Homeಮುಖಪುಟಕೇರಳ: ಎದೆನೋವು ಎಂದರೂ ಬಿಡದೆ ಥಳಿಸಿದ ಪೊಲೀಸರು; ಕಸ್ಟಡಿ ಚಿತ್ರಹಿಂಸೆಗೆ ವ್ಯಕ್ತಿ ಬಲಿ

ಕೇರಳ: ಎದೆನೋವು ಎಂದರೂ ಬಿಡದೆ ಥಳಿಸಿದ ಪೊಲೀಸರು; ಕಸ್ಟಡಿ ಚಿತ್ರಹಿಂಸೆಗೆ ವ್ಯಕ್ತಿ ಬಲಿ

- Advertisement -
- Advertisement -

ಎದೆ ನೋವು ಎಂದು ನೋವು ತೋಡಿಕೊಂಡರೂ ಬಿಡದೆ ಪೊಲೀಸರು ನಡೆಸಿರುವ ಹಲ್ಲೆಯಿಂದಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.

ಸ್ನೇಹಿತರಾದ ಜುಬೈರ್, ಸಜೀವನ್ ಮತ್ತು ಶಾಮನಾದ್ ಅವರು ತಲಶ್ಶೇರಿಯಿಂದ ವಡಕರ ಬಳಿ ಕಲ್ಲೇರಿ ಕಡೆಗೆ ಜುಲೈ 21ರಂದು ಹೋಗುತ್ತಿದ್ದಾಗ ರಾತ್ರಿ 11.30 ರ ಸುಮಾರಿಗೆ ಅವರ i20 ಕಾರು, ಸ್ವಿಫ್ಟ್‌ಗೆ ಡಿಕ್ಕಿ ಹೊಡೆದಿತ್ತು. ಈ ಅವಘಡದಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಹಲ್ಲೆ ನಡೆಸಿದ ಕೆಲವೇ ಗಂಟೆಗಳಲ್ಲಿ ಸಜೀವನ್ ಸಾವನ್ನಪ್ಪಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಡಕರ ಸಮೀಪದ ಅಡ್ಯಕ್ಕತೆರುವು ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಕಾರಣ ಶಾಮನಾದ್ ಪೊಲೀಸರು ವಶಕ್ಕೆ ಪಡೆದಿಲ್ಲ.

ವಡಕರದಲ್ಲಿ ಡ್ರೈವಿಂಗ್ ಲರ್ನಿಂಗ್ ಇನ್‌ಸ್ಟಿಟ್ಯೂಟ್ ನಡೆಸುತ್ತಿರುವ ಜುಬೇರ್‌ ಘಟನೆ ಕುರಿತು ಮಾತನಾಡಿ, “ನಾವು ಇನ್ನೊಂದು ಕಾರಿನಲ್ಲಿದ್ದ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಯತ್ನಿಸಿದೆವು. ಅಷ್ಟರಲ್ಲಾಗಲೇ ಪೊಲೀಸರಿಗೆ ಮಾಹಿತಿ ದೊರೆತ್ತಿದ್ದ ಕಾರಣ ನಮ್ಮನ್ನು ಠಾಣೆಗೆ ಕರೆದೊಯ್ದರು. ಪೊಲೀಸ್ ಠಾಣೆಯಲ್ಲೇ ಸಬ್ ಇನ್ಸ್ ಪೆಕ್ಟರ್ ನಮ್ಮ ಮೇಲೆ ಕೋಪಗೊಂಡಿದ್ದರು. ಆಗ ಸಜೀವನ್, ಇಂತಹ ಅವಘಡಗಳು ಸಹಜ ಎಂದು ಹೇಳಿದ. ಸಜೀವನ್‌ ಹಿಂತಿರುಗಿ ಮಾತನಾಡಿದ ಕಾರಣಕ್ಕೇನೋ ಸಬ್ ಇನ್ಸ್‌ಪೆಕ್ಟರ್ ಆತನನ್ನು ಹೊಡೆದು ನಮ್ಮನ್ನು ಠಾಣೆಯೊಳಗೆ ತಳ್ಳಿದರು” ಎಂದು ಮಾಹಿತಿ ನೀಡಿರುವುದಾಗಿ ‘ನ್ಯೂಸ್‌ ಮಿನಿಟ್‌’ ವರದಿ ಮಾಡಿದೆ.

