Homeಮುಖಪುಟಕೇರಳ: ಸ್ವಿಗ್ಗಿ ಕೆಲಸಗಾರರಿಂದ ಮುಂದುವರಿದ ಮುಷ್ಕರ; ಬೇಡಿಕೆಗೆ ಸ್ಪಂದಿಸುವುದೇ ಕಂಪೆನಿ?

ಕೇರಳ: ಸ್ವಿಗ್ಗಿ ಕೆಲಸಗಾರರಿಂದ ಮುಂದುವರಿದ ಮುಷ್ಕರ; ಬೇಡಿಕೆಗೆ ಸ್ಪಂದಿಸುವುದೇ ಕಂಪೆನಿ?

- Advertisement -
- Advertisement -

ಕೇರಳದ ಕೊಚ್ಚಿಯಲ್ಲಿ 5,000 ಸ್ವಿಗ್ಗಿ ಉದ್ಯೋಗಿಗಳು ಹೆಚ್ಚಿನ ಸಂಭಾವನೆ ಮತ್ತು ಕಾರ್ಮಿಕರಿಗೆ ಸಿಗಬೇಕಾದ ಸವಲತ್ತುಗಳಿಗಾಗಿ ಒತ್ತಾಯಿಸಿ ಮುಷ್ಕರ ನಡೆಸಿ 11 ದಿನಗಳು ಕಳೆದಿವೆ.

ಜಿಲ್ಲಾ ಕಾರ್ಮಿಕ ಅಧಿಕಾರಿಗಳು ನಡೆಸಿದ ಮಾತುಕತೆಗಳು ಮುರಿದು ಬಿದ್ದಿವೆ. ಸ್ವಿಗ್ಗಿಯು ತನ್ನ ಕಾರ್ಮಿಕರಿಗೆ ಸ್ಥಿರ ಮತ್ತು ವಿಶ್ವಾಸಾರ್ಹ ಆದಾಯದ ಅವಕಾಶಗಳನ್ನು ನೀಡುವುದಾಗಿ ಹೇಳುತ್ತಿದೆ. ಆದರೆ ಕಾರ್ಮಿಕರ ಪ್ರಮುಖ ಬೇಡಿಕೆಗಳಿಗೆ ಸಂಬಂಧಿಸಿದಂತೆ ಯಾವುದೇ ಭರವಸೆಯನ್ನು ನೀಡುತ್ತಿಲ್ಲ.

“ನಾನು ಬೆಳಿಗ್ಗೆ 8 ಗಂಟೆಗೆ ಅಪ್ಲಿಕೇಶನ್‌ಗೆ ಲಾಗಿನ್ ಆಗಿ, ಒಂಬತ್ತುವರೆವರೆಗೆ ಆರ್ಡರ್‌ಗಳನ್ನು ತೆಗೆದುಕೊಂಡರೆ, ನಾನು ಗಳಿಸುವ ಮೊತ್ತ ಗರಿಷ್ಠ 900 ರೂ. ಆಗಿರುತ್ತದೆ. ಅದರಲ್ಲಿ 400 ರೂ ಪೆಟ್ರೋಲ್‌ಗೆ ಹೋಗುತ್ತದೆ” ಎಂದು ಸ್ವಿಗ್ಗಿ ಡೆಲಿವರಿ ಪಾಲುದಾರರಾಗಿ ಅರೆಕಾಲಿಕ ಕೆಲಸ ಮಾಡುವ 27 ವರ್ಷದ ಬೆಸಿಲ್ ಎಲ್ಡೋ ಹೇಳುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“14 ಅಥವಾ 15 ಗಂಟೆಗಳ ಕಾಲ ಓಡಾಡಿದ ಬಳಿಕ, ಒಬ್ಬ ಉದ್ಯೋಗಿ ಕೇವಲ 300-400 ರೂ. ಗಳಿಸುತ್ತಾನೆ” ಎಂದು ವಿಷಾದಿಸುತ್ತಾರೆ ಬೆಸಿಲ್‌.

