನ ಸಂಭಾವನೆ ಮತ್ತು ಕಾರ್ಮಿಕರಿಗೆ ಸಿಗಬೇಕಾದ ಸವಲತ್ತುಗಳಿಗಾಗಿ ಒತ್ತಾಯಿಸಿ ಮುಷ್ಕರ ನಡೆಸಿ 11 ದಿನಗಳು ಕಳೆದಿವೆ.

ಜಿಲ್ಲಾ ಕಾರ್ಮಿಕ ಅಧಿಕಾರಿಗಳು ನಡೆಸಿದ ಮಾತುಕತೆಗಳು ಮುರಿದು ಬಿದ್ದಿವೆ. ಸ್ವಿಗ್ಗಿಯು ತನ್ನ ಕಾರ್ಮಿಕರಿಗೆ ಸ್ಥಿರ ಮತ್ತು ವಿಶ್ವಾಸಾರ್ಹ ಆದಾಯದ ಅವಕಾಶಗಳನ್ನು ನೀಡುವುದಾಗಿ ಹೇಳುತ್ತಿದೆ. ಆದರೆ ಕಾರ್ಮಿಕರ ಪ್ರಮುಖ ಬೇಡಿಕೆಗಳಿಗೆ ಸಂಬಂಧಿಸಿದಂತೆ ಯಾವುದೇ ಭರವಸೆಯನ್ನು ನೀಡುತ್ತಿಲ್ಲ.

“ನಾನು ಬೆಳಿಗ್ಗೆ 8 ಗಂಟೆಗೆ ಅಪ್ಲಿಕೇಶನ್‌ಗೆ ಲಾಗಿನ್ ಆಗಿ, ಒಂಬತ್ತುವರೆವರೆಗೆ ಆರ್ಡರ್‌ಗಳನ್ನು ತೆಗೆದುಕೊಂಡರೆ, ನಾನು ಗಳಿಸುವ ಮೊತ್ತ ಗರಿಷ್ಠ 900 ರೂ. ಆಗಿರುತ್ತದೆ. ಅದರಲ್ಲಿ 400 ರೂ ಪೆಟ್ರೋಲ್‌ಗೆ ಹೋಗುತ್ತದೆ” ಎಂದು ಸ್ವಿಗ್ಗಿ ಡೆಲಿವರಿ ಪಾಲುದಾರರಾಗಿ ಅರೆಕಾಲಿಕ ಕೆಲಸ ಮಾಡುವ 27 ವರ್ಷದ ಬೆಸಿಲ್ ಎಲ್ಡೋ ಹೇಳುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“14 ಅಥವಾ 15 ಗಂಟೆಗಳ ಕಾಲ ಓಡಾಡಿದ ಬಳಿಕ, ಒಬ್ಬ ಉದ್ಯೋಗಿ ಕೇವಲ 300-400 ರೂ. ಗಳಿಸುತ್ತಾನೆ” ಎಂದು ವಿಷಾದಿಸುತ್ತಾರೆ ಬೆಸಿಲ್‌.

ಕೊಚ್ಚಿಯಲ್ಲಿರುವ ಸ್ವಿಗ್ಗಿ ಕಾರ್ಮಿಕರಿಗೆ ಪ್ರಸ್ತುತ ಪ್ರತಿ ಕಿ.ಮೀ.ಗೆ 5 ರೂ. ನೀಡಲಾಗುತ್ತಿದೆ. “ಆರ್ಡರ್‌ಗಳು ಕಡಿಮೆಯಾಗುತ್ತಿವೆ, ಆದರೆ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದೆ. ಇದರಿಂದಾಗಿ ಪ್ರತಿ ಕಿ.ಮೀಗೆ 8 ರೂ.ಗೆ ಹೆಚ್ಚಿಸಬೇಕು” ಎಂದು ಸ್ವಿಗ್ಗಿ ಕಾರ್ಮಿಕರು ಒತ್ತಾಯಿಸುತ್ತಿದ್ದಾರೆ.

ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನೊಂದಿಗೆ ಸಂಯೋಜಿತವಾಗಿರುವ ‘ಫುಡ್ ಆನ್‌ಲೈನ್ ಡೆಲಿವರಿ ವರ್ಕರ್ಸ್ ಅಸೋಸಿಯೇಷನ್ (FODW) ಅಕ್ಟೋಬರ್ 31ರಂದು ಕೊಚ್ಚಿಯಲ್ಲಿರುವ ಸ್ವಿಗ್ಗಿ ಉದ್ಯೋಗಿಗಳ ಕಚೇರಿಗೆ ಪತ್ರ ಬರೆಯಿತು. “ಉದ್ಯೋಗದಲ್ಲಿನ ಅನ್ಯಾಯ, ಪಾವತಿ ರಚನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ” ಕುರಿತು ಪತ್ರದಲ್ಲಿ ಉಲ್ಲೇಖಿಸಲಾಯಿತು.

