Homeಮುಖಪುಟಕೇರಳ: ಸ್ವಿಗ್ಗಿ ಕೆಲಸಗಾರರಿಂದ ಮುಂದುವರಿದ ಮುಷ್ಕರ; ಬೇಡಿಕೆಗೆ ಸ್ಪಂದಿಸುವುದೇ ಕಂಪೆನಿ?

ಕೇರಳ: ಸ್ವಿಗ್ಗಿ ಕೆಲಸಗಾರರಿಂದ ಮುಂದುವರಿದ ಮುಷ್ಕರ; ಬೇಡಿಕೆಗೆ ಸ್ಪಂದಿಸುವುದೇ ಕಂಪೆನಿ?

- Advertisement -
- Advertisement -

ಕೇರಳದ ಕೊಚ್ಚಿಯಲ್ಲಿ 5,000 ಸ್ವಿಗ್ಗಿ ಉದ್ಯೋಗಿಗಳು ಹೆಚ್ಚಿನ ಸಂಭಾವನೆ ಮತ್ತು ಕಾರ್ಮಿಕರಿಗೆ ಸಿಗಬೇಕಾದ ಸವಲತ್ತುಗಳಿಗಾಗಿ ಒತ್ತಾಯಿಸಿ ಮುಷ್ಕರ ನಡೆಸಿ 11 ದಿನಗಳು ಕಳೆದಿವೆ.

ಜಿಲ್ಲಾ ಕಾರ್ಮಿಕ ಅಧಿಕಾರಿಗಳು ನಡೆಸಿದ ಮಾತುಕತೆಗಳು ಮುರಿದು ಬಿದ್ದಿವೆ. ಸ್ವಿಗ್ಗಿಯು ತನ್ನ ಕಾರ್ಮಿಕರಿಗೆ ಸ್ಥಿರ ಮತ್ತು ವಿಶ್ವಾಸಾರ್ಹ ಆದಾಯದ ಅವಕಾಶಗಳನ್ನು ನೀಡುವುದಾಗಿ ಹೇಳುತ್ತಿದೆ. ಆದರೆ ಕಾರ್ಮಿಕರ ಪ್ರಮುಖ ಬೇಡಿಕೆಗಳಿಗೆ ಸಂಬಂಧಿಸಿದಂತೆ ಯಾವುದೇ ಭರವಸೆಯನ್ನು ನೀಡುತ್ತಿಲ್ಲ.

“ನಾನು ಬೆಳಿಗ್ಗೆ 8 ಗಂಟೆಗೆ ಅಪ್ಲಿಕೇಶನ್‌ಗೆ ಲಾಗಿನ್ ಆಗಿ, ಒಂಬತ್ತುವರೆವರೆಗೆ ಆರ್ಡರ್‌ಗಳನ್ನು ತೆಗೆದುಕೊಂಡರೆ, ನಾನು ಗಳಿಸುವ ಮೊತ್ತ ಗರಿಷ್ಠ 900 ರೂ. ಆಗಿರುತ್ತದೆ. ಅದರಲ್ಲಿ 400 ರೂ ಪೆಟ್ರೋಲ್‌ಗೆ ಹೋಗುತ್ತದೆ” ಎಂದು ಸ್ವಿಗ್ಗಿ ಡೆಲಿವರಿ ಪಾಲುದಾರರಾಗಿ ಅರೆಕಾಲಿಕ ಕೆಲಸ ಮಾಡುವ 27 ವರ್ಷದ ಬೆಸಿಲ್ ಎಲ್ಡೋ ಹೇಳುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“14 ಅಥವಾ 15 ಗಂಟೆಗಳ ಕಾಲ ಓಡಾಡಿದ ಬಳಿಕ, ಒಬ್ಬ ಉದ್ಯೋಗಿ ಕೇವಲ 300-400 ರೂ. ಗಳಿಸುತ್ತಾನೆ” ಎಂದು ವಿಷಾದಿಸುತ್ತಾರೆ ಬೆಸಿಲ್‌.