ಕೊಚ್ಚಿಯಲ್ಲಿರುವ ಸ್ವಿಗ್ಗಿ ಕಾರ್ಮಿಕರಿಗೆ ಪ್ರಸ್ತುತ ಪ್ರತಿ ಕಿ.ಮೀ.ಗೆ 5 ರೂ. ನೀಡಲಾಗುತ್ತಿದೆ. “ಆರ್ಡರ್‌ಗಳು ಕಡಿಮೆಯಾಗುತ್ತಿವೆ, ಆದರೆ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದೆ. ಇದರಿಂದಾಗಿ ಪ್ರತಿ ಕಿ.ಮೀಗೆ 8 ರೂ.ಗೆ ಹೆಚ್ಚಿಸಬೇಕು” ಎಂದು ಸ್ವಿಗ್ಗಿ ಕಾರ್ಮಿಕರು ಒತ್ತಾಯಿಸುತ್ತಿದ್ದಾರೆ.

ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನೊಂದಿಗೆ ಸಂಯೋಜಿತವಾಗಿರುವ ‘ಫುಡ್ ಆನ್‌ಲೈನ್ ಡೆಲಿವರಿ ವರ್ಕರ್ಸ್ ಅಸೋಸಿಯೇಷನ್ (FODW) ಅಕ್ಟೋಬರ್ 31ರಂದು ಕೊಚ್ಚಿಯಲ್ಲಿರುವ ಸ್ವಿಗ್ಗಿ ಉದ್ಯೋಗಿಗಳ ಕಚೇರಿಗೆ ಪತ್ರ ಬರೆಯಿತು. “ಉದ್ಯೋಗದಲ್ಲಿನ ಅನ್ಯಾಯ, ಪಾವತಿ ರಚನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ” ಕುರಿತು ಪತ್ರದಲ್ಲಿ ಉಲ್ಲೇಖಿಸಲಾಯಿತು.

ಪ್ರತಿ ವಾರ ಇನ್‌ಸೆನ್‌ಟೀವ್ಸ್‌ ನೀಡಬೇಕು. ವಾರದಲ್ಲಿ ಕನಿಷ್ಠ ಎರಡು ದಿನ ರಜೆ, ಭವಿಷ್ಯ ನಿಧಿ ಪ್ರಯೋಜನ, ಪಾವತಿ ರಚನೆಯಲ್ಲಿ ಕಾರ್ಮಿಕರ ಅನುಮತಿ, ಎರಡೂವರೆಗೆ ಕಿಮಿಗೆ 35 ರೂಪಾಯಿ ಪಾವತಿ- ಸೇರಿದಂತೆ ಮೊದಲಾದ ಬೇಡಿಕೆಗಳನ್ನು ಇಡಲಾಯಿತು.

ನವೆಂಬರ್ 12ರಂದು, ಕೊಚ್ಚಿಯ ಮರೈನ್ ಡ್ರೈವ್ ಬಳಿಯ ಸ್ವಿಗ್ಗಿ ಕಚೇರಿಗೆ ಡೆಲಿವರಿ ಪಾರ್ಟ್‌ನರ್‌‌‌ ತೆರಳಿ ಕಂಪನಿಯ ಅಧಿಕಾರಿಗಳ ಜೊತೆ ಮಾತನಾಡಿದರು. ಸಭೆಯಲ್ಲಿ ಆಪರೇಷನ್ ಮ್ಯಾನೇಜರ್‌ ಸೇರಿದಂತೆ ಸ್ವಿಗ್ಗಿಯ ನಾಲ್ವರು ಅಧಿಕಾರಿಗಳು ಭಾಗವಹಿಸಿದ್ದರು. ಕೆಲವು ಬೇಡಿಕೆಗಳನ್ನು ಅಂಗೀಕರಿಸುವುದಾಗಿ ಹೇಳಿದ ಕಂಪನಿಯು ಪ್ರಮುಖ ಬೇಡಿಕೆಯಾದ ಪಾವತಿ ಹೆಚ್ಚಳವನ್ನು ಒಪ್ಪಲಿಲ್ಲ.