ಪ್ರತಿ ವಾರ ಇನ್‌ಸೆನ್‌ಟೀವ್ಸ್‌ ನೀಡಬೇಕು. ವಾರದಲ್ಲಿ ಕನಿಷ್ಠ ಎರಡು ದಿನ ರಜೆ, ಭವಿಷ್ಯ ನಿಧಿ ಪ್ರಯೋಜನ, ಪಾವತಿ ರಚನೆಯಲ್ಲಿ ಕಾರ್ಮಿಕರ ಅನುಮತಿ, ಎರಡೂವರೆಗೆ ಕಿಮಿಗೆ 35 ರೂಪಾಯಿ ಪಾವತಿ- ಸೇರಿದಂತೆ ಮೊದಲಾದ ಬೇಡಿಕೆಗಳನ್ನು ಇಡಲಾಯಿತು.

ನವೆಂಬರ್ 12ರಂದು, ಕೊಚ್ಚಿಯ ಮರೈನ್ ಡ್ರೈವ್ ಬಳಿಯ ಸ್ವಿಗ್ಗಿ ಕಚೇರಿಗೆ ಡೆಲಿವರಿ ಪಾರ್ಟ್‌ನರ್‌‌‌ ತೆರಳಿ ಕಂಪನಿಯ ಅಧಿಕಾರಿಗಳ ಜೊತೆ ಮಾತನಾಡಿದರು. ಸಭೆಯಲ್ಲಿ ಆಪರೇಷನ್ ಮ್ಯಾನೇಜರ್‌ ಸೇರಿದಂತೆ ಸ್ವಿಗ್ಗಿಯ ನಾಲ್ವರು ಅಧಿಕಾರಿಗಳು ಭಾಗವಹಿಸಿದ್ದರು. ಕೆಲವು ಬೇಡಿಕೆಗಳನ್ನು ಅಂಗೀಕರಿಸುವುದಾಗಿ ಹೇಳಿದ ಕಂಪನಿಯು ಪ್ರಮುಖ ಬೇಡಿಕೆಯಾದ ಪಾವತಿ ಹೆಚ್ಚಳವನ್ನು ಒಪ್ಪಲಿಲ್ಲ.

ನಂತರ ನವೆಂಬರ್ 14ರಂದು ಮುಷ್ಕರ ಪ್ರಾರಂಭವಾಯಿತು. ಅಂದು ರಾತ್ರಿ 11 ಗಂಟೆ ಸುಮಾರಿಗೆ ಮುಷ್ಕರ ನಿರತ ಕಾರ್ಮಿಕರು ಮತ್ತು ಸ್ವಿಗ್ಗಿ ಅಧಿಕಾರಿಗಳ ನಡುವೆ ಜಿಲ್ಲಾ ಕಾರ್ಮಿಕ ಅಧಿಕಾರಿ ಸಭೆ ಆಯೋಜಿಸಿದ್ದರು. “ನಾವು 2.5 ಕಿಮೀಗೆ 34 ರೂ ಕೇಳಿದ್ದೇವೆ” ಎಂದು ಹಾಜರಿದ್ದ ಬೇಸಿಲ್ ಹೇಳಿದರು. ಕಾರ್ಮಿಕ ಅಧಿಕಾರಿ ಪ್ರತಿ ನಾಲ್ಕು ಕಿ.ಮೀ.ಗೆ 30 ರೂ. ನೀಡುವುದಾಗಿ ಹೇಳಿದರು. ಕಾರ್ಮಿಕರ ಬೇಡಿಕೆಯನ್ನು ಸ್ವಿಗ್ಗಿ ತಿರಸ್ಕರಿಸಿತು ಮತ್ತು ಮುಷ್ಕರ ಮುಂದುವರೆಯಿತು.

ನವೆಂಬರ್ 17 ರಂದು, ಸುಮಾರು 300-400 ಸ್ವಿಗ್ಗಿ ಡೆಲಿವರಿ ಪಾರ್ಟ್‌‌ನರ್‌‌ ಮರೈನ್ ಡ್ರೈವ್‌ನಲ್ಲಿ ರ್‍ಯಾಲಿಯನ್ನು ನಡೆಸಿದರು. ನವೆಂಬರ್ 18 ರಂದು, ಎರ್ನಾಕುಲಂ ಪ್ರಾದೇಶಿಕ ಕಾರ್ಮಿಕ ಕಚೇರಿಯಲ್ಲಿ ಸ್ವಿಗ್ಗಿ ಅಧಿಕಾರಿಗಳು ಮತ್ತು ಕಾರ್ಮಿಕರ ನಡುವೆ ಎರಡನೇ ಸಭೆ ನಡೆಯಿತು. ಕಾರ್ಮಿಕರು ಪ್ರತಿ ಮೂರು ಕಿಮೀಗೆ 25 ರೂ ಕೇಳಿದರು. ಆದರೆ ಸ್ವಿಗ್ಗಿ ಕಂಪನಿಯು ಪ್ರತಿ ನಾಲ್ಕು ಕಿಮೀಗೆ 23 ರೂ. ನೀಡುವುದಾಗಿ ಹೇಳಿತು. ಕಾರ್ಮಿಕರು ಈ ಪ್ರಸ್ತಾಪವನ್ನು ತಿರಸ್ಕರಿಸಿದರು.