“ಪೊಲೀಸ್ ಸಿಬ್ಬಂದಿ ಸಜೀವನ್ ಅವರ ಮುಖಕ್ಕೆ ಮತ್ತು ಬೆನ್ನಿಗೆ ಬಲವಾಗಿ ಹೊಡೆದರು. ಆಗ ಸಜೀವನ್‌ ಒಂದು ಕೈಯನ್ನು ಎದೆಗೆ ಮತ್ತು ಇನ್ನೊಂದು ಕೈಯನ್ನು ಮೇಲಕ್ಕೆತ್ತಿ ನೋವು ತೋಡಿಕೊಂಡನು. ಅಲ್ಲಿ ಇನ್ನೂ ಇಬ್ಬರು ಮೂವರು ಪೊಲೀಸರು ಇದ್ದರು. ಆದರೆ ಅವರು ನಮ್ಮನ್ನು ಬಿಡಲೇ ಇಲ್ಲ. ಅವರು ನಮ್ಮನ್ನು ಹೊರಗೆ ಬಿಡುವ ಮೊದಲು 45 ನಿಮಿಷಗಳ ಕಾಲ ಕಾಯಿಸಿದರು. ಮರುದಿನ ಕಾರನ್ನು ಬಿಡುಗಡೆ ಮಾಡಲಾಗುವುದು. ಕೀಲಿಯನ್ನು ಪೊಲೀಸ್ ಠಾಣೆಯಲ್ಲಿ ಇಡಬೇಕೆಂದು ನಮಗೆ ತಿಳಿಸಲಾಯಿತು” ಎಂದು ವಿವರಿಸಿದ್ದಾರೆ.

ಸಬ್ ಇನ್ಸ್‌ಪೆಕ್ಟರ್ ಮತ್ತು ಸಿವಿಲ್ ಪೊಲೀಸ್ ಅಧಿಕಾರಿ ತಮ್ಮನ್ನು ಥಳಿಸಿರುವುದಾಗಿ ಜುಬೇರ್‌ ಆರೋಪಿಸಿದ್ದಾರೆ.

“ಪೊಲೀಸರು ಅವನ ಮುಖ ಮತ್ತು ಬೆನ್ನಿನ ಮೇಲೆ ಕನಿಷ್ಠ ಐದರಿಂದ ಆರು ಬಾರಿ ಹೊಡೆದರು. ಪೊಲೀಸರು ಹೊಡೆಯಲು ಪ್ರಾರಂಭಿಸಿದ ಐದು ನಿಮಿಷಗಳಲ್ಲಿ ತನಗಾಗುತ್ತಿರುವ ಸಮಸ್ಯೆಯನ್ನು ಸಜೀವನ್‌ ಹೇಳಿದ್ದ. ಯಾಕೆ ಹೀಗೆ ಹೊಡೆಯುತ್ತಿದ್ದೀರ ಎಂದು ಪೊಲೀಸರನ್ನು ಕೇಳಿದಾಗ ನನಗೂ ಥಳಿಸಿದರು. ಸಜೀವನ್ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಳ್ಳುತ್ತಿರುವ ಕುರಿತು ಪೊಲೀಸರಿಗೆ ತಿಳಿಸಿದಾಗ- ಗ್ಯಾಸ್ ಆಗಿರಬಹುದು ಎಂದು ತಾತ್ಸಾರ ತೋರಿ ನೀರು ಕುಡಿಯಲು ತಿಳಿಸಿದರು” ಎಂದು ಜುಬೇರ್‌ ಹೇಳಿದ್ದಾರೆ.