ನಂತರ ನವೆಂಬರ್ 14ರಂದು ಮುಷ್ಕರ ಪ್ರಾರಂಭವಾಯಿತು. ಅಂದು ರಾತ್ರಿ 11 ಗಂಟೆ ಸುಮಾರಿಗೆ ಮುಷ್ಕರ ನಿರತ ಕಾರ್ಮಿಕರು ಮತ್ತು ಸ್ವಿಗ್ಗಿ ಅಧಿಕಾರಿಗಳ ನಡುವೆ ಜಿಲ್ಲಾ ಕಾರ್ಮಿಕ ಅಧಿಕಾರಿ ಸಭೆ ಆಯೋಜಿಸಿದ್ದರು. “ನಾವು 2.5 ಕಿಮೀಗೆ 34 ರೂ ಕೇಳಿದ್ದೇವೆ” ಎಂದು ಹಾಜರಿದ್ದ ಬೇಸಿಲ್ ಹೇಳಿದರು. ಕಾರ್ಮಿಕ ಅಧಿಕಾರಿ ಪ್ರತಿ ನಾಲ್ಕು ಕಿ.ಮೀ.ಗೆ 30 ರೂ. ನೀಡುವುದಾಗಿ ಹೇಳಿದರು. ಕಾರ್ಮಿಕರ ಬೇಡಿಕೆಯನ್ನು ಸ್ವಿಗ್ಗಿ ತಿರಸ್ಕರಿಸಿತು ಮತ್ತು ಮುಷ್ಕರ ಮುಂದುವರೆಯಿತು.

ನವೆಂಬರ್ 17 ರಂದು, ಸುಮಾರು 300-400 ಸ್ವಿಗ್ಗಿ ಡೆಲಿವರಿ ಪಾರ್ಟ್‌‌ನರ್‌‌ ಮರೈನ್ ಡ್ರೈವ್‌ನಲ್ಲಿ ರ್‍ಯಾಲಿಯನ್ನು ನಡೆಸಿದರು. ನವೆಂಬರ್ 18 ರಂದು, ಎರ್ನಾಕುಲಂ ಪ್ರಾದೇಶಿಕ ಕಾರ್ಮಿಕ ಕಚೇರಿಯಲ್ಲಿ ಸ್ವಿಗ್ಗಿ ಅಧಿಕಾರಿಗಳು ಮತ್ತು ಕಾರ್ಮಿಕರ ನಡುವೆ ಎರಡನೇ ಸಭೆ ನಡೆಯಿತು. ಕಾರ್ಮಿಕರು ಪ್ರತಿ ಮೂರು ಕಿಮೀಗೆ 25 ರೂ ಕೇಳಿದರು. ಆದರೆ ಸ್ವಿಗ್ಗಿ ಕಂಪನಿಯು ಪ್ರತಿ ನಾಲ್ಕು ಕಿಮೀಗೆ 23 ರೂ. ನೀಡುವುದಾಗಿ ಹೇಳಿತು. ಕಾರ್ಮಿಕರು ಈ ಪ್ರಸ್ತಾಪವನ್ನು ತಿರಸ್ಕರಿಸಿದರು.