ಮುಷ್ಕರ ಮುಂದುವರಿಯಲಿದೆ ಎಂದು FODW ಕಾರ್ಯದರ್ಶಿ ವಿಪಿನ್ ವಿನ್ಸೆಂಟ್ ‘ನ್ಯೂಸ್‌ಲಾಂಡ್ರಿ’ಗೆ ತಿಳಿಸಿದ್ದಾರೆ. “ನಾವು ಬಹಳ ಸಮಯದಿಂದ ಕಂಪನಿಗೆ ಸೇವೆ ಸಲ್ಲಿಸುತ್ತಿದ್ದೇವೆ” ಎಂದಿದ್ದಾರೆ. “ಡೆಲಿವರಿ ಕೆಲಸಗಾರರು ಈಗ ತಮ್ಮ ಹಕ್ಕುಗಳ ಬಗ್ಗೆ ತಿಳಿದಿದ್ದಾರೆ. ಹೀಗಾಗಿ ನಮ್ಮ ಹಕ್ಕು ಸಿಗುವವರೆಗೂ ಹೋರಾಟ ನಡೆಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಗುಜರಾತ್‌: 2036ರ ಒಲಂಪಿಕ್ಸ್‌ ಆಯೋಜನೆ ಕನಸು ಕಂಡ ಬಿಜೆಪಿ ಪ್ರಣಾಳಿಕೆ

ನವೆಂಬರ್ 25 ರಂದು ಕಾರ್ಮಿಕರು ಎರ್ನಾಕುಲಂ ಜಿಲ್ಲಾಧಿಕಾರಿಗಳಿಗೆ ಮುಷ್ಕರದ ಕಾಲಮಿತಿಯೊಂದಿಗೆ ಪತ್ರವನ್ನು ಸಲ್ಲಿಸಿದರು. “ದಯವಿಟ್ಟು ಮನವಿಯನ್ನು ಸ್ವೀಕರಿಸಿ, ನಾವು ಎತ್ತಿರುವ ಬೇಡಿಕೆಗಳನ್ನು ಪಡೆಯಲು ನಮಗೆ ಸಹಾಯ ಮಾಡಿ” ಎಂದು ಒತ್ತಾಯಿಸಲಾಗಿದೆ. ಸೋಮವಾರ ಮತ್ತೊಂದು ಸಭೆಗೆ ಕಾರ್ಮಿಕ ಕಚೇರಿ ಕರೆದಿದೆ ಎಂದು ಬೆಸಿಲ್ ಮಾಹಿತಿ ನೀಡಿದ್ದಾರೆ.

ಸ್ವಿಗ್ಗಿ, ಜೊಮೊಟೊ, ಊಬರ್‌‌, ಓಲಾ ಥರದ ಆನ್‌ಲೈನ್‌ ಸೇವೆಗಳು ಕೆಲಸಗಾರರ ಹಕ್ಕುಗಳನ್ನು ನಿರ್ಲಕ್ಷಿಸುತ್ತಿರುವ ಕುರಿತು ಮೊದಲಿನಿಂದಲೂ ಆಕ್ಷೇಪಗಳು ಬರುತ್ತಿವೆ. ಸ್ವಿಗ್ಗಿ, ಜೊಮೊಟೊದಲ್ಲಿ ಆಗುತ್ತಿರುವ ಅನ್ಯಾಯದ ಕುರಿತು ಸಾಮಾಜಿಕ ಮಾಧ್ಯಮಗಳ ಮೂಲಕ ಡೆಲಿವರಿ ಕೆಲಸಗಾರರು ಮಾತನಾಡಲಾರಂಭಿಸಿದ್ದಾರೆ.

ಆ್ಯಪ್ ಆಧಾರಿತ ಕೆಲಸಗಾರರಿಗೆ ಭದ್ರತೆ ನೀಡುವಂತೆ ಆಗ್ರಹಿಸಿ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿ ಒಂದು ವರ್ಷ ಕಳೆದಿದೆ. ಪ್ರತಿವಾದಿ ಸ್ಥಾನದಲ್ಲಿರುವ ಕೇಂದ್ರ ಸರ್ಕಾರ ಇನ್ನೂ ಈ ವಿಚಾರದಲ್ಲಿ ಅಫಿಡವಿಟ್ ಸಲ್ಲಿಸಿಲ್ಲ.

ವರದಿ ಕೃಪೆ: ನ್ಯೂಸ್‌ ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...