ಪೊಲೀಸರು ಇಬ್ಬರಿಗೂ ತೆರಳಲು ಅವಕಾಶ ನೀಡಿದ ನಂತರ, ಸಜೀವನ್ ಆಟೊ ಹತ್ತಲು ಪೊಲೀಸ್ ಠಾಣೆಯಿಂದ ಹೊರಬಂದನು. “ಕಾರಿನ ಕೀಯನ್ನು ಪೊಲೀಸರಿಗೆ ಕೊಟ್ಟು ನಾನು ಹೊರಗೆ ಬರುವಷ್ಟರಲ್ಲಿ ಆತ ಪೊಲೀಸ್ ಠಾಣೆಯ ಆವರಣದಲ್ಲಿ ಕುಸಿದು ಬಿದ್ದಿದ್ದ. ಆ ಸಮಯದಲ್ಲಿ ಕಾಂಪೌಂಡ್ ಹೊರಗೆ ಆಟೋ ರಿಕ್ಷಾಗಳಿದ್ದವು. ನಂತರ ಆಟೋ ರಿಕ್ಷಾ ಚಾಲಕರು ಸಜೀವನ್‌ನನ್ನು ಆಟೋಗೆ ಸ್ಥಳಾಂತರಿಸಲು ಪ್ರಯತ್ನಿಸಿದರು. ಆದರೆ ಆತ ದಪ್ಪವಾಗಿದ್ದ ಕಾರಣ ಕಷ್ಟವಾಯಿತು. ಪೊಲೀಸ್ ಪೇದೆಯೊಬ್ಬರು ಠಾಣೆಯಿಂದ ಹೊರಬಂದರು. ಆಸ್ಪತ್ರೆಗೆ ಕರೆದುಕೊಂಡು ಹೋಗಲು ಕಾರನ್ನು ಕೊಡುವಂತೆ ಅವರಲ್ಲಿ ಮನವಿ ಮಾಡಿದೆ. ಅದಕ್ಕೆ ಅವರು ನಿರಾಕರಿಸಿದರು. ನಂತರ ಆಟೋ ರಿಕ್ಷಾ ಚಾಲಕರು ಆಂಬ್ಯುಲೆನ್ಸ್‌ಗೆ ಕರೆ ಮಾಡಿದರು. 15 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಬಂದಿತು” ಎಂದು ಘಟನೆಯ ಕುರಿತು ತಿಳಿಸಿದ್ದಾರೆ.

ಇದನ್ನೂ ಓದಿರಿ: ಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

“ಸಜೀವನ್‌ ತನಗಾಗುತ್ತಿರುವ ನೋವುನ್ನು ವ್ಯಕ್ತಪಡಿಸಿದಾಗಲೇ ಹೊರಹೋಗಲು ಪೊಲೀಸರು ಅವಕಾಶ ನೀಡಿದ್ದರೆ ಆತನ ಜೀವವನ್ನು ಉಳಿಸಬಹುದಿತ್ತು. ನಾನು ಆತನೊಂದಿಗೆ ಆಸ್ಪತ್ರೆಗೆ ಹೋಗಿದ್ದೆ. ಕೆಲವೇ ನಿಮಿಷಗಳಲ್ಲಿ, ಸಜೀವನ್‌ ತೀರಿಕೊಂಡರು ಎಂದು ವೈದ್ಯರು ನಮಗೆ ತಿಳಿಸಿದರು. ಆದರೆ ಸಾವಿಗೆ ಕಾರಣವೇನೆಂದು ತಿಳಿಸಲಿಲ್ಲ. ಆಸ್ಪತ್ರೆಗೆ ಕರೆದೊಯ್ಯುವ ಮೊದಲು ಸಾಕಷ್ಟು ಸಮಯ ವ್ಯರ್ಥವಾಯಿತು. ಹತ್ತು ನಿಮಿಷ ಮುಂಚಿತವಾಗಿ ಆಸ್ಪತ್ರೆಗೆ ಕರೆತಂದಿದ್ದರೆ ಆತನ ಜೀವ ಉಳಿಸಬಹುದಿತ್ತು” ಎಂದು ವೈದ್ಯರು ಹೇಳಿದ್ದಾರೆ.

ಸಜೀವನ್ ಅವರ ಸಂಬಂಧಿ ಅರ್ಜುನ್ ಕೂಡ ಇದೇ ಆತಂಕವನ್ನು ‘ನ್ಯೂಸ್‌ ಮಿನಿಟ್‌’ನೊಂದಿಗೆ  ಹಂಚಿಕೊಂಡಿದ್ದಾರೆ. ಸಜೀವನ್ ಅವರ ಎದೆನೋವಿನ ದೂರನ್ನು ಪೊಲೀಸರು ನಿರ್ಲಕ್ಷಿಸಿರುವ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಟಿ.ವಿಕ್ರಮ್ ಘಟನೆಯ ಕುರಿತು ತನಿಖಾ ವರದಿ ಸಲ್ಲಿಸಿದ್ದಾರೆ. ಪ್ರಕರಣವನ್ನು ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಲಾಗಿದೆ. ಕ್ರೈಂ ಬ್ರಾಂಚ್ ಜುಲೈ 25ರ ಭಾನುವಾರ ಹೇಳಿಕೆ ದಾಖಲಿಸಲು ಜುಬೈರ್‌ಗೆ ಸಮನ್ಸ್ ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...