ಮುಷ್ಕರ ಮುಂದುವರಿಯಲಿದೆ ಎಂದು FODW ಕಾರ್ಯದರ್ಶಿ ವಿಪಿನ್ ವಿನ್ಸೆಂಟ್ ‘ನ್ಯೂಸ್‌ಲಾಂಡ್ರಿ’ಗೆ ತಿಳಿಸಿದ್ದಾರೆ. “ನಾವು ಬಹಳ ಸಮಯದಿಂದ ಕಂಪನಿಗೆ ಸೇವೆ ಸಲ್ಲಿಸುತ್ತಿದ್ದೇವೆ” ಎಂದಿದ್ದಾರೆ. “ಡೆಲಿವರಿ ಕೆಲಸಗಾರರು ಈಗ ತಮ್ಮ ಹಕ್ಕುಗಳ ಬಗ್ಗೆ ತಿಳಿದಿದ್ದಾರೆ. ಹೀಗಾಗಿ ನಮ್ಮ ಹಕ್ಕು ಸಿಗುವವರೆಗೂ ಹೋರಾಟ ನಡೆಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಗುಜರಾತ್‌: 2036ರ ಒಲಂಪಿಕ್ಸ್‌ ಆಯೋಜನೆ ಕನಸು ಕಂಡ ಬಿಜೆಪಿ ಪ್ರಣಾಳಿಕೆ

ನವೆಂಬರ್ 25 ರಂದು ಕಾರ್ಮಿಕರು ಎರ್ನಾಕುಲಂ ಜಿಲ್ಲಾಧಿಕಾರಿಗಳಿಗೆ ಮುಷ್ಕರದ ಕಾಲಮಿತಿಯೊಂದಿಗೆ ಪತ್ರವನ್ನು ಸಲ್ಲಿಸಿದರು. “ದಯವಿಟ್ಟು ಮನವಿಯನ್ನು ಸ್ವೀಕರಿಸಿ, ನಾವು ಎತ್ತಿರುವ ಬೇಡಿಕೆಗಳನ್ನು ಪಡೆಯಲು ನಮಗೆ ಸಹಾಯ ಮಾಡಿ” ಎಂದು ಒತ್ತಾಯಿಸಲಾಗಿದೆ. ಸೋಮವಾರ ಮತ್ತೊಂದು ಸಭೆಗೆ ಕಾರ್ಮಿಕ ಕಚೇರಿ ಕರೆದಿದೆ ಎಂದು ಬೆಸಿಲ್ ಮಾಹಿತಿ ನೀಡಿದ್ದಾರೆ.

ಸ್ವಿಗ್ಗಿ, ಜೊಮೊಟೊ, ಊಬರ್‌‌, ಓಲಾ ಥರದ ಆನ್‌ಲೈನ್‌ ಸೇವೆಗಳು ಕೆಲಸಗಾರರ ಹಕ್ಕುಗಳನ್ನು ನಿರ್ಲಕ್ಷಿಸುತ್ತಿರುವ ಕುರಿತು ಮೊದಲಿನಿಂದಲೂ ಆಕ್ಷೇಪಗಳು ಬರುತ್ತಿವೆ. ಸ್ವಿಗ್ಗಿ, ಜೊಮೊಟೊದಲ್ಲಿ ಆಗುತ್ತಿರುವ ಅನ್ಯಾಯದ ಕುರಿತು ಸಾಮಾಜಿಕ ಮಾಧ್ಯಮಗಳ ಮೂಲಕ ಡೆಲಿವರಿ ಕೆಲಸಗಾರರು ಮಾತನಾಡಲಾರಂಭಿಸಿದ್ದಾರೆ.

ಆ್ಯಪ್ ಆಧಾರಿತ ಕೆಲಸಗಾರರಿಗೆ ಭದ್ರತೆ ನೀಡುವಂತೆ ಆಗ್ರಹಿಸಿ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿ ಒಂದು ವರ್ಷ ಕಳೆದಿದೆ. ಪ್ರತಿವಾದಿ ಸ್ಥಾನದಲ್ಲಿರುವ ಕೇಂದ್ರ ಸರ್ಕಾರ ಇನ್ನೂ ಈ ವಿಚಾರದಲ್ಲಿ ಅಫಿಡವಿಟ್ ಸಲ್ಲಿಸಿಲ್ಲ.

ವರದಿ ಕೃಪೆ: ನ್ಯೂಸ್‌ ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....