ಕೊಚ್ಚಿಯಲ್ಲಿರುವ ಸ್ವಿಗ್ಗಿ ಕಾರ್ಮಿಕರಿಗೆ ಪ್ರಸ್ತುತ ಪ್ರತಿ ಕಿ.ಮೀ.ಗೆ 5 ರೂ. ನೀಡಲಾಗುತ್ತಿದೆ. “ಆರ್ಡರ್‌ಗಳು ಕಡಿಮೆಯಾಗುತ್ತಿವೆ, ಆದರೆ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದೆ. ಇದರಿಂದಾಗಿ ಪ್ರತಿ ಕಿ.ಮೀಗೆ 8 ರೂ.ಗೆ ಹೆಚ್ಚಿಸಬೇಕು” ಎಂದು ಸ್ವಿಗ್ಗಿ ಕಾರ್ಮಿಕರು ಒತ್ತಾಯಿಸುತ್ತಿದ್ದಾರೆ.

ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನೊಂದಿಗೆ ಸಂಯೋಜಿತವಾಗಿರುವ ‘ಫುಡ್ ಆನ್‌ಲೈನ್ ಡೆಲಿವರಿ ವರ್ಕರ್ಸ್ ಅಸೋಸಿಯೇಷನ್ (FODW) ಅಕ್ಟೋಬರ್ 31ರಂದು ಕೊಚ್ಚಿಯಲ್ಲಿರುವ ಸ್ವಿಗ್ಗಿ ಉದ್ಯೋಗಿಗಳ ಕಚೇರಿಗೆ ಪತ್ರ ಬರೆಯಿತು. “ಉದ್ಯೋಗದಲ್ಲಿನ ಅನ್ಯಾಯ, ಪಾವತಿ ರಚನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ” ಕುರಿತು ಪತ್ರದಲ್ಲಿ ಉಲ್ಲೇಖಿಸಲಾಯಿತು.

ಪ್ರತಿ ವಾರ ಇನ್‌ಸೆನ್‌ಟೀವ್ಸ್‌ ನೀಡಬೇಕು. ವಾರದಲ್ಲಿ ಕನಿಷ್ಠ ಎರಡು ದಿನ ರಜೆ, ಭವಿಷ್ಯ ನಿಧಿ ಪ್ರಯೋಜನ, ಪಾವತಿ ರಚನೆಯಲ್ಲಿ ಕಾರ್ಮಿಕರ ಅನುಮತಿ, ಎರಡೂವರೆಗೆ ಕಿಮಿಗೆ 35 ರೂಪಾಯಿ ಪಾವತಿ- ಸೇರಿದಂತೆ ಮೊದಲಾದ ಬೇಡಿಕೆಗಳನ್ನು ಇಡಲಾಯಿತು.

ನವೆಂಬರ್ 12ರಂದು, ಕೊಚ್ಚಿಯ ಮರೈನ್ ಡ್ರೈವ್ ಬಳಿಯ ಸ್ವಿಗ್ಗಿ ಕಚೇರಿಗೆ ಡೆಲಿವರಿ ಪಾರ್ಟ್‌ನರ್‌‌‌ ತೆರಳಿ ಕಂಪನಿಯ ಅಧಿಕಾರಿಗಳ ಜೊತೆ ಮಾತನಾಡಿದರು. ಸಭೆಯಲ್ಲಿ ಆಪರೇಷನ್ ಮ್ಯಾನೇಜರ್‌ ಸೇರಿದಂತೆ ಸ್ವಿಗ್ಗಿಯ ನಾಲ್ವರು ಅಧಿಕಾರಿಗಳು ಭಾಗವಹಿಸಿದ್ದರು. ಕೆಲವು ಬೇಡಿಕೆಗಳನ್ನು ಅಂಗೀಕರಿಸುವುದಾಗಿ ಹೇಳಿದ ಕಂಪನಿಯು ಪ್ರಮುಖ ಬೇಡಿಕೆಯಾದ ಪಾವತಿ ಹೆಚ್ಚಳವನ್ನು ಒಪ್ಪಲಿಲ್ಲ.

ನಂತರ ನವೆಂಬರ್ 14ರಂದು ಮುಷ್ಕರ ಪ್ರಾರಂಭವಾಯಿತು. ಅಂದು ರಾತ್ರಿ 11 ಗಂಟೆ ಸುಮಾರಿಗೆ ಮುಷ್ಕರ ನಿರತ ಕಾರ್ಮಿಕರು ಮತ್ತು ಸ್ವಿಗ್ಗಿ ಅಧಿಕಾರಿಗಳ ನಡುವೆ ಜಿಲ್ಲಾ ಕಾರ್ಮಿಕ ಅಧಿಕಾರಿ ಸಭೆ ಆಯೋಜಿಸಿದ್ದರು. “ನಾವು 2.5 ಕಿಮೀಗೆ 34 ರೂ ಕೇಳಿದ್ದೇವೆ” ಎಂದು ಹಾಜರಿದ್ದ ಬೇಸಿಲ್ ಹೇಳಿದರು. ಕಾರ್ಮಿಕ ಅಧಿಕಾರಿ ಪ್ರತಿ ನಾಲ್ಕು ಕಿ.ಮೀ.ಗೆ 30 ರೂ. ನೀಡುವುದಾಗಿ ಹೇಳಿದರು. ಕಾರ್ಮಿಕರ ಬೇಡಿಕೆಯನ್ನು ಸ್ವಿಗ್ಗಿ ತಿರಸ್ಕರಿಸಿತು ಮತ್ತು ಮುಷ್ಕರ ಮುಂದುವರೆಯಿತು.

ನವೆಂಬರ್ 17 ರಂದು, ಸುಮಾರು 300-400 ಸ್ವಿಗ್ಗಿ ಡೆಲಿವರಿ ಪಾರ್ಟ್‌‌ನರ್‌‌ ಮರೈನ್ ಡ್ರೈವ್‌ನಲ್ಲಿ ರ್‍ಯಾಲಿಯನ್ನು ನಡೆಸಿದರು. ನವೆಂಬರ್ 18 ರಂದು, ಎರ್ನಾಕುಲಂ ಪ್ರಾದೇಶಿಕ ಕಾರ್ಮಿಕ ಕಚೇರಿಯಲ್ಲಿ ಸ್ವಿಗ್ಗಿ ಅಧಿಕಾರಿಗಳು ಮತ್ತು ಕಾರ್ಮಿಕರ ನಡುವೆ ಎರಡನೇ ಸಭೆ ನಡೆಯಿತು. ಕಾರ್ಮಿಕರು ಪ್ರತಿ ಮೂರು ಕಿಮೀಗೆ 25 ರೂ ಕೇಳಿದರು. ಆದರೆ ಸ್ವಿಗ್ಗಿ ಕಂಪನಿಯು ಪ್ರತಿ ನಾಲ್ಕು ಕಿಮೀಗೆ 23 ರೂ. ನೀಡುವುದಾಗಿ ಹೇಳಿತು. ಕಾರ್ಮಿಕರು ಈ ಪ್ರಸ್ತಾಪವನ್ನು ತಿರಸ್ಕರಿಸಿದರು.

ಮುಷ್ಕರ ಮುಂದುವರಿಯಲಿದೆ ಎಂದು FODW ಕಾರ್ಯದರ್ಶಿ ವಿಪಿನ್ ವಿನ್ಸೆಂಟ್ ‘ನ್ಯೂಸ್‌ಲಾಂಡ್ರಿ’ಗೆ ತಿಳಿಸಿದ್ದಾರೆ. “ನಾವು ಬಹಳ ಸಮಯದಿಂದ ಕಂಪನಿಗೆ ಸೇವೆ ಸಲ್ಲಿಸುತ್ತಿದ್ದೇವೆ” ಎಂದಿದ್ದಾರೆ. “ಡೆಲಿವರಿ ಕೆಲಸಗಾರರು ಈಗ ತಮ್ಮ ಹಕ್ಕುಗಳ ಬಗ್ಗೆ ತಿಳಿದಿದ್ದಾರೆ. ಹೀಗಾಗಿ ನಮ್ಮ ಹಕ್ಕು ಸಿಗುವವರೆಗೂ ಹೋರಾಟ ನಡೆಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಗುಜರಾತ್‌: 2036ರ ಒಲಂಪಿಕ್ಸ್‌ ಆಯೋಜನೆ ಕನಸು ಕಂಡ ಬಿಜೆಪಿ ಪ್ರಣಾಳಿಕೆ

ನವೆಂಬರ್ 25 ರಂದು ಕಾರ್ಮಿಕರು ಎರ್ನಾಕುಲಂ ಜಿಲ್ಲಾಧಿಕಾರಿಗಳಿಗೆ ಮುಷ್ಕರದ ಕಾಲಮಿತಿಯೊಂದಿಗೆ ಪತ್ರವನ್ನು ಸಲ್ಲಿಸಿದರು. “ದಯವಿಟ್ಟು ಮನವಿಯನ್ನು ಸ್ವೀಕರಿಸಿ, ನಾವು ಎತ್ತಿರುವ ಬೇಡಿಕೆಗಳನ್ನು ಪಡೆಯಲು ನಮಗೆ ಸಹಾಯ ಮಾಡಿ” ಎಂದು ಒತ್ತಾಯಿಸಲಾಗಿದೆ. ಸೋಮವಾರ ಮತ್ತೊಂದು ಸಭೆಗೆ ಕಾರ್ಮಿಕ ಕಚೇರಿ ಕರೆದಿದೆ ಎಂದು ಬೆಸಿಲ್ ಮಾಹಿತಿ ನೀಡಿದ್ದಾರೆ.

ಸ್ವಿಗ್ಗಿ, ಜೊಮೊಟೊ, ಊಬರ್‌‌, ಓಲಾ ಥರದ ಆನ್‌ಲೈನ್‌ ಸೇವೆಗಳು ಕೆಲಸಗಾರರ ಹಕ್ಕುಗಳನ್ನು ನಿರ್ಲಕ್ಷಿಸುತ್ತಿರುವ ಕುರಿತು ಮೊದಲಿನಿಂದಲೂ ಆಕ್ಷೇಪಗಳು ಬರುತ್ತಿವೆ. ಸ್ವಿಗ್ಗಿ, ಜೊಮೊಟೊದಲ್ಲಿ ಆಗುತ್ತಿರುವ ಅನ್ಯಾಯದ ಕುರಿತು ಸಾಮಾಜಿಕ ಮಾಧ್ಯಮಗಳ ಮೂಲಕ ಡೆಲಿವರಿ ಕೆಲಸಗಾರರು ಮಾತನಾಡಲಾರಂಭಿಸಿದ್ದಾರೆ.

ಆ್ಯಪ್ ಆಧಾರಿತ ಕೆಲಸಗಾರರಿಗೆ ಭದ್ರತೆ ನೀಡುವಂತೆ ಆಗ್ರಹಿಸಿ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿ ಒಂದು ವರ್ಷ ಕಳೆದಿದೆ. ಪ್ರತಿವಾದಿ ಸ್ಥಾನದಲ್ಲಿರುವ ಕೇಂದ್ರ ಸರ್ಕಾರ ಇನ್ನೂ ಈ ವಿಚಾರದಲ್ಲಿ ಅಫಿಡವಿಟ್ ಸಲ್ಲಿಸಿಲ್ಲ.

ವರದಿ ಕೃಪೆ: ನ್ಯೂಸ್‌ ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...